ಸೂಪರ್ಸ್ಟಾರ್ ರಜನಿಕಾಂತ್ (Rajinikanth) ನಟನೆಯ ಬಹು ನಿರೀಕ್ಷಿತ ‘ಜೈಲರ್’ (Jailer) ಚಿತ್ರ ಆಗಸ್ಟ್ 10 ರಂದು ತೆರೆಕಾಣುತ್ತಿದೆ. ಈ ಕಾರಣದಿಂದಲೇ ಆಗಸ್ಟ್ 11ರಂದು ಯಾವುದೇ ಕನ್ನಡ ಸಿನಿಮಾಗಳು ಬಿಡುಗಡೆಯನ್ನು ಅನೌನ್ಸ್ ಮಾಡಿರಲಿಲ್ಲ. ಆದರೆ, ಈಗ ಕನ್ನಡ ಚಿತ್ರವೊಂದು ಜೈಲರ್ ಮುಂದೆ ಬರಲು ರೆಡಿಯಾಗಿದೆ. ಅದು ‘ತೋತಾಪುರಿ-2’ (Totapuri 2) ಚಿತ್ರ.
- Advertisement 2
ಹೌದು ಜಗ್ಗೇಶ್ (Jaggesh) ಮತ್ತು ಧನಂಜಯ್ (Dolly Dhananjay) ಕಾಂಬಿನೇಶನ್ನಲ್ಲಿ ಮೂಡಿಬಂದಿರುವ ಈ ಚಿತ್ರ ಆಗಸ್ಟ್ ನಲ್ಲಿ ತೆರೆಕಾಣುವುದಾಗಿ ಹೇಳಿಕೊಂಡಿತ್ತು. ಆದರೆ, ಈಗ ಆಗಸ್ಟ್ 11ರಂದು ತೆರೆಗೆ ಬರಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಬಗ್ಗೆ ಮಾತನಾಡುವ ನಿರ್ಮಾಪಕ ಸುರೇಶ್, ‘ನಾವು ಆಗಸ್ಟ್ ಎರಡನೇ ವಾರ ಬರಲು ತಯಾರಿ ಮಾಡಿಕೊಳ್ಳುತ್ತಿರುವುದು ನಿಜ’ ಎನ್ನುತ್ತಾರೆ. ಇದನ್ನೂ ಓದಿ:ಅಮ್ಮನ ಜೊತೆ ಅಮರನಾಥ ಯಾತ್ರೆಯಲ್ಲಿ ಸಾನ್ಯ ಅಯ್ಯರ್
- Advertisement 3
- Advertisement 4
‘ತೋತಾಪುರಿ-2’ನಲ್ಲಿ ಜಗ್ಗೇಶ್ ಜೊತೆಗೆ ಧನಂಜಯ್ ಅವರಿಗೂ ಪ್ರಮುಖ ಪಾತ್ರವಿದೆ. ಇಲ್ಲಿ ಸುಮನ್ ರಂಗನಾಥ್ ಕೂಡಾ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ತೋತಾಪುರಿ ಚಿತ್ರದ ಮೊದಲ ಭಾಗದಲ್ಲಿ ‘ಬಾಗ್ಲು ತೆಗಿ ಮೇರಿ ಜಾನ್ ಹಾಡು ಸೂಪರ್ ಹಿಟ್ ಆಗಿತ್ತು. ರೊಮ್ಯಾಂಟಿಕ್ ಕಾಮಿಡಿ ಶೈಲಿಯಲ್ಲಿ ಮೂಡಿಬಂದಿದ್ದ ಈ ಹಾಡಿಗೆ ಲಕ್ಷಾಂತರ ಹಿಟ್ಸ್ ದಾಖಲಾಗಿತ್ತು. ಇದೀಗ ‘ತೋತಾಪುರಿ-2 ಚಿತ್ರದ ಮೊದಲ ಹಾಡು ಇತ್ತೀಚೆಗೆ ಬಿಡುಗಡೆಯಾಗಿದ್ದು, ಎಲ್ಲೆಡೆ ಸದ್ದು ಮಾಡುತ್ತಿದೆ. ಅದರಲ್ಲೂ ಮಳೆಗಾಲದಲ್ಲಿ ಈ ಹಾಡು ಮೋಡಿ ಮಾಡುತ್ತಿರೋದು ವಿಶೇಷ.
ಹೃದಯಶಿವ ಸಾಹಿತ್ಯ ರಚಿಸಿರುವ ‘ಮೊದಲ ಮಳೆ ಮನದೊಳಗೆ… ಎಂಬ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸೌಂಡು ಮಾಡುತ್ತಿಿದೆ. ಡಾಲಿ ಧನಂಜಯ್ ಹಾಗೂ ಸುಮನ್ ರಂಗನಾಥ್ ಈ ಹಾಡಿನಲ್ಲಿ ಕಾಣಿಸಿಕೊಂಡಿದ್ದು, ಸಂಜಿತ್ ಹೆಗ್ಡೆ ಕಂಠಸಿರಿಯಲ್ಲಿ ‘ಮಳೆ ಹಾಡು ಮೂಡಿ ಬಂದಿದೆ.ಈ ಮೆಲೋಡಿ ಹಾಡಿಗೆ ಕೇಳುಗರಿಂದ ಮೆಚ್ಚುಗೆ ವ್ಯಕ್ತವಾಗುತ್ತಿಿದೆ.
Web Stories