Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜನಾರ್ದನ ರೆಡ್ಡಿ ಹೇಳಿಕೆಗೆ ಖಂಡನೆ – ಕ್ಷಮೆ ಕೇಳುವಂತೆ ಬಿಎಸ್‍ವೈ ಆಗ್ರಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಜನಾರ್ದನ ರೆಡ್ಡಿ ಹೇಳಿಕೆಗೆ ಖಂಡನೆ – ಕ್ಷಮೆ ಕೇಳುವಂತೆ ಬಿಎಸ್‍ವೈ ಆಗ್ರಹ

Districts

ಜನಾರ್ದನ ರೆಡ್ಡಿ ಹೇಳಿಕೆಗೆ ಖಂಡನೆ – ಕ್ಷಮೆ ಕೇಳುವಂತೆ ಬಿಎಸ್‍ವೈ ಆಗ್ರಹ

Public TV
Last updated: October 31, 2018 3:02 pm
Public TV
Share
2 Min Read
BSY REDDY
SHARE

ಶಿವಮೊಗ್ಗ: ಸಿದ್ದರಾಮಯ್ಯ ಅವರ ಮಗನ ಸಾವಿನ ಬಗ್ಗೆ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ನೀಡಿರುವ ಹೇಳಿಕೆ ಅವರಿಗೆ ಶೋಭೆ ತರುವುದಿಲ್ಲ. ಆ ಹೇಳಿಕೆಯನ್ನು ನಾನು ಖಂಡಿಸುತ್ತೇನೆ ಎಂದು ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಎಸ್‍ವೈ, ಸಿದ್ದರಾಮಯ್ಯ ಮಗನ ಸಾವಿನ ಬಗ್ಗೆ ಜನಾರ್ದನ ರೆಡ್ಡಿ ಹೇಳಿಕೆ ಅವರಿಗೆ ಶೋಭೆ ತರುವುದಿಲ್ಲ. ಅವರು ಈ ಬಗ್ಗೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸುವುದಾಗಿ ತಿಳಿಸಿದರು.

vlcsnap 2018 10 31 14h56m56s238

ಸಿದ್ದರಾಮಯ್ಯ ಈಗ ಸಂಯಮ ಕಳೆದುಕೊಂಡು ಮಾತನಾಡುತ್ತಿದ್ದಾರೆ. ಶ್ರೀರಾಮುಲು ಅವರಿಗೆ 371ಜೆ ಗೊತ್ತಿಲ್ಲ, ಅವರಿಗೆ ಕೇವಲ 420 ಮಾತ್ರ ಗೊತ್ತಿದೆ ಎಂದು ಹೇಳಿರುವುದು ಸರಿಯಲ್ಲ. ಶಿವಮೊಗ್ಗದಲ್ಲಿ ನಡೆದ ಜೆಡಿಎಸ್ ಹಾಗೂ ಕಾಂಗ್ರೆಸ್ ಸಭೆಯಲ್ಲಿ ಪ್ರಧಾನಿಯ ಬಗ್ಗೆ ಹಗುರವಾಗಿ ಮಾತನಾಡಿರುವುದು ಸರಿಯಲ್ಲ. ಯಾವುದೇ ಸಭೆ ನಡೆಸಿದರೂ ಅಲ್ಲಿ ಯಡಿಯೂರಪ್ಪ ಅವರನ್ನು ಟೀಕೆ ಮಾಡುವುದೇ ಜೆಡಿಎಸ್ ಹಾಗೂ ಕಾಂಗ್ರೆಸ್ ಕೆಲಸವಾಗಿದೆ ಎಂದು ದೂರಿದರು.

ಉಪ ಚುನಾವಣೆ ಇಡೀ ದೇಶದ ಗಮನ ಸೆಳೆದಿದೆ. ಪ್ರಧಾನಿ ಮೋದಿ ಅವರ ಅಭಿವೃದ್ಧಿ ಕಾರ್ಯಗಳು ಹಾಗೂ ರಾಜ್ಯದ ಮೈತ್ರಿ ಸರ್ಕಾರದ ವೈಫಲ್ಯ ಕುರಿತು ಈ ಚುನಾವಣೆಯಲ್ಲಿ ಚರ್ಚೆಯ ವಿಷಯವಾಗಿದೆ. ರಾಜ್ಯದಲ್ಲಿ 100 ತಾಲೂಕುಗಳಲ್ಲಿ ಭೀಕರ ಬರವಿದ್ದರೂ ನಾಲ್ಕು ತಿಂಗಳಿಂದ ಸಿಎಂ ಕುಮಾರಸ್ವಾಮಿ ಸಾಲಮನ್ನಾ ಸಾಲಮನ್ನಾ ಎಂದು ಜಪಮಾಡುತ್ತಿದ್ದಾರೆ. ರಾಜ್ಯದ ಆರ್ಥಿಕ ಸ್ಥಿತಿ ಬಗ್ಗೆ ಶ್ವೇತ ಪತ್ರ ಹೊರಡಿಸಿ ಎಂದರೆ ಹಗುರವಾಗಿ ಮಾತನಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಜನಾರ್ದನ ರೆಡ್ಡಿಯವರು ಸಿದ್ದರಾಮಯ್ಯನವರ ಮಗನ ಸಾವಿನ ವಿಷಯದ ಬಗ್ಗೆ ಆಡಿದ ಮಾತು ನಿಜಕ್ಕೂ ಖಂಡನೀಯ. ಯಾವುದೇ ವ್ಯಕ್ತಿಯ ಸಾವು ಚುನಾವಣಾ ರಾಜಕೀಯವನ್ನು ಮೀರಿ ನಿಲ್ಲಬೇಕು.

ಅದೇ ರೀತಿ ಈ ವಿಚಾರವನ್ನು ಸಿದ್ದರಾಮಯ್ಯನವರು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಳಸಿಕೊಳ್ಳುತ್ತಿರುವುದು ಅವರ ನೈತಿಕ ದಿವಾಳಿತನವನ್ನು ಎತ್ತಿ ತೋರಿಸುತ್ತದೆ.

— Ravi C T 🇮🇳 ರವಿ ಸಿ ಟಿ (@CTRavi_BJP) October 31, 2018

ಈ ಬಾರಿಯ ಉಪಚುನಾವಣೆಯಲ್ಲಿ ಶಿವಮೊಗ್ಗ, ಬಳ್ಳಾರಿ, ಜಮಖಂಡಿ ಚುನಾವಣೆಯಲ್ಲಿ ಗೆಲ್ಲುತ್ತೇವೆ. ಮಂಡ್ಯ, ರಾಮನಗರ ಗೆದ್ದರೂ ಅಚ್ಚರಿ ಇಲ್ಲ. ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಸಮಾವೇಶ ಮಾಡಿದಾಗ ಅಭಿವೃದ್ಧಿ ಬಗ್ಗೆ ಮಾತನಾಡುವುದಿಲ್ಲ. ಅಲ್ಲದೇ ಹೈದರಾಬಾದ್ ಕರ್ನಾಟಕ ಭಾಗಕ್ಕೆ ಅನ್ಯಾಯ ಮಾಡಿದ್ದು ಇದೇ ಕಾಂಗ್ರೆಸ್, ಜೆಡಿಎಸ್. ಸಿಎಂ ಕುಮಾರಸ್ವಾಮಿ ಅವರು ಉತ್ತರ ಕರ್ನಾಟಕದವರು ನನಗೆ ಮತ ಹಾಕಿದ್ದೀರಾ ಎಂದು ಪ್ರಶ್ನಿಸಿ ಅಪಮಾನ ಆಗುವಂತೆ ಮಾಡಿದ್ದರು. ಜೆಡಿಎಸ್ ನವರು ಬಿಜೆಪಿಯ ದಕ್ಷಿಣದ ಬಾಗಿಲು ಮುಚ್ಚುತ್ತೇವೆ ಎನ್ನುತ್ತಾರೆ. ನಿಮ್ಮ ಜೊತೆ ಎಷ್ಟು ಜನ ಸಂಸದರಿದ್ದಾರೆ ಎಂಬುದನ್ನು ಮೊದಲು ಹೇಳಿ ಎಂದು ದೇವೇಗೌಡರಿಗೆ ಸವಾಲು ಎಸೆದರು.

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಂದಲೇ ಬಿಜೆಪಿ ಬಾಗಿಲು ಮುಚ್ಚಲು ಆಗಿಲ್ಲ. ಇನ್ನು ಇವರು ಯಾರು? ಮೈತ್ರಿ ಕೂಟಕ್ಕೆ ಸೋಲಿನ ಭಯ ಆರಂಭವಾಗಿದೆ. ನ.6ರ ಫಲಿತಾಂಶದ ಬಳಿಕ ಕಾಂಗ್ರೆಸ್, ಜೆಡಿಎಸ್ ಛಿದ್ರ ಛಿದ್ರವಾಗುತ್ತವೆ. ಸಮ್ಮಿಶ್ರ ಸರ್ಕಾರದ ತುಘಲಕ್ ದರ್ಬಾರ್ ಅಂತ್ಯವಾಗಲಿದೆ. ಈ ಹಿಂದೆ ಲಾಲ್ ಕೃಷ್ಣ ಅಡ್ವಾಣಿ ಅವರು ನನಗೆ ಜೆಡಿಎಸ್ ಮೈತ್ರಿ ಬೇಡ ಎಂದು ಹೇಳಿದ್ದರು. ಸಮ್ಮಿಶ್ರ ಸರ್ಕಾರ ರಚಿಸಿದರೆ ನೀವು ಮೊದಲು ಅಧಿಕಾರ ನಡೆಸಿ ಎಂದು ಹೇಳಿದ್ದರು. ಅಂದು ನಾನು ಅವರೊಂದಿಗೆ ಹೋಗಿದ್ದರೆ ಇಂದು ಬಿಜೆಪಿ ಇರುತ್ತಿರಲಿಲ್ಲ ಎಂದು ಹೇಳಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

ನನ್ನ ಮಗನ ಸಾವು ನನಗೆ ದೇವರು‌ಕೊಟ್ಟ ಶಿಕ್ಷೆ‌‌ ಎಂದು ಜನಾರ್ಧನ ರೆಡ್ಡಿ ಹೇಳಿದ್ದಾರೆ. ನಿಮ್ಮ‌ ಪಾಪಗಳಿಗಾಗಿ‌ ಶಿಕ್ಷೆಯನ್ನು ನಿಮ್ಮ ಮಕ್ಕಳಿಗೆ ದೇವರು ನೀಡದಿರಲಿ ಎಂದು ದೇವರನ್ನು ಬೇಡಿಕೊಳ್ಳುತ್ತೇನೆ.@INCKarnataka

— Siddaramaiah (@siddaramaiah) October 30, 2018

TAGGED:bs yeddyurappaby electionCM Kumaraswamyformer CM SiddaramaiahJanardhan ReddyPublic TVshivamoggaಉಪಚುನಾವಣೆಜನಾರ್ದನ ರೆಡ್ಡಿಪಬ್ಲಿಕ್ ಟಿವಿಬಿಎಸ್ ಯಡಿಯೂರಪ್ಪಶಿವಮೊಗ್ಗಸಿಎಂ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
8 hours ago
big bulletin 09 March 2026 part 1
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-1

Public TV
By Public TV
8 hours ago
big bulletin 09 March 2026 part 2
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-2

Public TV
By Public TV
8 hours ago
big bulletin 09 March 2026 part 3
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-3

Public TV
By Public TV
8 hours ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
9 hours ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?