Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜೆಡಿಎಸ್ ಹೈಕಮಾಂಡ್ ಬಿಡದಿಯಲ್ಲೇ ಇದೆ: ಕುಮಾರಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜೆಡಿಎಸ್ ಹೈಕಮಾಂಡ್ ಬಿಡದಿಯಲ್ಲೇ ಇದೆ: ಕುಮಾರಸ್ವಾಮಿ

Bengaluru City

ಜೆಡಿಎಸ್ ಹೈಕಮಾಂಡ್ ಬಿಡದಿಯಲ್ಲೇ ಇದೆ: ಕುಮಾರಸ್ವಾಮಿ

Public TV
Last updated: October 4, 2021 10:55 pm
Public TV
Share
3 Min Read
HD Kumaraswamy at Bidadi Farm House
SHARE

ಬೆಂಗಳೂರು: ಬಿಜೆಪಿ ಹೈಕಮಾಂಡ್ ನಾಗ್ಪುರದಲ್ಲಿದೆ. ಕಾಂಗ್ರೆಸ್ ಹೈಕಮಾಂಡ್ ದೆಹಲಿಯಲ್ಲಿ ಇದೆ. ಜೆಡಿಎಸ್ ಹೈಕಮಾಂಡ್ ಬಿಡದಿಯಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ‌

ಬಿಡದಿಯ ತೋಟದಲ್ಲಿ ನಡೆಯುತ್ತಿರುವ ಜನತಾ ಪರ್ವ 1.O ಮಿಷನ್ 123 ಕಾರ್ಯಾಗಾರದ ಆರನೇ ದಿನ ಎಸ್ ಸಿ, ಎಸ್ ಟಿ ಹಾಗೂ ಹಿಂದುಳಿದ ವರ್ಗದ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದರು ಅವರು, ನಿಮ್ಮ ಕೂಗಳತೆಯಲ್ಲಿ ನಿಮ್ಮ ಪಕ್ಷದ ವರಿಷ್ಠ ನಾಯಕರು ಇದ್ದಾರೆ. ಕಾರ್ಯಕರ್ತರು ಹೈಕಮಾಂಡ್ ನೋಡಲು ವಿಮಾನ ಹತ್ತಿ ದೆಹಲಿಗೆ ಹೋಗಬೇಕಿಲ್ಲ. ಸಾವಿರಾರು ರೂಪಾಯಿ ಖರ್ಚು ಮಾಡಬೇಕಿಲ್ಲ ಎಂದು ಹೇಳಿದರು.

HD Kumaraswamy at Bidadi 1

ರಾಜಕೀಯದ ಬಗ್ಗೆ ಜಿಗುಪ್ಸೆ ಬಂದಿತ್ತು!: ಕಾಂಗ್ರೆಸ್ ಜತೆ ಮೈತ್ರಿ ಸರ್ಕಾರ ಬಿದ್ದ ಮೇಲೆ ನಾನು ಈ ರಾಜಕೀಯದ ಬಗ್ಗೆ ಜಿಗುಪ್ಸೆಗೊಂಡಿದ್ದೆ. ಪರಸ್ಪರ ಕಾಲೆಳೆಯುವ ಪ್ರವೃತ್ತಿ ಕಂಡು ನನಗೆ ರಾಜಕೀಯ ಸಾಕೆನಿಸಿತ್ತು. ಬಿಡದಿಯ ತೋಟ ಸೇರಿಕೊಂಡೆ. ನಂಗೆ ನೆಮ್ಮದಿ ಬೇಕಿತ್ತು. ಸಮ್ಮಿಶ್ರ ಸರ್ಕಾರ ಹೋಗುತ್ತೆ ಅಂತ ನಂಗೆ ಗೊತ್ತಿತ್ತು. ಜನತೆಯ ಕೆಲಸ ಮಾಡಲು ಹೆಜ್ಜೆ ಹೆಜ್ಜೆಗೂ ಅಡ್ಡಿಗಳು, ಒತ್ತಡಗಳು. ಯಾವುದೇ ಸಂದರ್ಭದಲ್ಲೂ ಸರ್ಕಾರ ಹೋಗುತ್ತದೆ ಅಂತ ಗೊತ್ತಿದ್ದೂ ನಾನು ಅಮೆರಿಕಕ್ಕೆ ಹೋದೆ. ಅಂತಹ ಹಂಗಿನ ಸರ್ಕಾರ ನನಗೆ ಬೇಕಿರಲಿಲ್ಲ. ಮುಂದಿನ ಸಲ ಇದೇ ರೀತಿಯ ಅತಂತ್ರ ಸ್ಥಿತಿ ಬಂದರೆ ಮುಂದೆಂದೂ ನಾನು ಮತ ಕೇಳಲು ಬರುವುದಿಲ್ಲ ಎಂದು ತಿಳಿಸಿದರು.

JDS Janata Parva 1

ಸರ್ಕಾರ ಹೋದ ಮೇಲೆ ನಾನು ಬಿಡದಿ ತೋಟಕ್ಕೆ ಬಂದ ಮೇಲೆ ದಿನವೂ ಕಾರ್ಯಕರ್ತರು ಬರುತ್ತಿದ್ದರು. ಪಕ್ಷದ ಮೇಲಿನ ಅವರ ಪ್ರೀತಿ, ಬದ್ಧತೆ ನನ್ನ ರಾಜಕೀಯ ನಿವೃತ್ತಿಯ ನಿರ್ಧಾರವನ್ನು ಬದಲಿಸಿತು. ಬಿಡದಿಯಲ್ಲಿ ನೀವು ಕೂತಿರುವ ಈ ಜಾಗ ಹಾಗೂ ಈ ತೋಟ ನನ್ನ ಪಾಲಿನ ಪುಣ್ಯಭೂಮಿ. ನನ್ನ ಕಷ್ಟದ ದುಡಿಮೆಯಿಂದ 1983ರಲ್ಲಿ ಈ ಭೂಮಿಯನ್ನು ಖರೀದಿ ಮಾಡಿದೆ. ಕೃಷಿ ಮಾಡುವ ಉದ್ದೇಶ ನನಗಿತ್ತು. ಆದರೆ ಈ ಭೂಮಿ ನನ್ನನ್ನು ರಾಜಕೀಯಕ್ಕೆ ಎಳೆದು ತಂದಿತು. ಒಂದು ದಿನ ನನ್ನನ್ನು ದೊಡ್ಡ ಸಂಖ್ಯೆಯ ಕಾರ್ಯಕರ್ತರು ತೋಟಕ್ಕೆ ಬಂದರು. ಅವರು ಒತ್ತಾಯ ಮಾಡಿ ಹೀಗೆ ಹೇಳಿದರು. ನೀವು ಬಿಡದಿಯಲ್ಲಿ ಭೂಮಿ ಹೊಂದಿದ್ದೀರಿ. ಆದರೆ, ರಾಮನಗರದಲ್ಲಿ ಜೆಡಿಎಸ್ 3ನೇ ಸ್ಥಾನದಲ್ಲಿದೆ. ಪಕ್ಷಕ್ಕಾಗಿ ತಾವು ಕೆಲಸ ಮಾಡಬೇಕು. ನಮಗೆ ಮಾರ್ಗದರ್ಶನ ಮಾಡಬೇಕು ಎಂದಾಗ ನಾನು ಅವರ ಒತ್ತಾಯಕ್ಕೆ ಮಣಿದು ರಾಜಕೀಯಕ್ಕೆ ಬರಬೇಕಾಯಿತು. ಆಗ ತಂದೆಯವರು ಚನ್ನಪಟ್ಟಣದಲ್ಲಿ ಸ್ಪರ್ಧೆ ಮಾಡಬೇಕು ಎಂದು ವರದೇಗೌಡರು ಭಾರೀ ಒತ್ತಡ ಹೇರಿದರು. ಆದರೆ ನಾನು ರಾಮನಗರದಲ್ಲಿ ಕಣಕ್ಕೆ ಇಳಿಯುವಂತೆ ಮನವಿ ಮಾಡಿದೆ. ಆಗ ದೇವೇಗೌಡರು ರಾಮನಗರದಿಂದ ಸ್ಪರ್ಧಿಸಿ ಗೆದ್ದು ಸಿಎಂ ಆದರು. ಒಂದು ವೇಳೆ ಆ ಘಟನೆ ನಡೆದಿದ್ದರೆ ನಾನಿಂದು ಇಲ್ಲಿ ನಿಂತು ಮಾತನಾಡುವ ಅವಕಾಶವೇ ಇರುತ್ತಿರಲಿಲ್ಲ ಅಂತ ಇತಿಹಾಸ ಮೆಲುಕು ಹಾಕಿದರು. ಇದನ್ನೂ ಓದಿ: 1 ಲಕ್ಷ ರೂಪಾಯಿ ಎಗರಿಸಿದ ಕೋತಿ- ಹಣ ಕಳೆದುಕೊಂಡವನಿಗೆ ಸಂಕಟ 

HD Kumaraswamy

ದೇವರ ಪ್ರೇರಣೆಯಿಂದ ಖರೀದಿ: ದೇವರ ಪ್ರೇರಣೆಯಿಂದ ನಾನು ಈ ಭೂಮಿ ಖರೀದಿ ಮಾಡಿದೆ ಎಂದು ಮತ್ತೆ ಹೇಳ ಬಯಸುತ್ತೇನೆ. ಅದೇ ನಂಬಿಕೆ, ಪ್ರೇರಣೆಯಿಂದ ಇಲ್ಲೇ ಈ ಕಾರ್ಯಗಾರ ನಡೆಯುತ್ತಿದೆ. ಪಕ್ಷದ ಕಚೇರಿಯಲ್ಲಿ ಅಥವಾ ರೆಸಾರ್ಟ್ ನಲ್ಲಿ ಮಾಡಬಹುದಿತ್ತು. ನಾನು ಹಾಗೆ ಮಾಡದೆ ಈ ಮಣ್ಣಿನ ಮಡಿಲಲ್ಲಿ ಈ ಕಾರ್ಯಕ್ರಮ ಮಾಡಲು ತೀರ್ಮಾನ ಮಾಡಿದೆ. ಈ ಕಾರ್ಯಾಗಾರ ಸ್ಥಳದ ಈ ಎರಡೂವರೆ ಎಕರೆ ಜಾಗದಲ್ಲಿ ನನ್ನ ತಂದೆ ತಾಯಿ ಹೆಸರಿನಲ್ಲಿ ಶಾಶ್ವತವಾದ  ಒಂದು ಅನಾಥಾಶ್ರಮ, ಒಂದು ದೇಗುಲ ಹಾಗೂ ಒಂದು ಛತ್ರ ಕಟ್ಟುವ ಉದ್ದೇಶ ನನ್ನದು. ಅದನ್ನು ಮಾಡಲು ಈ ಕಾರ್ಯಕ್ರಮದ ಜಾಗ ಮೀಸಲು ಇಟ್ಟಿದ್ದೇನೆ. ಇದು ಎಲ್ಲರಿಗೂ ಮುಕ್ತವಾಗಿರುತ್ತದೆ ಎಂದು ತಿಳಿಸಿದರು.

HDK SILENT medium

ಇಂತಹ ಜಾಗದಿಂದಲೇ ಪಕ್ಷ ಮತ್ತೆ ಪುಟಿದೇಳುತ್ತಿದೆ. ಈಗ ಎಲ್ಲವೂ ಶುಭಾರಂಭ ಆಗಿದೆ. ಇನ್ನು ಮುಂದುವರೆಸಿಕೊಂಡು ಹೋಗಬೇಕಿದೆ. ಅದನ್ನು ಎಲ್ಲರೂ ಚಾಚೂ ತಪ್ಪದೇ ಮಾಡಬೇಕಿದೆ. ಮುಂದೆ ನಾನು ಮುಖ್ಯಮಂತ್ರಿ ಆಗುವ ಉದ್ದೇಶಕ್ಕೆ ಮಾಡುತ್ತಿರುವ ಕಾರ್ಯಾಗಾರ ಇದಲ್ಲ. ರಾಜ್ಯದ ಭವಿಷ್ಯಕ್ಕಾಗಿ ಇದು. ಎಲ್ಲರೂ ಯೋಧರಂತೆ ಕೆಲಸ ಮಾಡಬೇಕು. ರಾಷ್ಟ್ರೀಯ ಪಕ್ಷಗಳು ದಲಿತ-ಹಿಂದುಳಿದ ಜನರಿಗೆ ಮಾಡಿದ್ದೇನು? ಒಮ್ಮೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಬಿಜೆಪಿ ಸರ್ಕಾರ ಹಾಗೂ ಸಿದ್ದರಾಮಯ್ಯ ಸರ್ಕಾರ ಈ ಜನರಿಗೆ ಕೊಟ್ಟಿದ್ದೇನೂ ಇಲ್ಲ. ಐದು ವರ್ಷ ಸಿಎಂ ಆಗಿದ್ದ ಅವರು ಎಷ್ಟೆಲ್ಲ ಮಾಡಬೇಕಿತ್ತು, ಆದರೆ ಮಾಡಲಿಲ್ಲ. ಸಿದ್ದರಾಮಯ್ಯ ಅವರು 85,000 ಕೋಟಿ ರೂಪಾಯಿ ಹಣವನ್ನು ದಲಿತ ಸಮುದಾಯದ ಉದ್ಧಾರಕ್ಕೆ ಕೊಟ್ಟಿದ್ದೇವೆ ಎಂದು ಹೇಳಿದ್ದರು. ಆದರೆ ಆಗಿದೆಯಾ? ಯಾರಿಗೆ ಹೋಯಿತು ಆ ದುಡ್ಡು? ಗಂಗಾ ಕಲ್ಯಾಣ ಯೋಜನೆಯಲ್ಲೂ 2016ರಿಂದ ಯಾರಿಗೂ ಉಪಯೋಗವಾಗಿಲ್ಲ. ನಿಜವಾದ ಒಬ್ಬ  ಫಲಾನುಭವಿಯನ್ನೂ ಗುರುತಿಸಿಲ್ಲ ಅಂತ ಕಿಡಿಕಾರಿದರು.

