Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಮ್ಮು-ಕಾಶ್ಮೀರ: ಕಥುವಾ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನ ಹತ್ಯೆ – ಉಗ್ರರಿಗಾಗಿ ಮುಂದುವರಿದ ಶೋಧ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಜಮ್ಮು-ಕಾಶ್ಮೀರ: ಕಥುವಾ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನ ಹತ್ಯೆ – ಉಗ್ರರಿಗಾಗಿ ಮುಂದುವರಿದ ಶೋಧ

Latest

ಜಮ್ಮು-ಕಾಶ್ಮೀರ: ಕಥುವಾ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನ ಹತ್ಯೆ – ಉಗ್ರರಿಗಾಗಿ ಮುಂದುವರಿದ ಶೋಧ

Public TV
Last updated: September 29, 2024 4:50 pm
Public TV
Share
2 Min Read
Kathua Encounter
SHARE

ಶ್ರೀನಗರ: ಕಥುವಾದ ಮಂಡ್ಲಿಯಲ್ಲಿ (Kathua-Mandli) ಸೇನಾ ಕಾರ್ಯಾಚರಣೆ ಮುಂದುವರಿದಿದೆ. 2ನೇ ದಿನದ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ಉಗ್ರರನೊಬ್ಬನ್ನ ಗುಂಡಿಕ್ಕಿ ಕೊಂಡಿದೆ. ಇನ್ನುಳಿದವರಿಗಾಗಿ ಶೋಧಕಾರ್ಯ ಮುಂದುವರಿದಿದೆ.

ಸೆ.28ರಂದು ಕಥುವಾದ ಮಂಡ್ಲಿಯಲ್ಲಿ ಭಯೋತ್ಪಾದಕರು (Terrorist) ಇರುವಿಕೆಯ ಮಾಹಿತಿ ದೊರೆತ ಆಧಾರದ ಮೇಲೆ ಭದ್ರತಾ ಪಡೆಗಳ ಶೋಧಕಾರ್ಯ ಪ್ರಾರಂಭವಾಯಿತು. ಕಥುವಾದಲ್ಲಿ ನಡೆಯುತ್ತಿರುವ ಶೋಧ ಕಾರ್ಯದಲ್ಲಿ ಭಾನುವಾರ ಭದ್ರತಾ ಪಡೆಯು ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಿದ್ದಾರೆ.ಇದನ್ನೂ ಓದಿ: ಡೆಲಿವರಿ ಬಳಿಕ ಮಗನ ಜೊತೆಗಿನ ಫೋಟೋ ಹಂಚಿಕೊಂಡ ಪ್ರಣೀತಾ ಸುಭಾಷ್

ಈ ಕುರಿತು ಅಧಿಕಾರಿಗಳು ಮಾತನಾಡಿ, ಭಾನುವಾರ ಮಧ್ಯಾಹ್ನ ಬಿಲ್ಲವರ ತಹಸಿಲ್‌ನ ಕಾಗ್-ಮಂಡ್ಲಿಯಲ್ಲಿ ನಡೆದ ಎನ್‌ಕೌಂಟರ್‌ನ ಸ್ಥಳದಿಂದ ಭಯೋತ್ಪಾದಕನ ಮೃದೇಹವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆನಂದ್ ಜೈನ್ ಮಾತನಾಡಿ, ಇನ್ನುಳಿದವರಿಗಾಗಿ ಶೋಧಕಾರ್ಯ ಮುಂದುವರೆದಿದೆ. ಮೂರ್ನಾಲ್ಕು ವಿದೇಶಿ ಭಯೋತ್ಪಾದಕರು ಇರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಶನಿವಾರ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. ಈ ಎನ್‌ಕಂಟರ್ ಹಾಗೂ ಶೋಧಕಾರ್ಯದಲ್ಲಿ ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಮೃತಪಟ್ಟಿದ್ದಾರೆ. ಜೊತೆಗೆ ಇಬ್ಬರು ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ತಿಳಿಸಿದರು.

ಈ ಪ್ರದೇಶಕ್ಕೆ ಈಗಾಗಲೇ ಬಿಗಿ ಭದ್ರತೆಯನ್ನು ನೀಡಲಾಗಿದ್ದು, ಇಲ್ಲಿ ಅಡಗಿಕೊಂಡಿರುವ ಮೂರ್ನಾಲ್ಕು ವಿದೇಶಿ ಭಯೋತ್ಪಾದಕರನ್ನು ಸೆರೆಹಿಡಿಯಲು ಈ ಕಾರ್ಯಾಚರಣೆ ನಡೆಯುತ್ತಿದೆ ಎಂದರು.ಇದನ್ನೂ ಓದಿ: ಶೂದ್ರರಿಗೆ ಮಾನ ಮರ್ಯಾದೆ ಇದ್ದರೆ ದೇವಸ್ಥಾನಕ್ಕೆ ಹೋಗಬಾರದು: ಪ್ರೊ.ಕೆ.ಎಸ್.ಭಗವಾನ್

ಅ.1ರಂದು ನಡೆಯಲಿರುವ ಮೂರನೇ ಹಂತದ ಮತದಾನಕ್ಕೆ ಮೊದಲು ಭಯೋತ್ಪಾದಕರನ್ನು ಸೆರೆ ಹಿಡಿಯಲು ಕಾರ್ಯಾಚರಣೆ ನಡೆಯುತ್ತಿದೆ. ಯಾವುದೇ ಭಯೋತ್ಪಾದಕ ಸಂಬಂಧಿತ ಘಟನೆಗಳು ಮತ್ತು ಹಿಂಸಾಚಾರ ಮುಕ್ತವಾಗಿ ಮೂರನೇ ಹಂತದ ಮತದಾನ ನಡೆಯಬೇಕು ಎಂದು ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದರು.

