Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೆಆರ್‌ಎಸ್‌ ನೀರು ಬಳಕೆ ಮಾಡಿಕೊಂಡು ಜಲಪಾತೋತ್ಸವ ಮಾಡಲಾಗುತ್ತಿದೆ ಎಂಬ ಆರೋಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕೆಆರ್‌ಎಸ್‌ ನೀರು ಬಳಕೆ ಮಾಡಿಕೊಂಡು ಜಲಪಾತೋತ್ಸವ ಮಾಡಲಾಗುತ್ತಿದೆ ಎಂಬ ಆರೋಪ

Districts

ಕೆಆರ್‌ಎಸ್‌ ನೀರು ಬಳಕೆ ಮಾಡಿಕೊಂಡು ಜಲಪಾತೋತ್ಸವ ಮಾಡಲಾಗುತ್ತಿದೆ ಎಂಬ ಆರೋಪ

Public TV
Last updated: January 17, 2020 1:52 pm
Public TV
Share
2 Min Read
mnd gaganachuki
SHARE

– ರೈತರ ಬೆಳೆಗಳಿಗೆ ಇಲ್ಲದ ನೀರು ಮೋಜು ಮಸ್ತಿಗೆ ಬೇಕಂತೆ

ಮಂಡ್ಯ: ಕಳೆದ ಮೂರ್ನಾಲ್ಕು ತಿಂಗಳ ಹಿಂದೆ ರಾಜ್ಯದಲ್ಲೆಡೆ ಭಾರೀ ಮಳೆ ಸುರಿದು ಹಳ್ಳ ತೊರೆಗಳು ತುಂಬಿ ಹರಿಯುತ್ತಿದ್ದವು. ಅದೇ ರೀತಿ ವಿಶ್ವಪ್ರಸಿದ್ಧ ಗಗನಚುಕ್ಕಿ ಜಲಪಾತವೂ ಭೋರ್ಗರೆದು ಧುಮ್ಮಿಕ್ಕುತ್ತಿತ್ತು. ಆಗ ಜಲಪಾತ ಉತ್ಸವ ಮಾಡದ ಜಿಲ್ಲಾಡಳಿತ ಈಗ ನೀರೇ ಇಲ್ಲದೆ ಖಾಲಿ ಖಾಲಿಯಾಗಿರುವ ಗಗನಚುಕ್ಕಿ ಜಲಪಾತದಲ್ಲಿ ಜಲಪಾತೋತ್ಸವ ಮಾಡಲು ಮುಂದಾಗಿದೆ.

ಇದೇ ತಿಂಗಳ 18 ಹಾಗೂ 19ರಂದು ಎರಡು ದಿನಗಳ ಕಾಲ ಉತ್ಸವ ನಡೆಸುವುದಕ್ಕಾಗಿ ಜಿಲ್ಲಾಡಳಿತ ಎಲ್ಲಾ ಸಿದ್ಧತೆಯನ್ನು ನಡೆಸಿದೆ. ಇದು ವಿವಾದಕ್ಕೆ ಕಾರಣವಾಗಿದ್ದು, ಕೆಆರ್‌ಎಸ್‌ ನೀರನ್ನು ಬಳಕೆ ಮಾಡಿಕೊಂಡು ಜಲಪಾತೋತ್ಸವ ಮಾಡಲಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಜಿಲ್ಲೆಯ ರೈತರು ಹಿಂಗಾಳು ಬೆಳೆ ಬೆಳೆಯುವುದಕ್ಕೆ ನೀರು ಬಿಡುವ ಬಗ್ಗೆ ನಿರ್ಧಾರವೇ ಆಗಿಲ್ಲ ಅಂತಹದರಲ್ಲಿ ಈಗ ಜಲಪಾತೋತ್ಸವ ಮಾಡುವ ಅಗತ್ಯವಿದಿಯಾ ಎಂದು ರೈತರು ಪ್ರಶ್ನೆ ಮಾಡಲು ಆರಂಭಿಸಿದ್ದಾರೆ.

