ಹುಬ್ಬಳ್ಳಿ: ಕಾಂಗ್ರೆಸ್ (Congress) ನಾಯಕರಿಗೆ ಹಿಂದೂ ಶಬ್ದವೇ ಅಲರ್ಜಿ ಆಗಿದೆ. ಚುನಾವಣೆ ಸಮಯದಲ್ಲಿ ಈ ರೀತಿ ಹೇಳಿಕೆ ನೀಡಿ ಅವರ ಅಜ್ಞಾನವನ್ನು ಪ್ರದರ್ಶನ ಮಾಡಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish Shettar) ಹೇಳಿದರು.
ಈ ಬಗ್ಗೆ ಹುಬ್ಬಳ್ಳಿಯಲ್ಲಿ (Hubballi) ಮಾತನಾಡಿದ ಅವರು, ಚುನಾವಣೆಯ ಸಮಯದಲ್ಲಿ ಹಿಂದೂ ಶಬ್ದದ ಚರ್ಚೆ ಮಾಡುವ ಅವಶ್ಯಕತೆಯಿರಲಿಲ್ಲ. ಆದರೆ ಕಾಂಗ್ರೆಸ್ ನಾಯಕರು ಅಲ್ಪಸಂಖ್ಯಾತರ ಮತಕ್ಕಾಗಿ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಹಿಂದೂಗಳನ್ನು ಮತ್ತು ಹಿಂದೂ ಪರಂಪರೆಯನ್ನು ಬೈದು ಅಲ್ಪಸಂಖ್ಯಾತರ ಮತ ಪಡೆಯುವ ತಂತ್ರವಾಗಿದೆ ಎಂದು ಕಿಡಿಕಾರಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರು, ಜನಿವಾರ ತೋರಿಸಿ, ನಾನು ಹಿಂದೂ ಅಂತಾರೆ. ಆದರೆ ಅವರ ಪಕ್ಷದ ಮುಖಂಡರನ್ನು ಈ ರೀತಿಯ ಬೈಯಲು ಬಿಡುತ್ತಾರೆ. ಸತೀಶ್ ಜಾರಕಿಹೊಳಿ (Satish Jarkiholi) ಕಾಂಗ್ರೆಸ್ ಪಕ್ಷದ ಉನ್ನತ ಸ್ಥಾನದಲ್ಲಿದ್ದಾರೆ. ಅವರ ಹೇಳಿಕೆಯಿಂದ ಅಪಾರ ಹಿಂದೂಗಳಿಗೆ ಧಕ್ಕೆಯಾಗಿದೆ. ಹೀಗಾಗಿ ಅವರ ಬಗ್ಗೆ ಕಾಂಗ್ರೆಸ್ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಸತೀಶ್ ಜಾರಕಿಹೊಳಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಬೇಕು: ಕಟೀಲ್ ಕಿಡಿ
ಭೈರತಿ ಬಸವರಾಜ ಲಂಚದ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಲಿಖಿತ ದೂರು ಲೋಕಾಯುಕ್ತಕ್ಕೆ ನೀಡಲಿ, ಬಳಿಕ ಲೋಕಾಯುಕ್ತ ತನಿಖೆಯಾಗಲಿ. ಅದು ಬಿಟ್ಟು ಹಿಟ್ ಆಂಡ್ ರನ್ ರೀತಿಯಲ್ಲಿ ಆರೋಪ ಬೇಡ ಎಂದರು. ಇದನ್ನೂ ಓದಿ: ಒಬ್ಬ ಹಿಂದೂವಾಗಿ ಸತೀಶ್ ಜಾರಕಿಹೊಳಿ ಹೇಳಿಕೆಯನ್ನು ನಾನೂ ಒಪ್ಪಲ್ಲ: ಡಿಕೆಶಿ