Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಿಷನ್ 123 ಜೆಡಿಎಸ್‌ನ ಛಲ- ಕುಮಾರಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಿಷನ್ 123 ಜೆಡಿಎಸ್‌ನ ಛಲ- ಕುಮಾರಸ್ವಾಮಿ

Bengaluru City

ಮಿಷನ್ 123 ಜೆಡಿಎಸ್‌ನ ಛಲ- ಕುಮಾರಸ್ವಾಮಿ

Public TV
Last updated: September 30, 2021 8:49 pm
Public TV
Share
3 Min Read
HDK
SHARE

ಬೆಂಗಳೂರು: ಮಿಷನ್ 123 ಎನ್ನುವುದು ನಮ್ಮ ಗುರಿ ಮಾತ್ರವಲ್ಲ, ಛಲವೂ ಹೌದು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.‌ ಬಿಡದಿಯ ತೋಟದಲ್ಲಿ ಜನತಾ ಪರ್ವ 1.O ಹಾಗೂ ಮಿಷನ್ 123 ಕಾರ್ಯಾಗಾರದ ನಾಲ್ಕನೇ ದಿನ ಮಾಧ್ಯಮಗಳ ಜತೆ ಮಾತನಾಡಿದ ಅವರು, ನಿಗದಿತ ಗುರಿ ಮುಟ್ಟಲು 224 ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತೇವೆ ಎಂದರು.

ಜನತೆಗೆ ನಾವು ವಾಗ್ದಾನ ಮಾಡುತ್ತಿರುವ ಪಂಚರತ್ನ ಕಾರ್ಯಕ್ರಮಗಳ ಮಾಹಿತಿಯನ್ನು ಮನೆ ಮನೆಗೂ ತಲುಪಿಸಲಾಗುವುದು. ಈ ನಿಟ್ಟಿನಲ್ಲಿ ಜೆಡಿಎಸ್ ಪರಿವಾರ ಮುಂದಿನ ಹದಿನೇಳು ತಿಂಗಳ ಕಾಲ ರಾಜ್ಯದ ಉದ್ದಗಲಕ್ಕೂ ಅವಿಶ್ರಾಂತವಾಗಿ ಕೆಲಸ ಮಾಡಲಿದೆ ಎಂದು ಕುಮಾರಸ್ವಾಮಿ ಮಾಹಿತಿ ನೀಡಿದರು.

JDS flag 760x400 medium

ಜೆಡಿಎಸ್‌ ಸದಸ್ಯತ್ವಕ್ಕೆ App..!: ಜನರ ಮನ – ಮನೆ ಮುಟ್ಟುವ ನಿಟ್ಟಿನಲ್ಲೇ ಈಗಾಗಲೇ ಎಲ್ಲ ಕಾರ್ಯಕ್ರಮಗಳ ರೂಪುರೇಷೆಗಳನ್ನು ಸಿದ್ಧ ಮಾಡಿಕೊಂಡಿದ್ದೇವೆ. ಮುಖ್ಯವಾಗಿ ಹೊಸ ತಲೆಮಾರಿನ ಯುವಜನರಿಗೆ ಪಕ್ಷದ ಬಗ್ಗೆ ವಿಶ್ವಾಸ ತುಂಬುವ ಪ್ರಯತ್ನವನ್ನು ದೊಡ್ಡ ಮಟ್ಟದಲ್ಲಿ ಮಾಡಲಾಗುವುದು. ಸದಸ್ಯತ್ವ ಅಭಿಯಾನಕ್ಕೆ ಚಾಲನೆ ಕೊಡಲಾಗುವುದು ಎಂದು ಅವರು ಮಾಹಿತಿ ನೀಡಿದರು. ಪಕ್ಷದ ಸದಸ್ಯತ್ವ ಪಡೆಯಲು ಯಾರೂ ಎಲ್ಲೂ ಹೋಗಬೇಕಿಲ್ಲ. ಇದ್ದ ಜಾಗದಲ್ಲಿಯೇ ಸದಸ್ಯತ್ವ ಪಡೆಯಲು ಆ್ಯಪ್ ಸಿದ್ಧ ಮಾಡಲಾಗುತ್ತಿದೆ. ಆದಷ್ಟು ಬೇಗ ಈ ಆ್ಯಪ್ ಬಳಕೆಗೆ ಸಿಗಲಿದೆ. ಯಾರು ನಮ್ಮ ಪಕ್ಷದ ಸದಸ್ಯರಾಗುತ್ತರೋ ಅವರ ಕುಟುಂಬಕ್ಕೆ ಐಡೆಂಟಿಟಿ‌ ಕಾರ್ಡ್ ಕೊಡುತ್ತೇವೆ. ಇದಕ್ಕೆಲ್ಲ ಆಧುನಿಕ ತಂತ್ರಜ್ಞಾನ ಉಪಯೋಗಿಸುತ್ತೇವೆ. ಹೀಗೆ ಸದಸ್ಯತ್ವ ಪಡೆದವರಿಗೆ ಸದಸ್ಯರ ನಿಧಿ ಸೌಲಭ್ಯ ಇಡಲಾಗುತ್ತದೆ. ಉತ್ತಮವಾಗಿ ಓದುವ ಸದಸ್ಯರ ಮಕ್ಕಳಿಗೆ ಆರ್ಥಿಕ ನೆರವು ನೀಡುತ್ತೇವೆ. ಅಲ್ಲದೆ ಸದಸ್ಯರ ಮನೆಯಲ್ಲಿ ಸಮಸ್ಯೆ, ಅವಘಡಗಳಾದರೆ ಅಂತವರಿಗೂ ಆರ್ಥಿಕ‌ ನೆರವು ಕೊಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಒಂದೇ ವೇದಿಕೆಯಲ್ಲಿ ನಿಖಿಲ್-ಪ್ರಜ್ವಲ್ – ಪಕ್ಷ ಕಟ್ಟಲು ಪಣತೊಟ್ಟ ಸಹೋದರರು