mnd krs 3 e1579249192100

ಪ್ರತಿ ವರ್ಷ ಜೂನ್-ಜುಲೈ ತಿಂಗಳಲ್ಲಿ ಮಳೆ ಸುರಿದು ಕೆಆರ್‌ಎಸ್‌ ಡ್ಯಾಂ ಭರ್ತಿಯಾಗಿ ಹೆಚ್ಚಿನ ಪ್ರಮಾಣದ ನೀರು ಹರಿದು ಬರುವ ಸಂದರ್ಭದಲ್ಲಿ ಜಲಪಾತ ತುಂಬಿ ಹರಿಯುತ್ತಿತ್ತು. ಆಗ ಪ್ರತಿ ವರ್ಷ ಜಲಪಾತೋತ್ಸವ ಮಾಡಲಾಗುತ್ತಿತ್ತು. ಆದರೆ ಕಳೆದ ಎರಡು ಮೂರು ವರ್ಷಗಳಲ್ಲಿ ಮಳೆ ಇಲ್ಲದೆ ಡ್ಯಾಂ ಭರ್ತಿಯಾಗಿರಲಿಲ್ಲ. ಹೀಗಾಗಿ ಜಲಪಾತೋತ್ಸವವನ್ನೂ ಮಾಡಲಾಗಿರಲಿಲ್ಲ. ಆದರೆ ಈ ವರ್ಷ ಹಿಂದೆಂದೂ ಕಾಣದ ರೀತಿಯಲ್ಲಿ ಮಳೆಯಾಗಿ ಡ್ಯಾಂ ಭರ್ತಿ ಆಯಿತು.

ನಿರಂತರವಾಗಿ ಸುಮಾರು 4 ತಿಂಗಳಿಗೂ ಹೆಚ್ಚು ಕಾಲ ಡ್ಯಾಂನ ಗರಿಷ್ಠ ಮಟ್ಟದಲ್ಲಿ ನೀರು ಸಂಗ್ರಹವಾಗಿದೆ. ಈಗಲೂ ಡ್ಯಾಂನಲ್ಲಿ 120 ಅಡಿಯಷ್ಟು ನೀರು ಸಂಗ್ರಹವಾಗಿದೆ. ಹೀಗೆ ಎರಡೂ ತಿಂಗಳಿಗೂ ಅಧಿಕ ದಿನಗಳ ಕಾಲ ಗಗನಚುಕ್ಕಿ ಜಲಪಾತ ತುಂಬಿ ಹರಿಯುತ್ತಿತ್ತು. ಆಗ ಜಲಪಾತೋತ್ಸವ ಮಾಡುವ ಬದಲು ಈಗ ಗಗನಚುಕ್ಕಿ ಜಲಪಾತ ಸಂಪೂರ್ಣ ಖಾಲಿ ಖಾಲಿಯಾಗಿದ್ದು, ಇದರ ಮದ್ಯೆಯೇ ಇದೇ ತಿಂಗಳ 18 ಹಾಗೂ 19ರಂದು ಗಗನಚುಕ್ಕಿ ಜಲಪಾತೋತ್ಸವ ಮಾಡಲು ಜಿಲ್ಲಾಡಳಿತ ಮುಂದಾಗಿದೆ. ಇದು ರೈತರನ್ನು ಕೆರಳಿಸಿದ್ದು ಜಿಲ್ಲೆಯ ರೈತರಿಗೆ ಹಿಂಗಾಳು ಬೆಳೆ ಬೆಳೆಯಲು ನೀರನ್ನು ಬಿಡಬೇಕೆಂಬ ಬಗ್ಗೆ ನಿರ್ಧಾರವೇ ಆಗಿಲ್ಲ. ಅಂತಹದರಲ್ಲಿ ಈಗ ಜಲಪಾತೋತ್ಸವ ಮಾಡುವ ಮೂಲಕ ನೀರನ್ನು ಪೋಲು ಮಾಡಲಾಗುತ್ತಿದೆ. ಇದರಿಂದ ಬೇಸಿಗೆ ಕಾಲದಲ್ಲಿ ಬೆಂಗಳೂರು, ಮೈಸೂರು ಮಂಡ್ಯದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗುತ್ತದೆ.

