Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿ ಹಿಂದಿ ಭಾಷಣ ಕೇಳಿ ಮರುಳಾಗಬೇಡಿ, ನನಗೆ ಕೆಲ್ಸ ಮಾಡೋ ಒಂದು ಅವಕಾಶ ನೀಡಿ: ಎಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮೋದಿ ಹಿಂದಿ ಭಾಷಣ ಕೇಳಿ ಮರುಳಾಗಬೇಡಿ, ನನಗೆ ಕೆಲ್ಸ ಮಾಡೋ ಒಂದು ಅವಕಾಶ ನೀಡಿ: ಎಚ್‍ಡಿಕೆ

Districts

ಮೋದಿ ಹಿಂದಿ ಭಾಷಣ ಕೇಳಿ ಮರುಳಾಗಬೇಡಿ, ನನಗೆ ಕೆಲ್ಸ ಮಾಡೋ ಒಂದು ಅವಕಾಶ ನೀಡಿ: ಎಚ್‍ಡಿಕೆ

Public TV
Last updated: November 7, 2017 7:31 pm
Public TV
Share
3 Min Read
HDK MSR 8
SHARE

ಮೈಸೂರು: ಪ್ರಧಾನಿ ಮೋದಿಯವರ ಹಿಂದಿ ಭಾಷಣ ಕೇಳಿ ಯಾರು ಮರುಳಾಗಬೇಡಿ, ನನಗೆ ಕೆಲಸ ಮಾಡುವ ಒಂದು ಅವಕಾಶವನ್ನು ಕೊಡಿ ಎಂದು ವಿಕಾಸ ಯಾತ್ರೆಯಲ್ಲಿ ಎಚ್.ಡಿ ಕುಮಾರಸ್ವಾಮಿ ಅವರು ಮತದಾರರಲ್ಲಿ ಮನವಿ ಮಾಡಿದ್ದಾರೆ.

ನಾಡಿನ ಅಭಿವೃದ್ಧಿಗಾಗಿ ಜೆಡಿಎಸ್ ಪಕ್ಷವನ್ನು ಬೆಂಬಲಿಸಿ. ಈ ಹಿಂದಿನ 20 ತಿಂಗಳ ಆಡಳಿತ ಕೇವಲ ಸಿನಿಮಾ ಟ್ರೇಲರ್ ಮಾತ್ರ. ಅಂದು ನಿಮ್ಮ ಪೂರ್ಣ ಅಶೀರ್ವಾದದಿಂದ ನಾನು ಸಿಎಂ ಆಗಿರಲಿಲ್ಲ. ಇಂದು ನಿಮ್ಮ ಆಶೀರ್ವಾದ ಬೇಕಿದೆ ಎಂದು ಹೇಳಿದರು.

HDK MSR 2

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ ಜೆಡಿಎಸ್ ಪಕ್ಷವು ಮತದಾರರನ್ನು ಸೆಳೆಯಲು ಇಂದಿನಿಂದ ಪ್ರಚಾರ ಕಾರ್ಯ ಆರಂಭಿಸಿದೆ. ಸಮಾವೇಶಕ್ಕೂ ಮುನ್ನ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿದ ಮಾಜಿ ಪ್ರಧಾನಿ ದೇವೇಗೌಡ ದಂಪತಿ ಹಾಗೂ ಎಚ್.ಡಿ ಕುಮಾರಸ್ವಾಮಿ ದಂಪತಿ ವಿಶೇಷ ಪೂಜೆ ಸಲ್ಲಿಸಿದರು. ಪೂಜೆಯ ನಂತರ ಎಚ್‍ಡಿಡಿ ವಿಕಾಸ ಯಾತ್ರೆಗೆ ಚಾಲನೆ ನೀಡಿದರು. ವಿಕಾಸ ವಾಹಿನಿ ಬಸ್ ನಲ್ಲಿ ಯಾತ್ರೆ ಆರಂಭಿಸಿದ ಕುಮಾರಸ್ವಾಮಿ ಅವರು ನಂಜನಗೂಡು, ಎಚ್.ಡಿ.ಕೋಟೆ, ದಟ್ಟಗಳ್ಳಿ, ರಾಮಕೃಷ್ಣ ನಗರ ಬೋಗಾದಿ, ಹಿನಕಲ್ ವೃತ್ತಗಳ ಮೂಲಕ ಮೆರವಣಿಗೆ ನಡೆಸಿ ಸಮಾವೇಶ ಪ್ರದೇಶಕ್ಕೆ ತೆರಳಿದರು.

