Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗೋಸುಂಬೆ ಉರುಫ್‌ ಊಸರವಳ್ಳಿ ಕಾಂಗ್ರೆಸ್‌ ಪಕ್ಷಕ್ಕೆ ಒಳಗೊಂದು ಹೊರಗೊಂದು ವೇಷ: ಜೆಡಿಎಸ್‌ ವಾಗ್ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗೋಸುಂಬೆ ಉರುಫ್‌ ಊಸರವಳ್ಳಿ ಕಾಂಗ್ರೆಸ್‌ ಪಕ್ಷಕ್ಕೆ ಒಳಗೊಂದು ಹೊರಗೊಂದು ವೇಷ: ಜೆಡಿಎಸ್‌ ವಾಗ್ದಾಳಿ

Bengaluru City

ಗೋಸುಂಬೆ ಉರುಫ್‌ ಊಸರವಳ್ಳಿ ಕಾಂಗ್ರೆಸ್‌ ಪಕ್ಷಕ್ಕೆ ಒಳಗೊಂದು ಹೊರಗೊಂದು ವೇಷ: ಜೆಡಿಎಸ್‌ ವಾಗ್ದಾಳಿ

Public TV
Last updated: January 30, 2024 8:36 am
Public TV
Share
2 Min Read
JDS CONGRESS
SHARE

ಬೆಂಗಳೂರು: ಗೋಸುಂಬೆ ಉರುಫ್‌ ಊಸರವಳ್ಳಿ ಕಾಂಗ್ರೆಸ್‌ (Congress) ಪಕ್ಷಕ್ಕೆ ಒಳಗೊಂದು ಹೊರಗೊಂದು ವೇಷ. ಈ ದೇಶದಲ್ಲಿ ಯಾವುದಾದರೂ ಛದ್ಮವೇಷಧಾರಿ ಪಕ್ಷವಿದ್ದರೆ ಅದು ಕಾಂಗ್ರೆಸ್‌ ಮಾತ್ರ ಎಂದು ಜೆಡಿಎಸ್‌ (JDS) ವಾಗ್ದಾಳಿ ನಡೆಸಿದೆ.

ಕಾಂಗ್ರೆಸ್‌ ಟೀಕೆಗಳಿಗೆ ಎಕ್ಸ್‌ ಪೋಸ್ಟ್‌ನಲ್ಲಿ ಪ್ರತ್ಯುತ್ತರ ನೀಡಿರುವ ಜೆಡಿಎಸ್‌, ಗೋಸುಂಬೆ ಉರುಫ್ ಊಸರವಳ್ಳಿ ಕಾಂಗ್ರೆಸ್ ಪಕ್ಷಕ್ಕೆ ಒಳಗೊಂದು ಹೊರಗೊಂದು ವೇಷ. ಈ ದೇಶದಲ್ಲಿ ಯಾವುದಾದರೂ ಛದ್ಮವೇಷದಾರಿ ಪಕ್ಷವಿದ್ದರೆ ಅದು ಕಾಂಗ್ರೆಸ್ ಮಾತ್ರ. ಹೆಚ್‌.ಡಿ.ಕುಮಾರಸ್ವಾಮಿ ಅವರು ಹಾಗಲ್ಲ. ಏನಾದರೂ ಹೇಳಬೇಕೆಂದರೆ; ನೇರ, ದಿಟ್ಟ, ನಿಷ್ಠುರ. ಏನೇ ಬಂದರೂ ಎದುರಿಸುವ ಕೆಚ್ಚು ಅವರದ್ದು, ಪಲಾಯನ ಮಾಡುವ ಪೈಕಿ ಅವರಲ್ಲ. ಎಂದು ತಿಳಿಸಿದೆ. ಇದನ್ನೂ ಓದಿ: ವಾಹನ ಸವಾರರಿಗೆ ಗುಡ್‌ನ್ಯೂಸ್ – ಪೀಣ್ಯ ಫ್ಲೈಓವರ್‌ನಲ್ಲಿ ಹೆವಿ ವೆಹಿಕಲ್ ಸಂಚಾರಕ್ಕೆ ಗ್ರೀನ್ ಸಿಗ್ನಲ್

ಗೊಸುಂಬೆ ಉರುಫ್ ಊಸರವಳ್ಳಿ ಕಾಂಗ್ರೆಸ್ ಪಕ್ಷಕ್ಕೆ ಒಳಗೊಂದು ಹೊರಗೊಂದು ವೇಷ. ಈ ದೇಶದಲ್ಲಿ ಯಾವುದಾದರೂ ಛದ್ಮವೇಷದಾರಿ ಪಕ್ಷವಿದ್ದರೆ ಅದು ಕಾಂಗ್ರೆಸ್ ಮಾತ್ರ. ಶ್ರೀ @hd_kumaraswamy ಅವರು ಹಾಗಲ್ಲ. ಏನಾದರೂ ಹೇಳಬೇಕೆಂದರೆ; ನೇರ, ದಿಟ್ಟ, ನಿಷ್ಠುರ. ಏನೇ ಬಂದರೂ ಎದುರಿಸುವ ಕೆಚ್ಚು ಅವರದ್ದು, ಪಲಾಯನ ಮಾಡುವ ಪೈಕಿ ಅವರಲ್ಲ. 1/5

RSS ಬಗ್ಗೆ…

— Janata Dal Secular (@JanataDal_S) January 30, 2024

RSS ಬಗ್ಗೆ ಕುಮಾರಸ್ವಾಮಿ ಅವರು ಹಿಂದೆ ಮಾತನಾಡಿದ್ದಾರೆ, ಬರೆದಿದ್ದಾರೆ.. ನಿಜ. ಟೀಕೆ ಮಾಡಿದ್ದಾರೆನ್ನುವುದೂ ಹೌದು. ಹಾಗೆಯೇ, ಕಲ್ಲಡ್ಕ ಪ್ರಭಾಕರ ಭಟ್ಟರು ನಡೆಸುತ್ತಿರುವ ಶ್ರೀರಾಮ ವಿದ್ಯಾಲಯಕ್ಕೆ ಭೇಟಿ ನೀಡಿದಾಗಲೂ ಅವರು ಏನು ಹೇಳಬೇಕೋ ಅದನ್ನೇ ಹೇಳಿದ್ದಾರೆ. ಕಾಮಾಲೆ ಕಣ್ಣಿನ, ಕುತ್ಸಿತ ಕಿವಿಯ ಕಾಂಗ್ರೆಸ್‌ಗೆ ಅದೆಲ್ಲಾ ಗೊತ್ತಾಗುವುದೇ ಇಲ್ಲ ಎಂದು ಟಾಂಗ್‌ ಕೊಟ್ಟಿದೆ.

ಪ್ರಭಾಕರ ಭಟ್ಟರ ಶಾಲೆಯಲ್ಲಿ, ನಿನ್ನೆ ದಿನ ಮಂಡ್ಯದಲ್ಲಿ ಕುಮಾರಸ್ವಾಮಿ ಅವರು ಮಾಡಿರುವ ಭಾಷಣಗಳನ್ನು ಕಾಂಗ್ರೆಸ್ಸಿಗರು ಕೇಳಲಿ. ಕೊಳೆತು ನಾರುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಕೊಚ್ಚೆಯೇ ಸಹ್ಯವಾಗಿದೆಯೇ ಹೊರತು ಸತ್ಯವಲ್ಲ. ವೀರೇಂದ್ರ ಪಾಟೀಲರ ಕಾಲದಲ್ಲಿ (1989) ಚನ್ನಪಟ್ಟಣ, ರಾಮನಗರದಲ್ಲಿ ಬೆಂಕಿ ಹಾಕಿ ರಾಜಕೀಯ ಬೇಳೆ ಬೇಯಿಸಿಕೊಂಡ ಗಿರಾಕಿಗಳು ನೀವು? ಹಿರಿಯರಾದ ವೀರೇಂದ್ರ ಪಾಟೀಲರ ಜೀವಕ್ಕೆ ಕ್ಷೋಭೆ ಕೊಟ್ಟ ಆಸಾಮಿಗಳೂ ನೀವೇ? ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ ವಾಗ್ದಾಳಿ ನಡೆಸಿದೆ. ಇದನ್ನೂ ಓದಿ: ಕೆ.ಎನ್.ರಾಜಣ್ಣ, ಶಾಮನೂರು ಶಿವಶಂಕರಪ್ಪಗೆ ಕೈ ಹೈಕಮಾಂಡ್ ವಾರ್ನಿಂಗ್

ಕೇಸರಿ ಬಗ್ಗೆ ಹೇಳಿದ್ದೀರಿ, ಸರಿ. ಅದು ನಮ್ಮ ಸಂಪ್ರದಾಯ, ಸಂಸ್ಕೃತಿಯ ಪ್ರತೀಕ. ನಮ್ಮ ನಂಬಿಕೆಯ ಹೆಗ್ಗುರುತು. ಸ್ವಧರ್ಮದ ಬಗ್ಗೆ ಗೌರವವೇ ಇಲ್ಲದವರಿಗೆ, ಓಲೈಕೆ ಮಾಡಿಕೊಂಡೇ ಒಲೆ ಉರಿಸಿಕೊಳ್ಳುವವರಿಗೆ ಆಚಾರ ವಿಚಾರಗಳ ಪಾವಿತ್ರ್ಯತೆ ಎಲ್ಲಿ ಗೊತ್ತಾಗಬೇಕು? ಕೊಳಕು ಮನಸ್ಸಿನವರಿಗೆ ಕೇಸರಿಯೂ ರಾಜಕೀಯದ ಸರಕು ಎಂದು ಚಾಟಿ ಬೀಸಿದೆ.

ಕುಮಾರಸ್ವಾಮಿ ಅವರು RSS ಕಾಳಾಲೋ, ಸೇವಕರೋ ಎನ್ನುವುದು ಕಾಲವೇ ನಿರ್ಣಯಿಸುತ್ತದೆ. ಆದರೆ, ನಿಮ್ಮ ಸಿದ್ದಹಸ್ತನಂತೆ ಉಂಡ ಮನೆಗೆ ಎರಡು ಬಗೆಯುವ ಪೈಕಿ ಅವರಲ್ಲ. ಮಾತೃಭೂಮಿಯನ್ನು, ಪರಂಪರಾಗತ ಆಚಾರ-ವಿಚಾರ, ನಂಬಿಕೆಗಳಿಗೆ ಕೊಳ್ಳಿ ಇಟ್ಟು ಜಾತಿ-ಧರ್ಮಗಳ ನಡುವೆ ವಿಷಪ್ರಾಶನ ಮಾಡಿ, ಅದನ್ನೇ ಅಮಲೇರಿಸಿಕೊಳ್ಳುವ ಗತಿಗೆಟ್ಟ ಕಾಂಗ್ರೆಸ್ ಮನಸ್ಥಿತಿಗೆ ಆ ಹನುಮದೇವರೇ ಅಂತ್ಯ ಕಾಣಿಸುತ್ತಾನೆ. ಇದು ಸತ್ಯ.. ಸತ್ಯ ಎಂದು ತಿರುಗೇಟು ನೀಡಿದೆ. ಇದನ್ನೂ ಓದಿ: ವಿಷ್ಣುವಿನ 11ನೇ ಅವತಾರವಾಗಲು ಮೋದಿ ಪ್ರಯತ್ನಿಸ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

TAGGED:congressjdsಕಾಂಗ್ರೆಸ್ಜೆಡಿಎಸ್
Share This Article
Facebook Whatsapp Whatsapp Telegram

Cinema news

yash
ನಟ ಯಶ್ ಬರ್ತಡೇಗೆ ರಸ್ತೆಯಲ್ಲಿ ಬ್ಯಾನರ್ ಹಾಕಿದ್ದಕ್ಕೆ FIR
Bengaluru City Cinema Districts Karnataka Latest Main Post Sandalwood
YASH 5
ಮುಂಬೈ ಏರ್‌ಪೋರ್ಟ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ಬಿದ್ದ ರಾಕಿಭಾಯ್
Cinema Sandalwood
TVK Vijay
ಕರೂರು ಕಾಲ್ತುಳಿತ ಪ್ರಕರಣ – 7 ಗಂಟೆಗೂ ಹೆಚ್ಚು ಕಾಲ ನಟ ವಿಜಯ್‌ಗೆ CBI ಗ್ರಿಲ್
Bengaluru City Cinema Latest Sandalwood Top Stories
Toxic
ಯಶ್ ʻಟಾಕ್ಸಿಕ್ʼ ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!
Bengaluru City Cinema Districts Karnataka Latest Sandalwood Top Stories

You Might Also Like

Congress BJP
Bengaluru City

ಜ.20, 21ರಂದು ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ: ಬಿಜೆಪಿ-ಕಾಂಗ್ರೆಸ್ ನಡುವೆ ರಣರಂಗ?

Public TV
By Public TV
2 minutes ago
Coffee beans washed away by rain in Chikkamagaluru
Chikkamagaluru

ಚಿಕ್ಕಮಗಳೂರಲ್ಲಿ ವರ್ಷದ ಮೊದಲ ಮಳೆಗೆ ಕೊಚ್ಚಿ ಹೋದ ಕಾಫಿ ಬೀಜ – ರೈತರ ಕಣ್ಣೀರು

Public TV
By Public TV
29 minutes ago
CT Ravi 1
Bengaluru City

ನರೇಗಾ ಬಗ್ಗೆ ಚರ್ಚೆಗೆ ಸಿದ್ಧ, ಸರ್ಕಾರ ವಿಶೇಷ ಅಧಿವೇಶನ ನಡೆಸಲಿ – ಸಿ.ಟಿ.ರವಿ

Public TV
By Public TV
31 minutes ago
sabarimala kerala karnataka
Chikkaballapur

ಕೇರಳಿಗರ ಕ್ಯಾತೆ; ಕರ್ನಾಟಕದ ಮಾಲಾಧಾರಿಗಳ ವಾಹನಗಳನ್ನು 100 ಕಿಮೀ ದೂರದಲ್ಲೇ ತಡೆದ ಕೇರಳ ಸರ್ಕಾರ

Public TV
By Public TV
1 hour ago
Operation Gang Bust Delhi Police Arrests 280 Gangsters In 48 hour Crackdown
Crime

ಆಪರೇಷನ್ ಗ್ಯಾಂಗ್ ಬಸ್ಟ್ | 48 ಗಂಟೆಯಲ್ಲಿ 280 ದರೋಡೆಕೋರರನ್ನು ಬಂಧಿಸಿದ ದೆಹಲಿ ಪೊಲೀಸರು

Public TV
By Public TV
1 hour ago
rahul gandhi mysuru airport
Latest

ಮೈಸೂರಿನಲ್ಲಿ ರಾಹುಲ್ ಗಾಂಧಿ ಭೇಟಿಯಾದ ಸಿಎಂ, ಡಿಸಿಎಂ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?