57 ಕೆ.ಜಿ ಚಿನ್ನದ ಗಟ್ಟಿ ಖರೀದಿಸಿ ಜನಾರ್ದನ ರೆಡ್ಡಿ ಡೀಲ್..!

Public TV
3 Min Read
Janardhana Reddy AMBIDENT chief

ಬೆಂಗಳೂರು: ಅಂಬಿಡೆಂಟ್ ಮಾರ್ಕೆಟಿಂಗ್ ಲಿಮಿಟೆಡ್‍ನಲ್ಲಿ ರದ್ದಾದ 100 ಕೋಟಿ ರೂ. ನೋಟುಗಳನ್ನು ಮಾಜಿ ಸಚಿವ ಜನಾರ್ದನ ರೆಡ್ಡಿ ವರ್ಗಾವಣೆ ಮಾಡಿಕೊಂಡಿದ್ದಾರೆ. ಇದರ ಜೊತೆಗೆ 57 ಕೆ.ಜಿ ಚಿನ್ನದ ಗಟ್ಟಿ ಖರೀದಿಸಿ ರೆಡ್ಡಿ ಡೀಲ್ ಮಾಡಿಕೊಂಡಿದ್ದರು ಎನ್ನುವ  ಆರೋಪವೊಂದು ಕೇಳಿ ಬಂದಿದೆ.

ಏನಿದು ಪ್ರಕರಣ?:
ಮಾರ್ಕೆಟಿಂಗ್ ಹೆಸರಲ್ಲಿ ಹಣ ದ್ವಿಗುಣ ಮಾಡುವುದಾಗಿ ಲಕ್ಷಾಂತರ ಜನರಿಗೆ ಬೆಂಗಳೂರಿನ ಅಂಬಿಡೆಂಟ್ ಮಾರ್ಕೆಟಿಂಗ್ ಪ್ರೈವೇಟ್ ಲಿಮಿಟೆಡ್ ವಂಚನೆ ಮಾಡಿತ್ತು. ಈ ಸಂಬಂಧ ಬೆಂಗಳೂರಿನ ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗಮನಕ್ಕೆ ಬರುತ್ತಿದ್ದಂತೆ ಅವರು, ಪ್ರಕರಣವನ್ನು ಸಿಸಿಬಿಗೆ ಒಪ್ಪಿಸಿದ್ದರು. ಇದನ್ನು ಓದಿ: ಜನಾರ್ದನ ರೆಡ್ಡಿಯ ಮೂವರು ಆಪ್ತರು ಸಿಸಿಬಿ ವಶಕ್ಕೆ

AMBIDENT office

ಅಂಬಿಡೆಂಟ್ ಕಂಪನಿ ಮೇಲೆ ಜನವರಿಯಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ, ಪ್ರಕರಣ ದಾಖಲಿಸಿದ್ದರು. ಈ ಕೇಸ್ ಮುಚ್ಚಿಹಾಕಲು ಕಂಪನಿ ಮಾಲೀಕ ಫರೀದ್ ಹಲವರ ಹಿಂದೆ ಸುತ್ತಿದ್ದರು. ಈ ವೇಳೆ ಫರೀದ್‍ಗೆ ಬಿಲ್ಡರ್ ಬ್ರಿಜೇಶ್, ರಮೇಶ್ ಕೊಠಾರಿ, ಅಲಿಖಾನ್ ಹಾಗೂ ಜನಾರ್ದನ ರೆಡ್ಡಿ ಸೇರಿ 25 ಕೋಟಿ ಡೀಲ್‍ಗೆ ಬೇಡಿಕೆಯಿಟ್ಟಿದ್ದರು.

ಇಡಿ ಅಧಿಕಾರಿಗೆ 23 ಕೋಟಿ ರೂ. ನೀಡಿದ್ದ ರೆಡ್ಡಿ?:

ಈ ಸಂಬಂಧ ಇಡಿ ಅಧಿಕಾರಿಯೊಬ್ಬರನ್ನು ಕಳೆದ ಮಾರ್ಚ್ ನಲ್ಲಿ ತಾಜ್ ವೆಸ್ಟೆಂಡ್‍ನಲ್ಲಿ ಭೇಟಿಯಾಗಿ ಡೀಲ್ ಬಗ್ಗೆ ಮಾತುಕತೆ ನಡೆಸಿದ್ದು, 23 ಕೋಟಿಗೆ ಜನಾರ್ದನ ರೆಡ್ಡಿ ಡೀಲ್ ಒಪ್ಪಿಕೊಂಡಿದ್ದರು. ಇದೇ ವೇಳೆ ರೆಡ್ಡಿ ಹಣವನ್ನು ಬ್ಲಾಕ್ ಮನಿಯಾಗಿ ನೀಡುವಂತೆ ಬೇಡಿಕೆಯಿಡ್ಡಿದ್ದರು. ಆದರೆ ಅಂಬಿಡೆಂಟ್ ಕಂಪನಿ ಮಾಲೀಕ ಫರೀದ್ ಮಾತ್ರ ಬ್ಲಾಕ್ ಇಲ್ಲ ವೈಟ್ ಹಣವಾಗಿ ನೀಡಿದ್ದರು. ಹೀಗಾಗಿ ರೆಡ್ಡಿ ಅದನ್ನು ಎನೇಬಲ್ ಕಂಪನಿಗೆ ಆರ್‌ಟಿಜಿಎಸ್‌ ಮಾಡಿಸಿಕೊಂಡಿದ್ದರು. ಬಳಿಕ ಇಡಿ ಅಧಿಕಾರಿಗೆ 23 ಕೋಟಿ ಹಣ ನೀಡಿ, ರೆಡ್ಡಿ 57 ಕೆಜಿ ಚಿನ್ನ ಖರೀದಿ ಮಾಡಿದ್ದರು. ಇದನ್ನು ಓದಿ:  ರೆಡ್ಡಿ ಗ್ಯಾಂಗ್ ಮಟ್ಟ ಹಾಕಲು ಕ್ರೈಂ ಬ್ರ್ಯಾಂಚ್ ಪೊಲೀಸರಿಗೆ ಸಿಎಂ ಸೂಚನೆ

BLY ALI KHAN AV 3

ಈ ಮೂಲಕ ಜನಾರ್ದನ ರೆಡ್ಡಿ ರದ್ದಾದ 100 ಕೋಟಿ ಹಣವನ್ನು ವರ್ಗಾವಣೆ ಮಾಡಿಕೊಂಡಿದ್ದು, ಪುತ್ರಿಯ ಮದುವೆಯನ್ನು ಅದ್ಧೂರಿಯಾಗಿ ಮಾಡಿದ್ದಾರೆ. ಇದಕ್ಕೆ ಪಿಎ ಅಲಿಖಾನ್ ಸಹಾಯ ಮಾಡಿದ್ದನು. ಆದರೆ ಈ ಪ್ರಕರಣದ ಕುರಿತು ಸಿಸಿಬಿ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರ ನೇತೃತ್ವದಲ್ಲಿ ತನಿಖೆ ಆರಂಭವಾಗಿದೆ. ಹೀಗಾಗಿ ಸಿಸಿಬಿ ಪೊಲೀಸರು ಜನಾರ್ದನ ರೆಡ್ಡಿ ಆಪ್ತನ ಬಗ್ಗೆ ಮಾಹಿತಿ ಪಡೆದುಕೊಂಡು ಫರೀದ್ ನನ್ನು ವಶಕ್ಕೆ ಪಡೆದಿದ್ದರು.

ಈ ವೇಳೆ ಸಿಸಿಬಿ ಪೊಲೀಸರ ಮುಂದೆ ತಪ್ಪೊಪ್ಪಿಗೆಯನ್ನು ಮಾಡಿಕೊಂಡಿದ್ದನು. ಅಲ್ಲದೇ ಜನಾರ್ದನ ರೆಡ್ಡಿ ಡೀಲ್ ಬಗ್ಗೆ ಇಂಚಿಂಚು ಮಾಹಿತಿ ನೀಡಿದ್ದರು. ಕಳೆದ ಶುಕ್ರವಾರ ಫರೀದ್ ಸಿಸಿಬಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದಾಗ ಈ ಸ್ಫೋಟಕ ಮಾಹಿತಿ ಹೊರಬಿದ್ದಿದೆ.