ಇನ್ನು ನರೇಂದ್ರ ಮೋದಿ ಅವರು ಸ್ವತಂತ್ರವಾಗಿ ಕೆಲಸ ಮಾಡಲು ಆಗುತ್ತಿಲ್ಲ. ಎಲ್ಲವನ್ನೂ ಆರೆಸ್ಸೆಸ್ ನಿರ್ಧಾರ ಮಾಡುತ್ತದೆ. ಸೂಪರ್ ಹೈಕಮಾಂಡ್ ಆಗಿ ಆರೆಸ್ಸೆಸ್ ಕೆಲಸ ಮಾಡುತ್ತಿದೆ ಅಂತ ಆರ್.ಎಸ್.ಎಸ್. ವಿರುದ್ದವೂ ಆಕ್ರೋಶ ಹೊರ ಹಾಕಿದರು.

TAGGED:hd kumaraswamyhdkjdsJDS High commandಎಚ್‌.ಡಿ. ಕುಮಾರಸ್ವಾಮಿಜೆಡಿಎಸ್‌ ಹೈಕಮಾಂಡ್‌ಬಿಡದಿ
Share This Article
Facebook Whatsapp Whatsapp Telegram

Cinema news

vidnyan mane and palash smriti
ಬೇರೊಬ್ಬಳೊಂದಿಗೆ ಏಕಾಂತದಲ್ಲಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪಾಲಶ್ – ಸ್ಮೃತಿ ಮಂಧಾನ ಗೆಳೆಯ ವಿಧ್ಯಾನ್ ಮಾನೆ
Bollywood Cricket Latest National Sports Top Stories
Kamal R Khan
ವಸತಿ ಕಟ್ಟಡದ ಮೇಲೆ ಫೈರಿಂಗ್ – ಬಾಲಿವುಡ್ ನಟ ಕಮಲ್ ಆರ್ ಖಾನ್ ಅರೆಸ್ಟ್
Bollywood Cinema Crime Latest Top Stories
Karunya Ram 1
ಸಿಸಿಬಿಯಿಂದ ನನಗೆ ನ್ಯಾಯ ಸಿಕ್ಕಿದೆ: ಕಾರುಣ್ಯ ರಾಮ್‌
Cinema Latest Sandalwood Top Stories
indira film 1
ಇಂದಿರಾ ಇದು ಗಾಂಧಿ ಕಥೆಯಲ್ಲ: ಕುತೂಹಲ ಮೂಡಿಸಿದ ಸಿನಿಮಾ
Cinema Latest Sandalwood

You Might Also Like

TIRUPATI LADDU
Latest

ತಿರುಪತಿ ಲಡ್ಡುಗೆ ನಕಲಿ ತುಪ್ಪ ಬಳಕೆ; ನೆಲ್ಲೂರ್ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದ CBI

Public TV
By Public TV
19 minutes ago
KR Puram Hit And Run Delivery Boy Death
Bengaluru City

ಬೆಂಗಳೂರಲ್ಲಿ ಹಿಟ್ & ರನ್‌ಗೆ ಡೆಲಿವರಿ ಬಾಯ್ ಬಲಿ

Public TV
By Public TV
39 minutes ago
pm modi rozgar mela
Latest

18ನೇ ರೋಜಗಾರ್ ಮೇಳದಲ್ಲಿ 61,000ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರ ವಿತರಿಸಿದ ಮೋದಿ

Public TV
By Public TV
40 minutes ago
Republic Day 2
Latest

Republic Day 2026 | ದೆಹಲಿ ಪರೇಡ್‌ಗೆ ಕರ್ನಾಟಕದ 12 ವಿದ್ಯಾರ್ಥಿಗಳು ಆಯ್ಕೆ

Public TV
By Public TV
50 minutes ago
Thawar Chand Gehlot Siddaramaiah
Bengaluru City

ಲೋಕಭವನಕ್ಕೆ ಭಾಷಣ ಕಳುಹಿಸಿದ್ದ ಸರ್ಕಾರ – ಗಣರಾಜ್ಯೋತ್ಸವ ಭಾಷಣಕ್ಕೆ ರಾಜ್ಯಪಾಲರ ಅಧಿಕೃತ ಮುದ್ರೆ

Public TV
By Public TV
1 hour ago
encounter
Crime

ಭದ್ರತಾ ಪಡೆಗಳ ಗುಂಡಿಗೆ ಐವರು ಮಹಿಳೆಯರು ಸೇರಿ 17 ಮಂದಿ ನಕ್ಸಲರು ಬಲಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?