Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಚ್‍ಡಿಕೆಗೆ ಬಿಗ್ ರಿಲೀಫ್: ಏನಿದು ಜಂತಕಲ್ ಮೈನಿಂಗ್ ಕೇಸ್? ಕೋರ್ಟ್ ನಲ್ಲಿ ಇಂದು ಏನಾಯ್ತು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಎಚ್‍ಡಿಕೆಗೆ ಬಿಗ್ ರಿಲೀಫ್: ಏನಿದು ಜಂತಕಲ್ ಮೈನಿಂಗ್ ಕೇಸ್? ಕೋರ್ಟ್ ನಲ್ಲಿ ಇಂದು ಏನಾಯ್ತು?

Bengaluru City

ಎಚ್‍ಡಿಕೆಗೆ ಬಿಗ್ ರಿಲೀಫ್: ಏನಿದು ಜಂತಕಲ್ ಮೈನಿಂಗ್ ಕೇಸ್? ಕೋರ್ಟ್ ನಲ್ಲಿ ಇಂದು ಏನಾಯ್ತು?

Public TV
Last updated: August 10, 2017 4:47 pm
Public TV
Share
5 Min Read
H D Kumaraswamy Jantakal Mining Case
SHARE

ಬೆಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ ಐಎಎಸ್ ಅಧಿಕಾರಿಗಳಿಗೆ ನಡುಕ ಹುಟ್ಟಿಸಿರುವ ಜಂತಕಲ್ ಮೈನಿಂಗ್ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಗೆ ಸ್ವಲ್ಪ ರಿಲೀಫ್ ಸಿಕ್ಕಿದೆ.

ನಿರೀಕ್ಷಣಾ ಜಾಮೀನಿನ ಅರ್ಜಿ ವಿಚಾರಣೆ ಮುಗಿಯುವ ತನಕ ಹೆಚ್‍ಡಿ ಕುಮಾರಸ್ವಾಮಿಗೆ, ಸಿಟಿ ಸಿವಿಲ್ ಕೋರ್ಟ್ 7 ದಿನಗಳ ಷರತ್ತು ಬದ್ಧ ಮಧ್ಯಂತರ ಜಾಮೀನು ನೀಡಿದೆ. ಈ ಮೊದಲೇ 3 ಕಡೆ ಜಾಮೀನು ಪಡೆದಿದ್ದ ಹೆಚ್‍ಡಿಕೆ ಇವತ್ತಿನ ಜಾಮೀನಿಂದ ಸ್ವಲ್ಪ ನಿರಾಳರಾಗಿದ್ದಾರೆ.

5 ಲಕ್ಷ ರೂ. ಬಾಂಡ್ ಶ್ಯೂರಿಟಿ ಇಡಬೇಕು. ದೇಶ ಬಿಟ್ಟು ಹೋಗಬಾರದು, ಸಾಕ್ಷ್ಯ ನಾಶ ಮಾಡಬಾರದು. ತನಿಖಾಧಿಕಾರಿ ತನಿಖೆಗೆ ಕರೆದಾಗ ವಿಚಾರಣೆಗೆ ಹಾಜರಾಗಬೇಕು ಎಂದು ಕೋರ್ಟ್ ಎಚ್‍ಡಿಕೆಗೆ ಷರತ್ತು ವಿಧಿಸಿದೆ.

ಬಡೇರಿಯಾ ಕೇಸ್‍ನಲ್ಲಿ ಕುಮಾರಸ್ವಾಮಿಯವರನ್ನು ಎಸ್‍ಐಟಿ ಸಾಕ್ಷಿಯನ್ನಾಗಿ ಕರೆದಿತ್ತು. ಆದ್ರೆ, ತಮ್ಮನ್ನು ಸಾಕ್ಷಿಯಾಗಿ ಕರೆದು ಬೇರೊಂದು ಪ್ರಕರಣದಲ್ಲಿ ಬಂಧಿಸುತ್ತಾರೆ ಎನ್ನುವ ಭಯದಿಂದ ಎಚ್‍ಡಿಕೆ ಜಾಮೀನು ಪಡೆದಿದ್ದಾರೆ.

ಕುಮಾರಸ್ವಾಮಿ ಪರ ವಕೀಲರು ಇವತ್ತು ಮತ್ತೆ ಕೋರ್ಟ್‍ಗೆ ಹಾಜರಾಗಿ ನಮ್ಮ ಅರ್ಜಿಯನ್ನು ಮೊದಲು ಪರಿಗಣಿಸಿ ಅಂತ ಕೇಳಿದ್ರು. ಆದ್ರೆ ನ್ಯಾಯಾಧೀಶರು ಸರತಿ ಪ್ರಕಾರವೇ ಕರೆಯುತ್ತೇನೆ ಎಂದರು. ಆದರೆ ಪಟ್ಟು ಬಿಡದ ವಕೀಲರು ಕೆಲ ಗಂಟೆಗಳ ನಂತರ ಮತ್ತೆ ಎದ್ದು ತಮ್ಮ ಅರ್ಜಿಯನ್ನು ಪರಿಗಣಿಸಿ ನಮ್ಮ ಕಕ್ಷಿದಾರರಿಗೆ ಜಾಮೀನು ನೀಡಿ ಅಂತ ವಾದ ಮಾಡಲು ಶುರು ಮಾಡಿದರು. ಇದಕ್ಕೆ ಆಕ್ಷೇಪಣೆ ವ್ಯಕ್ತಪಡಿಸಿದ ಎಸ್‍ಐಟಿ ಪರ ವಕೀಲರು ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡದೇ ಜಾಮೀನು ನೀಡುವಂತಿಲ್ಲ ಅಂತ ವಾದ ಮಂಡನೆ ಮಾಡಿದ್ರು.

ಬೇಲ್ ಸಿಕ್ಕ ಬಳಿಕ ದೇವದುರ್ಗದಲ್ಲಿ ಜೆಡಿಎಸ್ ಸಮಾವೇಶದಲ್ಲಿ ಮಾತಾಡಿದ ಕುಮಾರಸ್ವಾಮಿ, ಒಂದು ದಿನವಾದ್ರೂ ನನ್ನನ್ನ ಬಂಧಿಸಿ ನಾಡಿನ ಜನತೆಯ ಮುಂದೆ ನನ್ನ ಮೇಲೆ ಅನುಮಾನ ಮಾಡಬೇಕು ಅನ್ನೋದು ಸರ್ಕಾರದ ಉದ್ದೇಶ, ಆದ್ರೆ ಇದೆಲ್ಲಾ ಸಾಧ್ಯವಿಲ್ಲ. ನ್ಯಾಯಕ್ಕೆ ಜಯವಿದೆ ಅಂತ ಹೇಳಿದ್ರು.

ಎಚ್‍ಡಿಕೆ ಪರ ವಕೀಲರ ವಾದ ಏನಿತ್ತು..?
ಈಗಾಗಲೇ ಈ ಪ್ರಕರಣದಲ್ಲಿ ಬೇರೆ ಆರೋಪಿಗಳನ್ನು ಬಂಧಿಸಿದ್ದಾರೆ. ಹೀಗಾಗಿ ಎಸ್‍ಐಟಿ ನನ್ನ ಕಕ್ಷಿದಾರರನ್ನು ಅರೆಸ್ಟ್ ಮಾಡುವ ಸಾಧ್ಯತೆ ಇದೆ. ನಾವು ತನಿಖೆಗೆ ಸಹಕರಿಸುತ್ತೇವೆ, ನಮಗೆ ಜಾಮೀನು ನೀಡಿ.

ಎಸ್‍ಐಟಿ ಪರ ವಕೀಲರ ವಾದ ಏನು?
ಇನ್ನು ವಿಚಾರಣೆಯೇ ಆರಂಭವಾಗಿಲ್ಲ. ಈ ಸಂದರ್ಭದಲ್ಲಿ ಜಾಮೀನು ನೀಡಿದ್ರೆ ಸಾಕ್ಷ್ಯ ನಾಶವಾಗುತ್ತದೆ. ನಾವು ಆರೋಪಿಯಿಂದ ಮಾಹಿತಿ ಪಡೆದುಕೊಳ್ಳಬೇಕಿದೆ. ಜಾಮೀನು ನೀಡಿದ್ರೆ ಆರೋಪಿ ವಿಚಾರಣೆಗೆ ಸಹಕರಿಸುವುದಿಲ್ಲ. ಆರೋಪಿ ಸಮಾಜದಲ್ಲಿ ತುಂಬ ಪ್ರಭಾವಿ ವ್ಯಕ್ತಿಯಾಗಿದ್ದಾರೆ

ಕೃಷ್ಣ ವಿರುದ್ಧ ತನಿಖೆ ನಡೆಯಲ್ಲ:
ಪ್ರಕರಣದ ಮೊದಲ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ವಿರುದ್ಧ ಯಾವುದೇ ತನಿಖೆ ನಡೆಯುತ್ತಿಲ್ಲ. ಯಾಕಂದ್ರೆ ಈಗಾಗಲೇ ಸುಪ್ರೀಂ ಕೋರ್ಟ್ ಕೃಷ್ಣ ಅವರ ವಿರುದ್ಧ ತನಿಖೆಗೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಆದರೂ ಮತ್ತೊಮ್ಮೆ ಎಫ್‍ಐಆರ್ ದಾಖಲಾಗಿದೆ. ಅದಕ್ಕೆ ಸಂಬಂಧಪಟ್ಟಂತೆ ಎಸ್.ಎಂ. ಕೃಷ್ಣ ಅವರ ಯಾವುದೇ ಪ್ರಕರಣವನ್ನು ವಿಚಾರಣೆ ಮಾಡಲ್ಲ ಎಂದು ಎಸ್‍ಐಟಿ ಎಸ್ಪಿ ಮಂಜುನಾಥ್ ಅಣ್ಣಗೇರಿ ಪತ್ರ ಬರೆದಿದ್ದಾರೆ.

ಏನಿದು ಜಂತಕಲ್ ಮೈನಿಂಗ್ ಕೇಸ್?
ವಿನೋದ್ ಗೋಯಲ್ ಮಾಲೀಕತ್ವದ ಜಂತಕಲ್ ಮೈನಿಂಗ್ ಎಂಟರ್ ಪ್ರೈಸಸ್ ಕಂಪೆನಿಗೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಹೀರೆಕಂದವಾಡಿ ಮತ್ತು ತನಿಗೇಹಳ್ಳಿಯಲ್ಲಿ ಅದಿರು ಸಾಗಿಸಲು ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಆಗಿನ ಸರ್ಕಾರ 2007ರಲ್ಲಿ ಅನುಮತಿ ನೀಡಿತ್ತು. ಕಪ್ಪು ಪಟ್ಟಿಯಲ್ಲಿದ್ದ ವಿನೋದ್ ಗೋಯಲ್ ಮಾಲೀಕತ್ವದ ಕಂಪೆನಿಗೆ ಅನುಮತಿ ನೀಡಿದ ಪರಿಣಾಮ ಪಾಕಿಸ್ತಾನಕ್ಕೆ ಅಕ್ರಮ ಅದಿರು ಸಾಗಾಟವಾಗಿದ್ದು, ರಾಜ್ಯದ ಬೊಕ್ಕಸಕ್ಕೆ 250 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಹಿಂದಿನ ಲೋಕಾಯುಕ್ತ ನ್ಯಾ. ಸಂತೋಷ ಹೆಗ್ಡೆ ವರದಿ ನೀಡಿದ್ದರು.

