ನವದೆಹಲಿ: ಖ್ಯಾತ ಜೈನ ಮುನಿಗಳಾದ ಆಚಾರ್ಯ ವಿದ್ಯಾಸಾಗರ ಮಹಾರಾಜ್ (Jain Muni Acharya Vidhyasagar Maharaj) ಅವರು ಇಂದು ನಿಧನರಾಗಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ಸಂತಾಪ ಸೂಚಿಸಿದ್ದಾರೆ.
ಆಚಾರ್ಯ ವಿದ್ಯಾಸಾಗರ ಮಹಾರಾಜರಿಗೆ 77 ವರ್ಷ ವಯಸ್ಸಾಗಿತ್ತು. ಇವರು ಛತ್ತೀಸ್ಗಢದ ಡೊಂಗರ್ಗಢ್ನ ಚಂದ್ರಗಿರಿ ತೀರ್ಥದಲ್ಲಿ ಭಾನುವಾರ ಮುಂಜಾನೆ ನಿಧನರಾದರು. ವಿದ್ಯಾಸಾಗರ ಮಹಾರಾಜರ ನಿಧನದ ಹಿನ್ನೆಲೆಯಲ್ಲಿ ಸರ್ಕಾರದಿಂದ ಅರ್ಧ ದಿನ ರಜೆ ಘೋಷಿಸಲಾಗಿದೆ.
आचार्य श्री 108 विद्यासागर जी महाराज जी का ब्रह्मलीन होना देश के लिए एक अपूरणीय क्षति है। लोगों में आध्यात्मिक जागृति के लिए उनके बहुमूल्य प्रयास सदैव स्मरण किए जाएंगे। वे जीवनपर्यंत गरीबी उन्मूलन के साथ-साथ समाज में स्वास्थ्य और शिक्षा को बढ़ावा देने में जुटे रहे। यह मेरा… pic.twitter.com/mvJJPbiiwM
— Narendra Modi (@narendramodi) February 18, 2024
ಪ್ರಧಾನಿ ಟ್ವೀಟ್: ಆಚಾರ್ಯ ಶ್ರೀ 108 ವಿದ್ಯಾಸಾಗರ್ ಜಿ ಮಹಾರಾಜ್ ಅವರು ಸಮಾಜಕ್ಕೆ ಅಮೂಲ್ಯ ಕೊಡುಗೆಗಳನ್ನು ನೀಡಿದ್ದಾರೆ. ವಿಶೇಷವಾಗಿ ಜನರಲ್ಲಿ ಆಧ್ಯಾತ್ಮಿಕ ಜಾಗೃತಿಗಾಗಿ ಅವರು ಮಾಡಿದ ಪ್ರಯತ್ನಗಳು, ಬಡತನ ನಿವಾರಣೆ, ಆರೋಗ್ಯ ರಕ್ಷಣೆ, ಶಿಕ್ಷಣ ಹೀಗೆ ಸಾಕಷ್ಟು ಕೊಡುಗೆಗಳನ್ನು ಕೊಟ್ಟಿದ್ದಾರೆ. ಹೀಗೆ ಅವರು ಮಾಡಿದ ಉತ್ತಮ ಕೆಲಸಗಳಿಂದಾಗಿ ಅವರನ್ನು ಮುಂದಿನ ಪೀಳಿಗೆಯವರು ನೆನಪಿಸಿಕೊಳ್ಳುತ್ತಾರೆ.
ವರ್ಷಗಳ ಕಾಲ ಅವರ ಆಶೀರ್ವಾದ ಪಡೆಯುವ ಗೌರವ ನನಗಿತ್ತು. ಕಳೆದ ವರ್ಷದ ಕೊನೆಯಲ್ಲಿ ಛತ್ತೀಸ್ಗಢದ ಡೊಂಗರ್ಗಢ್ನಲ್ಲಿರುವ ಚಂದ್ರಗಿರಿ ಜೈನ ಮಂದಿರಕ್ಕೆ ನಾನು ಭೇಟಿ ನೀಡಿದ್ದು, ಎಂದಿಗೂ ಮರೆಯಲು ಸಾಧ್ಯವಿಲ್ಲ. ಆ ಸಮಯದಲ್ಲಿ ನಾನು ಆಚಾರ್ಯ ಶ್ರೀ 108 ವಿದ್ಯಾಸಾಗರ್ ಮಹಾರಾಜ್ ಅವರೊಂದಿಗೆ ಸಮಯ ಕಳೆದಿದ್ದೇನೆ ಮತ್ತು ಅವರ ಆಶೀರ್ವಾದವನ್ನು ಸಹ ಪಡೆದಿದ್ದೇನೆ ಎಂದು ಅವರು ಹೇಳಿದರು.
ಜೈನ ಸಮುದಾಯದವರು ಹೇಳಿದ್ದೇನು?: ವಿದ್ಯಾಸಾಗರ ಅವರು 2020 ರಲ್ಲಿ ಇಂದೋರ್ಗೆ ಬಂದಾಗ ಕೊರೊನಾದಿಂದ ಲಾಕ್ಡೌನ್ ಇತ್ತು. ಇದರಿಂದಾಗಿ ಇಂದೋರ್ನ ಜನರು ಈ ಪ್ರೀತಿಯನ್ನು ಪಡೆಯಲು ಸಾಧ್ಯವಾಯಿತು. ಗುರುಗಳ ಮೇಲಿನ ಅಪಾರವಾದ ಮಮತೆಯಿಂದಲೇ ಇಂದೋರ್ಗೆ ಈ ಸೌಭಾಗ್ಯ ಸಿಕ್ಕಿದೆ ಎಂದು ಜೈನ ಸಮುದಾಯದವರು ಹೇಳುತ್ತಾರೆ. ಇದನ್ನೂ ಓದಿ: ಆಕೆ ಧೈರ್ಯಶಾಲಿ – ನೂಪುರ್ ಶರ್ಮಾ ಬೆಂಬಲಿಸಿ ವೈಯಕ್ತಿಕ ಸಂದೇಶ ಕಳಿಸಿದ್ದೇನೆಂದ ಡಚ್ ನಾಯಕ
ಆಚಾರ್ಯ ಶ್ರೀ ವಿದ್ಯಾಸಾಗರ ಮಹಾರಾಜರು ತಮ್ಮ ಸಂತ ಜೀವನದಲ್ಲಿ ಹೆಚ್ಚಿನ ಸಮಯವನ್ನು ಇಂದೋರ್ ನಲ್ಲಿ ಕಳೆದಿದ್ದಾರೆ. ಅವರ 56 ವರ್ಷಗಳ ತಪಸ್ವಿ ಜೀವನದಲ್ಲಿ ಅವರು ಇಂದೋರ್ನಲ್ಲಿ 10 ತಿಂಗಳುಗಳಿಗಿಂತ ಹೆಚ್ಚು ಕಾಲ ಕಳೆದರು. ಈ ಅವಧಿಯಲ್ಲಿ 300 ದಿನಗಳಿಗೂ ಹೆಚ್ಚು ಕಾಲ ಗುರುವಿನ ಸಾಂಗತ್ಯ ಸಿಕ್ಕಿರುವುದು ಇಂದೋರ್ ನ ಭಕ್ತರ ಸೌಭಾಗ್ಯವಾಗಿದೆ.