ಬೆಳಗಾವಿ: ಬೆಳಗಾವಿ (Belagavi) ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜಗದೀಶ್ ಶೆಟ್ಟರ್ (Jagadish Shettar) ಅವರು ಬೃಹತ್ ಮೆರವಣಿಗೆ ಮೂಲಕ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ನಾಮಪತ್ರ (Nomination) ಸಲ್ಲಿಸುವ ಮುಂಚೆ ಬೃಹತ್ ಮೆರವಣಿಗೆ ಮೂಲಕ ಶೆಟ್ಟರ್ ಶಕ್ತಿ ಪ್ರದರ್ಶನ ಮಾಡಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ಜಗದೀಶ್ ಶೆಟ್ಟರ್ ಬೆಳಗಾವಿಯ ಸಮಾದೇವಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಸಮಾದೇವಿಗಲ್ಲಿಯಿಂದ ಆರಂಭವಾದ ಮೆರವಣಿಗೆಯ ಖಡೆಬಜಾರ ರೋಡ್, ಗಣಪತಿ ಗಲ್ಲಿ, ಕಾಕತಿವೇಸ್, ಶನಿವಾರ ಕೂಟ್, ಚನ್ನಮ್ಮ ವೃತ್ತ ಹಾಗೂ ಜಿಲ್ಲಾಧಿಕಾರಿ ಕಚೇರಿವರೆಗೆ ಸಾಗಿತು. ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜಗದೀಶ್ ಶೆಟ್ಟರ್ ಮೆರವಣಿಗೆ ವಾಹನ ಏರಿದಾಗ ಅಭಿಮಾನಿಗಳು ಘೋಷಣೆ ಹಾಕಿದರು. ವಿವಿಧ ಭಾಗದಿಂದ ಬಂದಿದ್ದ ಕಾರ್ಯಕರ್ತರು ಮೋದಿ.. ಮೋದಿ ಎಂಬ ಘೋಷಣೆಯೊಂದಿಗೆ ಉತ್ಸಾಹದಿಂದ ಮೆರವಣಿಗೆಯಲ್ಲಿ ಸಾಗಿದರು. ಇದನ್ನೂ ಓದಿ: ಚಿತ್ರದುರ್ಗ ಆಶ್ರಮದ ತೊಟ್ಟಿಯಲ್ಲಿ ತಾಯಿ-ಮಗಳ ನಿಗೂಢ ಸಾವು – ಪ್ರರಣದ ಸುತ್ತ ಅನುಮಾನದ ಹುತ್ತ!
ಜಗದೀಶ್ ಶೆಟ್ಟರ್ ಅವರು ನಾಮಪತ್ರ ಸಲ್ಲಿಸುವ ಮುಂಚೆ ಢೋಲ್ ತಾಶ್, ಡೊಳ್ಳು ಕುಣಿತ ವಾದ್ಯಗಳು ಎಲ್ಲರ ಗಮನ ಸೆಳೆದವು. ವಿವಿಧ ಭಾಗದಿಂದ ಬಂದಿದ್ದ ಜನರು ವಾದ್ಯಗಳೊಂದಿಗೆ ಕುಣಿದು ಕುಪ್ಪಳಿಸಿದರು. ಕೇಸರಿ ಪೇಟ ಧರಿಸಿದ ಸಾವಿರಾರು ಮಹಿಳೆಯರು ಮೆರವಣಿಗೆಯಲ್ಲಿ ಗಮನ ಸೆಳೆದರು. ಇದನ್ನೂ ಓದಿ: ಗುರುವಾರದಿಂದ ಸಿಇಟಿ ಪರೀಕ್ಷೆ ಆರಂಭ- ವಿದ್ಯಾರ್ಥಿಗಳಿಗೆ ಕಡ್ಡಾಯ ಮಾರ್ಗಸೂಚಿ
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಗೋವಾ ಸಿಎಂ ಪ್ರಮೋದ್ ಸಾವಂತ್, ಸಂಸದೆ ಮಂಗಳಾ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಅಭಯ್ ಪಾಟೀಲ್, ಬಾಲಚಂದ್ರ ಜಾರಕಿಹೊಳಿ, ದುರ್ಯೋಧನ ಐಹೊಳೆ, ವಿಧಾನ ಪರಿಷತ್ ಸದಸ್ಯ ಹನುಮಂತ್ ನಿರಾಣಿ, ಮಾಜಿ ಶಾಸಕರಾದ ಅನಿಲ್ ಬೆನಕೆ, ಮಾಜಿ ಸಚಿವ ಮುರಗೇಶ್ ನಿರಾಣಿ, ಮಾಜಿ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ ಸೇರಿದಂತೆ ಲಕ್ಷಾಂತರ ಕಾರ್ಯಕರ್ತರು ಉಪಸ್ಥಿತರಿದ್ದರು. ಇದನ್ನೂ ಓದಿ: ಧಾರವಾಡದಲ್ಲಿ 18 ಕೋಟಿ ಪತ್ತೆ – ಎಸ್ಬಿಐಗೆ ಹಣ ರವಾನೆ