Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇದು ಸಾವಲ್ಲ ಬಲಿದಾನ – ವಿಧಾನಸೌಧದಲ್ಲಿ ಆತ್ಮಹತ್ಯೆ ಯತ್ನಕ್ಕೂ ಮುನ್ನ ಸಿಎಂಗೆ ಪತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಇದು ಸಾವಲ್ಲ ಬಲಿದಾನ – ವಿಧಾನಸೌಧದಲ್ಲಿ ಆತ್ಮಹತ್ಯೆ ಯತ್ನಕ್ಕೂ ಮುನ್ನ ಸಿಎಂಗೆ ಪತ್ರ

Bengaluru City

ಇದು ಸಾವಲ್ಲ ಬಲಿದಾನ – ವಿಧಾನಸೌಧದಲ್ಲಿ ಆತ್ಮಹತ್ಯೆ ಯತ್ನಕ್ಕೂ ಮುನ್ನ ಸಿಎಂಗೆ ಪತ್ರ

Public TV
Last updated: June 24, 2019 4:27 pm
Public TV
Share
2 Min Read
REVANNA KUMAR
SHARE

– ಶೌಚಾಲಯದಲ್ಲಿ ಆತ್ಮಹತ್ಯೆಗೆ ಯತ್ನ
– ಮೆಟಲ್ ಡಿಟೆಕ್ಟರ್ ಇದ್ದರೂ ಭದ್ರತಾ ಲೋಪ

ಬೆಂಗಳೂರು: ಸುಮಾರು 6 ಸಾವಿರ ಗ್ರಂಥಪಾಲಕರನ್ನು ಖಾಯಂಗೊಳಿಸಲು ಚಿಕ್ಕಬಳ್ಳಾಪುರ ಮೂಲದ ರೇವಣ್ಣ ಕುಮಾರ್ ಅವರು ವಿಧಾನಸೌಧದ ಶೌಚಾಲಯದಲ್ಲಿ ಕತ್ತು ಕೊಯ್ದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದ ವಿಚಾರ ಪ್ರಾಥಮಿಕ ತನಿಖೆಯ ವೇಳೆ ಬೆಳಕಿಗೆ ಬಂದಿದೆ.

ರೇವಣ್ಣ ಕುಮಾರ್ ಅನೂರಿನಲ್ಲಿರುವ ಲೈಬ್ರೆರಿಯಲ್ಲಿ ಗ್ರಂಥಪಾಲಕನಾಗಿ ಕೆಲಸ ಮಾಡುತ್ತಿದ್ದರು. ಆದರೆ ಉದ್ಯೋಗ ಖಾಯಂ ಆಗದ ಕಾರಣ ಮನನೊಂದು ಆತ್ಮಹತ್ಯೆ ಯತ್ನಿಸಿದ್ದಾರೆ. ಸದ್ಯ ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

REVANNA 1

ಆತ್ಮಹತ್ಯೆಗೆ ಯತ್ನಿಸಿದ ಸ್ಥಳಕ್ಕೆ ಡಿಸಿಪಿ ದೇವರಾಜು ಭೇಟಿ ನೀಡಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಮಧ್ಯಾಹ್ನ 1.30ರ ವೇಳೆಗೆ ರೇವಣ್ಣ ಕುಮಾರ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇವರು ಚಿಂತಾಮಣಿ ತಾಲೂಕಿನ ಅನೂರು ಗ್ರಾಮ ಪಂಚಾಯತ್ ನಲ್ಲಿ ತಾತ್ಕಾಲಿಕ ಸಹಾಯಕ ಗ್ರಂಥಪಾಲಕರಾಗಿ ಕೆಲಸ ಮಾಡುತ್ತಿದ್ದಾರೆ. ಘಟನೆಯಿಂದ ಕೈ ಮತ್ತು ಕುತ್ತಿಗೆ ಮೇಲೆ ಗಾಯವಾಗಿದ್ದು, ಯಾವುದೇ ಪ್ರಾಣಾಪಾಯ ಇಲ್ಲ ಎಂದು ತಿಳಿಸಿದ್ದಾರೆ.