ಜನಾರ್ದನ ರೆಡ್ಡಿಗೆ 57 ಕೆ.ಜಿ ಚಿನ್ನದ ಗಟ್ಟಿ ಕೊಡಿಸಿದ್ದು ರಮೇಶ್ ಕೊಠಾರಿ ಎಂಬುದು ಈಗ ತಿಳಿದು ಬಂದಿದೆ. ಅಂಬೆಡೆಂಟ್ ಕಂಪನಿಯಿಂದ ಪಡೆದಿದ್ದ 23 ಕೋಟಿ ಡೀಲ್ ಹಣಕ್ಕಾಗಿ ಚಿನ್ನ ಖರೀದಿಸಲಾಗಿದೆ. ಚಿನ್ನ ಖರೀದಿಸಲು ಹಣ ಪಡೆದೇ ಇಲ್ಲ ಎಂದು ನಂಬಿಸಿ ರೆಡ್ಡಿ ಬಚಾವಾಗಲು ಯತ್ನಿಸಿದ್ದಾರೆ ಎನ್ನಲಾಗಿದೆ.

CCB Bengaluru 1

ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಿಸಿಬಿ ಪೊಲೀಸರು, ಅಂಬಿಡೆಂಟ್ ಕಂಪನಿಯ ಮಾಲೀಕ ಫರೀದ್, ಬಿಲ್ಡರ್ ಬ್ರಿಜೇಶ್, ರಮೇಶ್ ಕೊಠಾರಿ ಸೇರಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಜನಾರ್ದನ ರೆಡ್ಡಿ ಹೈದರಾಬಾದ್‍ಗೆ ಪರಾರಿಯಾಗಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದ್ದು, ಬಂಧನಕ್ಕಾಗಿ ಸಿಸಿಬಿ ತಂಡ ಬಲೆ ಬೀಸಿದೆ.

ಯಾವುದಿದು ಅಂಬಿಡೆಂಟ್ ಕಂಪನಿ?
ಅಂಬಿಡೆಂಟ್ ಮಾರ್ಕೆಟಿಂಗ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯನ್ನು ದುಬೈ ಮೂಲದ ಉದ್ಯಮಿಗಳು ಸ್ಥಾಪಿಸಿದ್ದಾರೆ. ಬೆಂಗಳೂರಿನ ಕನಕನಗರದ ಮುಖ್ಯರಸ್ತೆಯಲ್ಲಿ ಈ ಕಂಪನಿಯ ಕಚೇರಿಯಿದ್ದು, ನಿಮ್ಮ ಹಣವನ್ನ ಒಂದು ವರ್ಷದಲ್ಲಿ ದ್ವಿಗುಣ ಮಾಡಿಕೊಡುತ್ತೇವೆ ಎಂದು ಜನರಿಂದ ಹಣ ಪಡೆಯುತ್ತಿತ್ತು. ಪ್ರತಿ ಗ್ರಾಹಕರಿಂದ ಕನಿಷ್ಠ ಹೂಡಿಕೆ ಒಂದು ಲಕ್ಷ ರೂ. ಪಡೆಯುತ್ತಿತ್ತು. 1 ಲಕ್ಷ ಹೂಡಿಕೆ ಮಾಡಿದರೆ ಪ್ರತಿ ಮೂರು ತಿಂಗಳಿಗೊಮ್ಮೆ 40 ಸಾವಿರ ರೂ.ದಂತೆ ವರ್ಷಕ್ಕೆ 1.60 ಸಾವಿರ ವಾಪಸ್ಸು ಕೊಡುವುದಾಗಿ ಗ್ರಾಹಕರನ್ನು ನಂಬಿಸಿತ್ತು. ಹೀಗಾಗಿ ಇಲ್ಲಿ ಸಾವಿರಾರು ಜನರು ಹೂಡಿಕೆ ಮಾಡಿದ್ದರು. ಇದೇ ದೋಖಾ ಕಂಪೆನಿಯಲ್ಲಿ ಬೇನಾಮಿ ಹೆಸರಲ್ಲಿ ರೆಡ್ಡಿ ಆಪ್ತ ಅಲಿಖಾನ್ ಹಣ ಹೂಡಿದ್ದನು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

AMBIDENT chief

Share This Article
Leave a Comment

Leave a Reply

Your email address will not be published. Required fields are marked *