ತುಮಕೂರು: `ನನ್ನ ಕಿಡ್ನಿ (Kidney) ಮಾರಿ ಚುನಾವಣಾ ಖರ್ಚು ಹೊಂದಿಸುತ್ತೇನೆ, ನಮ್ಮ ನಾಯಕರಿಗೆ ಟಿಕೆಟ್ ಕೊಡಿ’ ಅಂತಾ ಯುವಕನೊಬ್ಬ ಹುಚ್ಚಾಟ ಮೆರೆದಿರುವ ಘಟನೆ ನಡೆದಿದೆ.
ತುಮಕೂರು (Tumakuru) ಜಿಲ್ಲೆಯ ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವೈ.ಸಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ (Congress) ಟಿಕೆಟ್ ಕೊಡಿ ಎಂದು ಕೆಂಕೆರೆ ಗ್ರಾಮದ ಪ್ರಭುಕುಮಾರ್ ಈ ರೀತಿ ಹುಚ್ವಾಟ ಮೆರೆದಿದ್ದಾನೆ. ಯುವಕನ ಅತಿರೇಕದ ಹೇಳಿಕೆ ತುಮಕೂರು ಜಿಲ್ಲೆಯಲ್ಲಿ ಸದ್ದು ಮಾಡುತ್ತಿದೆ. ಪರ-ವಿರೋಧ ಚರ್ಚೆಗಳಿಗೂ ಕಾರಣವಾಗಿದೆ.
ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಕೈ ಟಿಕೆಟ್ ಆಕಾಂಕ್ಷಿಯಾಗಿರುವ ವೈ.ಸಿ ಸಿದ್ದರಾಮಯ್ಯ ಈ ಬಾರಿ ತಮಗೆ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದಾರೆ. ಇದನ್ನೂ ಓದಿ: ಕಲಬುರಗಿಯ ದರ್ಗಾ ಆವರಣದಲ್ಲಿ ಹಿಂದೂಗಳಿಂದ ಶಿವರಾತ್ರಿ, ಮುಸ್ಲಿಮರಿಂದ ಉರುಸ್ ಆಚರಣೆ
ಕೆಂಕೆರೆ ಗ್ರಾಮದ ಪ್ರಭುಕುಮಾರ್ ಕಳೆದ ಬಾರಿ ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದ. ಈ ವೇಳೆ ಚುನಾವಣೆಗೆ ನಿಲ್ಲಲು ಸಿದ್ದರಾಮಯ್ಯ ಸಾಕಷ್ಟು ಸಹಾಯ ಮಾಡಿದ್ದರು ಎಂಬುದಾಗಿಯೂ ಯುವಕ ವೀಡಿಯೋನಲ್ಲಿ ಹೇಳಿಕೊಂಡಿದ್ದಾನೆ. ಇದನ್ನೂ ಓದಿ: ದಿ ಕಾಶ್ಮೀರ್ ಫೈಲ್ಸ್ ಸಿನಿಮಾ: ಕ್ಷಮೆ ಕೋರಿದ ಪ್ರಕಾಶ್ ಬೆಳವಾಡಿ
ಈಗಾಗಲೇ ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ 7 ಮಂದಿ ಕಾಂಗ್ರೆಸ್ ಪಕ್ಷದ ಟಿಕೆಟ್ (Congress Election Ticket) ರೇಸ್ನಲ್ಲಿದ್ದಾರೆ. ಸ್ಥಳೀಯರಿಗೆ ಟಿಕೆಟ್ ನೀಡುವಂತೆ ಮುಖಂಡರು ಪಟ್ಟು ಹಿಡಿದಿರೋದು ಹೈಕಮಾಂಡ್ ಅಂಗಳಕ್ಕೂ ತಲುಪಿದೆ. ಈ ನಡುವೆ ಬೆಂಬಲಿಗನ ಅತಿರೇಕದ ವರ್ತನೆಯ ವೀಡಿಯೋ ಗಮನಸೆಳೆದಿದೆ.
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k