Mining

ಎಚ್‍ಡಿಕೆಯ ಮೇಲಿರುವ ಆರೋಪ ಏನು?
ಹಿಂದೆ ಕಂಪೆನಿಯು ಸಂಗ್ರಹಿಸಿದ್ದ ಅದಿರು ಸಾಗಣೆಕೆಯ ಲೈಸೆನ್ಸ್ ನವೀಕರಣಕ್ಕೆ ಎನ್‍ಕೌಂಟರ್ ಸ್ಪೆಷಲಿಸ್ಟ್ ದಯಾನಾಯಕ್ 3 ಬಾರಿ ಹೆಚ್‍ಡಿಕೆಯನ್ನು ಭೇಟಿ ಮಾಡಿದ್ದಾರೆ. ಇದಾದ ಬಳಿಕ ಗಂಗಾರಾಮ್ ಬಡೇರಿಯಾಗೆ ಲೈಸೆನ್ಸ್ ನವೀಕರಣಕ್ಕೆ ಎಚ್‍ಡಿಕೆ ಸೂಚಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ಎಸ್‍ಐಟಿಯಲ್ಲಿರುವ ಸಾಕ್ಷ್ಯಗಳು ಏನು?
ಕೇಂದ್ರದ ಗಣಿ ಮತ್ತು ಪರಿಸರ ಸಚಿವಾಲಯ 2009ರ ಡಿ.1 ಮತ್ತು ಡಿ.24ರಂದು ಆದಿರು ಸಾಗಾಣಿಕೆಗೆ ಸಂಬಂಧಿಸಿದಂತೆ ಜಂತಕಲ್ ಮೈನಿಂಗ್ ಕಂಪೆನಿ ಅಥವಾ ಯಾವುದೇ ಇಲಾಖೆಯ ಜೊತೆ ಪತ್ರ ವ್ಯವಹಾರ ನಡೆಸಿಲ್ಲ ಎಂದು ಪತ್ರ ಬರೆದಿತ್ತು. ಈ ಅಂಶವನ್ನು ಸಂತೋಷ್ ಹೆಗ್ಡೆ ತಮ್ಮ ವರದಿಯಲ್ಲಿ ಪ್ರಸ್ತಾಪಿಸಿದ್ದರು. ಈ ಪತ್ರದ ಸಾಕ್ಷ್ಯವನ್ನು ಇಟ್ಟುಕೊಂಡು ಎಸ್‍ಐಟಿ ಕೇಂದ್ರವೇ ಅನುಮತಿ ನೀಡದೇ ಇರುವಾಗ ಈ ಕಂಪೆನಿ ಆದಿರು ಸಾಗಾಟ ಮಾಡಲು ಅನುಮತಿ ಸಿಕ್ಕಿದ್ದು ಹೇಗೆ ಎಂದು ತನಿಖೆ ನಡೆಸಲು ಮುಂದಾಗಿದೆ.

ನೋಟಿಸ್ ನೀಡಲು ಮುಂದಾಗಿದ್ದು ಯಾಕೆ?
ಹೆಚ್‍ಡಿಕೆ ಸಿಎಂ ಆಗಿದ್ದ ಅವಧಿಯಲ್ಲಿ ಜಂತಕಲ್ ಮೈನಿಂಗ್‍ಗೆ ಸಂಬಂಧಿಸಿದ ದಾಖಲೆಗಳಿಗೆ ಸಹಿ ಹಾಕುವಂತೆ ಸಿಎಂ ಕಚೇರಿಯಿಂದ ಒತ್ತಡ ಬಂದಿತ್ತು ಎಂದು ಐಎಎಸ್ ಅಧಿಕಾರಿ ಗಂಗಾರಾಮ್ ಬಡೇರಿಯಾ ಎಸ್‍ಐಟಿ ಮುಂದೆ ಹೇಳಿದ್ದಾರೆ ಎನ್ನಲಾಗಿದೆ. ಬಡೇರಿಯಾ ಹೇಳಿಕೆ ಹಿನ್ನೆಲೆಯಲ್ಲಿ ಹೆಚ್‍ಡಿ ಕುಮಾರಸ್ವಾಮಿಗೆ ನೋಟಿಸ್ ನೀಡಲು ಎಸ್‍ಐಟಿ ಸಜ್ಜಾಗಿತ್ತು.