mnd krs 4 e1579249217962

ಯಾರೂ ಏನೇ ಅಂದರು ಇದೇ ತಿಂಗಳ 18ರಂದು ಹಾಗೂ 19ರಂದು ಗಗನಚುಕ್ಕಿ ಜಲಪಾತೋತ್ಸವ ಮಾಡಲು ನಿರ್ಧರಿಸಿದ್ದು, ಜಲಪಾತದ ಪಕ್ಕದಲ್ಲೇ ಬೃಹತ್ ವೇದಿಕೆ ನಿರ್ಮಿಸಲಾಗುತ್ತಿದೆ. ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದ್ದು, 18ರಂದು ಸಂಜೆ ಜಿಲ್ಲಾ ಉಸ್ತುವಾರಿ ಸಚಿವ ಆರ್. ಅಶೋಕ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಎರಡು ದಿನ ಸಿನಿಮಾ ನಟ-ನಟಿಯರಿಂದ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ನೀರು ಹರಿಯುವಾಗ ಗಗನ ಚುಕ್ಕಿ ಜಲಪಾತೋತ್ಸವ ಮಾಡುವ ಬದಲು ಈಗ ಖಾಲಿ ಖಾಲಿಯಾಗಿರುವ ಸಂದರ್ಭದಲ್ಲಿ ಉತ್ಸವ ಮಾಡುವ ಅಗತ್ಯವೇನಿತ್ತು. ತಮಿಳು ನಾಡಿಗೆ ನೀರು ಬಿಡುವುದಕ್ಕಾಗಿಯೇ ಉತ್ಸವ ಮಾಡಲಾಗುತ್ತಿದೆ ಎನ್ನುವ ರೈತರ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಶಾಸಕ ಅನ್ನದಾನಿ ನಾವು ಕೆಆರ್‌ಎಸ್‌ ನೀರನ್ನು ಬಳಕೆ ಮಾಡಿಕೊಳ್ಳುತ್ತಿಲ್ಲ. ಸ್ಥಳೀಯವಾಗಿರುವ ಖಾಸಗಿ ಪವರ್ ಸ್ಟೇಷನ್‍ನವರ ಬಳಿ ನೀರು ಪಡೆದುಕೊಂಡು ನಾವು ಉತ್ಸವ ಮಾಡುತ್ತಿದ್ದೀವಿ ಎಂದು ಸ್ಪಷ್ಟನೆ ನೀಡುತ್ತಿದ್ದಾರೆ.

TAGGED:District AdministrationfarmersGaganachukki FallskrsmandyaPublic TVಕೆಆರ್‍ಎಸ್ಗಗನಚುಕ್ಕಿ ಜಲಪಾತಜಿಲ್ಲಾಡಳಿತಪಬ್ಲಿಕ್ ಟಿವಿಮಂಡ್ಯರೈತರು
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Donald Trump Strait Of Hormuz
Latest

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ – ಇರಾನ್‌ನೊಂದಿಗೆ ಜಂಟಿ ಉದ್ಯಮ ಬಯಸಿದ ಟ್ರಂಪ್‌

Public TV
By Public TV
2 hours ago
Gujarat Titans 1
Cricket

ಗೆಲ್ಲುವ ಪಂದ್ಯ ಕೈಚೆಲ್ಲಿದ ಡೆಲ್ಲಿ – ಗುಜರಾತ್‌ಗೆ 1 ರನ್‌ ರೋಚಕ ಜಯ 

Public TV
By Public TV
2 hours ago
krs party worker arrest
Latest

ಗೃಹಸಚಿವರನ್ನು ಪ್ರಶ್ನೆ ಮಾಡಿದ ಕೆಆರ್‌ಎಸ್ ಪಕ್ಷದ ‌ಮುಖಂಡ ಬಂಧನ

Public TV
By Public TV
2 hours ago
Bhutnal Lake
Bengaluru City

ಪ್ರವಾಸಕ್ಕೆ ಹೋಗಿದ್ದ ಬೆಂಗ್ಳೂರಿನ ಮೂವರು ಕೆರೆಯಲ್ಲಿ ಮುಳುಗಿ ಸಾವು

Public TV
By Public TV
3 hours ago
01 7
Big Bulletin

ಬಿಗ್‌ ಬುಲೆಟಿನ್‌ 08 April 2026 ಭಾಗ-1

Public TV
By Public TV
3 hours ago
02 7
Big Bulletin

ಬಿಗ್‌ ಬುಲೆಟಿನ್‌ 08 April 2026 ಭಾಗ-2

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?