ತುಮಕೂರು: ಯಾರೋ ಹುಚ್ಚುಚ್ಚಾಗಿ ಮಾತನಾಡಿದರೆ ಅದಕ್ಕೆ ನಾನು ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ. ಅಷ್ಟಕ್ಕೂ ಸಂಸದ ಬಸವರಾಜ್ ನಮ್ಮವರಲ್ಲ ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಸಚಿವ ಬೈರತಿ ಬಸವರಾಜ್ ಹಾಗೂ ಸಂಸದ ಜಿ.ಎಸ್. ಬಸವರಾಜ್ ಅವರು ಸುದ್ದಿಗೋಷ್ಠಿ ಸಂದರ್ಭದಲ್ಲಿ ಮಾಧುಸ್ವಾಮಿ ವಿರುದ್ಧ ಮಾತನಾಡಿರುವುದರ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿ, ನಾನು ಆ ಸುದ್ದಿಗೋಷ್ಠಿಗೆ ಹೋಗಿದ್ದೆ. ಆದರೆ 12 ಗಂಟೆಗೆ ಕ್ಯಾಬಿನೆಟ್ ಇರುವುದರಿಂದ ಸಮಯವಾಗುತ್ತದೆ. 9.30ಗೆ ಹೊರಡಬೇಕು ಎಂದು ಮೊದಲೇ ಹೇಳಿದ್ದೆ. ಆದರೂ ಕಾರ್ಯಕ್ರಮದ ನಿರ್ವಾಹಕರು 10 ಗಂಟೆಯಾದರೂ ಸಭೆ ಮುಗಿಸಲಿಲ್ಲ. ಇದರಿಂದಾಗಿ ನಾನು ಅಲ್ಲಿಂದ ಎದ್ದು ಬಂದಿದ್ದೇನೆ. ನನಗೆ ಬೇರೆಯವರ ವಿಚಾರ ತಿಳಿದಿಲ್ಲ ಎಂದು ಹೇಳಿದರು.
ಎಲ್ಲರಿಗೂ ತಿಳಿದಂತೆ ರೋಡ್ ಬ್ಲಾಕ್ ಆಗಿರುವುದರಿಂದ ಕ್ಯಾಬಿನೆಟ್ ಮೀಟಿಂಗ್ಗೆ ತಡವಾಗುತ್ತದೆ ಎಂದು ಮುಂಚೆನೇ ತಿಳಿಸಿದ್ದೆ. 12 ಗಂಟೆಗೆ ಕ್ಯಾಬಿನೆಟ್ ಇದ್ದರೂ ಅರ್ಧ ಗಂಟೆ ಮುಂಚೆ ಅಲ್ಲಿ ಹೋಗಿರಬೇಕು. ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಕುರಿತು ಸಿಎಂ ಜೊತೆ ಮಾತನಾಡಬೇಕಿತ್ತು ಎಂದ ಅವರು, ಸಭೆಯಲ್ಲಿರುವಾಗಲೇ 2 ಬಾರಿ ಮುಖ್ಯಮಂತ್ರಿ ಅವರು ಕರೆ ಮಾಡಿದ್ದರು. ಆದ್ದರಿಂದ ಅರ್ಧಕ್ಕೆ ಎದ್ದು ಬಂದೆ. ಈ ಬಗ್ಗೆ ನನಗೆ ಹೆಚ್ಚು ಪ್ರತಿಕ್ರಿಯೆ ನೀಡಲು ಇಷ್ಟವಿಲ್ಲ ಎಂದರು. ಇದನ್ನೂ ಓದಿ: ನಮ್ಮ ಜಿಲ್ಲೆಯನ್ನೇ ಹಾಳ್ ಮಾಡಿಬಿಟ್ಟಿದ್ದಾನೆ – ಮಾಧುಸ್ವಾಮಿ ವಿರುದ್ಧ ಬಸವರಾಜ್, ಬೈರತಿ ಗುಸು ಗುಸು
ತುಮಕೂರಿನಲ್ಲಿ ಸುದ್ದಿಗೋಷ್ಠಿ ವೇಳೆ ಸಂಸದ ಜಿ.ಎಸ್ ಬಸವರಾಜ್ ಹಾಗೂ ಸಚಿವ ಬೈರತಿ ಬಸವರಾಜ್ ಅವರು ಸಚಿವ ಮಾಧುಸ್ವಾಮಿ ಗುಸು, ಗುಸು ಎಂದು ಮಾತನಾಡಿಕೊಂಡಿದ್ದರು. ಈ ವೇಳೆ ಸಚಿವ ಮಾಧುಸ್ವಾಮಿ ವಿರುದ್ಧ ಸಂಸದ ಬಸವರಾಜು ಆರೋಪಗಳ ಸುರಿಮಳೆಯೇ ಹರಿಸಿದ್ದರು. ದಕ್ಷಿಣ ಕೋರಿಯಾದ ಕಿಂಗ್ ಪಿನ್ ಇದ್ದಾನಲ್ಲ ಅವನ ತರ ಮಾಧುಸ್ವಾಮಿ ಆಡುತ್ತಿದ್ದಾನೆ. ಇದರಿಂದಾಗಿ ನಮ್ಮ ಜಿಲ್ಲೆಯನ್ನೇ ಹಾಳು ಮಾಡಿಬಿಟ್ಟಿದ್ದಾನೆ ಎಂದು ಸಚಿವ ಮಾಧುಸ್ವಾಮಿ ವಿರುದ್ಧ ಸಂಸದ ಜಿ.ಎಸ್ ಬಸವರಾಜ್ ಹರಿಹಾಯ್ದಿದ್ದರು. ಇದನ್ನೂ ಓದಿ: ತರಕಾರಿ, ಹಣ್ಣುಗಳನ್ನು ಲಂಚವಾಗಿ ಪಡೆಯುತ್ತಿದ್ದ ಅಧಿಕಾರಿಗಳು!