– ಸರ್ಕಾರದಿಂದ ಹಿಂದೂ ವಿರೋಧಿ ನಡೆ
ಕೊಪ್ಪಳ: ಮಂಜುನಾಥನ ಶಾಪದಿಂದ ಸರ್ಕಾರ ಸರ್ವನಾಶವಾಗಲಿದೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ (Janardhana Reddy) ಭವಿಷ್ಯ ನುಡಿದಿದ್ದಾರೆ.
ಗಂಗಾವತಿಯಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಧರ್ಮಸ್ಥಳದಲ್ಲಿ ಶವಗಳನ್ನು (Dharmasthala Burials Case) ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣ ತನಿಖೆಗೆ ಎಸ್ಐಟಿ (SIT) ರಚನೆ ಬಗ್ಗೆ ಪ್ರತಿಕ್ರಿಯಿಸಿದರು. ಇವತ್ತಿನ ಕಾಂಗ್ರೆಸ್ (Congress) ಸರ್ಕಾರ ಹಿಂದೂ ವಿರೋಧಿ ನೀತಿಯನ್ನ ಅನುಸರಿಸುತ್ತಿದೆ. ಈ ವಿಷಯವನ್ನ ಬಹಳಷ್ಟು ವರ್ಷಗಳ ನಂತರ ಅನಗತ್ಯವಾಗಿ ಎಳೆಯುವಂತ ಕೆಲಸ ಯಾರು ಮಾಡ್ತಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: Exclusive | ಧರ್ಮಸ್ಥಳ ಫೈಲ್ಸ್ – ತನಿಖೆಗೆ ಆರಂಭದಲ್ಲೇ ವಿಘ್ನ; SITಯಿಂದ ಇಬ್ಬರು ಅಧಿಕಾರಿಗಳು ಹಿಂದಕ್ಕೆ?
ಒಂದು ಸಮುದಾಯವನ್ನ ಒಲೈಸುವ ಸಲುವಾಗಿ ವಿಶ್ವದೆಲ್ಲೆಡೆ ಹೆಸರುವಾಸಿಯಾದ ಮಂಜುನಾಥನ ಸನ್ನಿದಿಗೆ ಕೆಟ್ಟ ಹೆಸರು ಬರುವ ರೀತಿಯಲ್ಲಿ ನಡೆಕೊಳ್ಳುತ್ತಿದ್ದಾರೆ. ಇದನ್ನ ನಾನು ತೀವ್ರವಾಗಿ ಖಂಡಿಸುತ್ತೇನೆ. ಇದು ಸಂಪೂರ್ಣವಾಗಿ ಹಿಂದೂ ವಿರೋಧಿ ನಡೆ. ಮಂಜುನಾಥನ ಶಾಪದಿಂದ ಈ ಸರ್ಕಾರ ಸರ್ವನಾಶವಾಗತ್ತದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಫೈಲ್ಸ್ – ಸಮಾಧಿಯೊಳಗಿನ `ಸತ್ಯ’ ಹೇಳುತ್ತಾ ಅಸ್ಥಿಪಂಜರ?