ಹಾಸನ: ಚುನಾವಣೆ ಹೊತ್ತಲ್ಲೇ ಜೆಡಿಎಸ್ (JDS) ಭದ್ರಕೋಟೆಯಲ್ಲಿ ಈಗ ತಳಮಳ ಶುರುವಾಗಿದೆ. ಹಾಲಿ ಶಾಸಕರ ಪಕ್ಷಾಂತರ ಹಾಗೂ ಟಿಕೆಟ್ ಗೊಂದಲದಿಂದ ಈ ಭಾರಿ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗುತ್ತದೆಯೇ ಎಂಬ ಚರ್ಚೆಗಳು ಶುರುವಾಗಿವೆ.
ಅರಸೀಕೆರೆಯ ಜೆಡಿಎಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ (Shivalinge Gowda) ಅವರು ಕಾಂಗ್ರೆಸ್ (Congress) ಪಕ್ಷ ಸೇರಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿ ಮಾಡಿ ಅಂತಿಮ ಸುತ್ತಿನ ಮಾತುಕತೆ ನಡೆಸಿದ್ದಾರೆ. ಇದನ್ನೂ ಓದಿ: ಸಿಟಿ ರವಿ ಆಪ್ತ ಹೆಚ್ಡಿ ತಮ್ಮಯ್ಯ ಕಾಂಗ್ರೆಸ್ ಸೇರ್ಪಡೆ
ಶೀಘ್ರದಲ್ಲಿಯೇ ತಮ್ಮ ಬೆಂಬಲಿಗರು, ಅಭಿಮಾನಿಗಳ ಸಭೆ ಕರೆದು ಶಿವಲಿಂಗೇಗೌಡ ಅವರು ಚರ್ಚಿಸಲಿದ್ದಾರೆ. ಆನಂತರ ಅರಸೀಕೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರ ಜೊತೆ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಈ ಪ್ರಕ್ರಿಯೆಗಳ ಬಳಿಕ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಶಿವಲಿಂಗೇಗೌಡರು ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.
ಇನ್ನೊಂದೆಡೆ ಅರಕಲಗೂಡು ಶಾಸಕ ಎ.ಟಿ.ರಾಮಸ್ವಾಮಿ ಅವರು ಬಿಜೆಪಿ-ಕಾಂಗ್ರೆಸ್ ಮುಖಂಡರ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ. ಬಿಜೆಪಿ ಅಥವಾ ಕಾಂಗ್ರೆಸ್ ಪಕ್ಷ ಸೇರುವುದು ಬಹುತೇಕ ಖಚಿತ ಎನ್ನಲಾಗಿದೆ. ಕಾಂಗ್ರೆಸ್ನಲ್ಲೇ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದು, ಇದರಿಂದ ರಾಮಸ್ವಾಮಿ ಅವರಿಗೆ ಟಿಕೆಟ್ ಸಿಗುವುದು ಅನುಮಾನ. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ಜೊತೆಯೂ ರಾಮಸ್ವಾಮಿ ಅವರು ಚರ್ಚೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ತಮ್ಮನ್ನು ನರಕದಲ್ಲಿಟ್ಟಿದ್ದಕ್ಕೆ ಕಾಂಗ್ರೆಸ್ನ್ನು ಜನ ಮನೆಗೆ ಕಳಿಸಿದ್ರು: ಬೊಮ್ಮಾಯಿ ಕಿಡಿ
ಪಕ್ಷದ ಟಿಕೆಟ್ ಆಕಾಂಕ್ಷಿಗಳ ಮನವೊಲಿಸಿ ರಾಮಸ್ವಾಮಿ ಅವರಿಗೆ ಬಿಜೆಪಿ ಹೈಕಮಾಂಡ್ ಮಣೆ ಹಾಕುತ್ತಾ ಎನ್ನುವುದು ಪ್ರಶ್ನೆಯಾಗಿದೆ. ಈ ವಿಚಾರದಲ್ಲಿ ರಾಮಸ್ವಾಮಿ ನಡೆಯೂ ತೀವ್ರ ಕುತೂಹಲ ಮೂಡಿಸಿದೆ. ಈಗಾಗಲೇ ತಮ್ಮ ಬೆಂಬಲಿಗರು ಹಾಗೂ ಅಭಿಮಾನಿಗಳ ಜೊತೆ ರಾಮಸ್ವಾಮಿ ಅವರು ಎರಡು ಸುತ್ತಿನ ಸಭೆ ನಡೆಸಿದ್ದಾರೆ. ಜೆಡಿಎಸ್ ವಿರುದ್ಧ ಸೆಣಸಲು ಇಬ್ಬರು ಹಾಲಿ ಶಾಸಕರು ರಣತಂತ್ರ ರೂಪಿಸುತ್ತಿದ್ದಾರೆ.
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k