ಸಮಾವೇಶದಲ್ಲಿ ನೆರೆದಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಗುಂಡ್ಲುಪೇಟೆ ಮತ್ತು ನಂಜನಗೂಡು ಚುನಾವಣೆಯಲ್ಲಿ ಸಿದ್ದರಾಮಯ್ಯ ಹೇಗೆ ಚುನಾವಣೆ ಗೆದಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಪೊಲೀಸ್ ಜೀಪ್‍ನಲ್ಲಿ ಹಣ ಸಾಗಿಸಿದ್ದಾರೆ. ಈಗ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಬಂದರೆ ನೂರು ಕೋಟಿ ಬೇಕಾದರು ಖರ್ಚು ಮಾಡುತ್ತಾರೆ. ಈಗ ಅವರಿಗೆ ದುಡ್ಡಿಗೆ ಕಡಿಮೆ ಇಲ್ಲ. ದೇವೆಗೌಡರ ಜೊತೆ ಇದ್ದ ಸಿದ್ದರಾಮಯ್ಯ ಬೇರೆ, ಪ್ರಸ್ತುತ ಸಿದ್ದರಾಮಯ್ಯ ಬೇರೆ ಎಂದು ವಾಗ್ದಾಳಿ ನಡೆಸಿದರು.

HDK MSR 9

ಸಿದ್ದರಾಮಯ್ಯ ಅವರೊಬ್ಬರು ಮಾತ್ರ ಕುರಿ ಕಾದಿಲ್ಲ. ನಾವು ಗೊಬ್ಬರ ಹೊತ್ತಿದ್ದೇವೆ. ರೈತರ ಕಷ್ಟದ ಅರಿವು ನನಗಿದೆ. ನಿಮಗೆ ರೈತರ ಬಗ್ಗೆ ಕಾಳಜಿ ಇದ್ದಿದ್ದರೆ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕಿತ್ತು. ರೈತರ ಸಾಲ ಮನ್ನಾ ಮಾಡಲು ಮಾತ್ರ ಒಪ್ಪುತ್ತಿಲ್ಲ. ನಾವು ಸುಳ್ಳು ಹೇಳುತ್ತೇವೆ ಅಂತಾ ಸಿಎಂ ಹೇಳುತ್ತಾರೆ. ಸಿಎಂ ಒಬ್ಬರೇ ನಾಡಿನಲ್ಲಿ ಸತ್ಯಹರಿಶ್ಚಂದ್ರ. ಸತ್ಯಹರಿಶ್ಚಂದ್ರ ಸಿಎಂ ನೀವು ಎಷ್ಟು ಸಾಲ ಮಾಡಿದ ಮಾಡಿದ್ದೀರಾ ಅಂತಾ ಜನರಿಗೆ ತಿಳಿಸಿ ಎಂದು ಕಿಡಿಕಾರಿದರು.

ಸಿಎಂ ಸಿದ್ದರಾಮಯ್ಯ ಚಾಮಂಡೇಶ್ವರಿ ಕ್ಷೇತ್ರಕ್ಕೆ ಬರುತ್ತಾರೆ ಅಂತಾ ಈ ಸಮಾವೇಶ ಮಾಡುತ್ತಿಲ್ಲ. ಸಿಎಂ ಸ್ಥಾನಕ್ಕಾಗಿ ಜೆಡಿಎಸ್ ಹಾಳು ಮಾಡಿದವರು ಸಿದ್ದರಾಮಯ್ಯ. ತಮ್ಮನ್ನು ರಾಜಕೀಯವಾಗಿ ಬೆಳೆಸಿದ ದೇವೇಗೌಡರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿಸಿದ ಪುಣ್ಯಾತ್ಮ. ಅದನ್ನು ನಾನು ಯಾವತ್ತೂ ಮರೆಯುವುದಿಲ್ಲ. ಮಾಜಿ ಸಂಸದ ಎಚ್. ವಿಶ್ವನಾಥ್ ನನ್ನನ್ನು ಮತ್ತು ನನ್ನ ತಂದೆ ಅವರನ್ನು ಟೀಕಿಸಿದ್ದಾರೆ. ಅವರ ಟೀಕೆ ವೈಯಕ್ತಿಕವಾಗಿರಲಿಲ್ಲ. ಜನರ ಶಕ್ತಿ ಮುಂದೆ ಸಿದ್ದರಾಮಯ್ಯರ ದರ್ಪ, ಹಣ ಬಲ ನಡೆಯಲ್ಲ. ಚಾಮುಂಡೇಶ್ವರಿ ಕ್ಷೇತ್ರದ ವಿಚಾರದಲ್ಲಿ ಸಿದ್ದರಾಮಯ್ಯ ನಮಗೆ ನಗಣ್ಯ ಎಂದರು.

HDK MSR 1

ನನ್ನ ಆರೋಗ್ಯ ಸಮಸ್ಯೆಯಿಂದ ಪೂರ್ಣ ಪ್ರಮಾಣದಲ್ಲಿ ಗುಣಮುಖನಾಗಿದ್ದು, ಮರುಜನ್ಮವನ್ನು ಪಡೆದಿದ್ದೇನೆ. ಇದನ್ನು ಜನರಿಗಾಗಿ ಮುಡಿಪಾಗಿಡುತ್ತೇನೆ. ಈ ಹಿಂದೆ ಯಡಿಯೂರಪ್ಪ ಅವರಿಗೆ ಅಧಿಕಾರ ಹಸ್ತಾಂತರ ಮಾಡುವ ವಿಚಾರದಲ್ಲಿ ನಾನು ತಪ್ಪು ಮಾಡಿರಲಿಲ್ಲ. ಆದರೂ 10 ವರ್ಷ ಶಿಕ್ಷೆ ಅನುಭವಿಸಿದ್ದೇನೆ. ವೀರಶೈವ ಸಮಾಜದ ಬಂಧುಗಳೇ ನಾನು ನಿಮ್ಮವನು. ಜಾತಿ ಹೆಸರಿನ ವ್ಯಾಮೋಹಕ್ಕೆ ನನ್ನ ದ್ವೇಷಿಸಬೇಡಿ. ಯಡಿಯೂರಪ್ಪ ಅವರಿಗೆ ಅಂದು ಅಧಿಕಾರ ಸಿಗದಿದ್ದಕ್ಕೆ ಬಿಜೆಪಿ ಅವರೇ ಕಾರಣ ಅದನ್ನು ವೀರಶೈವರು ಅರ್ಥ ಮಾಡಿಕೊಳ್ಳಬೇಕಿದೆ. ಇಪ್ಪತ್ತು ತಿಂಗಳು ನಮ್ಮ ತಂದೆಗೆ ನೋವು ಕೊಟ್ಟು ಸಿಎಂ ಆದೆ. ಅವರಿಗೆ ನೋವು ಉಂಟಾಗದಂತೆ ಈ ಬಾರಿ ಸಿಎಂ ಆಗಬೇಕು. ಅದಕ್ಕೆ ಜನರ ಆಶೀರ್ವಾದ ಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಜೆಡಿಎಸ್ ನ ಜಿ.ಟಿ ದೇವೇಗೌಡ. ಸಿದ್ದರಾಮಯ್ಯ ಅವರ ಮಗ ದಡ್ಡನೋ ಬುದ್ಧಿವಂತನೋ ಗೊತ್ತಿಲ್ಲ. ಅವರನ್ನು ಪದೇ ಪದೇ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಕಳಿಸಿ ಆಟ ನೋಡುತ್ತಿದ್ದಾರೆ. ಸೀತೆ ಮೇಲೆ ರಾವಣ ಕಣ್ಣು ಹಾಕಿದ್ದರಿಂದ ಲಂಕೆಗೆ ಬೆಂಕಿ ಬಿತ್ತು. ನೀವು ಈಗ ಚಾಮುಂಡೇಶ್ವರಿ ಕ್ಷೇತ್ರದ ಮೇಲೆ ಕಣ್ಣು ಹಾಕಿದ್ದೀರಾ ನಿಮಗೂ ಲಂಕೆಗೆ ಆದ ಕಥೆ ಬರುತ್ತೆ. ನನಗೆ ಕ್ಷೇತ್ರದಲ್ಲಿ ಬಹಳಷ್ಟು ನೋವು ಕೊಟ್ಟಿದ್ದೀರಿ. ನಾನು ಕಾಂಗ್ರೆಸ್‍ಗೆ ಹೋಗುತ್ತೇನೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತೀರಾ ಜನರು ಇದನ್ನು ಜನ ನಂಬುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಪ್ರಧಾನಿ ದೇವೇಗೌಡ ದಂಪತಿ ಚಾಮುಂಡಿ ಬೆಟ್ಟದಿಂದ ಮೈಸೂರಿನ ಉತ್ತನಹಳ್ಳಿ ಅಮ್ಮನ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ದೇವೇಗೌಡ ಅವರಿಗೆ ಶಾಸಕ ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್, ಮೇಯರ್ ರವಿಕುಮಾರ್ ಸಾಥ್ ನೀಡಿದರು.

ಕುಮಾರ ಪರ್ವ ಸಮಾವೇಶದಲ್ಲಿ ನಮ್ಮ ಹೆಚ್ ಡಿ ಕೆ. pic.twitter.com/PPR5vrvq8z

— Kumaraswamy for CM (@Kumaraswamy4cm) November 7, 2017

ನಮ್ಮ ಹೆಚ್ ಡಿ ಕೆ ಕಾರ್ಯಕರ್ತರಿಗೆ ಕೃತಜ್ಞತೆ ಅರ್ಪಿಸಿ ವಿಕಾಸ ವಾಹಿನಿಯಲ್ಲಿ ಪ್ರವಾಸ ಮುಂದುವರೆಸಿದರು.ವಿಕಾಸ ವಾಹಿನಿ ಯಾತ್ರೆ ಹಾಸನ-ಚಿಕ್ಕಮಗಳೂರು ಪ್ರವಾಸಕ್ಕೆ ಸಾಗಿದೆ pic.twitter.com/KS9ys1fYsr

— Kumaraswamy for CM (@Kumaraswamy4cm) November 7, 2017

ಕುಮಾರ ಪರ್ವ ಸಮಾವೇಶದಲ್ಲಿ ನಮ್ಮ ಹೆಚ್ ಡಿ ಕೆ ಮಾತನಾಡಿದರು. ಲಿಂಗದೇವರ ಕೊಪ್ಪಲಿನಲ್ಲಿ ಕುಮಾರ ಪರ್ವ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯುತ್ತಿದೆ. pic.twitter.com/leR0wOUHXX

— Kumaraswamy for CM (@Kumaraswamy4cm) November 7, 2017

ಕುಮಾರ ಪರ್ವ ಸಮಾವೇಶಕ್ಕೆ ಚಾಲನೆ ನೀಡಿದ ಸಂದರ್ಭ ನಮ್ಮ ಹೆಚ್ ಡಿ ಕೆ ಜೊತೆಗೆ ಜೆ ಡಿ ಎಸ್ ರಾಷ್ಟ್ರಾಧ್ಯಕ್ಷರಾದ ಹೆಚ್ ಡಿ ದೇವೇಗೌಡ ಅವರು ವೇದಿಕೆಯಲ್ಲಿದ್ದಾರೆ. pic.twitter.com/2Nz3tbRhq8

— Kumaraswamy for CM (@Kumaraswamy4cm) November 7, 2017

ಕುಮಾರ ಪರ್ವ ಸಮಾವೇಶದ ವೇದಿಕೆ ನಮ್ಮ ಹೆಚ್ ಡಿ ಕೆ ಸ್ವಾಗತಕ್ಕೆ ಸಜ್ಜಾಗಿದೆ. ಬೃಹತ್ ಜನಸ್ತೋಮ ಸಮಾವೇಶಕ್ಕೆ ಆಗಮಿಸಿದೆ. ಸಮಾವೇಶ ಚಾಲನೆಗೆ ಕ್ಷಣ ಗಣನೆ ಆರಂಭವಾಗಿದೆ. pic.twitter.com/epGt3GvG7p

— Kumaraswamy for CM (@Kumaraswamy4cm) November 7, 2017

ಕುಮಾರ ಪರ್ವ ಸಮಾವೇಶಕ್ಕೆ ವಿಕಾಸ ವಾಹಿನಿಯಲ್ಲಿ ಆಗಮಿಸುತ್ತಿರುವ ನಮ್ಮ ಹೆಚ್ ಡಿ ಕೆ. ನಮ್ಮ ಹೆಚ್ ಡಿ ಕೆ ಆಗಮನಕ್ಕೆ ನಿರೀಕ್ಷಿಸುತ್ತಿರುವ ಬೃಹತ್ ಜನಸ್ತೋಮ. pic.twitter.com/o3fKlE9S1c

— Kumaraswamy for CM (@Kumaraswamy4cm) November 7, 2017

ಲಿಂಗದೇವರ ಕೊಪ್ಪಲಿನಲ್ಲಿ ನಡೆಯುತ್ತಿರುವ “ಕುಮಾರ ಪರ್ವ” ಸಮಾವೇಶಕ್ಕೆ ನಮ್ಮ ಹೆಚ್ ಡಿ ಕೆ ಆಗಮಿಸಿದ ಸಂದರ್ಭ ಹಿನಕಲ್ ಗ್ರಾಮಸ್ಥರು ಪೂರ್ಣ ಕುಂಭ ಸ್ವಾಗತ ನೀಡಿದರು. pic.twitter.com/KH3SD2yLBm

— Kumaraswamy for CM (@Kumaraswamy4cm) November 7, 2017

ಕುಮಾರ ಪರ್ವ” ಸಮಾವೇಶಕ್ಕೆ ಆಗಮಿಸಿದ ನಮ್ಮ ಹೆಚ್ ಡಿ ಕೆ. ಚಾಮುಂಡೇಶ್ವರಿ ಕ್ಷೇತ್ರದ ಲಿಂಗದೇವ ಕೊಪ್ಪಲಿನಲ್ಲಿ ಕಾರ್ಯಕರ್ತರ ಬೃಹತ್ ಸಮಾವೇಶ ಕುಮಾರ ಪರ್ವ ಆಯೋಜನೆಯಾಗಿದೆ. pic.twitter.com/vNHaSpfpJb

— Kumaraswamy for CM (@Kumaraswamy4cm) November 7, 2017

ಚಾಮುಂಡೇಶ್ವರಿ ಕ್ಷೇತ್ರದ ಲಿಂಗ ದೇವರ ಕೊಪ್ಪಲಿನಲ್ಲಿ ನಡೆಯುವ “ಕುಮಾರ ಪರ್ವ” ಕಾರ್ಯಕ್ರಮಕ್ಕೆ ಕರ್ನಾಟಕ ವಿಕಾಸ ವಾಹಿನಿ ಬಸ್ ನಲ್ಲಿ ಸಾಗಿದ ನಮ್ಮ ಹೆಚ್ ಡಿ ಕೆ. pic.twitter.com/o3eNndV6Ll

