Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿಯನ್ನು ಹಾಡಿ ಹೊಗಳಿದ ಗುಬ್ಬಿ ಜೆಡಿಎಸ್ ಶಾಸಕ ಶ್ರೀನಿವಾಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬಿಜೆಪಿಯನ್ನು ಹಾಡಿ ಹೊಗಳಿದ ಗುಬ್ಬಿ ಜೆಡಿಎಸ್ ಶಾಸಕ ಶ್ರೀನಿವಾಸ್

Districts

ಬಿಜೆಪಿಯನ್ನು ಹಾಡಿ ಹೊಗಳಿದ ಗುಬ್ಬಿ ಜೆಡಿಎಸ್ ಶಾಸಕ ಶ್ರೀನಿವಾಸ್

Public TV
Last updated: September 13, 2019 2:42 pm
Public TV
Share
3 Min Read
tmk sr srinivas
SHARE

– ಕಮಲದಲ್ಲಿ ಬಿಗಿಯಾದ ಹೈಕಮಾಂಡ್ ಇದೆ
– ನಾನು ಎಚ್‍ಡಿಕೆಯ ಆಪ್ತ ಎಂದು ಹೇಳಿದ್ದು ಯಾವಾಗ?
– ಮಾಜಿ ಸಿಎಂ ವಿರುದ್ಧ ಶ್ರೀನಿವಾಸ್ ಅಸಮಾಧಾನ

ತುಮಕೂರು: ಮಾಜಿ ಸಚಿವ ಜಿ.ಟಿ.ದೇವೇಗೌಡ ಆಯ್ತು, ಈಗ ಗುಬ್ಬಿ ಜೆಡಿಎಸ್ ಶಾಸಕ ಎಸ್.ಆರ್ ಶ್ರೀನಿವಾಸ್ ಅವರು ಬಿಜೆಪಿಯನ್ನು ಹಾಡಿ ಹೊಗಳಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು ಬಿಜೆಪಿ ಸರ್ಕಾರಕ್ಕೆ ಫುಲ್ ಅಂಕವನ್ನು ನೀಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅವಧಿ ಪೂರೈಸುವುದು ನೂರಕ್ಕೆ ನೂರು ಖಚಿತ ಎಂದರು. ನಮ್ಮ ಪಕ್ಷದ ರೀತಿ ಬಿಜೆಪಿಯಲ್ಲಿ ಅತೃಪ್ತರು ಕಿತ್ತಾಡುವುದು, ರಾಜೀನಾಮೆ ನೀಡುವುದು ನಡೆಯಲ್ಲ. ಬಿಜೆಪಿಯವರಿಗೆ ಅವರದ್ದೇ ಆದ ಸಿದ್ದಾಂತ, ಶಿಸ್ತು ಇದೆ. ಅವರ ಹೈಕಮಾಂಡ್ ಬಿಗಿಯಾಗಿದೆ. ಆದ್ದರಿಂದ ಬಿಜೆಪಿ ಸಂಪೂರ್ಣ ಅವಧಿ ಮಗಿಸಲಿದೆ. ನಾನು ಎಲ್ಲವನ್ನೂ ತಿಳಿದುಕೊಂಡೇ ಹೇಳುತ್ತಿದ್ದೇನೆ. ಬೇರೆ ಪಕ್ಷಕ್ಕೂ ಬಿಜೆಪಿಗೂ ಹೋಲಿಕೆ ಮಾಡಬೇಡಿ ಎಂದು ಬಿಜೆಪಿ ಪರ ಬ್ಯಾಟಿಂಗ್ ಮಾಡಿದರು. ಇದನ್ನೂ ಓದಿ:ಪಕ್ಷ ತೊರೆಯಲು ಸಿದ್ಧರಾದ 6 ಜೆಡಿಎಸ್ ಶಾಸಕರು

BJP SULLAI 1

ಬಿಗಿಯಾದ ಹೈ ಕಮಾಂಡ್ ಇರುವುದರಿಂದ ಅವರು ಹೇಳಿದ ರೀತಿಯಲ್ಲಿ ರಾಜ್ಯದಲ್ಲಿ ನಡೆಯುತ್ತಿದೆ. ಆರಂಭದಲ್ಲಿ ಅಸಮಾಧಾನ ಹೊರಹಾಕಿದ್ದ ಸಿ.ಟಿ.ರವಿ, ಉಮೇಶ್ ಕತ್ತಿ, ಆರ್ ಅಶೋಕ್ ಈಗ ಬಾಲ ಮುದುಡಿಕೊಂಡು ಸುಮ್ಮನಾಗಿಲ್ಲವೇ? ಹೀಗಾಗಿ ಬಿಜೆಪಿ ಸರ್ಕಾರಕ್ಕೆ ಏನೂ ಆಗುವುದಿಲ್ಲ ಎಂದರು. ಜೆಡಿಎಸ್ ನಾಯಕನ ಈ ಹೇಳಿಕೆ ಈಗ ತೀವ್ರ ಸಂಚಲನ ಮೂಡಿಸಿದ್ದು, ಜಿ.ಟಿ ದೇವೇಗೌಡರ ರೀತಿ ಬಿಜೆಪಿಯತ್ತ ಶ್ರೀನಿವಾಸ್ ಅವರು ಕೂಡ ಮುಖ ಮಾಡುತ್ತಾರಾ ಎಂಬ ಪ್ರಶ್ನೆ ಉದ್ಭವಿಸಿದೆ.

