Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಂತಕಲ್ ಮೈನಿಂಗ್ ಅಕ್ರಮ: ಎಚ್‍ಡಿ ಕುಮಾರಸ್ವಾಮಿಗೆ ಬಿಗ್ ರಿಲೀಫ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜಂತಕಲ್ ಮೈನಿಂಗ್ ಅಕ್ರಮ: ಎಚ್‍ಡಿ ಕುಮಾರಸ್ವಾಮಿಗೆ ಬಿಗ್ ರಿಲೀಫ್

Bengaluru City

ಜಂತಕಲ್ ಮೈನಿಂಗ್ ಅಕ್ರಮ: ಎಚ್‍ಡಿ ಕುಮಾರಸ್ವಾಮಿಗೆ ಬಿಗ್ ರಿಲೀಫ್

Public TV
Last updated: May 17, 2017 3:05 pm
Public TV
Share
3 Min Read
hdk rcr
SHARE

ಬೆಂಗಳೂರು: ಜಂತಕಲ್ ಎಂಟರ್‍ಪ್ರೈಸಸ್‍ಗೆ ಮೈನಿಂಗ್ ಪರವಾನಗಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದೆ. ಬಂಧನ ಭೀತಿಯಲ್ಲಿದ್ದ  ಎಚ್ಡಿಕೆಗೆ ಸಿವಿಲ್ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಸಿಸಿಎಚ್ 53 ಸೆಷನ್ಸ್ ನ್ಯಾಯಾಲಯದಲ್ಲಿ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಬುಧವಾರ ನಡೆಯಿತು. ವಿಚಾರಣೆ ನಡೆಸಿದ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿತು.

5 ಲಕ್ಷ ರೂ. ಬಾಂಡ್ ಶ್ಯೂರಿಟಿ ಇಡಬೇಕು. ದೇಶ ಬಿಟ್ಟು ಹೋಗಬಾರದು, ಸಾಕ್ಷ್ಯ ನಾಶ ಮಾಡಬಾರದು. ತನಿಖಾಧಿಕಾರಿ ತನಿಖೆಗೆ ಕರೆದಾಗ ವಿಚಾರಣೆಗೆ ಹಾಜರಾಗಬೇಕು ಎಂದು ಕೋರ್ಟ್ ಎಚ್‍ಡಿಕೆಗೆ ಷರತ್ತು ವಿಧಿಸಿದೆ.

ಈಗಾಗಲೇ ಒಂದು ವರ್ಷದ ಹಿಂದೆ ನಿರೀಕ್ಷಣಾ ಜಾಮೀನಿನನ್ನು ಪಡೆದು ಎಸ್‍ಐಟಿ ಮುಂದೆ ಮೂರು ಬಾರಿ ವಿಚಾರಣೆಗೆ ಹಾಜರಾಗಿದ್ದ ಕುಮಾರಸ್ವಾಮಿ ಬಂಧನದ ಭೀತಿಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ಮಂಗಳವಾರ ಮಧ್ಯಂತರ ನಿರೀಕ್ಷಣಾ ಜಾಮೀನಿನ ಮೊರೆ ಹೋಗಿದ್ದರು.

ಇದೇ ಜಂತಕಲ್ ಮೈನಿಂಗ್ಸ್ ವಿಚಾರವಾಗಿ ಎರಡು ದಿನದ ಹಿಂದೆಯಷ್ಟೇ ಎಸ್‍ಐಟಿ ಐಎಎಸ್ ಅಧಿಕಾರಿ ಗಂಗಾರಾಮ್ ಬಡೇರಿಯಾ ಅವರನ್ನು ಬಂಧಿಸಿದ್ದು, ಒಂಭತ್ತು ಐಎಎಸ್ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಲಾಗಿದೆ.

ಹೆಚ್‍ಡಿಕೆ ಸಿಎಂ ಆಗಿದ್ದ ಅವಧಿಯಲ್ಲಿ ಜಂತಕಲ್ ಮೈನಿಂಗ್‍ಗೆ ಸಂಬಂಧಿಸಿದ ದಾಖಲೆಗಳಿಗೆ ಸಹಿ ಹಾಕುವಂತೆ ಸಿಎಂ ಕಚೇರಿಯಿಂದ ಒತ್ತಡ ಬಂದಿತ್ತು ಎಂದು ಐಎಎಸ್ ಅಧಿಕಾರಿ ಗಂಗಾರಾಮ್ ಬಡೇರಿಯಾ ಎಸ್‍ಐಟಿ ಮುಂದೆ ಹೇಳಿದ್ದಾರೆ ಎನ್ನಲಾಗಿದೆ. ಬಡೇರಿಯಾ ಹೇಳಿಕೆ ಹಿನ್ನೆಲೆಯಲ್ಲಿ ಹೆಚ್‍ಡಿ ಕುಮಾರಸ್ವಾಮಿಗೆ ನೋಟಿಸ್ ನೀಡಲು ಎಸ್‍ಐಟಿ ಸಜ್ಜಾಗಿತ್ತು.

