Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇವೇಗೌಡರ ಸಮ್ಮುಖದಲ್ಲಿ ಎಚ್‍ಡಿಕೆಗೆ ಸ್ವಪಕ್ಷೀಯರಿಂದಲೇ ಕ್ಲಾಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದೇವೇಗೌಡರ ಸಮ್ಮುಖದಲ್ಲಿ ಎಚ್‍ಡಿಕೆಗೆ ಸ್ವಪಕ್ಷೀಯರಿಂದಲೇ ಕ್ಲಾಸ್

Bengaluru City

ದೇವೇಗೌಡರ ಸಮ್ಮುಖದಲ್ಲಿ ಎಚ್‍ಡಿಕೆಗೆ ಸ್ವಪಕ್ಷೀಯರಿಂದಲೇ ಕ್ಲಾಸ್

Public TV
Last updated: November 13, 2019 11:49 am
Public TV
Share
2 Min Read
hdk hdd
SHARE

– ನಾವು ಪಕ್ಷಕ್ಕಾಗಿ ದುಡಿದಿಲ್ಲವೇ?
– ಹೊರಟ್ಟಿ ನೇತೃತ್ವದ  ಸಭೆಯಲ್ಲಿ ತರಾಟೆ

ಬೆಂಗಳೂರು: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಸಮ್ಮುಖದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸ್ವಪಕ್ಷೀಯರೇ ತರಾಟೆ ತಗೆದುಕೊಂಡಿದ್ದಾರೆ.

ಪದ್ಮನಾಭನಗರದ ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ಜೆಡಿಎಸ್ ಮುಖಂಡ ಬಸವರಾಜ್ ಹೊರಟ್ಟಿ ಅವರ ನೇತೃತ್ವದಲ್ಲಿ ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ, ಎಸ್.ಎಲ್.ಭೋಜೇಗೌಡ, ಕಾಂತರಾಜು, ಅಪ್ಪಾಜಿಗೌಡ, ಮರಿ ತಿಬ್ಬೇಗೌಡ, ಶ್ರೀಕಂಠೇಗೌಡ, ಚೌಡರೆಡ್ಡಿ ತೂಪಲ್ಲಿ ಸೇರಿದಂತೆ ಅನೇಕರು ಶಾಸಕರ ಭವನದಿಂದ ಒಟ್ಟಾಗಿ ಆಗಮಿಸಿದ್ದರು. ಇತ್ತ ಮಾಜಿ ಸಿಎಂ ಕುಮಾರಸ್ವಾಮಿ ಅವರು ಕೂಡ ದೇವೇಗೌಡರ ನಿವಾಸಕ್ಕೆ ಬಂದಿದ್ದರು. ಆದರೆ ಸಭೆಗೆ 17 ಮೇಲ್ಮನೆಯ ಜೆಡಿಎಸ್ ಸದಸ್ಯರ ಪೈಕಿ ರಮೇಶ್ ಗೌಡ ಮತ್ತು ಬಿ.ಎಂ.ಫಾರೂಕ್ ಗೈರಾಗಿದ್ದರು.

Basavaraj horatti

ಬಸವರಾಜ ಹೊರಟ್ಟಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ವಿಧಾನ ಪರಿಷತ್ ಸದಸ್ಯರು ಅಸಮಾಧಾನ ಹೊರ ಹಾಕಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ತಮ್ಮನ್ನು ಹೀನಾಯವಾಗಿ ನಡೆಸಿಕೊಂಡಿದ್ದಾರೆ. ಸರ್ಕಾರ ಇದ್ದಾಗಲೂ ಸರಿಯಾಗಿ ನಡೆಸಿಕೊಂಡಿಲ್ಲ. ಸರ್ಕಾರ ಹೋದ ಮೇಲೂ ಸರಿಯಾಗಿ ನಡೆಸಿಕೊಂಡಿಲ್ಲ. ಕಳೆದ ವಾರ ನಡೆದ ಮಾಧ್ಯಮ ಸಂವಾದದಲ್ಲಿ, ಅವರ ರೋಗ ಏನು ಅಂತ ಹೇಳಿಕೊಂಡರೆ ತಾನೆ ಚಿಕಿತ್ಸೆ ನೀಡುವುದಕ್ಕೆ ಸಾಧ್ಯ ಅಂತ ಕಿಚಾಯಿಸಿದ್ದರು. ಇಂತಹ ಹೇಳಿಕೆ ಕೊಟ್ಟರೆ ಹೇಗೆ ಎಂದು ಗುಡುಗಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ನೀವು ಸಮಾಧಾನ ಮಾಡುತ್ತೀರಾ. ಎಚ್.ಡಿ.ಕುಮಾರಸ್ವಾಮಿ ಬೈತಾರೆ. ಹೀಗಿದ್ದರೆ ನಾವು ಹೇಗೆ ನಿಮ್ಮ ಜೊತೆ ಇರುವುದು ಎಂದು ಪರಿಷತ್ ಸದಸ್ಯರು ದೇವೇಗೌಡ ಅವರ ಮುಂದೆ ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ.

