ಬೆಂಗಳೂರು: ಕಳೆದ ಕೆಲ ದಿನಗಳಿಂದ ರಾಜ್ಯ ರಾಜಕೀಯದಲ್ಲಿ ತಮ್ಮ ಬಂಡಾಯದ ಮೂಲಕ ಕೇಂದ್ರ ಬಿಂದುವಾಗಿ ಗುರುತಿಸಿಕೊಂಡಿದ್ದ ಸಚಿವ ರಮೇಶ್ ಜಾರಕಿಹೊಳಿ ಸಹೋದರರು ಸದ್ಯ ಬೆಳಗಾವಿಗೆ ಹಿಂದಿರುಗಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಅವರು ವಿದೇಶ ಪ್ರವಾಸದಿಂದ ಹಿಂದಿರುಗಿದ ಬಳಿಕ ಅತೃಪ್ತಿ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ.
ಶನಿವಾರ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿಗೆ ವಾಪಸ್ ಆಗುವ ಸಾಧ್ಯತೆಗಳಿವೆ. ಇದಕ್ಕೂ ಮುನ್ನ ಸಿಎಂ ಕುಮಾರಸ್ವಾಮಿ ಅವರು ಜಾರಕಿಹೊಳಿ ಸಹೋದರರೊಂದಿಗೆ ಶನಿವಾರ ಸಂಜೆ ಮಾತುಕತೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಬಳಿಕ ಭಾನುವಾರ ಸಿದ್ದರಾಮಯ್ಯರನ್ನು ಜಾರಕಿಹೊಳಿ ಸಹೋದದರು ಭೇಟಿ ಮಾಡಲಾಗಿದ್ದಾರೆ. ಸಿದ್ದರಾಮಯ್ಯ ಅವರೊಂದಿನ ಚರ್ಚೆ ಬಳಿಕವಷ್ಟೇ ಜಾರಕಿಹೊಳಿ ಬ್ರದರ್ಸ್ ಬಂಡಾಯ ಶಮನವಾಗುತ್ತ ಎಂಬ ಅಂಶ ಸ್ಪಷ್ಟವಾಗುವ ಸಾಧ್ಯತೆ ಇದೆ. ಅದ್ದರಿಂದ ಸದ್ಯ ಸತೀಸ್ ಜಾರಕಿಹೊಳಿ ಇಂದು ಬೆಳಗ್ಗೆ ಬೆಳಗಾವಿಗೆ ತೆರಳಿದರೆ, ಸಂಜೆ ವೇಳೆಗೆ ರಮೇಶ್ ಜಾರಕಿಹೊಳಿ ಬೆಂಗಳೂರಿನಿಂದ ತೆರಳಿದ್ದು ಜಿಲ್ಲೆಯಲ್ಲಿ ನಡೆಯುತ್ತಿರುವ ಗಣೇಶ ಉತ್ಸವದಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.
ಇತ್ತ ಬಿಜೆಪಿ ಅಪರೇಷನ್ ಕಮಲ ಮೂಲಕ ಸಮ್ಮಿಶ್ರ ಸರ್ಕಾರದ ಶಾಸಕರನ್ನು ತನ್ನದ ಸೆಳೆಯುವ ಕಸರತ್ತು ನಡೆಸುತ್ತಿದೆ. ಬಿಜೆಪಿ ರಾಜ್ಯಾದ್ಯಕ್ಷ ಅಮಿತ್ ಶಾ ಕೂಡ ಬಿಎಸ್ವೈ ರೊಂದಿಗೆ ಫೋನ್ ಮೂಲಕ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಅಪರೇಷನ್ ಕಮಲ ಕಾರ್ಯತಂತ್ರವನ್ನು ಶಾಸಕ ಶ್ರೀರಾಮುಲು ಜೊತೆಗೂಡಿ ನಡೆಸುತ್ತಿದ್ದು, ಈ ಕುರಿತ ಎಲ್ಲಾ ಬೆಳವಣಿಗೆಗಳನ್ನು ತಿಳಿಸುವುದಾಗಿ ಬಿಎಸ್ವೈ ಹೇಳಿದ್ದಾರೆ ಎಂಬ ಮಾಹಿತಿ ಲಭಿಸಿದೆ.
ಈ ನಡುವೆ ಸಮ್ಮಿಶ್ರ ಸರ್ಕಾರದಲ್ಲಿ ಸದ್ಯ ಖಾಲಿ ಇರುವ 6 ಸಚಿವ ಸ್ಥಾನಗಳಿಗೆ ಲಾಭಿ ಆರಂಭವಾಗಿದ್ದು ಶಾಸಕರು ತಮ್ಮ ಸ್ಥಾನವನ್ನು ಭದ್ರಪಡಿಸಲು ಒತ್ತಡದ ತಂತ್ರಕ್ಕೆ ಮುಂದಾಗಿದ್ದಾರೆ. ಉದಾಹರಣೆ ಎಂಬಂತೆ ಬಳ್ಳಾರಿ ಹಗರಿಬೊಮ್ಮನಹಳ್ಳಿ ಶಾಸಕ ಭೀಮನಾಯಕ್ ತಾನು ಸಚಿವ ಸ್ಥಾನ ಅಕಾಂಕ್ಷಿ ಎಂದು ಶಾಸಕ ಬಹಿರಂಗ ಹೇಳಿದ್ದಾರೆ. ಅಲ್ಲದೇ ಜಿಲ್ಲೆಯ 6 ಶಾಸಕರು ಸಚಿವ ಸ್ಥಾನಕ್ಕೆ ಅರ್ಹರಾಗಿದ್ದು, ತಮ್ಮ ಬೇಡಿಕೆಯನ್ನು ಹೈಕಮಾಂಡ್ಗೆ ತಿಳಿಸಿದ್ದೇವೆ. ಅವರೇ ಅರ್ಹರನ್ನು ಆಯ್ಕೆ ಮಾಡುತ್ತಾರೆ ಎಂದು ಹೇಳಿದರು.
ಸಿದ್ದರಾಮಯ್ಯ ರಾಜ್ಯಕ್ಕೆ ಬಂದ ಬಳಿಕ ಮತ್ತೆ ರಾಜಕೀಯ ಬೆಳವಣಿಗೆಗಳು ಗರಿಗೆದರಲಿದೆ ಎನ್ನಲಾಗಿದೆ. ಆದರೆ ಈ ನಡುವೆ ಬಿಜೆಪಿ ನಡೆಸಲು ಉದ್ದೇಶಿಸಲಾಗುವ ಅಪರೇಷನ್ ಕಮಲಕ್ಕೆ ತಡೆ ನೀಡಲು ಆರ್ಎಸ್ಎಸ್ ಮುಂದಾಗಿದೆ ಎನ್ನಲಾಗಿದೆ. ಈ ಕುರಿತು ಬಿಜೆಪಿ ಹೈಕಮಾಂಡ್ಗೆ ಎಚ್ಚರಿಕೆ ನೀಡಿರುವ ಆರ್ಎಸ್ಎಸ್ ಮುಖಂಡರು, ಈಗ ಸರ್ಕಾರ ರಚನೆ ಮಾಡಲು ಮುಂದಾದರೆ ಲೋಕಸಭಾ ಚುನಾವಣೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ದೋಸ್ತಿ ಸರ್ಕಾರ ರಾಜ್ಯಮಟ್ಟದಲ್ಲಿ ಮತ್ತಷ್ಟು ಒಂದಾಗುವ ಸಂಭವದ ಕುರಿತು ಸೂಚನೆ ನೀಡಿದೆ ಎನ್ನಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv