Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಫರಿದಾಬಾದ್‌ನಲ್ಲಿ ಜಪ್ತಿ ಮಾಡಿದ್ದ ಸ್ಫೋಟಕ ಶ್ರೀನಗರ ಠಾಣೆಯಲ್ಲಿ ಸ್ಫೋಟ – ಇದು ಆಕಸ್ಮಿಕ ಘಟನೆ; ಗೃಹಸಚಿವಾಲಯ, ಡಿಜಿಪಿ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಫರಿದಾಬಾದ್‌ನಲ್ಲಿ ಜಪ್ತಿ ಮಾಡಿದ್ದ ಸ್ಫೋಟಕ ಶ್ರೀನಗರ ಠಾಣೆಯಲ್ಲಿ ಸ್ಫೋಟ – ಇದು ಆಕಸ್ಮಿಕ ಘಟನೆ; ಗೃಹಸಚಿವಾಲಯ, ಡಿಜಿಪಿ ಸ್ಪಷ್ಟನೆ

Latest

ಫರಿದಾಬಾದ್‌ನಲ್ಲಿ ಜಪ್ತಿ ಮಾಡಿದ್ದ ಸ್ಫೋಟಕ ಶ್ರೀನಗರ ಠಾಣೆಯಲ್ಲಿ ಸ್ಫೋಟ – ಇದು ಆಕಸ್ಮಿಕ ಘಟನೆ; ಗೃಹಸಚಿವಾಲಯ, ಡಿಜಿಪಿ ಸ್ಪಷ್ಟನೆ

Public TV
Last updated: November 15, 2025 12:29 pm
Public TV
Share
3 Min Read
Jammu Kashmir
SHARE

ಶ್ರೀನಗರ: ಇಲ್ಲಿನ ನೌಗಮ್‌ ಪೊಲೀಸ್‌ ಠಾಣೆಯಲ್ಲಿ ಸಂಭವಿಸಿದ್ದ ಸ್ಫೋಟ (Nowgam Police Station Blast) ಕೇವಲ ಆಕಸ್ಮಿಕ ಘಟನೆ. ಸಂಗ್ರಹಿಸಿದ್ದ ಸ್ಫೋಟಕದಿಂದ ಮಾದರಿಯನ್ನ ಹೊರ ತೆಗೆಯುವಾಗ ಸ್ಫೋಟ ಸಂಭವಿಸಿದೆ. ಇದರ ಹಿಂದೆ ಯಾವುದೇ ಭಯೋತ್ಪಾದನೆ ಪಿತೂರಿ ಇಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ಹಾಗೂ ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ನಳಿನ್ ಪ್ರಭಾತ್ (Nalin Prabhat)  ಸ್ಪಷ್ಟಪಡಿಸಿದ್ದಾರೆ.

ಸುದ್ದಿಗೋಷ್ಠಿ ನಡೆಸಿಮಾತನಾಡಿದ ಡಿಜಿಪಿ ನಳಿನ್ ಪ್ರಭಾತ್, ಪೊಲೀಸ್ ಠಾಣೆಯಲ್ಲಿ ನಡೆದ ಸ್ಫೋಟವು ಯಾವುದೇ ಭಯೋತ್ಪಾದಕರ ಸಂಚು ಅಥವಾ ದಾಳಿಯಲ್ಲ. ವಿಧಿವಿಜ್ಞಾನ ಪ್ರಯೋಗಾಲಯ (FSL) ತಂಡವು ಮಾದರಿಗಳನ್ನು ಸಂಗ್ರಹಿಸುತ್ತಿದ್ದಾಗ ಸಂಭವಿಸಿದ ಅಪಘಾತ. ಘಟನೆಯಲ್ಲಿ 6 ಪೊಲೀಸರು ಸೇರಿ 9 ಮಂದಿ ಮೃತಪಟ್ಟಿದ್ದಾರೆ, 27 ಮಂದಿ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಭೀಕರ ಸ್ಫೋಟ – ಇಬ್ಬರು ಅಧಿಕಾರಿಗಳು ಸೇರಿ 9 ಮಂದಿ ಸಾವು

