ಬೆಳಗಾವಿ: ಸುರೇಶ್ ಅಂಗಡಿ ಕೊರೊನಾಗೆ ಇಲ್ಲೇ ಚಿಕಿತ್ಸೆ ಪಡೆದಿದ್ದರೆ ಉಳಿಯುತಿದ್ದರೆನೋ, ಏಮ್ಸ್ ನಲ್ಲಿ ಚಿಕಿತ್ಸೆ ಪಡೆದರೂ ಬದುಕಲಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಬೆಳಗಾವಿಯ ಸಾವಗಾಂವದ ಅಂಗಡಿ ಕಾಲೇಜಿನಲ್ಲಿಡಲಾಗಿದ್ದ ದಿವಂಗತ ಸಂಸದ ಸುರೇಶ್ ಅಂಗಡಿ ಪ್ರಥಮ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸುರೇಶ್ ನಮ್ಮನ್ನ ಅಗಲಿ ಒಂದು ವರ್ಷ ಆಗಿದೆ. ಆದರೆ ಅವರ ನೆನಪು ಇಗಲೂ ನಮ್ಮ ಮನಸ್ಸಿನಲ್ಲಿದೆ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಸಾಲದ ಕಂತನ್ನು ಪಾವತಿ ಮಾಡದ್ದಕ್ಕೆ ಅಣ್ಣನನ್ನೆ ಕೊಂದ ಪಾಪಿ ತಮ್ಮ
ನಾನೇ ಅವರನ್ನು ಬೆಳಗಾವಿ ಜಿಲ್ಲಾಧ್ಯಕ್ಷ ಎಂದು ಘೋಷಣೆ ಮಾಡಿದ್ದೆ ಎಂದ ಅವರು, ಪ್ರತಿ ಬಾರಿ ಅವರು ಚುನಾವಣೆ ಗೆದ್ದಾಗ ಲಿಡ್ ಪಡೆದಿದ್ದರು. ರೈಲ್ವೇ ಸಚಿವರಾಗಿ ಅವರು ಒಂದು ವರ್ಷದಲ್ಲಿ ಬಹಳ ಸಾಧನೆ ಮಾಡಿದರು ಎಂದು ನೆನೆಪಿಸಿಕೊಂಡರು. ಇದನ್ನೂ ಓದಿ: ಲಂಡನ್ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ಉಪಾಧ್ಯಕ್ಷರಾದ ಕನ್ನಡತಿ
ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಸಿದ್ದಾರೂಢರ ಹೆಸರು ಇಡಲು ಕಾರಣ ಸುರೇಶ್ ಅವರೇ ಎಂದ ಶೆಟ್ಟರ್, ಬೆಳಗಾವಿ ಬೆಂಗಳೂರು ರೈಲಿಗೆ ಅಂಗಡಿ ಎಕ್ಸ್ ಪ್ರೆಸ್ ಹೆಸರು ಇಡಲು ಮನವಿ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಕನಸು ನನಸು ಮಾಡಿದ ಸುರೇಶ್ ಅಂಗಡಿ ಬೆಳಗಾವಿಗೆ ಉಡಾನ್ 3 ತಂದರು ಎಂದರು.