— Kumaraswamy for CM (@Kumaraswamy4cm) November 7, 2017

ನಮ್ಮ ಹೆಚ್ ಡಿ ಕೆ ಮತ್ತು ಶ್ರೀಮತಿ ಅನಿತಾ ಕುಮಾರಸ್ವಾಮಿ ಅವರು ಉತ್ತನಹಳ್ಳಿಯಲ್ಲಿನ ಜ್ವಾಲಾಮುಖಿ ತ್ರಿಪುರ ಸುಂದರಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. pic.twitter.com/tXz34LbNRj

— Kumaraswamy for CM (@Kumaraswamy4cm) November 7, 2017

ನಾಡ ದೇವತೆ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ ನಂತರ ನಮ್ಮ ಹೆಚ್ ಡಿ ಕೆ ಅವರು 'ಕರ್ನಾಟಕ ವಿಕಾಸ ವಾಹಿನಿ' ಬಸ್ ಗೆ ಚಾಲನೆ ನೀಡಿದರು. pic.twitter.com/k5FpVoWi3Y

— Kumaraswamy for CM (@Kumaraswamy4cm) November 7, 2017

ಚಾಮುಂಡೇಶ್ವರಿ ದೇವಿ ಸನ್ನಿಧಿಗೆ ಆಗಮಿಸಿದ ನಮ್ಮ ಹೆಚ್ ಡಿ ಕೆ ಅವರು ಶ್ರೀಮತಿ ಅನಿತಾ ಕುಮಾರಸ್ವಾಮಿಯವರೊಂದಿಗೆ ದೇವಿಯ ದರ್ಶನ ಪಡೆದರು. pic.twitter.com/NVb1Jx5eqd

— Kumaraswamy for CM (@Kumaraswamy4cm) November 7, 2017

ಚಾಮುಂಡೇಶ್ವರಿ ದೇವಿ ಸನ್ನಧಿಗೆ ನಮ್ಮ ಹೆಚ್ ಡಿ ಕೆ ಆಗಮನ pic.twitter.com/Yi5llcoQXa

— Kumaraswamy for CM (@Kumaraswamy4cm) November 7, 2017

HDK MSR 4

HDK MSR 5

HDK MSR 7

HDK MSR 11

HDK MSR 10

TAGGED:cm siddaramaiahformer Prime Minister Deve Gowdahd kumaraswamyLegislative AssemblymysuruPublic TVVikas Yatraಎಚ್.ಡಿ ಕುಮಾರ ಸ್ವಾಮಿಪಬ್ಲಿಕ್ ಟಿವಿಮಾಜಿ ಪ್ರಧಾನಿ ದೇವೇಗೌಡಮೈಸೂರುವಿಕಾಸ ಯಾತ್ರೆವಿಧಾನ ಸಭಾ ಚುನಾವಣೆಸಿಎಂ ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
20 minutes ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
21 minutes ago
kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
59 minutes ago
OMR EXAM
Bengaluru City

ಪರೀಕ್ಷೆ ಮುಗಿದ ಒಂದು ಗಂಟೆಯಲ್ಲೇ OMR ಶೀಟ್ ವೆಬ್‌ಸೈಟ್‌ಗೆ ಅಪ್‌ಲೋಡ್: ಕೆಇಎ

Public TV
By Public TV
1 hour ago
Ramesh Kumar
Districts

63 ಎಕ್ರೆ ಅರಣ್ಯ ಭೂಮಿ ಒತ್ತುವರಿ ಪ್ರಕರಣ – ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಹಿನ್ನಡೆ

Public TV
By Public TV
1 hour ago
CRIME
Districts

ಸರ್ಕಾರಿ ಕಚೇರಿಯಲ್ಲಿ ದಲಿತ ಮಹಿಳೆಯ ವಿವಸ್ತ್ರಗೊಳಿಸಿ ವಿಕೃತಿ – 8 ಗಂಟೆ ನಿಲ್ಲಿಸಿದ್ದ ಅಧಿಕಾರಿಗಳ ವಿರುದ್ಧ ದೂರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?