Jammu Kashmir 2 1

ಫರಿದಾಬಾದ್‌ನಿಂದ ವಶಪಡಿಸಿಕೊಂಡ ಸ್ಫೋಟಕಗಳ ಮಾದರಿ ಪರೀಕ್ಷೆಯು ಕಳೆದ 2 ದಿನಗಳಿಂದ ನಡೆಯುತ್ತಿದೆ. ಇದರ ಭಾಗವಾಗಿಯೇ ರಾತ್ರಿ 11:20ರ ಸುಮಾರಿಗೆ ಪರೀಕ್ಷೆಗಾಗಿ ಮಾದರಿ ಸಂಗ್ರಹಿಸುವಾಗ ಘಟನೆ ಸಂಭವಿಸಿದೆ. ಇದು ದುರಾದೃಷ್ಟಕರ, ಒಟ್ಟಿನಲ್ಲಿ ಘಟನೆ ಸಂಬಂಧಿಸಿದಂತೆ ಪೂರ್ಣ ತನಿಖೆ ನಡೆಯುತ್ತಿದೆ. ಇನ್ನೂ ಘಟನಾ ಸ್ಥಳದಿಂದ 6 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಅವು ಗುರುತಿಸಲಾಗದ ಸ್ಥಿತಿಯಲ್ಲಿದೆ. ಮೃತದೇಹಗಳನ್ನು ಶ್ರೀನಗರದಲ್ಲಿರುವ ಪೊಲೀಸ್ ಕಂಟ್ರಲ್ ರೂಮ್‌ಗೆ ಸಾಗಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೋಲ್ಕತ್ತಾದ ಎಜ್ರಾ ಸ್ಟ್ರೀಟ್‌ ಬಳಿ ಬೆಂಕಿ ಅವಘಡ- 20 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡು

Jammu Kashmir 3

ಭಯೋತ್ಪಾದಕ ಪಿತೂರಿ ಅಲ್ಲ; ಗೃಹ ಸಚಿವಾಲಯ
ಇನ್ನೂ ನೌಗಮ್ ಠಾಣೆಯಲ್ಲಿ ಉಂಟಾದ ಸ್ಫೋಟದ ಕುರಿತು ಗೃಹ ಸಚಿವಾಲಯ ಕೂಡ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ಆಕಸ್ಮಿಕ ಘಟನೆ ಎಂದು ಹೇಳಿದೆ. ಇದನ್ನೂ ಓದಿ: ದೆಹಲಿ ಸ್ಫೋಟ ಬೆನ್ನಲ್ಲೇ ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ – 500 ಕಡೆ ದಾಳಿ, 600 ಮಂದಿ ವಶಕ್ಕೆ 