ಎಫ್‍ಐಆರ್‍ನಲ್ಲಿ ಯಾರ ಹೆಸರಿದೆ?
ಎಸ್‍ಐಟಿ ಹೊಸದಾಗಿ ದಾಖಲಿಸಿರೋ ಎಫ್‍ಐಆರ್‍ನಲ್ಲಿ 1. ಎಸ್.ಎಂ ಕೃಷ್ಣ, 2. ಎನ್ ಧರ್ಮಸಿಂಗ್, 3. ಹೆಚ್.ಡಿ. ಕುಮಾರಸ್ವಾಮಿ, 4. ಡಾ.ಬಸಪ್ಪ ರೆಡ್ಡಿ, 5. ಗಂಗಾರಮ್ ಬಡೇರಿಯಾ (ಐಎಎಸ್), 6. ವಿ.ಉಮೇಶ್ (ಐಎಎಸ್), 7. ಐ.ಆರ್. ಪೆರುಮಾಳ್ (ಐಎಎಸ್), 8. ಕೆ.ಎಸ್ ಮಂಜುನಾಥ್ (ಐಎಎಸ್), 9. ಡಿ.ಎಸ್. ಅಶ್ವಥ್ (ಐಎಎಸ್), 10. ಜೀಜಾ ಮಾಧವನ್ ಹರಿಸಿಂಗ್ (ಐಪಿಎಸ್), 11. ಮಹೇಂದ್ರ ಜೈನ್ (ಐಎಎಸ್), 12. ಕೆ. ಶ್ರೀನಿವಾಸ್, 13. ಎಂ ರಾಮಪ್ಪ ಹಾಗೂ 14. ಶಂಕರ ಲಿಂಗಯ್ಯ.

ಮಗನಿಗೂ ಸಮನ್ಸ್: ಜಂತಕಲ್ ಮೈನಿಂಗ್ ಕೇಸಲ್ಲಿ ತಾವು ತಪ್ಪಿಸಿಕೊಳ್ಳೋದಕ್ಕೆ ಐಎಎಸ್ ಅಧಿಕಾರಿ ಗಂಗಾರಾಮ್ ಬಡೇರಿಯಾ ಮಗನ ಹೆಸ್ರು ಹೇಳಿರುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ವಿನೋದ್ ಗೋಯಲ್ ಅವರನ್ನು ಬಡೇರಿಯಾ ಮಗ ಮೂರು ಬಾರಿ ಮುಖಾಮುಖಿಯಾಗಿ ಭೇಟಿಯಾಗಿದ್ದ. ಈತ ಕೇವಲ ಹತ್ತು ಲಕ್ಷ ಅಲ್ಲ. ಕೋಟ್ಯಾಂತರ ರೂಪಾಯಿ ಹಣ ಪಡೆದುಕೊಂಡಿದ್ದ. ಶೋಕಿಲಾಲಾ ಮಗನ ಆಸೆ ತೀರಿಸಲು ತನ್ನ ಅಕ್ರಮ ವ್ಯವಹಾರಕ್ಕೆ ಮಗನನ್ನ ಬಡೇರಿಯಾ ಮುಂದೆ ಬಿಟ್ಟಿದ್ದಾಗಿ ಮಾಹಿತಿ ಸಿಕ್ಕಿದೆ. ಗಂಗಾರಾಮ್ ಬಡೇರಿಯಾ ಹೇಳಿಕೆ ಆಧರಿಸಿ ಇಂದು ಮಗನಿಗೂ ಎಸ್‍ಐಟಿ ಸಮನ್ಸ್ ನೀಡಿದ್ದು, 3 ದಿನದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಸುಪ್ರೀಂ ಸೂಚನೆ ಮೇರೆಗೆ ತನಿಖೆ: ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಅವರು ಹಿಂದಿನ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗಡೆಯವರ ವರದಿಯಲ್ಲಿದ್ದ ಹಲವಾರು ರಾಜಕಾರಣಿಗಳು, ಅಧಿಕಾರಿಗಳು ಹಾಗೂ ಇನ್ನಿತರರ ವಿರುದ್ಧ ದೂರು ಸಲ್ಲಿಸಿದ್ದರು. ಅಪಾರ ಪ್ರಮಾಣದ ಅರಣ್ಯಭೂಮಿಯನ್ನು ಕಬಳಿಸಿ ಅಕ್ರಮ ಗಣಿಗಾರಿಕೆ ನಡೆಸಲು ಎಚ್.ಡಿ.ಕುಮಾರಸ್ವಾಮಿ, ಎನ್.ಧರಂಸಿಂಗ್, ಎಸ್.ಎಂ.ಕೃಷ್ಣ ಅನುಮತಿ ನೀಡಿದ್ದಾರೆ ಎಂದು ಆರೋಪಿಸಿದ್ದರು. ಮಾರ್ಚ್ ನಲ್ಲಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಎಚ್.ಡಿ.ಕುಮಾರಸ್ವಾಮಿ ಹಾಗೂ ಎನ್.ಧರಂಸಿಂಗ್ ವಿರುದ್ಧ ತನಿಖೆ ನಡೆಸಿ ಮೂರು ತಿಂಗಳಲ್ಲಿ ವರದಿ ನೀಡುವಂತೆ ಕರ್ನಾಟಕ ಪೊಲೀಸ್‍ನ ವಿಶೇಷ ತನಿಖಾ ತಂಡಕ್ಕೆ ಸೂಚಿಸಿತ್ತು.