BNG 2 2

ಆತ್ಮಹತ್ಯೆ ಯತ್ನ ಮಾಡಿಕೊಂಡ ಸ್ಥಳದಲ್ಲಿ ಯಾವುದೇ ಹರಿತವಾದ ಆಯುಧ ಸಿಕ್ಕಿಲ್ಲ. ಸ್ಥಳದಲ್ಲಿ ಆಧಾರ್ ಕಾರ್ಡ್, ಗುರುತಿನ ಚೀಟಿ ಸಿಕ್ಕಿದೆ. ಉದ್ಯೋಗ ನೇಮಕಾತಿ ಪತ್ರ ಕೂಡ ಸ್ಥಳದಲ್ಲಿ ದೊರಕಿದೆ. 6 ಸಾವಿರ ಜನ ತಾತ್ಕಾಲಿಕ ಲೈಬ್ರೇರಿಯನ್ ಗಳಿಗೆ ಕನಿಷ್ಠ ವೇತನ ನಿಗದಿ ಮಾಡುವ ಬಗ್ಗೆಯೂ ಮನವಿ ಪತ್ರ ಸಿಕ್ಕಿದೆ. ಪ್ರಕರಣ ಸಂಬಂಧ ವಿಧಾನಸೌಧ ಠಾಣೆಯಲ್ಲಿ ಸೆಕ್ಷನ್ 309(ಆತ್ಮಹತ್ಯೆ ಯತ್ನ) ಅಡಿ ಪ್ರಕರಣ ದಾಖಲು ದಾಖಲಾಗಿದೆ. ತನಿಖೆ ಬಳಿಕ ಹೆಚ್ಚಿನ ವಿವರ ಸಿಗಲಿದೆ ಎಂದು ಹೇಳಿದ್ದಾರೆ.

soudha copy

ರೇವಣ್ಣ ಬೇಡಿಕೆ ಏನು?
ಆತ್ಮಹತ್ಯೆ ಯತ್ನಕ್ಕೂ ಮುನ್ನ ರೇವಣ್ಣ ಕುಮಾರ್ ಡೆತ್ ನೋಟ್ ಬರೆದಿದ್ದು, ಸಿಎಂ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ. ದಯಮಾಡಿ ಹಂಗಾಮಿ ನೌಕರನನ್ನು ಖಾತ್ರಿ ಪಡಿಸಿಕೊಳ್ಳಿ. ಉದ್ಯೋಗಿಯಾಗೋದು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಸರ್ಕಾರದ ಗಮನ ಸೆಳೆಯಲು ರೇವಣ್ಣ ಈ ಆತ್ಮಹತ್ಯೆ ಯತ್ನ ಮಾಡಿದ್ದಾರೆ.

ಪತ್ರದಲ್ಲಿ ಏನಿದೆ?
ರೇವಣ್ಣ ಸಾಕಷ್ಟು ದಿನದಿಂದ ಉದ್ಯೋಗ ಖಾತ್ರಿಗೆ ಓಡಾಡುತ್ತಾ ಇದ್ದರು. ಪ್ರಧಾನಮಂತ್ರಿಯಿಂದ ರಾಷ್ಟ್ರಪತಿ ವರೆಗೂ ಸಂಪರ್ಕ ಮಾಡಿದ್ದರೂ ನ್ಯಾಯ ಸಿಕ್ಕಿರಲಿಲ್ಲ. ನೀವಾದ್ರು ನ್ಯಾಯ ಕೊಡಿಸಿ ಎಂದು ಸಿಎಂ ಗೆ ಮನವಿ ಮಾಡಿಕೊಂಡಿದ್ದಾರೆ. ದಯವಿಟ್ಟು ನನ್ನ ಬಗ್ಗೆ ತಪ್ಪು ತಿಳಿಯಬೇಡಿ. 6 ಸಾವಿರ ಲೈಬ್ರರಿ ನೌಕರರ ಪ್ರತೀಕವಾಗಿ ಈ ನಿರ್ಧಾರಕ್ಕೆ ಬಂದಿದ್ದೇನೆ. ನನ್ನ ಸಾವು ಆತ್ಮಹತ್ಯೆ ಅಲ್ಲ. ಸರ್ಕಾರಕ್ಕೆ ನೀಡುತ್ತಿರುವ ಬಲಿದಾನ ಮಾನ್ಯ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಅವರು ಅನ್ಯತಾ ಭಾವಿಸಬಾರದು. ನಾವು ಎಷ್ಟೇ ಹೋರಾಟ ಮಾಡಿದರೂ ನಮಗೆ ನ್ಯಾಯ ಸಿಗುತ್ತಿಲ್ಲ. ನೀವಾದ್ರೂ ನ್ಯಾಯ ಕೊಡಿಸಿ. ಇದು ಸಾವಲ್ಲ ಬಲಿದಾನ ಎಂದು ಪತ್ರದಲ್ಲಿ ಬರೆದಿದ್ದಾರೆ.