CM BSY 1

ಇತ್ತ ಬಿಜೆಪಿಯನ್ನು ಹೊಗಳುತ್ತ ಅತ್ತ ಜೆಡಿಎಸ್ ಪಕ್ಷದ ವಿರುದ್ಧ ಮತ್ತೆ ಶ್ರೀನಿವಾಸ್ ಅವರು ಅಸಮಾಧಾನವನ್ನು ಹೊರಹಾಕಿದ್ದಾರೆ. ಪಕ್ಷದ ನಡವಳಿಕೆಯಿಂದ ನನಗೆ ಬೇಜಾರಾಗಿದೆ. ಮುಂದಿನ ದಿನದಲ್ಲಿ ಎಲ್ಲವನ್ನು ಹೇಳುತ್ತೇನೆ. ತನ್ನ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಕೊಟ್ಟಿಲ್ಲ. ಯಾಕೆ ಕೊಟ್ಟಿಲ್ಲ ಎಂದು ಕುಮಾರಸ್ವಾಮಿಗೆ ಗೊತ್ತು. ಮೈತ್ರಿ ಸರ್ಕಾರ ಉಳಿಸಿಕೊಳ್ಳಬಹುದಿತ್ತು. ಆದರೆ ಎಚ್‍ಡಿಕೆ ಅವರ ನಡವಳಿಕೆ ಮುಖ್ಯವಾಗಿತ್ತು. ಆ ಸಂದರ್ಭದಲ್ಲಿ ಅವರು ಸರಿಯಾಗಿ ನಡೆದುಕೊಂಡಿಲ್ಲ. ಹಾಗಂತ ದೇವೇಗೌಡರು ಪಕ್ಷ ಕಟ್ಟುವ ಕೆಲಸ ನಿರಂತರ ಮಾಡುತ್ತಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ:ಅತ್ಯಂತ ಕೆಳಮಟ್ಟದ ಮಾನಸಿಕತೆ ಇರುವ ವ್ಯಕ್ತಿ ಸಿಎಂ ಆಗಿದ್ದಕ್ಕೆ ಕನಿಕರ ಆಗ್ತಿದೆ – ಸುರೇಶ್‍ಕುಮಾರ್

jds

ಕುಮಾರಸ್ವಾಮಿ ಅವರ ಬಗ್ಗೆ ನಾನು ಏನು ಹೇಳುವುದಿಲ್ಲ. ಅವರು ದೊಡ್ಡ ನಾಯಕರು ಎಂದು ವ್ಯಂಗ್ಯವಾಡಿದರು. ಈ ಹೇಳಿಕೆಗಳ ಮೂಲಕ ಪರೋಕ್ಷವಾಗಿ ಕುಮಾರಸ್ವಾಮಿ ಅವರ ನಡವಳಿಕೆ ಸರಿ ಇಲ್ಲ ಎಂದು ಶ್ರೀನಿವಾಸ್ ಅಸಮಾಧಾನ ಹೊರಹಾಕಿದ್ದಾರೆ. ಹಾಗೆಯೇ ನಾನು ಕುಮಾರಸ್ವಾಮಿ ಅವರ ಆಪ್ತ ಎಂದು ಯಾರು ಹೇಳಿದ್ದು? ನನ್ನ ಮನಸ್ಸಿನಲ್ಲಿರೋದು ಏನು ಎಂದು ನಿಮಗೆ ಹೇಗೆ ಗೊತ್ತಾಗುತ್ತದೆ? ಎದುರಿಗೆ ನಗುತ್ತಾ ಮಾತಾನಾಡುತ್ತೇವೆ, ಸಿಕ್ಕಿದಾಗಲೆಲ್ಲಾ ಚೆನ್ನಾಗಿ ಮಾತಾನಾಡುತ್ತೇವೆ ಎಂದರೆ ಅವರ ಬಗ್ಗೆ ಒಳ್ಳೆ ಅಭಿಪ್ರಾಯ ಇದೆ ಎಂದು ಹೇಗೆ ಹೇಳುತ್ತೀರಾ ಎಂದು ಪ್ರಶ್ನಿಸುವ ಮೂಲಕ ತಾವು ಕುಮಾರಸ್ವಾಮಿಗೆ ಆಪ್ತ ಅಲ್ಲ ಎಂದು ಶ್ರೀನಿವಾಸ್ ಹೇಳಿದ್ದಾರೆ. ಹಾಗೆಯೇ ಕುಮಾರಸ್ವಾಮಿ ಒಳ್ಳೊಳ್ಳೆ ಸಚಿವ ಸ್ಥಾನ ಕೊಟ್ಟಿದ್ದರು ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ:ನಾನು ಎಲ್ ಬೋರ್ಡ್ ಎಂದು ತಿಳಿಯಬೇಡಿ: ಎಚ್‍ಡಿಕೆಗೆ ಸೋಮಣ್ಣ ಟಾಂಗ್

hdk 1

ನಾನು 7 ಜನರೊಂದಿಗೆ ಬಿಜೆಪಿಗೆ ಹೋಗುತ್ತೇನೆ ಅನ್ನುವ ವದಂತಿ ಇದೆ. ಇದು ಸುಳ್ಳು ಸುದ್ದಿ, ಈ ಅವಧಿಯಲ್ಲಿ ಯಾವ ಕಾರಣಕ್ಕೂ ಪಕ್ಷ ತೊರೆಯಲ್ಲ. ವಿಧಾನಸಭೆಯ ಈ ಅವಧಿಯವರೆಗೂ ಪಕ್ಷದಲ್ಲಿ ಇರುತ್ತೇನೆ ಎಂದು ಹೇಳಿ ಬಂದಿದ್ದೇನೆ. ಈ ಸಮಯದಲ್ಲಿ ಪಕ್ಷ ಬಿಡುವುದಿಲ್ಲ ಎಂದು ಕುಮಾರಸ್ವಾಮಿ ಅವರಿಗೆ ಹೇಳಿದ್ದೇನೆ. ಅವಧಿ ಬಳಿಕ ರಾಜಕೀಯ ನಿವೃತ್ತಿ ಪಡೆಯಬೇಕು ಎಂದುಕೊಂಡಿದ್ದೇನೆ ಎಂದು ತಿಳಿಸಿದರು.

TAGGED:bjpjdsKumaraswamyPublic TVS.R. Srinivastumakuruಎಸ್.ಆರ್.ಶ್ರೀನಿವಾಸ್ಕುಮಾರಸ್ವಾಮಿಜೆಡಿಎಸ್ತುಮಕೂರುಪಬ್ಲಿಕ್ ಟಿವಿಬಿಜೆಪಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

DK Shivakumar 1 1
Bengaluru City

ದೆಹಲಿ ಅಂಗಳದಲ್ಲಿ ಡಿಸಿಎಂ ಡಿಕೆಶಿ ಪವರ್ ಕ್ಲೈಮ್!

Public TV
By Public TV
7 minutes ago
byadarahalli Crime
Bengaluru City

ಅವಾಯ್ಡ್ ಮಾಡಿದ್ದಕ್ಕೆ ಬೆಂಕಿಯಿಟ್ಟು ಕೊಲೆ – ಹಂತಕಿಯ ಪ್ಲ್ಯಾನ್‌ ಕೇಳಿ ಪೊಲೀಸರೇ ಶಾಕ್

Public TV
By Public TV
21 minutes ago
Mantralaya Hundi Counting 1 1
Districts

ಬಿರು ಬೇಸಿಗೆಯಲ್ಲೂ ಮಂತ್ರಾಲಯಕ್ಕೆ ಭಕ್ತರ ದಂಡು – 22 ದಿನದಲ್ಲಿ 3.25 ಕೋಟಿ ಕಾಣಿಕೆ ಸಂಗ್ರಹ

Public TV
By Public TV
1 hour ago
Trump announces three week extension of Israel Lebanon ceasefire
Latest

ಇಸ್ರೇಲ್-ಲೆಬನಾನ್ ಕದನ ವಿರಾಮ 3 ವಾರಗಳವರೆಗೆ ವಿಸ್ತರಣೆ: ಟ್ರಂಪ್‌ ಸಂಧಾನ ಯಶಸ್ವಿ

Public TV
By Public TV
1 hour ago
Bidar Farmers Death
Bidar

ಸಿಡಿಲು ಬಡಿದು ಬೀದರ್‌ನ ಇಬ್ಬರು ಯುವ ರೈತರು ಸಾವು

Public TV
By Public TV
1 hour ago
Weather 1
Bagalkot

ರಾಜ್ಯದಲ್ಲಿ ಏ.29ರವರೆಗೆ, ಬೆಂಗ್ಳೂರಲ್ಲಿ ಮೇ 5ರವರೆಗೆ ಮಳೆ ಮುನ್ಸೂಚನೆ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?