NIKHIL AND PRAJWAL bengaluru 6

ಅಭ್ಯರ್ಥಿಯಾಗ ಬಯಸುವವರಿಗೆ 3 ತಿಂಗಳ ಗಡುವು: ಇನ್ನು ಮುಂದೆ ಪಕ್ಷದ ಎಲ್ಲಾ ಘಟಕಗಳು ಸಕ್ರಿಯವಾಗಿ ಕೆಲಸ ನಿರ್ವಹಿಸುತ್ತವೆ. ಹೊಸಬರನ್ನು ಪಕ್ಷಕ್ಕೆ ಕರೆತರುವುದು ಇರಬಹುದು ಅಥವಾ ಮನವೊಲಿಕೆ ಇರಬಹುದು. ಇವೆಲ್ಲವೂ ನಿತ್ಯ ಕಾರ್ಯಕ್ರಮ ಆಗಬೇಕು. ಪ್ರತಿ ಜಿಲ್ಲೆಯಲ್ಲೂ ಪಕ್ಷದ ವ್ಯವಸ್ತೆಯನ್ನು ಚುರುಕು ಮಾಡುತ್ತೇವೆ. ಯುವಕರಿಗೆ ಜವಾಬ್ದಾರಿ ನೀಡುತ್ತಿದ್ದೇನೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು. ನಾಲ್ಕು ದಿನದ ಕಾರ್ಯಗಾರದಿಂದ ಪಕ್ಷದ ನಾಯಕರಲ್ಲಿ ಕಾರ್ಯಕರ್ತರಲ್ಲಿ ಹುರುಪು ಬಂದಿದೆ. ಎಲ್ಲರಿಗೂ ಗೆಲ್ಲಲೇ ಬೇಕೆಂಬ ಛಲ ಬಂದಿದೆ. ಅಭ್ಯರ್ಥಿಗಳಾಗಬೇಕು ಎಂದು ಗುರುತಿಸಲಾಗಿರುವ ಎಲ್ಲರಿಗೂ ಮೂರು ತಿಂಗಳ ಗಡುವು ನೀಡಲಾಗಿದೆ. ನಾವು ಶಾಸಕರಾಗಬೇಕು ಅಂತ ಹುಮ್ಮಸ್ಸು ಅವರಿಗೆ ಬಂದಿದೆ. ಯುವ ಜನತಾದಳದ ಕಾರ್ಯಕ್ರಮದಲ್ಲೂ ಹುಮ್ಮಸ್ಸು ನೋಡ್ತಾ ಇದ್ದೇವೆ ಎಂದು ವಿವರಿಸಿದರು.

NIKHIL AND PRAJWAL bengaluru 4

ನಿಖಿಲ್‌ – ಪ್ರಜ್ವಲ್‌ ಜೊತೆ ಜೊತೆಯಲಿ.!: ಪಂಚರತ್ನ ಕಾರ್ಯಕ್ರಮ ತರಲು ತೀರ್ಮಾನ ಮಾಡಿರುವುದು, ಆ ಬಗ್ಗೆ ನಾಲ್ಕೂ ದಿನ ಮಾಹಿತಿ ನೀಡಿದ್ದೇನೆ. ಇದನ್ನು ಜನತೆ ಮುಂದೆ ತೆಗೆದುಕೊಂಡು‌ ಹೋದರೆ ಜನತೆ ನಮಗೆ ಬೆಂಬಲ ನೀಡ್ತಾರೆ ಅನ್ನುವ ಭರವಸೆ ಇದೆ ಎಂದ ಕುಮಾರಸ್ವಾಮಿ, ಪ್ರತಿ ತಾಲೂಕು, ಹೋಬಳಿ, ಹಳ್ಳಿ ಮಟ್ಟದಲ್ಲೂ ಕಾರ್ಯಕ್ರಮ ಮಾಡುತ್ತೇವೆ ಅಂತ ತಿಳಿಸಿದರು. ಇದಕ್ಕೆ ಪೂರಕವಾಗಿ ನಿಖಿಲ್ ಕುಮಾರಸ್ವಾಮಿ ಹಾಗೂ ಪ್ರಜ್ವಲ್ ರೇವಣ್ಣ ಅವರಿಬ್ಬರೂ ಜೊತೆಯಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಾರೆ. ಯುವ ಪಡೆ ಕಟ್ಟಲು ಹೇಳಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ಅಧಿಕಾರಕ್ಕೆ ಬಂದ್ರೆ ಮಹಿಳೆಯರ ಸಾಲ ಮನ್ನಾ ಮಾಡಿ – ಹೆಚ್‍ಡಿಕೆಗೆ ಪತ್ನಿ ಅನಿತಾ ಸಲಹೆ

