ಇಸ್ಲಾಮಾಬಾದ್: ಜೈಶ್-ಎ-ಮೊಹಮ್ಮದ್ (Jaish-e-Mohammed) ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ (Masood Azhar) ಅವರ ಹಿರಿಯ ಸಹೋದರ ಮೊಹಮ್ಮದ್ ತಾಹಿರ್ ಅನ್ವರ್ ಪಾಕಿಸ್ತಾನದಲ್ಲಿ ನಿಗೂಢ ಸಾವನ್ನಪ್ಪಿದ್ದಾನೆ.
ಅನ್ವರ್ ಅಂತ್ಯಕ್ರಿಯೆಯನ್ನು ಸೋಮವಾರ ಪಾಕಿಸ್ತಾನದ ಬಹಾವಲ್ಪುರದ ಜಾಮಿಯಾ ಮಸೀದಿ ಉಸ್ಮಾನ್ ವಾಲಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದೆ. ಆದಾಗ್ಯೂ, ಸಾವಿಗೆ ನಿಖರವಾದ ಕಾರಣವನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ. ಇದನ್ನೂ ಓದಿ: 900 ಕೆಜಿ ಬಂಕರ್ ಬಸ್ಟರ್ ಬಾಂಬ್ನಿಂದ ಅಮೆರಿಕ ದಾಳಿ – ಇರಾನ್ನ ಇಸ್ಫಹಾನ್ನಲ್ಲಿ ಸರಣಿ ಸ್ಫೋಟ!
ಅನ್ವರ್ ಮಸೂದ್ ಅಜರ್ನ ಐವರು ಸಹೋದರರಲ್ಲಿ ಒಬ್ಬನೆಂದು ವರದಿಯಾಗಿದೆ. ಆತ ಜೈಶ್-ಎ-ಮೊಹಮ್ಮದ್ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮತ್ತು ಭಯೋತ್ಪಾದಕ ಸಂಘಟನೆಯ ಕಾರ್ಯಾಚರಣೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ.
ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತ ಆಪರೇಷನ್ ಸಿಂಧೂರ ಅಡಿಯಲ್ಲಿ ನಡೆಸಿದ ವಾಯುದಾಳಿಯಲ್ಲಿ ತನ್ನ ಕುಟುಂಬದ 10 ಸದಸ್ಯರು ಮತ್ತು ತನ್ನ ನಾಲ್ವರು ಸಹಾಯಕರು ಸಾವನ್ನಪ್ಪಿದ್ದಾರೆ ಎಂದು ಮಸೂದ್ ಅಜರ್ ಕಳೆದ ವರ್ಷ ಹೇಳಿಕೊಂಡಿದ್ದ. ಇದನ್ನೂ ಓದಿ: ಇರಾನ್ ಮೇಲೆ ಪರಮಾಣು ದಾಳಿಗೆ ಸಿದ್ಧತೆ: ವಿಶ್ವಸಂಸ್ಥೆಯ ರಾಜತಾಂತ್ರಿಕ ರಾಜೀನಾಮೆ
1994 ರಲ್ಲಿ ಭಾರತದಲ್ಲಿ ಬಂಧನಕ್ಕೊಳಗಾಗಿದ್ದ ಮತ್ತು ಏರ್ ಇಂಡಿಯಾ ಐಸಿ 814 ವಿಮಾನ ಅಪಹರಣದ ನಂತರ ರಿಲೀಸ್ ಆದ ಅಜರ್ ಹೇಳಿಕೆಯ ಪ್ರಕಾರ, ಬಹಾವಲ್ಪುರದ ಜಾಮಿಯಾ ಮಸೀದಿ ಸುಭಾನ್ ಅಲ್ಲಾಹ್ನ ಜೆಇಎಂ ಪ್ರಧಾನ ಕಚೇರಿಯ ಮೇಲಿನ ದಾಳಿಯಲ್ಲಿ ಆತನ ಅಕ್ಕ, ಆಕೆಯ ಪತಿ, ಸೋದರಳಿಯ ಮತ್ತು ಪತ್ನಿ, ಸೊಸೆ ಮತ್ತು ಕುಟುಂಬದ ಐದು ಮಕ್ಕಳು ಸಾವನ್ನಪ್ಪಿದ್ದಾರೆ.

