ಕರ್ನಾಟಕದ ಜೈಲಿನಲ್ಲಿದ್ದುಕೊಂಡೇ ಕೇಂದ್ರ ಸಚಿವ ನಿತಿನ್‌ ಗಡ್ಕರಿಗೆ ಕೊಲೆ ಬೆದರಿಕೆ

Public TV
1 Min Read
Nitin Gadkari

ಮುಂಬೈ: ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಅವರಿಗೆ ಪ್ರಾಣ ಬೆದರಿಕೆ ಹಾಕಿದ್ದ ಆರೋಪಿಯನ್ನು ನಾಗ್ಪುರ ಪೊಲೀಸರು ಪತ್ತೆಹಚ್ಚಿದ್ದಾರೆ. ಆರೋಪಿ ಜೈಲಲ್ಲಿದ್ದುಕೊಂಡೇ ಸಚಿವರ ಕಚೇರಿಗೆ ಫೋನ್‌ ಕರೆ ಮಾಡಿ ಪ್ರಾಣ ಬೆದರಿಕೆ ಹಾಕಿದ್ದ ಎಂಬುದು ತನಿಖೆ ವೇಳೆ ತಿಳಿದುಬಂದಿದೆ.

ಕರೆ ಮಾಡಿದಾತನನ್ನು ಜೈಲಿನಲ್ಲಿರುವ ದರೋಡೆಕೋರ ಜಯೇಶ್ ಕಾಂತ ಎಂದು ಗುರುತಿಸಲಾಗಿದೆ. ಆತ ಬೆಳಗಾವಿ (Belagavi) ಜೈಲಿನಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ಜೈಲಿನ ಒಳಗಿದ್ದುಕೊಂಡೇ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಕಚೇರಿಗೆ ಬೆದರಿಕೆ ಕರೆಗಳನ್ನು ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಕೊಲೆ ಬೆದರಿಕೆ – ಸಚಿವರ ನಿವಾಸಕ್ಕೆ ಬಿಗಿಭದ್ರತೆ

Nitin Gadkari 3 1

“ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಜೈಲಿನಿಂದ ಬೆದರಿಕೆ ಹಾಕಲಾಗುತ್ತಿದೆ. ಕರೆ ಮಾಡಿದವರು ಕುಖ್ಯಾತ ದರೋಡೆಕೋರ ಮತ್ತು ಕೊಲೆ ಆರೋಪಿ ಜಯೇಶ್ ಕಾಂತ. ಕರ್ನಾಟಕದ ಬೆಳಗಾವಿ ಜೈಲಿನಲ್ಲಿ ಬಂಧಿಯಾಗಿದ್ದಾನೆ. ಈತ ಜೈಲಿನೊಳಗೆ ಅಕ್ರಮವಾಗಿ ಫೋನ್ ಬಳಸಿ ಗಡ್ಕರಿ ಅವರ ಕಚೇರಿಗೆ ಬೆದರಿಕೆ ಹಾಕಿದ್ದಾರೆ ಎಂದು ನಾಗ್ಪುರ ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.

ಹೆಚ್ಚಿನ ತನಿಖೆಗಾಗಿ ನಾಗ್ಪುರ ಪೊಲೀಸರ ತಂಡ ಬೆಳಗಾವಿಗೆ ತೆರಳಿದೆ. ಜೈಲು ಆಡಳಿತವು ಆರೋಪಿಯಿಂದ ಡೈರಿಯನ್ನು ವಶಪಡಿಸಿಕೊಂಡಿದೆ. ಆರೋಪಿಯನ್ನು ಪ್ರೊಡಕ್ಷನ್ ರಿಮಾಂಡ್‌ಗೆ ನೀಡುವಂತೆ ನಾಗ್ಪುರ ಪೊಲೀಸರು ಕೋರಿದ್ದಾರೆ. ಇದನ್ನೂ ಓದಿ: ಸ್ಯಾಂಟ್ರೋ ರವಿಗೆ 14 ದಿನ ನ್ಯಾಯಾಂಗ ಬಂಧನ

ಮಹಾರಾಷ್ಟ್ರದಲ್ಲಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಕಚೇರಿಗೆ ಶನಿವಾರ ಬೆದರಿಕೆ ಕರೆಗಳು ಬಂದಿವೆ ಎಂದು ನಾಗ್ಪುರ ಪೊಲೀಸರು ತಿಳಿಸಿದ್ದರು. ಬೆದರಿಕೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗುತ್ತಿದ್ದಂತೆ ಸಚಿವರ ನಿವಾಸದ ಸುತ್ತ ಭಿಗಿಭದ್ರತೆ ಕಲ್ಪಿಸಲಾಗಿತ್ತು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *