ಬೆಂಗಳೂರು: ಗೋವಿಂದ.. ಗೋವಿಂದ ಎನ್ನುತ್ತ ವೆಂಕಟರಮಣ ಸ್ವಾಮಿಯ ಜಾತ್ರೆಯ ತೇರು ಎಳೆಯುವ ಮೂಲಕ ಶಾಸಕ ಜಮೀರ್ ಅಹ್ಮದ್ ಸೌಹಾರ್ದತೆ ಮೆರೆದಿದ್ದಾರೆ.
ಇಲ್ಲಿನ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಮಕ್ಕಳ ಕೂಟದ ಬಳಿಯಿರುವ ಕೋಟೆ ವೆಂಕಟರಮಣ ಸ್ವಾಮಿ ದೇವಸ್ಥಾನದ ವಾರ್ಷಿಕೋತ್ಸವದಲ್ಲಿ ತೇರು ಎಳೆದಿದ್ದಾರೆ. ಇದನ್ನೂ ಓದಿ: ಇಸ್ಲಾಂ ಅನ್ನೋದು ಧರ್ಮವಲ್ಲ, ಕಾಮುಕರ ಗ್ಯಾಂಗ್: ರಾಧಾಕೃಷ್ಣ ಅಡ್ಯಂತಾಯ ವಿವಾದಾತ್ಮಕ ಹೇಳಿಕೆ
- Advertisement 2
- Advertisement 3
ವೆಂಕಟರಮಣ ಗೋವಿಂದ.. ಗೋವಿಂದ ಎನ್ನುತ್ತ ಕೋಟೆ ವೆಂಕಟರಮಣ ದೇಗುಲದ ಜಾತ್ರೆಯ ತೇರು ಎಳೆದಿದ್ದಾರೆ. ಜಾತ್ರೆಯ ತೇರನ್ನು ಎಳೆದು ಮಂಗಳಾರತಿ ತೀರ್ಥ, ಪ್ರಸಾದ ತೆಗೆದುಕೊಂಡಿದ್ದಾರೆ. ಇದೇ ವೇಳೆ ನೆರೆದಿದ್ದ ಜನಸ್ತೋಮಕ್ಕೆ ಶುಭಾಶಯ ಕೋರಿದ್ದಾರೆ. ಇದನ್ನೂ ಓದಿ: ಸ್ವಾಮೀಜಿ ಬಾಯಿಯಿಂದ ಎಂಜಲು ಅನ್ನವನ್ನು ತೆಗೆಸಿ ತಿಂದ ಶಾಸಕ ಜಮೀರ್
- Advertisement 4
ರಾಜ್ಯದಲ್ಲಿ ಧರ್ಮ ದಂಗಲ್ ತಲೆದೋರಿರುವ ಸಂದರ್ಭದಲ್ಲಿ ಜಮೀರ್ ಅಹ್ಮದ್ ಸೌಹಾರ್ದತೆ ಆಶಯವನ್ನು ವ್ಯಕ್ತಪಡಿಸಿದ್ದಾರೆ. ಮದರಸಾಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ ಎಂದು ಉತ್ತರ ಪ್ರದೇಶದಲ್ಲಿ ಆದೇಶ ಹೊರಡಿಸಿದ ಸಂದರ್ಭದಲ್ಲಿ, ಜಮೀರ್ ಅವರು ರಾಷ್ಟ್ರಗೀತೆ ಹಾಡುವ ಮೂಲಕ ದೇಶಪ್ರೇಮ ಮೆರೆದಿದ್ದರು.