ಇಂದು ಗುರು-ಶಿಷ್ಯರ ಸಮಾಗಮ

Public TV
1 Min Read
HDD CM SIDDU

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ರಾಜಕೀಯದಲ್ಲಿ ಗುರು-ಶಿಷ್ಯ ಎಂದೇ ಗುರುತಿಸಿಕೊಳ್ಳುತ್ತಾರೆ. ರಾಜಕೀಯ ಕಾಲಂತಾರದಲ್ಲಿ ಸಿದ್ದರಾಮಯ್ಯನವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಇಂದು ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಯಾಗಿದ್ದು, ಉಪ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಗುರು-ಶಿಷ್ಯರ ಸಮಾಗಮ ಆಗಲಿದೆ.

ಗುರು-ಶಿಷ್ಯರ ಸಮಾಗಮದಲ್ಲಿಂದು ಮಹತ್ವದ ಸಭೆ ನಡೆಯಲಿದೆ. ಉಪಸಮರದಲ್ಲಿ ಕಮಲ ಪಾಳಯ ಕಟ್ಟಿಹಾಕಲು ಭಾರೀ ರಣತಂತ್ರ ರೂಪಿಸಲಿದ್ದಾರೆ. ಉಪ ಲೋಕಸಭಾ ಚುನಾವಣೆ ಚುನಾವಣಾ ಸಿದ್ಧತೆ, ಪ್ರಚಾರ ಕುರಿತಂತೆ ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ಮಹತ್ವದ ಸಭೆ ನಡೆಯಲಿದೆ.

HDD CM SIDDU a

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಎರಡು ಪಕ್ಷಗಳು ಗಣ್ಯರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಭೆ ಬಳಿಕ ದೋಸ್ತಿ ನಾಯಕರಿಂದ ಜಂಟಿ ಸುದ್ದಿಗೋಷ್ಠಿ ಸಹ ನಡೆಯಲಿದೆ. ಸುದ್ದಿಗೋಷ್ಠಿ ವೇಳೆ 2 ವಿಧಾನಸಭೆ, 3 ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳುವ ಕುರಿತು ಮಾಹಿತಿ ನೀಡಲಿದ್ದಾರೆ.

ಎಲ್ಲಕ್ಕಿಂತ ಮುಖ್ಯವಾಗಿ ತಮ್ಮ ಪಕ್ಷದ ಕಾರ್ಯಕರ್ತಗಳು ಯಾವುದೇ ಗೊಂದಲ ಮಾಡಿಕೊಳ್ಳದೆ ಒಟ್ಟಾಗಿ ಹೋಗಬೇಕು ಎಂಬ ಮಾಹಿತಿ ರವಾನಿಸಲು ಈ ಜಂಟಿ ಸುದ್ದಿಗೋಷ್ಠಿ ಹಮ್ಮಿಕೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ. ಉಪ ಚುನಾವಣೆ ಕಾರಣಕ್ಕಾಗಿ ಒಟ್ಟಾಗುತ್ತಿರುವ ಗುರು ಶಿಷ್ಯರಾದ ದೇವೇಗೌಡರು ಹಾಗೂ ಸಿದ್ದರಾಮಯ್ಯ ಒಟ್ಟಿಗೆ ಸುದ್ದಿಗೋಷ್ಠಿ ನಡೆಸುತ್ತಿರುವುದು ವಿಶೇಷ. ಒಂದೇ ವೇದಿಕೆಯಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳುವ ಬಗ್ಗೆ ಮಾಹಿತಿ ನೀಡಲಿದ್ದು. ಗುರು ಶಿಷ್ಯರು ಜಂಟಿಯಾಗಿತೇ ಪ್ರಚಾರ ನಡೆಸ್ತಾರಾ ಎಂಬ ಕುತೂಹಲಕ್ಕೂ ಈ ಬೆಳವಣಿಗೆ ಕಾರಣವಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *