ಹಾಸನ: ನನ್ನ ತಂದೆ ರಾಜಕೀಯದಲ್ಲಿ ಸಾಕಷ್ಟು ಸೇವೆ ಸಲ್ಲಿಸಿದ್ದಾರೆ. ಆದರೆ ನಾನು ಮೊದಲಿನಿಂದಲೂ ರಾಜಕೀಯದಿಂದ ದೂರವೇ ಇದ್ದೇನೆ ಎಂದು ಶಾಸಕ ಜಮೀರ್ ಅಹಮದ್ ಪುತ್ರ ಹಾಗೂ ನಟ ಜೈದ್ ಖಾನ್ ಹೇಳಿದರು.
ನಗರದಲ್ಲಿ ಮಾತನಾಡಿದ ಅವರು, ರಾಜಕೀಯದಿಂದ ನಾನು ಮೊದಲಿನಿಂದಲೂ ದೂರ ಉಳಿದಿದ್ದೇನೆ. ರಾಜಕೀಯ ನನಗೆ ಇಷ್ಟ ಇಲ್ಲ. ನನ್ನ ಆಯ್ಕೆ ಸಿನಿಮಾರಂಗ ಎಂದು ತಿಳಿಸಿದರು. ಇದನ್ನೂ ಓದಿ: ‘ಬನಾರಸ್’ ಫಸ್ಟ್ ಲುಕ್ ಮೋಷನ್ ಪೋಸ್ಟರ್ಗೆ ಚಿತ್ರರಸಿಕರಿಂದ ಬಹುಪರಾಕ್
ನನ್ನ ನೋಡಲೆಂದು ಬಂದಿರುವ ಜನಸಾಗರ ನೋಡಿ ಸಂತೋಷವಾಗಿದೆ. ಯಾವ ಜನ್ಮದಲ್ಲಿ ಪುಣ್ಯ ಮಾಡಿದ್ದೇನೊ ನನಗೆ ಗೊತ್ತಿಲ್ಲ. ತಂದೆಯವರು ಸಾಕಷ್ಟು ಜನಪರ ಕೆಲಸ, ಬಡವರ ಸೇವೆ ಮಾಡಿದ್ದಾರೆ. ಅವರ ಮೇಲೆ ಪ್ರೀತಿ ಇಟ್ಟಿರುವ ಜನ ಇಂದು ನನ್ನನ್ನೂ ಗೌರವಿಸುತ್ತಿದ್ದಾರೆ. ನಾನು ತುಂಬ ಅದೃಷ್ಟವಂತನೆಂದು ಹೇಳಿಕೊಳ್ಳಲು ಹೆಮ್ಮಯಾಗುತ್ತಿದೆ ಎಂದು ಸಂಸತ ವ್ಯಕ್ತಪಡಿಸಿದರು.
5 ಭಾಷೆಗಳಲ್ಲಿ ನಿರ್ಮಾಣವಾಗಿರುವ ʻಬನರಸ್ʼ ಸಿನಿಮಾದಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದು, ಈಗಾಗಲೇ ಟ್ರೈಲರ್ನಲ್ಲಿ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದೆ. ಮೊದಲ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದೇನೆ. ರಾಜಕೀಯದಲ್ಲಿ ತಂದೆಗೆ ತೋರಿದ ಪ್ರೀತಿಯನ್ನು ನನ್ನ ಮೇಲೂ ತೋರಿಸಿ. ಚಿತ್ರರಂಗದಲ್ಲಿ ನನ್ನನ್ನು ಬೆಳೆಸಿ ಎಂದು ಮನವಿ ಮಾಡಿದರು. ಇದನ್ನೂ ಓದಿ: ‘ಪುಷ್ಪ’ ಸಿನಿಮಾದ ರೋಮ್ಯಾಂಟಿಕ್ ಸೀನ್ಗೆ ಬಿತ್ತು ಕತ್ತರಿ
ಬನರಸ್ ಚಲನಚಿತ್ರದಲ್ಲಿ ಕಾಮಿಡಿ, ಆ್ಯಕ್ಷನ್, ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಎಲ್ಲಾ ರೀತಿಯ ಸನ್ನಿವೇಶಗಳಿವೆ. ಕುಟುಂಬ ಸಮೇತರಾಗಿ ಸಿನಿಮಾ ನೋಡಿ. ಬನರಸ್ ಸಿನಿಮಾ ೨೦೨೨ರಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಿದರು.