ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಇಂದು ಜನಸ್ಪಂದನ ಹೆಸರಿನಲ್ಲಿ ಜನತಾದರ್ಶನ (Janatadarshan) ನಡೆಸುತ್ತಿದ್ದು, ಮೊದಲಿಗೆ ವಿಶೇಷ ಚೇತನರ ಮತ್ತು ಹಿರಿಯ ನಾಗರಿಕರ ಅಹವಾಲನ್ನು (Report) ಸ್ವೀಕರಿಸಿದ್ದಾರೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾದರ್ಶನವನ್ನು ಆಯೋಜಿಸಲಾಗಿದೆ. ಸಾವಿರಾರು ಸಂಖ್ಯೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ರೈತರು, ಮಹಿಳೆಯರು ಜನತಾ ದರ್ಶನಕ್ಕೆ ಆಗಮಿಸಿದ್ದು, ಸಿಎಂ ಜನತಾದರ್ಶನಕ್ಕೆ ಬಿಗಿ ಪೊಲೀಸ್ ಕಾವಲು ನೇಮಿಸಲಾಗಿದೆ. ಅಹವಾಲು ಸ್ವೀಕಾರ ಮತ್ತು ಪರಿಶೀಲನೆಗೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ, ಇತರೇ ಸಹಾಯಕ ಸಿಬ್ಬಂದಿ ಸೇರಿ ಒಟ್ಟು 1,000 ಅಧಿಕಾರಿ ಮತ್ತು ಸಿಬ್ಬಂದಿ ಕರ್ತವ್ಯದಲ್ಲಿ ಹಾಜರಿದ್ದಾರೆ. ಸಿದ್ದರಾಮಯ್ಯ ಎರಡನೇ ಬಾರಿ ಮುಖ್ಯಮಂತ್ರಿ ಆದ ಬಳಿಕ ನಡೆಯುತ್ತಿರುವ ಮೊದಲ ಪೂರ್ಣಾವಧಿ ಜನತಾ ದರ್ಶನ ಇದಾಗಿದೆ. ಇದನ್ನೂ ಓದಿ: ರೈತ ಬಂಧು ಯೋಜನೆ ಮುಂದೂಡುವಂತೆ ತೆಲಂಗಾಣ ಸರ್ಕಾರಕ್ಕೆ ಚು.ಆಯೋಗ ಸೂಚನೆ
ಜನತಾ ದರ್ಶನದಲ್ಲಿ 20 ಕೌಂಟರ್ಗಳು ಹಾಗೂ ನೂರಕ್ಕೂ ಹೆಚ್ಚು ಅಧಿಕಾರಿಗಳ ಉಪಸ್ಥಿತಿಯಿದ್ದು, ವಿಶೇಷ ಚೇತನರು ಮತ್ತು ಹಿರಿಯ ನಾಗರಿಕರಿಗೆ ಪ್ರತ್ಯೇಕ ಎರಡು ಕೌಂಟರ್ಗಳನ್ನು ಮೀಸಲಿರಿಸಲಾಗಿದೆ. ಅಹವಾಲುಗಳ ದಾಖಲೀಕರಣಕ್ಕೆ ಅಧಿಕಾರಿಗಳು ಮತ್ತು ಸಿಬ್ಬಂದಿ ಹಲವು ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಸ್ವೀಕರಿಸಿದ ಅಹವಾಲುಗಳನ್ನು ಇಲಾಖಾವಾರು ವಿಂಗಡಿಸಿ ತಂತ್ರಾಂಶದಲ್ಲಿ ದಾಖಲಿಸಲಾಗುತ್ತದೆ. ಬಳಿಕ ಅರ್ಜಿದಾರರಿಗೆ ಸ್ವೀಕೃತಿ ಪತ್ರ ನೀಡಿದ ನಂತರ ಮುಖ್ಯಮಂತ್ರಿಯವರು ಅವರ ಅಹವಾಲುಗಳನ್ನು ಆಲಿಸಿ ಪರಿಹಾರ ಸೂಚಿಸಲಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿ, ವಿಜಯೇಂದ್ರ ನನ್ನನ್ನು ಸೋಲಿಸಲು ಸಾಧ್ಯವಿಲ್ಲ: ಡಿ.ಕೆ ಸುರೇಶ್
ಆನ್ಲೈನ್ನಲ್ಲೂ ಜನರು ದೂರು ಸಲ್ಲಿಸಬಹುದು. ಅಲ್ಲದೇ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿಯೂ ಸಹ ಸಾರ್ವಜನಿಕರು ದೂರುಗಳನ್ನ ನೇರವಾಗಿ ಸಲ್ಲಿಸಬಹುದಾಗಿದೆ. ಸಿದ್ದರಾಮಯ್ಯ ಖುದ್ದು ಸಮಸ್ಯೆಗಳನ್ನು ಆಲಿಸಿ ಪರಿಹಾರಕ್ಕೆ ಅಧಿಕಾರಿಗಳಿಗೆ ಸ್ಥಳದಲ್ಲೇ ಖಡಕ್ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಬಿಜೆಪಿಯ ರಾಜಕೀಯ ನಿರ್ಣಯಕ್ಕೆ ನಮ್ಮ ಸರ್ಕಾರ ರಾಜಕೀಯ ಉತ್ತರ ನೀಡಿದೆ- ಡಿಕೆ ಸುರೇಶ್ ಗುಡುಗು