TAGGED:bengalurucourthd kumaraswamyJantakaljdsಎಚ್‍ಡಿ ಕುಮಾರಸ್ವಾಮಿಎಸ್‍ಐಟಿಗಂಗಾರಮ್ ಬಡೇರಿಯಾಜಂತಕಲ್ ಕೇಸ್ಜಾಮೀನುಭ್ರಷ್ಟಾಚಾರಲೋಕಾಯುಕ್ತ ಕೋರ್ಟ್ಸುಪ್ರೀಂ ಕೋರ್ಟ್ಹೈಕೋರ್ಟ್
Share This Article
Facebook Whatsapp Whatsapp Telegram

Cinema news

Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories
arvind reddy threat
ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ
Bengaluru City Cinema Latest Main Post Sandalwood
again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood

You Might Also Like

delhi biker dead
Latest

ದೆಹಲಿ ಜಲಮಂಡಳಿ ಯಮಗುಂಡಿಗೆ ಬೈಕ್ ಸವಾರ ಬಲಿ – 20 ಅಡಿಯ ಆಳಕ್ಕೆ ಬಿದ್ದು ದುರ್ಮರಣ

Public TV
By Public TV
1 hour ago
congress leader
Chikkaballapur

ಚಿಕ್ಕಬಳ್ಳಾಪುರದಲ್ಲಿ ನಿಲ್ಲದ ಕಾಂಗ್ರೆಸ್ ಮುಖಂಡರ ದರ್ಪ- ರಾಜೀವ್ ಗೌಡ ಬಳಿಕ ಮತ್ತೋರ್ವನ ಗೂಂಡಾಗಿರಿ

Public TV
By Public TV
2 hours ago
G.Parameshwar 1
Districts

ಬೇಲೂರು ಠಾಣೆಗೆ ದಿಢೀರ್ ಭೇಟಿ, ಪಾಕ್‌, ಅಫ್ಘಾನ್‌ನಿಂದ ಬಂದವ್ರನ್ನ ಹೇಗೆ ಹಿಡಿತೀರಿ – ಪೊಲೀಸರಿಗೆ ಪರಂ ಪ್ರಶ್ನೆ!

Public TV
By Public TV
2 hours ago
g parameshwara 2
Chikkamagaluru

5 ವರ್ಷ ಸಿದ್ದರಾಮಯ್ಯ ಯಾಕೆ ಸಿಎಂ ಆಗಿರಬಾರದು: ಪರಮೇಶ್ವರ್‌

Public TV
By Public TV
3 hours ago
Crime 3
Bengaluru Rural

ಹಿಟ್‌ & ರನ್‌ಗೆ ವ್ಯಕ್ತಿ ಬಲಿ – 11 ಗಂಟೆಗಳ ಕಾಲ ರಸ್ತೆಯಲ್ಲೇ ಬಿದ್ದಿದ್ದ ಶವ!

Public TV
By Public TV
3 hours ago
team india U19 1
Cricket

U19 World Cup Final: ವೈಭವ್‌ ಸ್ಫೋಟಕ ಶತಕ; ಆಂಗ್ಲರ ಸದೆಬಡಿದು ವಿಶ್ವಕಪ್‌ ಗೆದ್ದ ‘ಯಂಗ್‌ ಇಂಡಿಯಾ’

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?