ನವೆಂಬರ್‌ 14ರ ರಾತ್ರಿ 11:20ಕ್ಕೆ ಜಮ್ಮು ಮತ್ತು ಕಾಶ್ಮೀರದ ನೌಗಮ್‌ ಪೊಲೀಸ್‌ ಠಾಣೆಯೊಳಗೆ ಆಕಸ್ಮಿಕ ಘಟನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಇತ್ತೀಚೆಗೆ ಭಯೋತ್ಪಾದಕ ಮಾಡ್ಯೂಲ್‌ ಭೇದಿಸಿದ್ದ ಪೊಲೀಸರು ಫರಿದಾಬಾದ್‌ನಲ್ಲಿ ಕಾರ್ಯಾಚರಣೆ ವೇಳೆ ಬೃಹತ್‌ ಪ್ರಮಾಣದ ಸ್ಫೋಟಕಗಳನ್ನ ವಶಪಡಿಸಿಕೊಂಡಿದ್ದರು. ಇದನ್ನ ಪೊಲೀಸ್ ಠಾಣೆಯ ತೆರೆದ ಪ್ರದೇಶದಲ್ಲಿ ಸುರಕ್ಷಿತವಾಗಿ ಇರಿಸಲಾಗಿತ್ತು. ಅಲ್ಲದೇ ವಶಪಡಿಸಿಕೊಳ್ಳಲಾದ ರಾಸಾಯನಿಕ ಮತ್ತು ಸ್ಫೋಟಕಗಳ ಮಾದರಿಯನ್ನ ವಿಧಿವಿಜ್ಞಾನ ಮತ್ತು ರಾಸಾಯನಿಕ ಪರೀಕ್ಷೆ ಕಳಿಸಲಾಗುತ್ತಿತ್ತು. ಈ ಪ್ರಕ್ರಿಯೆ ಕಳೆದ 2 ದಿನಗಳಿಂದ ನಡೆಯುತ್ತಿತ್ತು. ತಜ್ಞರು ಎಚ್ಚರಿಕೆಯಿಂದಲೇ ನಿರ್ವಹಿಸುತ್ತಿದ್ದರು. ಆದಾಗ್ಯೂ ಪ್ರಕ್ರಿಯೆ ಸಮಯದಲ್ಲಿ ಆಕಸ್ಮಿಕ ಸ್ಫೋಟ ಸಂಭವಿಸಿದೆ. ಇದು ನಿಜಕ್ಕೂ ದುರಾದೃಷ್ಟಕರ. ಘಟನೆಯಲ್ಲಿ 9 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 27 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಇಬ್ಬರು ಕಂದಾಯ ಅಧಿಕಾರಿಗಳು ಹಾಗೂ ಮೂವರು ನಾಗರಿಕರೂ ಇದ್ದಾರೆ. ಗಾಯಾಳುಗಳನ್ನ ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನೂ ಪೊಲೀಸ್ ಠಾಣೆಯ ಕಟ್ಟಡಕ್ಕೆ ತೀವ್ರ ಹಾನಿಯಾಗಿದೆ. ಠಾಣೆಯ ಸುತ್ತಲಿನ ಕಟ್ಟಡಗಳಿಗೂ ಹಾನಿಯಾಗಿದೆ. ಅಪಘಾತ ಪ್ರಕರಣವನ್ನ ತನಿಖೆ ಮಾಡಲಾಗುತ್ತಿದೆ. ಇದರ ಹೊರತಾಗಿ ಯಾವುದೇ ಊಹಾಪೋಹಗಳು ಅನಗತ್ಯ ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಕರಾಳ ರಾತ್ರಿಯಲ್ಲಿ ನಡೆದಿದ್ದೇನು?
ಜಮ್ಮು ಮತ್ತು ಕಾಶ್ಮೀರದ ನೌಗಮ್ ಪೊಲೀಸ್ ಠಾಣೆಯಲ್ಲಿ ವೈಟ್ ಕಾಲ‌ರ್ ಭಯೋತ್ಪಾದನೆಗೆ ಸಂಬಂಧಿಸಿದಂತೆ ಫರೀದಾಬಾದ್‌ನಲ್ಲಿ ಇತ್ತೀಚೆಗೆ ವಶಪಡಿಸಿಕೊಳ್ಳಲಾಗಿದ್ದ ಸ್ಫೋಟಕಗಳ ಸಂಗ್ರಹದಿಂದ ಮಾದರಿಯನ್ನು ಹೊರತೆಗೆಯುವ ಸಂದರ್ಭದಲ್ಲಿ ಸ್ಪೋಟ ಸಂಭವಿಸಿದ್ದು, 6 ಪೊಲೀಸರು ಸೇರಿ 9 ಮಂದಿ ಮೃತಪಟ್ಟಿದ್ದಾರೆ. 27 ಮಂದಿ ಗಂಭೀರ ಗಾಯಗೊಂಡಿದ್ದಾರೆ.

ಶುಕ್ರವಾರ ರಾತ್ರಿ ಶಂಕಿತ ಉಗ್ರ ಡಾ. ಮುಜಮ್ಮಿಲ್ ಗನಿಯ ಅವರ ಬಾಡಿಗೆ ಮನೆಯಿಂದ ವಶಪಡಿಸಿಕೊಳ್ಳಲಾಗಿದ್ದ 360 ಕಿ.ಲೋ ಸ್ಪೋಟಕಗಳ ಪರಿಶೀಲನೆ ನಡೆಸುವ ವೇಳೆ ಘಟನೆ ಸಂಭವಿಸಿತ್ತು. ಬಳಿಕ ಇದು ಭಯೋತ್ಪಾದನಾ ಪಿತೂರಿ ಎಂದು ಹೇಳಲಾಗುತ್ತಿತ್ತು. ಅಷ್ಟರಲ್ಲಿ ಡಿಜಿಪಿ ಇದು ಆಕಸ್ಮಿಕ ಘಟನೆ ಎಂದು ಸ್ಪಷ್ಟನೆ ನೀಡಿದ್ದಾರೆ.

