Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಂಡವರ ಎಂಜಲು ಚಪ್ಪರಿಸುವ ಜಮೀರ್‌ಗೆ ಮುಸ್ಲಿಂ ಸಮುದಾಯದ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿದೆ?: JDS
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಂಡವರ ಎಂಜಲು ಚಪ್ಪರಿಸುವ ಜಮೀರ್‌ಗೆ ಮುಸ್ಲಿಂ ಸಮುದಾಯದ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿದೆ?: JDS

Bengaluru City

ಕಂಡವರ ಎಂಜಲು ಚಪ್ಪರಿಸುವ ಜಮೀರ್‌ಗೆ ಮುಸ್ಲಿಂ ಸಮುದಾಯದ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿದೆ?: JDS

Public TV
Last updated: February 5, 2023 5:12 pm
Public TV
Share
3 Min Read
zameer
SHARE

– ಜಮೀರ್‌ಗೆ ರಾಜಕೀಯ ಜನ್ಮಕೊಟ್ಟಿದ್ದು ಇದೇ ಕುಮಾರಣ್ಣ

ಬೆಂಗಳೂರು: ನಾಲಗೆಯ ಮೇಲೆ ಸದಾ ಕಂಡವರ ಎಂಜಲು ಚಪ್ಪರಿಸುವ ಜಮೀರ್ ಅಹಮದ್ (Zameer Ahmed), ನಿಮಗೆ ಮುಸ್ಲಿಂ ಸಮುದಾಯದ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿದೆ? ರಾಜಕಾರಣಕ್ಕಾಗಿ ನೀವು ಆ ಸಮುದಾಯವನ್ನು ಹೇಗೆ ನಡೆಸಿಕೊಂಡಿದ್ದಿರಿ? ಹೆಚ್.ಡಿ.ದೇವೇಗೌಡರ (H.D Devegowda) ಕುಟುಂಬ ಹೇಗೆ ನಡೆಸಿಕೊಳ್ಳುತ್ತಿದೆ ಎನ್ನುವುದು ದೇಶಕ್ಕೇ ಗೊತ್ತಿದೆ. ಭೂತದ ಬಾಯಲ್ಲಿ ಭಗವದ್ಗೀತೆ ಚೆನ್ನಾಗಿರಲ್ಲ ಎಂದು ಶಾಸಕ ಜಮೀರ್ ಅಹಮದ್ ವಿರುದ್ಧ ಜೆಡಿಎಸ್ (JDS) ಸರಣಿ ಟ್ವೀಟ್ ಮೂಲಕ ಕಿಡಿಕಾರಿದೆ.

Contents
  • – ಜಮೀರ್‌ಗೆ ರಾಜಕೀಯ ಜನ್ಮಕೊಟ್ಟಿದ್ದು ಇದೇ ಕುಮಾರಣ್ಣ
  • Live Tv

JDS 1

ಟ್ವೀಟ್‍ನಲ್ಲಿ ಏನಿದೆ?
ಅರಮನೆಯಂತಹ ವಿಲಾಸಿ ಭವನದಲ್ಲಿ ಐಷಾರಾಮಿ ಜೀವನ ನಡೆಸುವ ನಿಮಗೆ, ನಿಮ್ಮದೇ ಕ್ಷೇತ್ರದ ಗೌರಿಪಾಳ್ಯ, ಪಾದರಾಯನಪುರದ ಬಡ ಮುಸ್ಲಿಂ ಬಂಧುಗಳು ಎಂತಹ ಕಷ್ಟದ ಸ್ಥಿತಿಯಲ್ಲಿ ಇದ್ದಾರೆ ಎನ್ನುವುದು ಗೊತ್ತಾ? ಕಾಮಾಲೆ ಕಣ್ಣಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ಮೊಸಳೆ ಕಣ್ಣೀರು ಹಾಕುವ ನಿಮಗೆ ಮುಸ್ಲಿಮರ ನೈಜಸ್ಥಿತಿಯ ಬಗ್ಗೆ ಅರಿವಿದೆಯಾ? ಹರಕಲು ನಾಲಿಗೆಯ ಜಮೀರ್, ಮುಸ್ಲಿಂ ಸಮುದಾಯಕ್ಕೆ ಸೇರಿದ ನಿಮಗೆ ರಾಜಕೀಯ ಜನ್ಮಕೊಟ್ಟಿದು ಇದೇ ಕುಮಾರಣ್ಣ. ವಿಧಾನ ಸಭೆಯ ಮಾರ್ಷಲ್‍ಗಳು ಕುತ್ತಿಗೆಪಟ್ಟಿ ಹಿಡಿದು ಹೊರದಬ್ಬಿದಾಗ ಇದೇ ಕುಮಾರಣ್ಣ ನಿಮ್ಮ ಮಾನ ಕಾಪಾಡಿದ್ದು. ಅಂದು ಶಪಥಗೈದ ಕುಮಾರಣ್ಣ ನಿಮ್ಮನ್ನು ಶಾಸಕರನ್ನಾಗಿ ಮಾಡಿದ್ದು ನೆನಪಿಲ್ಲವೇ? ನಿಯತ್ತಿಲ್ಲದ ನಿಮಗೆ ಇದೆಲ್ಲಾ ಅರ್ಥವಾದೀತೆ? ಇದನ್ನೂ ಓದಿ: ಕಾಂಗ್ರೆಸ್ ಪಕ್ಷದ ತಾಯಿ ಬಂಜೆಯಾಗಿದ್ದಾಳೆ, ಇಲ್ಲಿ ಮಕ್ಕಳು ಹುಟ್ಟುವ ಪ್ರಶ್ನೆಯೇ ಇಲ್ಲ: ಲಕ್ಷ್ಮಣ ಸವದಿ

ನಾಲಗೆಯ ಮೇಲೆ ಸದಾ ಕಂಡವರ ಎಂಜಲು ಚಪ್ಪರಿಸುವ ಜಮೀರ್ ಅಹಮದ್, ನಿಮಗೆ ಮುಸ್ಲಿಂ ಸಮುದಾಯದ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿದೆ?ರಾಜಕಾರಣಕ್ಕಾಗಿ ನೀವು ಆ ಸಮುದಾಯವನ್ನು ಹೇಗೆ ನಡೆಸಿಕೊಂಡಿದ್ದಿರಿ? ಶ್ರೀ ಹೆಚ್.ಡಿ.ದೇವೇಗೌಡರ ಕುಟುಂಬ ಹೇಗೆ ನಡೆಸಿಕೊಳ್ಳುತ್ತಿದೆ ಎನ್ನುವುದು ದೇಶಕ್ಕೇ ಗೊತ್ತಿದೆ. ಭೂತದ ಬಾಯಲ್ಲಿ ಭಗವದ್ಗೀತೆ ಚೆನ್ನಾಗಿರಲ್ಲ.1/8

— Janata Dal Secular (@JanataDal_S) February 5, 2023

 

ಉಂಡ ಮನೆಯ ಇರಿಯುವ ಜಮೀರ್, ಸಿಎಂ ಇಬ್ರಾಹಿಂ (CM Ibrahim) ಅವರ ರಾಜಕೀಯ ಹಿತದ ಬಗ್ಗೆ ಈಗ ನೆನಪು ಬಂತಾ ನಿಮಗೆ? ಹಿಂದೆ, ಇದೇ ಸಿಎಂ ಇಬ್ರಾಹಿಂ ಅವರನ್ನು ಅದೇ ನಿಮ್ಮ ನಾಯಕ ಶಿಕಾಮಣಿ ಸಿದ್ದರಾಮಯ್ಯ (Siddaramaiah) ಅವರು ತಮ್ಮ ಸಂಪುಟಕ್ಕೆ ಯಾಕೆ ಸೇರಿಸಿಕೊಳ್ಳಲಿಲ್ಲ? ಹೋಗಲಿ, ಪ್ರತಿಪಕ್ಷ ನಾಯಕರನ್ನಾಗಿ ಮಾಡುವ ಅವಕಾಶವೂ ಇತ್ತು. ಅದನ್ನು ಮಾಡಲಿಲ್ಲ ಯಾಕಪ್ಪಾ ಜಮೀರ್? ಇಬ್ರಾಹಿಂ ಅವರನ್ನು ನಾವು ಅತ್ಯಂತ ಗೌರವಯುತವಾಗಿ ನಡೆಸಿಕೊಂಡಿದ್ದೇವೆ. ಪಕ್ಷಕ್ಕೆ ಬಂದಾಗ ಪ್ರೀತಿಯಿಂದ ಬರ ಮಾಡಿಕೊಂಡಿದ್ದೇವೆ. ಈಗ ಅವರು ನಮ್ಮ ಅಧ್ಯಕ್ಷರು. ನಿಮ್ಮ ಗಂಜಿ ಕೇಂದ್ರವಾಗಿರುವ ಕಾಂಗ್ರೆಸ್ ಪಕ್ಷದಲ್ಲಿ ಓರ್ವ ಮುಸ್ಲಿಂ ನಾಯಕ ಪಕ್ಷದ ಅಧ್ಯಕ್ಷರಾಗಲು ಸಾಧ್ಯವೇ? ಕಾಮಾಲೆ ಕಣ್ಣಲ್ಲಿ ಕೆಂಡ ಸುರಿದುಕೊಂಡರೆ ಯಾರಿಗೆ ನಷ್ಟ ಜಮೀರ್? ಇದನ್ನೂ ಓದಿ: 13 ಜನರನ್ನ ಮಂಚದ ಮೇಲೆ ಮಲಗಿಸಿ ಸರ್ಕಾರ ತಂದ್ರಲ್ಲ ನಾಚಿಕೆ ಆಗ್ಬೇಕು ನಿಮ್ಗೆ – ಸಿಎಂ ಇಬ್ರಾಹಿಂ

ಇಬ್ರಾಹಿಂ ಅವರ ಪುತ್ರನ ಬಗ್ಗೆ ವಿಷಕಾರುವ ಕೆಟ್ಟ ಪ್ರಯತ್ನ ಮಾಡಿದ್ದೀರಿ. ಹುಮನಾಬಾದ್‍ನಲ್ಲಿ ಯುವಕ ಸಿ.ಎಂ ಫಯಾಜ್ ಗೆದ್ದೇ ಗೆಲ್ಲುತ್ತಾರೆ. ನಿಮಗೂ ಈ ವಿಷಯ ಚೆನ್ನಾಗಿ ಗೊತ್ತು. ಪಂಚರತ್ನ ರಥಯಾತ್ರೆ ಈ ಕ್ಷೇತ್ರದಲ್ಲಿ ಹೇಗೆ ಅಬ್ಬರಿಸಿತು ಎನ್ನುವ ಮಾಹಿತಿ ಪಡೆದುಕೊಳ್ಳಿ. ನಿಮ್ಮದೆ ಸಮುದಾಯದ ತರುಣನ ಮೇಲೆ ಈ ಪರಿಯ ಮತ್ಸರ ಏಕೆ ಜಮೀರ್? ಇಬ್ರಾಹಿಂ ಅವರನ್ನು ಕಾಂಗ್ರೆಸ್ ಪಕ್ಷದಲ್ಲಿ ಮುಗಿಸಲು ಹೊರಟಿದ್ದು ಸುಳ್ಳಾ? ನಿಮ್ಮ ರೀತಿ ಇಬ್ರಾಹಿಂ ಅವರು ರಾಜಕೀಯದಲ್ಲಿ ಸಭ್ಯತೆಯ ಎಲ್ಲೆ ಮೀರಿದವರಲ್ಲ. ಆದರೆ, ಸಭ್ಯತೆಯ ಗಂಧಗಾಳಿ ಗೊತ್ತಿಲ್ಲದ ನಿಮಗೆ ರಾಜಕೀಯ ಜನ್ಮಕೊಟ್ಟ ಮಾತೃಪಕ್ಷದ ಬಗ್ಗೆ ಇರುವ ಮತ್ಸರ ನಿಮ್ಮ ಕೊಳಕು ಮನಃಸ್ಥಿತಿಗೆ ಹಿಡಿದ ಕನ್ನಡಿ. ಇಬ್ರಾಹಿಂ ಅವರನ್ನು ಕಾಂಗ್ರೆಸ್‍ನಲ್ಲಿ ಮುಗಿಸಲು ಷಡ್ಯಂತ್ರ ರೂಪಿಸಿದಂತೆ, ಈಗ ಅವರ ಮಗನ ವಿಷಯದಲ್ಲೂ ದುಷ್ಟ ತಂತ್ರ ಹೂಡಲು ಹೊರಟಿದ್ದೀರಿ. ಸಿದ್ದಹಸ್ತನ ಜೊತೆ ಸೇರಿ ಮುಸ್ಲಿಂ ನಾಯಕರನ್ನು ಒಬ್ಬೊಬ್ಬರನ್ನಾಗಿಯೇ ಮುಗಿಸಿದ ಮಿಸ್ಟರ್ ಜಮೀರ್, ಮುಸ್ಲಿಂ ಸಮುದಾಯಕ್ಕೆ ನಿಮಗಿಂತ ದೊಡ್ಡ ಶತ್ರು ಬೇರೆ ಯಾರೂ ಇಲ್ಲ. ಸಮುದಾಯಕ್ಕೆ ಈ ಸತ್ಯ ಅರ್ಥವಾಗಿದೆ ಎಂದು ಸರಣಿ ಟ್ವೀಟ್ ಮಾಡಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:h d devegowdajdssiddaramaiahzameer ahmedಕಾಂಗ್ರೆಸ್ಜಮೀರ್ ಅಹಮದ್ ಖಾನ್ಜೆಡಿಎಸ್ಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Marriage
Chikkamagaluru

ಮದ್ವೆಗೆ ಹೆಣ್ಣು ಸಿಗಲಿಲ್ಲ ಅಂತ 26 ವರ್ಷದ ಯುವಕ ಆತ್ಮಹತ್ಯೆ

Public TV
By Public TV
9 minutes ago
CRIME
Crime

ಕುಡಿಯೋಕೆ ನೀರು ಕೇಳಲು ಬಂದು ರೇಪ್ – ಕೈ ಕಟ್ಟಿ, ಚಾಕು ತೋರಿಸಿ ಅತ್ಯಾಚಾರವೆಸಗಿದ ಕಾಮುಕ

Public TV
By Public TV
18 minutes ago
ಸಾಂದರ್ಭಿಕ ಚಿತ್ರ
Bellary

ಅಪರಿಚಿತ ವಾಹನ ಡಿಕ್ಕಿ – ತೀವ್ರವಾಗಿ ಗಾಯಗೊಂಡು 3 ವರ್ಷದ ಗಂಡು ಚಿರತೆ ಸಾವು

Public TV
By Public TV
54 minutes ago
Shashi Tharoor
Latest

ಕೇರಳದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಶಶಿ ತರೂರ್ ಮೇಲೆ ಹಲ್ಲೆಗೆ ಯತ್ನ – ಐವರ ವಿರುದ್ಧ FIR

Public TV
By Public TV
56 minutes ago
Lorry 2
Bengaluru City

LPG, CNG ಮಧ್ಯೆ ಹೈವೇಗಳಲ್ಲಿ ಡಿಸೇಲ್ ಕೊರತೆ – ಸರಕು ವಾಹನಗಳ ಬಾಡಿಗೆಯೂ ಏರಿಕೆ!

Public TV
By Public TV
1 hour ago
Hubballi Love Jihad
Bengaluru City

ಜಿಮ್ ಟ್ರೈನರ್‌ನಿಂದ ಲವ್ ಜಿಹಾದ್ – ಹಿಂದೂ ಯುವತಿಯರೇ ಟಾರ್ಗೆಟ್, ವಿಡಿಯೋ ಇಟ್ಕೊಂಡು ಬ್ಲಾಕ್‌ಮೇಲ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?