ಈ ಬಗ್ಗೆ ಯಾದಗಿರಿಯಲ್ಲಿ ಮಾತಾಡಿದ ಕುಮಾರಸ್ವಾಮಿ, ಜಂತಕಲ್ ಮೈನಿಂಗ್ ವಿಚಾರವಾಗಿ ಯಾವುದೇ ತಪ್ಪು ಮಾಡಿಲ್ಲ ಅಂದ್ರು. ಮಾಡದ ತಪ್ಪಿಗೆ ಹೆದರುವ ಅವಶ್ಯಕತೆ ಇಲ್ಲ. ಇದು ಕೆಲವರ ಹುನ್ನಾರ ಅಷ್ಟೇ. ಇದಕ್ಕೆಲ್ಲ ನಾನು ಬಗ್ಗಲ್ಲ ಅಂದ್ರು. ಇದೇ ವೇಳೆ ತಪ್ಪು ಮಾಡಿದ್ರೆ ಶಿಕ್ಷೆ ಆಗಲಿ. ತನಿಖೆಗೆ ನನ್ನ ಸಂಪೂರ್ಣ ಬೆಂಬಲವಿದೆ ಅಂತಾ ಹೇಳಿದ್ರು.

ಏನಿದು ಜಂತಕಲ್ ಮೈನಿಂಗ್ ಪ್ರಕರಣ?
ಚಿತ್ರದುರ್ಗ ಜಿಲ್ಲೆಯ ಮೀಸಲು ಅರಣ್ಯದಲ್ಲಿ ಗಣಿಗಾರಿಕೆ ನಡೆಸಲು ವಿನೋದ್ ಗೋಯಲ್ ಮಾಲೀಕತ್ವದ ಜಂತಕಲ್ ಮೈನಿಂಗ್ ಎಂಟರ್ ಪ್ರೈಸಸ್‍ಗೆ ರಾಜ್ಯ ಸರ್ಕಾರ ಅನುಮತಿ ನೀಡಿತ್ತು. ಪಾಕಿಸ್ತಾನಕ್ಕೆ ಅಕ್ರಮವಾಗಿ ಅದಿರು ಸಾಗಿಸಿ ಕಪ್ಪು ಪಟ್ಟಿಯಲ್ಲಿದ್ದ ವಿನೋದ್ ಗೋಯಲ್ ಮಾಲೀಕತ್ವದ ಕಂಪೆನಿಗೆ ಗಣಿ ಗುತ್ತಿಗೆ ಮಾಡಿದ ಪರಿಣಾಮ ರಾಜ್ಯದ ಬೊಕ್ಕಸಕ್ಕೆ 250 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಹಿಂದಿನ ಲೋಕಾಯುಕ್ತ ನ್ಯಾ. ಸಂತೋಷ ಹೆಗ್ಡೆ ವರದಿ ನೀಡಿದ್ದರು. ಜಂತಕಲ್ ಮೈನಿಂಗ್ ಪರವನಾಗಿ ನೀಡುವ ವಿಚಾರದಲ್ಲಿ ಬಡೇರಿಯಾ ಅವರು ವಿನೋದ್ ಗೋಯಲ್ ಸಹಾಯ ಮಾಡಿದ್ದರು ಎನ್ನುವ ಆರೋಪ ಕೇಳಿಬಂದಿತ್ತು. ತನಿಖೆ ವೇಳೆ ಬಡೇರಿಯಾ ಮಗನ ಖಾತೆಗೆ ವಿನೋದ್ ಗೋಯಲ್ 10 ಲಕ್ಷ ರೂ. ಹಣ ಹಾಕಿದ್ದ ವಿಚಾರ ಬೆಳಕಿಗೆ ಬಂದಿತ್ತು. ಮಗನ ಅಕೌಂಟ್ ಪರಿಶೀಲನೆ ಮಾಡಿದಾಗ ಬಡೇರಿಯಾ ರೆಡ್‍ಹ್ಯಾಂಡಾಗಿ ಸಿಕ್ಕಿ ಬಿದ್ದಿದ್ದರು. ಈ ಹಿಂದೆ ಮೂರು ಬಾರಿ ಎಸ್‍ಐಟಿ ವಿಚಾರಣೆಗೆ ಹಾಜರಾಗಿದ್ದ ಬಡೇರಿಯಾ ನಾಲ್ಕನೇಯ ಬಾರಿಯ ವಿಚಾರಣೆ ವೇಳೆ ಅರೆಸ್ಟ್ ಆಗಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಅವರು ಹಿಂದಿನ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗಡೆಯವರ ವರದಿಯಲ್ಲಿದ್ದ ಹಲವಾರು ರಾಜಕಾರಣಿಗಳು, ಅಧಿಕಾರಿಗಳು ಹಾಗೂ ಇನ್ನಿತರರ ವಿರುದ್ಧ ದೂರು ಸಲ್ಲಿಸಿದ್ದರು. ಅಪಾರ ಪ್ರಮಾಣದ ಅರಣ್ಯಭೂಮಿಯನ್ನು ಕಬಳಿಸಿ ಅಕ್ರಮ ಗಣಿಗಾರಿಕೆ ನಡೆಸಲು ಎಚ್.ಡಿ.ಕುಮಾರಸ್ವಾಮಿ ಹಾಗೂ ಎನ್.ಧರಂಸಿಂಗ್, ಎಸ್.ಎಂ.ಕೃಷ್ಣ ಅನುಮತಿ ನೀಡಿದ್ದಾರೆ ಎಂದು ಆರೋಪಿಸಿದ್ದರು. ಮಾರ್ಚ್ ನಲ್ಲಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಎಚ್.ಡಿ.ಕುಮಾರಸ್ವಾಮಿ ಹಾಗೂ ಎನ್.ಧರಂಸಿಂಗ್ ವಿರುದ್ಧ ತನಿಖೆ ನಡೆಸಿ ಮೂರು ತಿಂಗಳಲ್ಲಿ ವರದಿ ನೀಡುವಂತೆ ಕರ್ನಾಟಕ ಪೊಲೀಸ್‍ನ ವಿಶೇಷ ತನಿಖಾ ತಂಡಕ್ಕೆ ಸೂಚಿಸಿತ್ತು. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ವಿರುದ್ಧ ತನಿಖೆಗೆ ಸುಪ್ರೀಂ ತಡೆಯಾಜ್ಞೆ ನೀಡಿದೆ.