NIKHIL AND PRAJWAL bengaluru 5

ಈಗಾಗಲೇ ನೀರಾವರಿ ಯೋಜನೆಗಳ ಬಗ್ಗೆಯೂ ಪಕ್ಷದ ಕಾರ್ಯಗಾರದಲ್ಲಿ ಚರ್ಚೆ ಮಾಡಿದ್ದೇವೆ. ರಾಜ್ಯದ ಸಮಗ್ರ ನೀರಾವರಿ ಯೋಜನೆಗಳ ಬಗ್ಗೆ ಸಮಗ್ರ ಅಭಿವೃದ್ಧಿ ಬಗ್ಗೆ ನಮ್ಮದೇ ಪರಿಕಲ್ಪನೆ ಇದೆ. ನೀರಾವರಿ ಯೋಜನೆಗಳು ಎಂದರೆ ಹಣ ಲೂಟಿ ಹೊಡೆಯುವ ಯೋಜನೆಗಳು ಅಲ್ಲ ಅಂತ ವಿಪಕ್ಷಗಳಿಗೆ ತಿರುಗೇಟು ಕೊಟ್ಟರು. ಮುಂದಿನ ಚುನಾವಣೆಯಲ್ಲಿ ಕೊನೆ ಪಕ್ಷ 30-35 ಮಹಿಳೆಯರಿಗೆ ಅವಕಾಶ ನೀಡಬೇಕು ಎಂದುಕೊಂಡಿದ್ದೇವೆ. ಹಾಗೆಯೇ ಯುವಕರಿಗೆ 25% ಟಿಕೆಟ್ ಕೊಡಬೇಕು ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಆ ಬಗ್ಗೆ ಗಂಭೀರವಾಗಿ ಪರಿಶೀಲನೆ ಮಾಡುತ್ತೇವೆ ಎಂದು ಕುಮಾರಸ್ವಾಮಿ ತಿಳಿಸಿದರು.

TAGGED:hd kumaraswamyJDS AppJDS Mission 123nikhil kumaraswamyprajwal revannaಎಚ್‌.ಡಿ. ಕುಮಾರಸ್ವಾಮಿಜೆಡಿಎಸ್‌ ಆ್ಯಪ್ಜೆಡಿಎಸ್‌ ಮಿಷನ್‌ 123ನಿಖಿಲ್ ಕುಮಾರಸ್ವಾಮಿಪ್ರಜ್ವಲ್ ರೇವಣ್ಣ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

KH Muniyappa
Bagalkot

ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ 1 ಸಿಲಿಂಡರ್‌: ಸಚಿವ ಕೆ.ಹೆಚ್‌ ಮುನಿಯಪ್ಪ

Public TV
By Public TV
8 minutes ago
Narendra Modi
Latest

ರಾಜ್ಯ ಸರ್ಕಾರಗಳು ವಿಶ್ವಾಸದಿಂದ ಹೆಜ್ಜೆ ಇಡಬೇಕು – ತೈಲ ಅಭಾವ ವದಂತಿಗೆ ಜನ ಕಿವಿಗೊಡಂತೆ ಮೋದಿ ಕರೆ

Public TV
By Public TV
22 minutes ago
USS Tripoli 2
Latest

ಇರಾನ್‌ ಮೇಲೆ ರಣಭೀಕರ ದಾಳಿಗೆ ಪ್ಲ್ಯಾನ್‌ – ಮಧ್ಯಪ್ರಾಚ್ಯಕ್ಕೆ 3,500 ನೌಕಾಪಡೆ, ಟ್ರಿಪೋಲಿ ನಿಯೋಜಿಸಿದ ಅಮೆರಿಕ

Public TV
By Public TV
1 hour ago
Yadgiri 4 Children Death In Agricultural Pit
Crime

ಕೃಷಿ ಹೊಂಡದಲ್ಲಿ ಈಜಲು ಹೋದ ನಾಲ್ವರು ಮಕ್ಕಳು ದಾರುಣ ಸಾವು

Public TV
By Public TV
1 hour ago
Siddaramaiah 4
Districts

ನ್ಯಾಯ ವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು: ಸಿದ್ದರಾಮಯ್ಯ

Public TV
By Public TV
2 hours ago
F16 Fighter Jet
Latest

ಅಮೆರಿಕದ ಮತ್ತೊಂದು F-16 ಜೆಟ್‌ ಹೊಡೆದುರುಳಿಸಿದ ಇರಾನ್‌; ವಿಶ್ವವಿದ್ಯಾಲಯಗಳನ್ನ ಉಡಾಯಿಸೋದಾಗಿ ಬೆದರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?