BNG 1 1

ಮೆಟಲ್ ಡಿಟೆಕ್ಟರ್:
ವಿಧಾನಸೌಧದ ಶೌಚಾಲಯದಲ್ಲಿ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಇದೀಗ ಭಾರೀ ಅನುಮಾನಕ್ಕೀಡು ಮಾಡಿದೆ. ಯಾಕೆಂದರೆ ಕಳೆದ ಬಾರಿ ಲೋಕಾಯುಕ್ತ ವಿಶ್ವನಾಥ್ ಶೆಟ್ಟಿ ಅವರ ಮೇಲೆ ಕಚೇರಿಯೊಳಗಡೆಯೇ ಚಾಕು ಇರಿಯಲಾಗಿತ್ತು. ಆ ಬಳಿಕ ಸರ್ಕಾರಿ ಕಚೇರಿಗಳಲ್ಲಿ ಮೆಟಲ್ ಡಿಟೆಕ್ಟರ್ ಅಳವಡಿಸಲಾಗಿತ್ತು. ಅಲ್ಲದೆ ಪೊಲೀಸರ ಭದ್ರತೆಯನ್ನೂ ನಿಯೋಜಿಸಲಾಗಿತ್ತು. ಆದರೆ ಇದೀಗ ಶಾಸಕರು ಹಾಗೂ ಸಚಿವರು ಓಡಾಡುತ್ತಿರುವ ವಿಧಾನಸೌಧದಲ್ಲಿ ಇಷ್ಟೆಲ್ಲಾ ಭದ್ರತೆ ಇದ್ದರೂ ರೇವಣ್ಣ ಕುಮಾರ್ ಬ್ಲೇಡ್ ಕೊಂಡೊಯ್ದಿದ್ದು ಹೇಗೆ ಎಂಬ ಪ್ರಶ್ನೆ ಎದ್ದಿದೆ.

ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಸಿಎಂ ಕಚೇರಿ ಸಮೀಪದಲ್ಲಿರುವ ಟಾಯ್ಲೆಟ್‍ನಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ರೇವಣ್ಣ ಅವರನ್ನು ತಕ್ಷಣವೇ ಬೌರಿಂಗ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

TAGGED:bengaluruPublic TVrevanna kumarsuicideVidhanasoudhaಆತ್ಮಹತ್ಯೆಗೆ ಯತ್ನಪಬ್ಲಿಕ್ ಟಿವಿಬೆಂಗಳೂರುರೇವಣ್ಣ ಕುಮಾರ್ವಿಧಾನಸೌಧ
Share This Article
Facebook Whatsapp Whatsapp Telegram

Cinema news

Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood
sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories

You Might Also Like

Delhi Assembly Massive Breach
Latest

ದೆಹಲಿ ವಿಧಾನಸೌಧದಲ್ಲಿ ಭದ್ರತಾಲೋಪ – ಸ್ಪೀಕರ್ ಕಾರ್ ಮೇಲೆ ಇಂಕ್ ಎರಚಿ ಆಗಂತುಕರು ಎಸ್ಕೇಪ್

Public TV
By Public TV
12 minutes ago
NAXAL 1 3
Crime

ತೆಲಂಗಾಣ | ಉನ್ನತ ಕಮಾಂಡರ್ ಸೇರಿ 40 ಜನ ನಕ್ಸಲರು ಶರಣು

Public TV
By Public TV
39 minutes ago
Hubballi Love Jihad Case
Crime

ಹುಬ್ಬಳ್ಳಿ ಲವ್ ಜಿಹಾದ್ – ಅತ್ಯಾಚಾರ ಬಳಿಕ ಬೆದರಿಕೆಯೊಡ್ಡಿ 70 ಸಾವಿರಕ್ಕೂ ಅಧಿಕ ಹಣ ಪೀಕಿದ್ದ ಸಮೀರ್

Public TV
By Public TV
48 minutes ago
mandya murder
Crime

ಮಂಡ್ಯ| ಹುಟ್ಟುಹಬ್ಬದ ಮಾರನೇ ದಿನವೇ 19 ವರ್ಷದ ಯುವಕನ ಕೊಲೆ

Public TV
By Public TV
49 minutes ago
Madikeri Iran Family
Districts

ದೀರ್ಘ ರಜೆ ಮೇಲೆ ಇರಾನ್‌ನಿಂದ ಬಂದಿದ್ದ ದಂಪತಿ ಕೊಡಗಿನಲ್ಲೇ ಲಾಕ್‌

Public TV
By Public TV
1 hour ago
youth dies after drowning in bhadra river in nr pura
Crime

ಸ್ನೇಹಿತನ ಮದುವೆಗೆ ಬಂದಿದ್ದ ಯುವಕ ಭದ್ರಾ ನದಿಯಲ್ಲಿ ಮುಳುಗಿ ಸಾವು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?