ಕಥುವಾ ಗುರಿಯಾಗಿದ್ದೇಕೆ?
1990ರ ದಶಕದಲ್ಲಿ ಕಥುವಾ (Kathua) ಭಯೋತ್ಪಾದಕರ ದೊಡ್ಡ ನೆಲೆಯಾಗಿ ಗುರುತಿಸಿಕೊಂಡಿತ್ತು. ಇಡೀ ಜಮ್ಮು ಮತ್ತು ಕಾಶ್ಮೀರದಾದ್ಯಂತ (Jammu and Kashmir) ದಾಳಿ ನಡೆಸಲು ಇಲ್ಲಿಯೇ ಉಗ್ರರು ಪ್ಲ್ಯಾನ್‌ ರೂಪಿಸುತ್ತಿದ್ದರು. ಸೇನೆ ವಿರುದ್ಧ ಯುದ್ಧಗಳ ತಯಾರಿಯೂ ಇಲ್ಲಿಯೇ ನಡೆಸುತ್ತಿದ್ದರು. ಕಥುವಾ ಉಧಂಪುರ, ಸಾಂಬಾ ಮತ್ತು ದೋಡಾ ಜಿಲ್ಲೆಗಳ ಪಕ್ಕದಲ್ಲಿದ್ದ ಕಾರಣ ಭದ್ರತಾ ಪಡೆಗಳು ಉಗ್ರರ ಹೆಡೆಮುರಿ ಕಟ್ಟಲು ಇಲ್ಲಿಯೇ ಬೀಡುಬಿಟ್ಟಿರುತ್ತಿದ್ದವು ಎಂದು ಅಲ್ಲಿನ ಪ್ರಾಥಮಿಕ ಮೂಲಗಳು ತಿಳಿಸಿವೆ.

ಈಗ ಮತ್ತೆ ಕಥುವಾ ಉಗ್ರರ ನೆಲೆಯಾಗುತ್ತಿದೆಯೇ ಎಂಬ ಸಂಶಯ ಹುಟ್ಟಿಕೊಂಡಿದೆ. ಏಕೆಂದರೆ ಇಲ್ಲಿನ ಭೌಗೋಳಿಕತೆ ವಿಶೇಷವಾಗಿದೆ. ಒಂದು ಬದಿಯಲ್ಲಿ ಪಾಕಿಸ್ತಾನ ಗಡಿ ಇದ್ದರೆ, ಮತ್ತೊಂದು ಬದಿಯಲ್ಲಿ ಹಿಮಾಚಲ ಪ್ರದೇಶ ಇದೆ. ಮುಖ್ಯವಾಗಿ ಅರಣ್ಯ ಪ್ರದೇಶ ದಟ್ಟವಾಗಿರುವುದರಿಂದ ಉಗ್ರರು ತಪ್ಪಿಸಿಕೊಳ್ಳಲು ಅನುಕೂಲಕರ ವಾತಾವರಣ ಇದೆ ಎನ್ನಲಾಗಿದೆ. ಇದೇ ಕಾರಣಕ್ಕೆ ಉಗ್ರರು ಈ ಭಾಗದ ನೆಲೆಯನ್ನು ಗುರಿಯಾಗಿದ್ದಾರೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.

TAGGED:encounterindian armyJammu and KashmirJammu and Kashmir Assembly ElectionsKathua encounterterroristsಎನ್‍ಕೌಂಟರ್ಕಥುವಾ ಎನ್‌ಕೌಂಟರ್‌ಜಮ್ಮು ಮತ್ತು ಕಾಶ್ಮೀರಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಭಯೋತ್ಪಾದಕರುಭಾರತೀಯ ಸೇನೆ
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Vaibhav Sooryavanshi
Cricket

ಗುವಾಹಟಿಯಲ್ಲಿ ಸರಿಸಾಟಿಯಿಲ್ಲದ ವೈಭವ್‌ ಪ್ರದರ್ಶನ – ಆರ್‌ಸಿಬಿ ʻಜೋಶ್‌ʼಗೆ ಸೋಲಿನ ಪೆಟ್ಟು, ರಾಜಸ್ಥಾನ್‌ಗೆ 6 ವಿಕೆಟ್‌ ಜಯ

Public TV
By Public TV
16 minutes ago
Bidar Eshwar Khandre
Bidar

ಬೀದರ್‌ನ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌

Public TV
By Public TV
1 hour ago
Dharwad 1
Dharwad

ಧಾರವಾಡ | ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ

Public TV
By Public TV
1 hour ago
Donald Trump Angry
Latest

ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

Public TV
By Public TV
2 hours ago
Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
3 hours ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?