ಇದನ್ನೂ ಓದಿ: ಜಂತಕಲ್ ಮೈನಿಂಗ್ ಪ್ರಕರಣ ರಾಜಕೀಯ ಪ್ರೇರಿತ: ಹೆಚ್‍ಡಿಕೆ

 

TAGGED:bailcourthd kumaraswamyJantkal Miningjdsಎಸ್‍ಐಟಿಗಂಗಾರಾಮ್ ಬಡೇರಿಯಾಜಂತಕಲ್ ಎಂಟರ್‍ಪ್ರೈಸಸ್ಜಾಮೀನುಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories
Pushpa Arunkumar
ಸೈಟ್‌ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್‌ ಕಟ್ಟಿಸಲು ಮುಂದಾದ ಯಶ್‌ ತಾಯಿ
Cinema Districts Hassan Karnataka Latest Sandalwood States Top Stories
Ram Charan
ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್‌ಚರಣ್ ಪತ್ನಿ ಉಪಾಸನಾ
Bollywood Cinema Latest Top Stories
Jayamala
ಫಿಲ್ಮ್ ಚೇಂಬರ್‌ ಚುನಾವಣೆ – ಅಧ್ಯಕ್ಷೆ ಪಟ್ಟಕ್ಕೇರಿದ ನಟಿ ಜಯಮಾಲಾ
Bengaluru City Cinema Latest Main Post Sandalwood

You Might Also Like

Rahul Gandhi Mallikarjun Kharge
Latest

ಬಜೆಟ್‌ನಲ್ಲಿ ದೇಶದ ಬಿಕ್ಕಟ್ಟುಗಳನ್ನು ನಿರ್ಲಕ್ಷಿಸಲಾಗಿದೆ: ರಾಹುಲ್ ಗಾಂಧಿ

Public TV
By Public TV
3 minutes ago
Budget 2026 1
Bengaluru City

Union Budget 2026 | ಏ.1 ರಿಂದ ಹೊಸ ಆದಾಯ ತೆರಿಗೆ ನೀತಿ, 7 ಅಪರೂಪದ ಕಾಯಿಲೆಗಳ ಔಷಧಿ ಅಗ್ಗ – ಯಾವುದು ದುಬಾರಿ?

Public TV
By Public TV
5 minutes ago
Narendra Modi gandhiji
Latest

ಗಾಂಧಿ ಹೆಸರಿನಲ್ಲಿ ಹೊಸ ಯೋಜನೆ ಪ್ರಕಟ

Public TV
By Public TV
27 minutes ago
CJ Roy Funeral
Bengaluru City

ಮಣ್ಣಲ್ಲಿ ಮಣ್ಣಾದ ಉದ್ಯಮಿ ಸಿ.ಜೆ ರಾಯ್ – ಕ್ರಿಶ್ಚಿಯನ್ ಸಂಪ್ರದಾಯದಂತೆ ಅಂತ್ಯಸಂಸ್ಕಾರ

Public TV
By Public TV
50 minutes ago
Chabahar Port
Latest

Budget 2026 | ಇರಾನ್‌ಗೆ ಇಲ್ಲ, ಬಾಂಗ್ಲಾ ಅನುದಾನ ಅರ್ಧ ಕಡಿತ

Public TV
By Public TV
59 minutes ago
siddaramaiah
Kalaburagi

ಕರ್ನಾಟಕಕ್ಕೆ ಒಂದು ಚೊಂಬು ಕೊಟ್ಟಿದ್ದಾರೆ: ಬಜೆಟ್‌ನಿಂದ ಅನ್ಯಾಯ ಆಗಿದೆ ಎಂದ ಸಿದ್ದರಾಮಯ್ಯ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?