TAGGED:explosionjammu kashmirNalin PrabhatNowgam PolicePolice Station ExplosionSrinagarಐಇಡಿ ಬ್ಲಾಸ್ಟ್‌ಜಮ್ಮು ಮತ್ತು ಕಾಶ್ಮೀರಜೈಶ್-ಎ-ಮೊಹಮ್ಮದ್
Share This Article
Facebook Whatsapp Whatsapp Telegram

Cinema news

indira film 1
ಇಂದಿರಾ ಇದು ಗಾಂಧಿ ಕಥೆಯಲ್ಲ: ಕುತೂಹಲ ಮೂಡಿಸಿದ ಸಿನಿಮಾ
Cinema Latest Sandalwood
Muddu Gumma Karavali Movie
ಕರಾವಳಿ ಮುದ್ದು ಗುಮ್ಮನಿಗಾಗಿ ಹಾಡಿದ ಸಿದ್ ಶ್ರೀರಾಮ್
Cinema Latest Sandalwood Top Stories
Rakshita Shetty 2
ಮನೆಮಗಳು ತರ ನೋಡಿದ್ದೀರಿ, ಇದಕ್ಕಿಂತ ಹೆಚ್ಚೇನು ಬೇಕಿಲ್ಲ: ರಕ್ಷಿತಾ ಶೆಟ್ಟಿ
Cinema Latest Main Post Sandalwood TV Shows
Pavithra Gowda 1
ಪವಿತ್ರಗೌಡಗೆ ಮನೆ ಊಟ ನಿರಾಕರಿಸಿದ್ದು ಒಳ್ಳೆಯದು – ಅಲೋಕ್ ಕುಮಾರ್
Cinema Districts Karnataka Latest Sandalwood Shivamogga States Top Stories

You Might Also Like

Jammu Kashmir Encounter Jaish Terrorist Dead
Crime

ಜಮ್ಮು ಕಾಶ್ಮೀರದ ಕಥುವಾದಲ್ಲಿ ಎನ್‌ಕೌಂಟರ್ – ಜೈಶ್ ಉಗ್ರ ಬಲಿ

Public TV
By Public TV
23 minutes ago
ಸಾಂದರ್ಭಿಕ ಚಿತ್ರ
Bagalkot

ಶಾಲೆ, ಕಾಲೇಜುಗಳಲ್ಲಿ ಕಾರ್ಯಕ್ರಮ – ಶಿಕ್ಷಣ ಇಲಾಖೆಯಿಂದ 13 ಮಾರ್ಗಸೂಚಿ ಪ್ರಕಟ, ಕಡ್ಡಾಯ ಪಾಲನೆಗೆ ಸೂಚನೆ

Public TV
By Public TV
25 minutes ago
Karkala Accident
Crime

ಕಾರ್ಕಳ | ಮೀಯಾರು ಬಳಿ ಭೀಕರ ಅಪಘಾತ – ಮೂವರು ಸಾವು, 8 ಮಂದಿಗೆ ಗಂಭೀರ ಗಾಯ

Public TV
By Public TV
27 minutes ago
MB Patil appeals to Liechtenstein Prime Minister Brigitte Haas for investment in the Karnataka
Bengaluru City

ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಲಿಚೆಂಟೈನ್‌ ಪ್ರಧಾನಿಗೆ ಎಂಬಿಪಿ ಮನವಿ

Public TV
By Public TV
48 minutes ago
shashi tharoor
Latest

ಕೇರಳ ಕಾಂಗ್ರೆಸ್ ಕಾರ್ಯತಂತ್ರ ಸಭೆಗೆ ಶಶಿ ತರೂರ್ ಗೈರು

Public TV
By Public TV
59 minutes ago
Drink and Drive 1
Bengaluru City

ಕುಡಿದು ವಾಹನ ಚಾಲನೆ – 11,500 ಚಾಲಕರ ಡಿಎಲ್‌ ರದ್ದು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?