HDK

ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ನಿಗಮ ಮಂಡಳಿ ಸ್ಥಾನ ಕೇಳಿದ್ದೇವು. ಆದರೆ ಅವರು ಕೊಡಲಿಲ್ಲ. ವರ್ಗಾವಣೆಗಾಗಿ ನಾವು ಮಾಡಿದ್ದ ಶಿಫಾರಸುಗಳನ್ನ ಅಧಿಕಾರಿಗಳು ಮಾಡಿಕೊಟ್ಟಿಲ್ಲ. ಈ ಬಗ್ಗೆ ಮಾತನಾಡುವುದಕ್ಕೆ ಕುಮಾರಸ್ವಾಮಿ ಅವರು ನಮಗೆ ಸಮಯನ್ನೇ ಕೊಡಲಿಲ್ಲ. ನಾವು ಪಕ್ಷಕ್ಕಾಗಿ ದುಡಿದಿಲ್ಲವೇ? ಸರ್ಕಾರ ಇದ್ದಾಗ ನಮ್ಮನ್ನ ದೂರ ಇಟ್ಟರು, ನಮ್ಮ ಸಮಸ್ಯೆಯನ್ನೆ ಕೇಳಿಲ್ಲ. ಕಾಂಗ್ರೆಸ್ ಸಚಿವರು ನಮ್ಮ ಕೆಲಸಗಳನ್ನ ಮಾಡಿಕೊಡಲಿಲ್ಲ. ಈ ಬಗ್ಗೆ ಕುಮಾರಸ್ವಾಮಿ ಗಮನಕ್ಕೆ ತಂದರೂ ಏನು ಪ್ರಯೋಜನವಾಗಲಿಲ್ಲ. ಹೀಗಿದ್ದರೆ ನಾವು ಹೇಗೆ ಪಕ್ಷದ ಜೊತೆ ಇರಬೇಕು ಹೇಳಿ. ಪಕ್ಷದ ಕಾರ್ಯಕರ್ತರಿಗೆ ಯಾವುದೇ ಹುದ್ದೆ ನೀಡಿಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.

ವಿಧಾನ ಪರಿಷತ್ ಸದಸ್ಯರ ತರಾಟೆಯಿಂದ ಹೆಚ್ಚೆತ್ತುಕೊಂಡ ಎಚ್.ಡಿ.ಕುಮಾರಸ್ವಾಮಿ ಅವರು, ನನ್ನಿಂದ ತಪ್ಪು ಆಗಿದ್ದರೆ, ನಿಮ್ಮ ಮನಸ್ಸು ನೊಂದಿದ್ದರೆ ಕ್ಷಮೆ ಕೋರುತ್ತೇನೆ. ನಾನು ಸಿಎಂ ಆಗಿದ್ದಾಗ 24 ಗಂಟೆಯೂ ಒತ್ತಡದಲ್ಲಿ ಇರುತ್ತಿದ್ದೆ. ಶಾಸಕರು, ಸಚಿವರು ಮತ್ತು ಅಧಿಕಾರಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಬೇಕಿತ್ತು. ಈ ಸಂದರ್ಭದಲ್ಲಿ ನಿಮ್ಮನ್ನು ಕಡೆಗಣನೆ ಮಾಡಿದ್ದರೆ ಇದಕ್ಕೆ ಕ್ಷಮೆ ಕೋರುತ್ತೇನೆ. ಮುಂದೆ ಎಚ್.ಡಿ.ದೇವೇಗೌಡರ ಅಣತಿಯಂತೆ ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಅಂತ ಕೇಳಿದರು ಎಂದು ಮೂಲಗಳಿಂದ ಮಾಹಿತಿ ಲಭಿಸಿದೆ.

HDD JDS

ಈ ವೇಳೆ ಮಧ್ಯೆ ಪ್ರವೇಶಿಸಿ ಎಲ್ಲರನ್ನೂ ಕೈ ಮುಗಿದು ಕೇಳಿಕೊಂಡ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಸಣ್ಣ ಮನಸ್ತಾಪದಿಂದ ನಾವು ಪ್ರಾದೇಶಿಕ ಪಕ್ಷವನ್ನು ಹಾಳು ಮಾಡುವುದು ಬೇಡ. ನಮ್ಮನ್ನು ನಂಬಿ ಸಾವಿರಾರು ಕಾರ್ಯಕರ್ತರು ಇದ್ದಾರೆ. ಎಚ್.ಡಿ.ಕುಮಾರಸ್ವಾಮಿ ಅವರಿಗೆ ನಾನು ಬುದ್ಧಿ ಹೇಳುತ್ತೇನೆ. ಮುಂದೆ ಹೀಗೆ ಆಗದಂತೆ ನಾನು ಭಾಷೆ ಕೊಡುತ್ತೇನೆ ಎಂದು ಸಭೆಯಲ್ಲಿ ಭಾವುಕರಾದರು.

ಎಚ್.ಡಿ.ದೇವೇಗೌಡ ಅವರ ಮಾತಿಗೆ ಹಾಗೂ ಎಚ್.ಡಿ.ಕುಮಾರಸ್ವಾಮಿ ಕ್ಷಮೆಗೆ ಬೆಲೆ ನೀಡಿ ಪಕ್ಷದ ಸಂಘಟನೆಗೆ ಮುಂದಾಗುತ್ತೇವೆ ಎಂದು ವಿಧಾನಸಭೆಯ ಜೆಡಿಎಸ್ ಸದಸ್ಯರು ಪ್ರಮಾಣ ಮಾಡಿದರು. ಈ ಮೂಲಕ ಸಂಧಾನ ಸಭೆ ಸಫಲವಾಗಿದೆ.

TAGGED:h d kumaraswamyH.D.Deve GowdajdsMLCsPublic TVಎಚ್ ಡಿ ಕುಮಾರಸ್ವಾಮಿಎಚ್.ಡಿ. ದೇವೇಗೌಡಜೆಡಿಎಸ್ಪಬ್ಲಿಕ್ ಟಿವಿಬಸವರಾಜ ಹೊರಟ್ಟಿವಿಧಾನ ಪರಿಷತ್ ಸದಸ್ಯರುಸಂಧಾನ ಸಭೆ
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

Priyank kharge at Ai impact summit
Karnataka

AI Impact ಶೃಂಗಸಭೆಯಲ್ಲಿ ರಾಜ್ಯದ ಸಾಧನೆ ಪ್ರದರ್ಶನ – ಎಐ ಕ್ಷೇತ್ರ, ನವೋದ್ಯಮಗಳ ಮುಖ್ಯಸ್ಥರ ಜೊತೆ ಪ್ರಿಯಾಂಕ್ ಖರ್ಗೆ ಸಮಾಲೋಚನೆ

Public TV
By Public TV
48 seconds ago
India AI Impact Summit Guinness World Record
Latest

ಇಂಡಿಯಾ ಎಐ ಶೃಂಗದಲ್ಲಿ ಗಿನ್ನೆಸ್‌ ವರ್ಲ್ಡ್‌ ರೆಕಾರ್ಡ್‌ – ಜವಾಬ್ದಾರಿಯುತವಾಗಿ AI ಬಳಸುವ ಪ್ರತಿಜ್ಞೆ ಮಾಡಿದ 2.5 ಲಕ್ಷ ಜನರು

Public TV
By Public TV
4 minutes ago
Nelamangala Crime 1
Bengaluru Rural

ವೃದ್ಧೆಯ ಹತ್ಯೆಗೈದು ದರೋಡೆ – ಸಾಲ ತೀರಿಸೋಕೆ ಚಿನ್ನಾಭರಣ ಎಗರಿಸಿ ಪಕ್ಕದ ಮನೆಯವನಿಂದ್ಲೇ ಕೊಲೆ

Public TV
By Public TV
19 minutes ago
Anil Ambani
Court

ಅನುಮತಿ ಇಲ್ಲದೆ ಭಾರತ ತೊರೆಯುವುದಿಲ್ಲ – ಸುಪ್ರೀಂಗೆ ಅನಿಲ್ ಅಂಬಾನಿ ಮುಚ್ಚಳಿಕೆ

Public TV
By Public TV
20 minutes ago
majestic bus stand
Bengaluru City

ಸಾರಿಗೆ ಮುಷ್ಕರ ಎಫೆಕ್ಟ್; ಪ್ರಯಾಣಿಕರ ಸಂಖ್ಯೆ ಇಳಿಕೆ – ಬಸ್ ಸಂಚಾರ ಇದ್ರೂ ಪ್ರಯಾಣಿಕರಿಲ್ಲ

Public TV
By Public TV
22 minutes ago
Vijayapura Murder
Crime

ಪತ್ನಿ ಕೊಂದು ಮನೆಯಲ್ಲೇ ಹೂತಿದ್ದ ಕೇಸ್ – ಕೊಲೆ ಬಳಿಕ ನಾಪತ್ತೆಯಾಗಿರುವ ನಾಟಕವಾಡಿ ದೂರು ನೀಡಿದ್ದ ಹಂತಕ

Public TV
By Public TV
51 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?