ಹುಬ್ಬಳ್ಳಿ: ಸದ್ಯ ಬಿಜೆಪಿ ಮತ್ತು ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagdish Shettar) ನಡುವಿನ ಟಾಕ್ ಫೈಟ್ ಜೋರಾಗಿದೆ. ಶೆಟ್ಟರ್ ಮಾಡುವ ಆರೋಪಕ್ಕೆ ಬಿಜೆಪಿ ನಾಯಕರು ತಿರುಗೇಟು ನೀಡುತ್ತಿದ್ದಾರೆ. ಈ ನಡುವೆ ಮಾತಿನ ಯುದ್ಧಕ್ಕೆ ಶೆಟ್ಟರ್ ಅವರ ಪುತ್ರ ಎಂಟ್ರಿಕೊಟ್ಟಿದ್ದು, ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.
ಜಗದೀಶ್ ಶೆಟ್ಟರ್ ಅವರನ್ನ ಗುರಿಯಾಗಿಸಿಕೊಂಡು ಬಿಜೆಪಿ ನಾಯಕರು ಸಾಕಷ್ಟು ಹೇಳಿಕೆ ನೀಡುತ್ತಿದ್ದು, ಇದರಿಂದಾಗಿ ಅಸಮಾಧಾನಗೊಂಡಿರುವ ಜಗದೀಶ್ ಶೆಟ್ಟರ್ ಪುತ್ರ ಸಂಕಲ್ಪ್ ಶೆಟ್ಟರ್ (Sankalp Shettar), ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ನಾಯಕರನ್ನ ಕುಟುಕಿದ್ದಾರೆ. ಇದನ್ನೂ ಓದಿ: ಇಲ್ಲಿ ಯಾವ್ದೇ ಮೀನು ತಗೊಂಡ್ರೂ KG 99 ರೂ. ಮಾತ್ರ – ಚಿಕ್ಕಬಳ್ಳಾಪುರದಲ್ಲಿ ಮೀನು ಪ್ರಿಯರಿಗೆ ಬಂಪರ್
ಕರ್ನಾಟಕ ಬಿಜೆಪಿ ವಿರೋಧ ಪಕ್ಷದ ನಾಯಕ ಹಾಗೂ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಇವರು ಪ್ರಮುಖ ಮಾನದಂಡ, ಜಗದೀಶ್ ಶೆಟ್ಟರ್ ವಿರುದ್ಧ ಯಾರು ಹೆಚ್ಚು ಮಾತನಾಡುತ್ತಾರೆ ಟ್ವಿಟ್ಟರ್ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಅದನ್ನು ಅದಕ್ಕೆ ಬಿಎಲ್ ಅವರ ಆದೇಶ ಅಂತ ಅಡಿ ಬರಹ ಬರೆದು ಹ್ಯಾಶ್ ಟ್ಯಾಗ್ ಮಾಡಿ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಮಹಿಳಾ ಮೀಸಲಾತಿಯನ್ನ ಕಾಂಗ್ರೆಸ್ ಸ್ವಾಗತ ಮಾಡುತ್ತದೆ: ದಿನೇಶ್ ಗುಂಡೂರಾವ್
ಈ ಹಿಂದೆ ಶಾಸಕ ಮಹೇಶ್ ಟೆಂಗಿನಕಾಯಿ ಟಾಂಗ್ ನೀಡುವ ನಿಟ್ಟಿನಲ್ಲಿ, ಬಕೆಟ್ ಹಿಡಿದು ಟಿಕೆಟ್ ತೆಗೆದುಕೊಂಡಿದ್ದಾರೆ ಅಂತ ಮಹೇಶ್ ಟೆಂಗಿನಕಾಯಿ ಮತ್ತು ಬಿ.ಎಲ್ ಸಂತೋಷ್ ಅವರನ್ನ ಟೀಕಿಸಿದರು. ಇದರ ಬೆನ್ನಲ್ಲೇ ಈಗ ಮತ್ತೊಂದು ಪೋಸ್ಟ್ ಮಾಡಿರುವ ಸಂಕಲ್ಪ್, ರಾಜಕೀಯವಾಗಿಯೂ ತಮ್ಮ ತಂದೆ ಬೆಂಬಲಕ್ಕೆ ನಿಂತಿರುವುದನ್ನ ಸಾಬೀತು ಮಾಡಿದ್ದಾರೆ.
Web Stories