Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ದೇವೇಗೌಡರ ಸಮ್ಮುಖದಲ್ಲಿ ಎಚ್‍ಡಿಕೆಗೆ ಸ್ವಪಕ್ಷೀಯರಿಂದಲೇ ಕ್ಲಾಸ್

Public TV
Last updated: November 13, 2019 11:49 am
Public TV
Share
2 Min Read
hdk hdd
SHARE

– ನಾವು ಪಕ್ಷಕ್ಕಾಗಿ ದುಡಿದಿಲ್ಲವೇ?
– ಹೊರಟ್ಟಿ ನೇತೃತ್ವದ  ಸಭೆಯಲ್ಲಿ ತರಾಟೆ

ಬೆಂಗಳೂರು: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಸಮ್ಮುಖದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸ್ವಪಕ್ಷೀಯರೇ ತರಾಟೆ ತಗೆದುಕೊಂಡಿದ್ದಾರೆ.

ಪದ್ಮನಾಭನಗರದ ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ಜೆಡಿಎಸ್ ಮುಖಂಡ ಬಸವರಾಜ್ ಹೊರಟ್ಟಿ ಅವರ ನೇತೃತ್ವದಲ್ಲಿ ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ, ಎಸ್.ಎಲ್.ಭೋಜೇಗೌಡ, ಕಾಂತರಾಜು, ಅಪ್ಪಾಜಿಗೌಡ, ಮರಿ ತಿಬ್ಬೇಗೌಡ, ಶ್ರೀಕಂಠೇಗೌಡ, ಚೌಡರೆಡ್ಡಿ ತೂಪಲ್ಲಿ ಸೇರಿದಂತೆ ಅನೇಕರು ಶಾಸಕರ ಭವನದಿಂದ ಒಟ್ಟಾಗಿ ಆಗಮಿಸಿದ್ದರು. ಇತ್ತ ಮಾಜಿ ಸಿಎಂ ಕುಮಾರಸ್ವಾಮಿ ಅವರು ಕೂಡ ದೇವೇಗೌಡರ ನಿವಾಸಕ್ಕೆ ಬಂದಿದ್ದರು. ಆದರೆ ಸಭೆಗೆ 17 ಮೇಲ್ಮನೆಯ ಜೆಡಿಎಸ್ ಸದಸ್ಯರ ಪೈಕಿ ರಮೇಶ್ ಗೌಡ ಮತ್ತು ಬಿ.ಎಂ.ಫಾರೂಕ್ ಗೈರಾಗಿದ್ದರು.

Basavaraj horatti

ಬಸವರಾಜ ಹೊರಟ್ಟಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ವಿಧಾನ ಪರಿಷತ್ ಸದಸ್ಯರು ಅಸಮಾಧಾನ ಹೊರ ಹಾಕಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ತಮ್ಮನ್ನು ಹೀನಾಯವಾಗಿ ನಡೆಸಿಕೊಂಡಿದ್ದಾರೆ. ಸರ್ಕಾರ ಇದ್ದಾಗಲೂ ಸರಿಯಾಗಿ ನಡೆಸಿಕೊಂಡಿಲ್ಲ. ಸರ್ಕಾರ ಹೋದ ಮೇಲೂ ಸರಿಯಾಗಿ ನಡೆಸಿಕೊಂಡಿಲ್ಲ. ಕಳೆದ ವಾರ ನಡೆದ ಮಾಧ್ಯಮ ಸಂವಾದದಲ್ಲಿ, ಅವರ ರೋಗ ಏನು ಅಂತ ಹೇಳಿಕೊಂಡರೆ ತಾನೆ ಚಿಕಿತ್ಸೆ ನೀಡುವುದಕ್ಕೆ ಸಾಧ್ಯ ಅಂತ ಕಿಚಾಯಿಸಿದ್ದರು. ಇಂತಹ ಹೇಳಿಕೆ ಕೊಟ್ಟರೆ ಹೇಗೆ ಎಂದು ಗುಡುಗಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ನೀವು ಸಮಾಧಾನ ಮಾಡುತ್ತೀರಾ. ಎಚ್.ಡಿ.ಕುಮಾರಸ್ವಾಮಿ ಬೈತಾರೆ. ಹೀಗಿದ್ದರೆ ನಾವು ಹೇಗೆ ನಿಮ್ಮ ಜೊತೆ ಇರುವುದು ಎಂದು ಪರಿಷತ್ ಸದಸ್ಯರು ದೇವೇಗೌಡ ಅವರ ಮುಂದೆ ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ.

HDK

ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ನಿಗಮ ಮಂಡಳಿ ಸ್ಥಾನ ಕೇಳಿದ್ದೇವು. ಆದರೆ ಅವರು ಕೊಡಲಿಲ್ಲ. ವರ್ಗಾವಣೆಗಾಗಿ ನಾವು ಮಾಡಿದ್ದ ಶಿಫಾರಸುಗಳನ್ನ ಅಧಿಕಾರಿಗಳು ಮಾಡಿಕೊಟ್ಟಿಲ್ಲ. ಈ ಬಗ್ಗೆ ಮಾತನಾಡುವುದಕ್ಕೆ ಕುಮಾರಸ್ವಾಮಿ ಅವರು ನಮಗೆ ಸಮಯನ್ನೇ ಕೊಡಲಿಲ್ಲ. ನಾವು ಪಕ್ಷಕ್ಕಾಗಿ ದುಡಿದಿಲ್ಲವೇ? ಸರ್ಕಾರ ಇದ್ದಾಗ ನಮ್ಮನ್ನ ದೂರ ಇಟ್ಟರು, ನಮ್ಮ ಸಮಸ್ಯೆಯನ್ನೆ ಕೇಳಿಲ್ಲ. ಕಾಂಗ್ರೆಸ್ ಸಚಿವರು ನಮ್ಮ ಕೆಲಸಗಳನ್ನ ಮಾಡಿಕೊಡಲಿಲ್ಲ. ಈ ಬಗ್ಗೆ ಕುಮಾರಸ್ವಾಮಿ ಗಮನಕ್ಕೆ ತಂದರೂ ಏನು ಪ್ರಯೋಜನವಾಗಲಿಲ್ಲ. ಹೀಗಿದ್ದರೆ ನಾವು ಹೇಗೆ ಪಕ್ಷದ ಜೊತೆ ಇರಬೇಕು ಹೇಳಿ. ಪಕ್ಷದ ಕಾರ್ಯಕರ್ತರಿಗೆ ಯಾವುದೇ ಹುದ್ದೆ ನೀಡಿಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.

ವಿಧಾನ ಪರಿಷತ್ ಸದಸ್ಯರ ತರಾಟೆಯಿಂದ ಹೆಚ್ಚೆತ್ತುಕೊಂಡ ಎಚ್.ಡಿ.ಕುಮಾರಸ್ವಾಮಿ ಅವರು, ನನ್ನಿಂದ ತಪ್ಪು ಆಗಿದ್ದರೆ, ನಿಮ್ಮ ಮನಸ್ಸು ನೊಂದಿದ್ದರೆ ಕ್ಷಮೆ ಕೋರುತ್ತೇನೆ. ನಾನು ಸಿಎಂ ಆಗಿದ್ದಾಗ 24 ಗಂಟೆಯೂ ಒತ್ತಡದಲ್ಲಿ ಇರುತ್ತಿದ್ದೆ. ಶಾಸಕರು, ಸಚಿವರು ಮತ್ತು ಅಧಿಕಾರಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಬೇಕಿತ್ತು. ಈ ಸಂದರ್ಭದಲ್ಲಿ ನಿಮ್ಮನ್ನು ಕಡೆಗಣನೆ ಮಾಡಿದ್ದರೆ ಇದಕ್ಕೆ ಕ್ಷಮೆ ಕೋರುತ್ತೇನೆ. ಮುಂದೆ ಎಚ್.ಡಿ.ದೇವೇಗೌಡರ ಅಣತಿಯಂತೆ ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಅಂತ ಕೇಳಿದರು ಎಂದು ಮೂಲಗಳಿಂದ ಮಾಹಿತಿ ಲಭಿಸಿದೆ.

HDD JDS

ಈ ವೇಳೆ ಮಧ್ಯೆ ಪ್ರವೇಶಿಸಿ ಎಲ್ಲರನ್ನೂ ಕೈ ಮುಗಿದು ಕೇಳಿಕೊಂಡ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಸಣ್ಣ ಮನಸ್ತಾಪದಿಂದ ನಾವು ಪ್ರಾದೇಶಿಕ ಪಕ್ಷವನ್ನು ಹಾಳು ಮಾಡುವುದು ಬೇಡ. ನಮ್ಮನ್ನು ನಂಬಿ ಸಾವಿರಾರು ಕಾರ್ಯಕರ್ತರು ಇದ್ದಾರೆ. ಎಚ್.ಡಿ.ಕುಮಾರಸ್ವಾಮಿ ಅವರಿಗೆ ನಾನು ಬುದ್ಧಿ ಹೇಳುತ್ತೇನೆ. ಮುಂದೆ ಹೀಗೆ ಆಗದಂತೆ ನಾನು ಭಾಷೆ ಕೊಡುತ್ತೇನೆ ಎಂದು ಸಭೆಯಲ್ಲಿ ಭಾವುಕರಾದರು.

ಎಚ್.ಡಿ.ದೇವೇಗೌಡ ಅವರ ಮಾತಿಗೆ ಹಾಗೂ ಎಚ್.ಡಿ.ಕುಮಾರಸ್ವಾಮಿ ಕ್ಷಮೆಗೆ ಬೆಲೆ ನೀಡಿ ಪಕ್ಷದ ಸಂಘಟನೆಗೆ ಮುಂದಾಗುತ್ತೇವೆ ಎಂದು ವಿಧಾನಸಭೆಯ ಜೆಡಿಎಸ್ ಸದಸ್ಯರು ಪ್ರಮಾಣ ಮಾಡಿದರು. ಈ ಮೂಲಕ ಸಂಧಾನ ಸಭೆ ಸಫಲವಾಗಿದೆ.

TAGGED:h d kumaraswamyH.D.Deve GowdajdsMLCsPublic TVಎಚ್ ಡಿ ಕುಮಾರಸ್ವಾಮಿಎಚ್.ಡಿ. ದೇವೇಗೌಡಜೆಡಿಎಸ್ಪಬ್ಲಿಕ್ ಟಿವಿಬಸವರಾಜ ಹೊರಟ್ಟಿವಿಧಾನ ಪರಿಷತ್ ಸದಸ್ಯರುಸಂಧಾನ ಸಭೆ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

sudeep 3
`ರಾತ್ರಿನೇ ಸಿಗೋಣವಾ… ಎಂದ ಕಿಚ್ಚ; ಅಭಿಮಾನಿಗಳಿಗೆ ಸುದೀಪ್‌ ಪತ್ರ
Cinema Latest Sandalwood Top Stories
Madarasi Cinema
ಮದರಾಸಿ ಟ್ರೈಲರ್‌ ರಿಲೀಸ್ – ಮಾಸ್ ಲುಕ್‌ನಲ್ಲಿ ಶಿವಕಾರ್ತಿಕೇಯನ್
Cinema Latest South cinema Top Stories
Mangalapuram 1
ಮಂಗಳಾಪುರಂ ಚಿತ್ರಕ್ಕೆ ಬಿಗ್ ಬಾಸ್ ಖ್ಯಾತಿಯ ಗೌತಮಿ ನಾಯಕಿ
Cinema Latest Sandalwood
Madenuru Manu 1
ಶಿವಣ್ಣನ ಕಾಲಿಗೆ ಬಿದ್ದು ಕ್ಷಮೆ ಕೇಳಿದ ಮಡೆನೂರು ಮನು
Cinema Latest Sandalwood Top Stories
Parineeti Chopra and Raghav Chadha
1+ 1 = 3 ಎಂದರು ನಟಿ ಪರಿಣಿತಿ ಚೋಪ್ರಾ
Bollywood Cinema Latest Top Stories

You Might Also Like

Mysuru 2
Crime

ಪ್ರಿಯತಮೆಯ ಬಾಯಿಗೆ ಜಿಲೆಟಿನ್ ಕಡ್ಡಿ ಇಟ್ಟು ಸ್ಫೋಟಿಸಿ ಹತ್ಯೆ – ಪ್ರಿಯಕರ ಅರೆಸ್ಟ್‌

Public TV
By Public TV
2 minutes ago
Narendra Modi
Court

ಮೋದಿ ಪದವಿಯ ವಿವರ ಬಹಿರಂಗಪಡಿಸುವ ಅಗತ್ಯವಿಲ್ಲ: ದೆಹಲಿ ಹೈಕೋರ್ಟ್

Public TV
By Public TV
4 minutes ago
Jodhpur Lecturer Sets Herself Daughter On Fire Note Points To Dowry Harassment
Crime

ವರದಕ್ಷಿಣೆ ಕಿರುಕುಳ – 3 ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕಿ

Public TV
By Public TV
12 minutes ago
Ganesha
Latest

ಶ್ರೀಮಂತ ಗಣಪನಿಗೆ ಈ ಬಾರಿ 474 ಕೋಟಿ ರೂ. ವಿಮೆ – ಏನಿದ್ರ ವಿಶೇಷತೆ ಅಂತೀರಾ?

Public TV
By Public TV
17 minutes ago
01
Latest

ಶ್ರೀಮಂತ ಗಣಪನಿಗೆ ಈ ಬಾರಿ 400 ಕೋಟಿ ರೂ. ವಿಮೆ – ಏನಿದ್ರ ವಿಶೇಷತೆ ಅಂತೀರಾ?

Public TV
By Public TV
33 minutes ago
Rahul Mamkootathil
Latest

ಲೈಂಗಿಕ ಕಿರುಕುಳದ ಆರೋಪ – ಕಾಂಗ್ರೆಸ್‌ನ ಪಾಲಕ್ಕಾಡ್ ಶಾಸಕ ರಾಹುಲ್ ಅಮಾನತು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?