– ರಾಜ್ಯ ಬಿಜೆಪಿ ಗೊಂದಲ ಸುಖಾಂತ್ಯವಾಗುವ ವಿಶ್ವಾಸವಿದೆ ಎಂದ ಸಂಸದ
ದಾವಣಗೆರೆ: ಚುನಾವಣೆಯಲ್ಲಿ ಸೋತಾಗ ಇವಿಎಂ ಬಗ್ಗೆ ಮಾತನಾಡುವುದು ಫ್ಯಾಷನ್ ಆಗಿದೆ. ವಿರೋಧ ಪಕ್ಷಗಳು ನಿರಂತರವಾಗಿ ಈ ಆರೋಪವನ್ನು ಮಾಡುತ್ತಿವೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.
- Advertisement 2-
ಜಿಲ್ಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೆಹಲಿ ವಿಧಾನಸಭೆ ಚುನಾವಣೆ ಸ್ಪಷ್ಟ ಸಂದೇಶ ನೀಡಿದೆ. ಯಾರು ದೇಶದ ಬಗ್ಗೆ ಚಿಂತನೆ ಮಾಡುತ್ತಾರೆ ಅವರು ದೇಶದ ಅಭಿವೃದ್ಧಿ ಮಾಡುತ್ತಾರೆ. ಯಾರು ದೇಶ ಕಟ್ಟುತ್ತಾರೆ ಅವರಿಗೆ ಜನ ಬೆಂಬಲ ಇದೆ ಎನ್ನುವುದು ಬಹಳ ಸ್ಪಷ್ಟವಾಗಿದೆ. ದೇಶದ ಹಿತವನ್ನು ಮರೆತು ವಿದೇಶದಲ್ಲಿ ಮಾತನಾಡುವವರಿಗೆ ಜನರು ಪಾಠ ಕಲಿಸಿದ್ದಾರೆ ಎಂದರು.ಇದನ್ನೂ ಓದಿ: ಇಂಗ್ಲೆಂಡ್ ಗಾಯಕ ಎಡ್ ಶೀರನ್ ಬೀದಿ ಬದಿಯ ಪ್ರದರ್ಶನಕ್ಕೆ ಬ್ರೇಕ್ ಹಾಕಿದ ಪೊಲೀಸರು
- Advertisement 3-
- Advertisement 4-
ಇವಿಎಂ ಬಗ್ಗೆ ಮಾತನಾಡುವುದು ಫ್ಯಾಷನ್ ಆಗಿದೆ. ತಮ್ಮ ಸೋಲನ್ನು ಒಪ್ಪಿಕೊಳ್ಳದೇ ಕುಂಟು ನೆಪ ಹೇಳುವುದು ನಾಯಕನ ಲಕ್ಷಣ ಅಲ್ಲ. ವಿರೋಧ ಪಕ್ಷಗಳು ನಿರಂತರವಾಗಿ ಈ ಆರೋಪವನ್ನು ಮಾಡುತ್ತಿವೆ ಎಂದು ತಿಳಿಸಿದರು.
ನಮ್ಮ ಹೈಕಮಾಂಡ್ ಗಟ್ಟಿಯಾಗಿದೆ:
ರಾಜ್ಯ ಬಿಜೆಪಿಯಲ್ಲಿ (BJP) ಯಾವುದೇ ಗೊಂದಲ ಇಲ್ಲ. ನಮ್ಮದು ಪ್ರಜಾಪ್ರಭುತ್ವ ಇರುವ ಪಕ್ಷ. ನಮ್ಮ ಹೈಕಮಾಂಡ್ ಬಹಳ ಗಟ್ಟಿಯಾಗಿದೆ. ಈಗ ದೆಹಲಿ ಚುನಾವಣೆ ಮುಗಿದಿದೆ. ಸಂಘಟನೆಗೆ ಹೆಚ್ಚು ಸಮಯ ನೀಡುತ್ತಾರೆ. ಆಗ ಕರ್ನಾಟಕದ ಬಗ್ಗೆಯೂ ನಿರ್ಣಯ ಆಗುತ್ತದೆ. ಎಲ್ಲವೂ ಸುಖಾಂತ್ಯವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಅವರ ಹೆಸರು ಸೂಚಿಸಿದ್ದೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನು ಯಾರ ಹೆಸರನ್ನೂ ಸೂಚಿಸಿಲ್ಲ. ನಾನು ಸಂಸದನಾಗಿ ನನ್ನ ಕೆಲಸವನ್ನು ಮಾಡುತ್ತಿದ್ದೇನೆ. ನಿಮ್ಮ ಮೂಲಗಳಿಗೆ ನೀವು ಉತ್ತರ ಕೊಡಬೇಕು. ಏನೇ ಇದ್ದರೂ ಪಕ್ಷದ ಹೈಕಮಾಂಡ್ ಒಳ್ಳೆಯ ತೀರ್ಮಾನ ಮಾಡುತ್ತದೆ ಎನ್ನುವ ವಿಶ್ವಾಸ ಇದೆ. ಹೈಕಮಾಂಡ್ ಯಾರನ್ನು ಆಯ್ಕೆ ಮಾಡುತ್ತಾರೋ ಅವರೇ ಉತ್ತಮ ಎಂದರು.ಇದನ್ನೂ ಓದಿ: