Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸುಳ್‌ ಬಿಜೆಪಿ, ಸುಳ್‌ ಸಿಎಂ; ಕಮಲದ ಕಣ್ಣಿಗೆ ಕಾಮಾಲೆ ಎನ್ನುವುದು ಖರೆ – ಜೆಡಿಎಸ್‌ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸುಳ್‌ ಬಿಜೆಪಿ, ಸುಳ್‌ ಸಿಎಂ; ಕಮಲದ ಕಣ್ಣಿಗೆ ಕಾಮಾಲೆ ಎನ್ನುವುದು ಖರೆ – ಜೆಡಿಎಸ್‌ ಕಿಡಿ

Bengaluru City

ಸುಳ್‌ ಬಿಜೆಪಿ, ಸುಳ್‌ ಸಿಎಂ; ಕಮಲದ ಕಣ್ಣಿಗೆ ಕಾಮಾಲೆ ಎನ್ನುವುದು ಖರೆ – ಜೆಡಿಎಸ್‌ ಕಿಡಿ

Public TV
Last updated: November 13, 2022 11:03 am
Public TV
Share
3 Min Read
BASAVARAJ BOMMAI 10
SHARE

ಬೆಂಗಳೂರು: ನಾಡಪ್ರಭು ಕೆಂಪೇಗೌಡ ಜಯಂತಿ (Kempegowda Jayanti) ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರನ್ನು (H.D.Devegowda) ಆಹ್ವಾನ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ (BJP) ಸಮರ್ಥನೆಗೆ ಜೆಡಿಎಸ್‌ (JDS) ಕೆಂಡಾಮಂಡಲವಾಗಿದೆ. ʼಸುಳ್‌ ಬಿಜೆಪಿ, ಸುಳ್‌ ಸಿಎಂʼ ಎಂದು ಹ್ಯಾಷ್‌ ಟ್ಯಾಗ್‌ ಹಾಕಿ ಸರಣಿ ಟ್ವೀಟ್‌ ಮೂಲಕ ಜೆಡಿಎಸ್‌ ಕಿಡಿಕಾರಿದೆ.

ನಾಡಪ್ರಭುಗಳ ಪ್ರತಿಮೆ ಅನಾವರಣಕ್ಕೆ ಮಾಜಿ ಪ್ರಧಾನಿಗಳಾದ ಶ್ರೀ @H_D_Devegowda ರನ್ನು ಆಹ್ವಾನಿಸದೆ ರಾಜ್ಯ @BJP4Karnataka ಸರಕಾರ ಶಿಷ್ಟಾಚಾರ ಲೋಪ ಎಸಗಿದ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿ ಉತ್ತರ ನೀಡಬೇಕೇ ಹೊರತು ಬಿಜೆಪಿ ಅಲ್ಲ.
ಇಷ್ಟಕ್ಕೂ ಅದು ಕೇಶವಕೃಪದ ಕಾರ್ಯಕ್ರಮವಲ್ಲ. 1/12#ಸುಳ್_ಬಿಜೆಪಿ #ಸುಳ್_ಸಿಎಂ

— Janata Dal Secular (@JanataDal_S) November 13, 2022

ಟ್ವೀಟ್‌ನಲ್ಲೇನಿದೆ?
ನಾಡಪ್ರಭುಗಳ ಪ್ರತಿಮೆ ಅನಾವರಣಕ್ಕೆ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ಅವರನ್ನು ಆಹ್ವಾನಿಸದೆ ರಾಜ್ಯ ಸರ್ಕಾರ ಶಿಷ್ಟಾಚಾರ ಲೋಪ ಎಸಗಿದ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಉತ್ತರ ನೀಡಬೇಕೇ ಹೊರತು ಬಿಜೆಪಿ ಅಲ್ಲ. ಇಷ್ಟಕ್ಕೂ ಅದು ಕೇಶವಕೃಪದ ಕಾರ್ಯಕ್ರಮವಲ್ಲ. ಇದನ್ನೂ ಓದಿ: ಮೋದಿ ಹಾದಿಯಲ್ಲೆ ಸಿದ್ದರಾಮಯ್ಯ – ಜಾತಿ, ಧರ್ಮ ಸಮೀಕರಣಕ್ಕೆ ರಣತಂತ್ರ

ʼಬೂಟಾಟಿಕೆ ದಾಸಯ್ಯನಿಗೆ ಮೈಯಲ್ಲಾ ಪಂಗನಾಮʼ ಎನ್ನುವಂತಿದೆ ಬಿಜೆಪಿ ಪರಿಸ್ಥಿತಿ.
ಕೊಳಕು, ವಿಕೃತಿಗಳ ಮಹಾಸಂಗಮವೇ ಬಿಜೆಪಿ. ರಕ್ತಪೀಪಾಸುತನ, ನರಹಂತಕ ಮನಃಸ್ಥಿತಿಯೇ ಬಿಜೆಪಿಯ ನೈಜಮುಖ. ಆಪರೇಷನ್‌ ಕಮಲವೇ ಅದರ ಶಿಷ್ಟಾಚಾರ, ಸುಳ್ಳಿನ ಪ್ರಚಾರವೇ ಅದರ ಸಂಸ್ಕಾರ. 2/12#ಗೊಬೆಲ್_ಬಿಜೆಪಿ #gobel_bjp

— Janata Dal Secular (@JanataDal_S) November 13, 2022

ʼಬೂಟಾಟಿಕೆ ದಾಸಯ್ಯನಿಗೆ ಮೈಯಲ್ಲಾ ಪಂಗನಾಮʼ ಎನ್ನುವಂತಿದೆ ಬಿಜೆಪಿ ಪರಿಸ್ಥಿತಿ. ಕೊಳಕು, ವಿಕೃತಿಗಳ ಮಹಾಸಂಗಮವೇ ಬಿಜೆಪಿ. ರಕ್ತಪೀಪಾಸುತನ, ನರಹಂತಕ ಮನಃಸ್ಥಿತಿಯೇ ಬಿಜೆಪಿಯ ನೈಜಮುಖ. ಆಪರೇಷನ್‌ ಕಮಲವೇ ಅದರ ಶಿಷ್ಟಾಚಾರ, ಸುಳ್ಳಿನ ಪ್ರಚಾರವೇ ಅದರ ಸಂಸ್ಕಾರ.

ಶ್ರೀ ಹೆಚ್.ಡಿ.ದೇವೇಗೌಡರನ್ನು ಜೆಡಿಎಸ್ ಎಂದಿಗೂ ಜಾತಿ ರಾಜಕಾರಣಕ್ಕೆ ಬಳಸಿಕೊಂಡಿಲ್ಲ. ಆದರೆ, ಶ್ರೀ @narendramodi ಅವರ ಅರ್ಧದಿನದ ʼಕರ್ನಾಟಕದ ಕಾಟಾಚಾರದ ಭೇಟಿʼ ಏನನ್ನು ಗುರಿ ಮಾಡಿಕೊಂಡಿತ್ತು? ಎನ್ನುವುದನ್ನು ಮಾಧ್ಯಮಗಳೇ ನಿರಂತರವಾಗಿ ವರದಿ ಮಾಡುತ್ತಿರುವುದು ಕಾಣುತ್ತಿಲ್ಲವೇ?
ಕಮಲದ ಕಣ್ಣಿಗೆ ಕಾಮಾಲೆ ಎನ್ನುವುದು ಖರೆ. 3/12

— Janata Dal Secular (@JanataDal_S) November 13, 2022

ಹೆಚ್.ಡಿ.ದೇವೇಗೌಡರನ್ನು ಜೆಡಿಎಸ್ ಎಂದಿಗೂ ಜಾತಿ ರಾಜಕಾರಣಕ್ಕೆ ಬಳಸಿಕೊಂಡಿಲ್ಲ. ಆದರೆ ಅವರ ಅರ್ಧದಿನದ ʼಕರ್ನಾಟಕದ ಕಾಟಾಚಾರದ ಭೇಟಿʼ ಏನನ್ನು ಗುರಿ ಮಾಡಿಕೊಂಡಿತ್ತು? ಎನ್ನುವುದನ್ನು ಮಾಧ್ಯಮಗಳೇ ನಿರಂತರವಾಗಿ ವರದಿ ಮಾಡುತ್ತಿರುವುದು ಕಾಣುತ್ತಿಲ್ಲವೇ? ಕಮಲದ ಕಣ್ಣಿಗೆ ಕಾಮಾಲೆ ಎನ್ನುವುದು ಖರೆ.

ಮಾಜಿ ಪ್ರಧಾನಿಗಳನ್ನು ಸಮಾರಂಭಕ್ಕೆ ಆಹ್ವಾನಿಸಿಲ್ಲ ಎಂದು ಪ್ರಶ್ನೆ ಮಾಡಿದ್ದನ್ನೇ ʼಮಹಾ ಅಪರಾಧʼ ಎಂದು ಚಿತ್ರಿಸುತ್ತಿರುವ ಬಿಜೆಪಿಯ ವಿಕೃತಿ ಆದಿಯಿಂದಲೂ ಧರ್ಮ, ಜಾತಿ ಮತ್ತು ಸುಳ್ಳಿನ ಸುತ್ತಲೇ ಗಿರಕಿ ಹೊಡೆಯುತ್ತಿದೆ ಎನ್ನುವುದು ಸಾರ್ವಕಾಲಿಕ ಸತ್ಯ. ಸತ್ಯವನ್ನು ಮಿಥ್ಯೆ ಎನ್ನಲಾದಿತೆ? 4/12

— Janata Dal Secular (@JanataDal_S) November 13, 2022

ಮಾಜಿ ಪ್ರಧಾನಿಗಳನ್ನು ಸಮಾರಂಭಕ್ಕೆ ಆಹ್ವಾನಿಸಿಲ್ಲ ಎಂದು ಪ್ರಶ್ನೆ ಮಾಡಿದ್ದನ್ನೇ ʼಮಹಾ ಅಪರಾಧʼ ಎಂದು ಚಿತ್ರಿಸುತ್ತಿರುವ ಬಿಜೆಪಿಯ ವಿಕೃತಿ ಆದಿಯಿಂದಲೂ ಧರ್ಮ, ಜಾತಿ ಮತ್ತು ಸುಳ್ಳಿನ ಸುತ್ತಲೇ ಗಿರಕಿ ಹೊಡೆಯುತ್ತಿದೆ ಎನ್ನುವುದು ಸಾರ್ವಕಾಲಿಕ ಸತ್ಯ. ಸತ್ಯವನ್ನು ಮಿಥ್ಯೆ ಎನ್ನಲಾದಿತೆ? ಇದನ್ನೂ ಓದಿ: ಕೆಂಪೇಗೌಡ ಪ್ರತಿಮೆ ನೋಡಿ ತನ್ವೀರ್ ಸೇಠ್‍ಗೆ ಹೊಟ್ಟೆ ಕಿಚ್ಚು: ಮಂಜುನಾಥ್

ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಅಸ್ತಿತ್ವದ ಭಯ ಎನ್ನುವುದು ಹಾಗಿರಲಿ, ಪ್ರಧಾನಿಯ ನಾಮಬಲ ಒಂದಿಲ್ಲದಿದ್ದರೆ ನಿಮಗೆ ಠೇವಣಿಗೂ ಖಾತರಿ ಇಲ್ಲ. ಇನ್ನು 6 ತಿಂಗಳಲ್ಲಿ ಮೋದಿ ಅವರು ಎಷ್ಟು ಸಲ ಕರ್ನಾಟಕಕ್ಕೆ ಓಡೋಡಿ ಬರುತ್ತಾರೋ ನೋಡೋಣ. ಅಲ್ಲಿ ನಿಮ್ಮ ಯೋಗ್ಯತೆಯ ಅಳತೆ ಎಷ್ಟು? ಎಂಬುದು ಗೊತ್ತಾಗುತ್ತದೆ. 5/12

— Janata Dal Secular (@JanataDal_S) November 13, 2022

ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಅಸ್ತಿತ್ವದ ಭಯ ಎನ್ನುವುದು ಹಾಗಿರಲಿ, ಪ್ರಧಾನಿಯ ನಾಮಬಲ ಒಂದಿಲ್ಲದಿದ್ದರೆ ನಿಮಗೆ ಠೇವಣಿಗೂ ಖಾತರಿ ಇಲ್ಲ. ಇನ್ನು 6 ತಿಂಗಳಲ್ಲಿ ಮೋದಿ ಅವರು ಎಷ್ಟು ಸಲ ಕರ್ನಾಟಕಕ್ಕೆ ಓಡೋಡಿ ಬರುತ್ತಾರೋ ನೋಡೋಣ. ಅಲ್ಲಿ ನಿಮ್ಮ ಯೋಗ್ಯತೆಯ ಅಳತೆ ಎಷ್ಟು? ಎಂಬುದು ಗೊತ್ತಾಗುತ್ತದೆ.

ಬಿಜೆಪಿಯ ಒಕ್ಕಲಿಗ ನಾಯಕರು ಮುನ್ನೆಲೆಗೆ ಬರುವುದನ್ನು ಕುಮಾರಸ್ವಾಮಿ ಅವರು ಸಹಿಸುತ್ತಿಲ್ಲ ಎನ್ನುತ್ತಿದೆ ಬಿಜೆಪಿ!! ʼಭೂತದ ಬಾಯಲ್ಲಿ ಭಗದ್ಗೀತೆʼ ಎಂದರೆ ಇದೇ. ಧರ್ಮ, ಜಾತಿ, ಆಚಾರ, ವಿಚಾರ, ಆಹಾರದ ವಿಷಯದಲ್ಲೇ ವಿಷ-ವಿಕೃತಿಗಳನ್ನು ಬಿತ್ತಿದ ಬಿಜೆಪಿ, ಈಗ ಸಹಿಷ್ಣುತೆಯ ಬಗ್ಗೆ ಪಾಠ ಬಿಗಿಯುತ್ತಿದೆ!! 6/12

— Janata Dal Secular (@JanataDal_S) November 13, 2022

ಬಿಜೆಪಿಯ ಒಕ್ಕಲಿಗ ನಾಯಕರು ಮುನ್ನೆಲೆಗೆ ಬರುವುದನ್ನು ಕುಮಾರಸ್ವಾಮಿ ಅವರು ಸಹಿಸುತ್ತಿಲ್ಲ ಎನ್ನುತ್ತಿದೆ ಬಿಜೆಪಿ. ಭೂತದ ಬಾಯಲ್ಲಿ ಭಗದ್ಗೀತೆʼ ಎಂದರೆ ಇದೇ. ಧರ್ಮ, ಜಾತಿ, ಆಚಾರ, ವಿಚಾರ, ಆಹಾರದ ವಿಷಯದಲ್ಲೇ ವಿಷ-ವಿಕೃತಿಗಳನ್ನು ಬಿತ್ತಿದ ಬಿಜೆಪಿ, ಈಗ ಸಹಿಷ್ಣುತೆಯ ಬಗ್ಗೆ ಪಾಠ ಬಿಗಿಯುತ್ತಿದೆ.

20 ದಿನಗಳ ಹಿಂದೆ ಸಚಿವ @drashwathcn ಅವರು ಮಾಜಿ ಪ್ರಧಾನಿಗಳ ನಿವಾಸಕ್ಕೆ ಭೇಟಿ ನೀಡಿ ಮೃತ್ತಿಕೆ ಸಂಗ್ರಹದ ಬಗ್ಗೆ ತಿಳಿಸಿ ಆಹ್ವಾನಿಸಿದ್ದರಷ್ಟೇ. ಆದರೆ,ಮುಖ್ಯಮಂತ್ರಿಗಳು ಪ್ರತಿಮೆ ಅನಾವರಣಕ್ಕೆ ಆಹ್ವಾನಿಸಿದ್ದರು ಮತ್ತೂ ಆಹ್ವಾನ ಪತ್ರಿಕೆಯಲ್ಲೂ ಶ್ರೀ ದೇವೇಗೌಡರ ಹೆಸರನ್ನು ನಮೂದಿಸಲಾಗಿತ್ತೆಂದು ಹಸಿಸುಳ್ಳನ್ನೇ ಬಿಜೆಪಿ ಟ್ವೀಟಿಸಿದೆ. 7/12

— Janata Dal Secular (@JanataDal_S) November 13, 2022

20 ದಿನಗಳ ಹಿಂದೆ ಸಚಿವ ಅವರು ಮಾಜಿ ಪ್ರಧಾನಿಗಳ ನಿವಾಸಕ್ಕೆ ಭೇಟಿ ನೀಡಿ ಮೃತ್ತಿಕೆ ಸಂಗ್ರಹದ ಬಗ್ಗೆ ತಿಳಿಸಿ ಆಹ್ವಾನಿಸಿದ್ದರಷ್ಟೇ. ಆದರೆ ಮುಖ್ಯಮಂತ್ರಿಗಳು ಪ್ರತಿಮೆ ಅನಾವರಣಕ್ಕೆ ಆಹ್ವಾನಿಸಿದ್ದರು. ಆಹ್ವಾನ ಪತ್ರಿಕೆಯಲ್ಲೂ ದೇವೇಗೌಡರ ಹೆಸರನ್ನು ನಮೂದಿಸಲಾಗಿತ್ತೆಂದು ಹಸಿಸುಳ್ಳನ್ನೇ ಬಿಜೆಪಿ ಟ್ವೀಟಿಸಿದೆ.

ಬಿಜೆಪಿ ʼಗೊಬೆಲ್ ಸಂತತಿಯ ಶಿಶುʼ ಎನ್ನುವುದಕ್ಕೆ ಇದಕ್ಕಿಂತ ಸತ್ಯ ಸಾಕ್ಷ್ಯ ಬೇಕಾ? ʼಸುಳ್‌ ಬಿಜೆಪಿʼಗೆ ಸತ್ಯವೆಂದರೆ ಅಪಥ್ಯ. ಮುಖ್ಯಮಂತ್ರಿಗಳಾದ ಶ್ರೀ @BSBommai ಅವರು ʼಸುಳ್‌ ಸಿಎಂʼ ಎಂದೇ ಪ್ರಖ್ಯಾತಿ ಆಗುತ್ತಿದ್ದಾರೆ. ಇದಲ್ಲವೇ ವಿಪರ್ಯಾಸ? 8/12

— Janata Dal Secular (@JanataDal_S) November 13, 2022

ಬಿಜೆಪಿ ʼಗೊಬೆಲ್ ಸಂತತಿಯ ಶಿಶುʼ ಎನ್ನುವುದಕ್ಕೆ ಇದಕ್ಕಿಂತ ಸತ್ಯ ಸಾಕ್ಷ್ಯ ಬೇಕಾ? ʼಸುಳ್‌ ಬಿಜೆಪಿʼಗೆ ಸತ್ಯವೆಂದರೆ ಅಪಥ್ಯ. ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ʼಸುಳ್‌ ಸಿಎಂʼ ಎಂದೇ ಪ್ರಖ್ಯಾತಿ ಆಗುತ್ತಿದ್ದಾರೆ. ಇದಲ್ಲವೇ ವಿಪರ್ಯಾಸ?

ನಾಡಪ್ರಭುಗಳ ವಿಚಾರದಲ್ಲೂ ಜೆಡಿಎಸ್ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ಹೇಳಿದೆ. ಅರ್ಧದಿನದ ಅರೆಬರೆ ಭೇಟಿಯಲ್ಲಿ ಘನವೇತ್ತ ಪ್ರಧಾನಿಗಳು ಮಾಡಿದ್ದಾದರೂ ಏನು? 'ಒಂದೇ ಕಲ್ಲಿನಲ್ಲಿ ನಾಲ್ಕು ಜಾತಿಗಳ ಮತಬುಟ್ಟಿಗೆ ಕೈ ಹಾಕಿದ ಪ್ರಧಾನಿ' / 'ಪ್ರತಿಮಾ ಪಥ, ಮೋದಿ ರಥ' ಎನ್ನುವ ಸುದ್ದಿಗಳನ್ನು @BJP4Karnataka ನೋಡಲಿಲ್ಲವೆ? 10/11

— Janata Dal Secular (@JanataDal_S) November 13, 2022

ಮುಖ್ಯಮಂತ್ರಿಗಳು ಪತ್ರ ಬರೆದಿದ್ದಾರೆ, ಸ್ವತಃ ಫೋನ್‌ ಕರೆ ಮೂಲಕ ದೇವೇಗೌಡರನ್ನು ಆಹ್ವಾನಿಸಿದ್ದಾರೆ ಎಂದು ‘ಗೊಬೆಲ್ ಬಿಜೆಪಿ’ ಟ್ವೀಟಿಸಿ ಸುಳ್ಳು ಹೇಳಿದೆ. ಸತ್ಯ ಏನೆಂಬುದನ್ನು ನಾವೂ ಟ್ವೀಟಿನಲ್ಲೇ ರಾಜ್ಯದ ಜನತೆಗೆ ನಿವೇದಿಸಿದ್ದೇವೆ. ಅದನ್ನು ಓದಲು ʼಗೊಬೆಲ್‌ ಬಿಜೆಪಿʼಗೆ ಗರ ಬಡಿದಿದೆಯಾ?

ನಾಡಪ್ರಭುಗಳ ವಿಚಾರದಲ್ಲೂ ಜೆಡಿಎಸ್ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ಹೇಳಿದೆ. ಅರ್ಧದಿನದ ಅರೆಬರೆ ಭೇಟಿಯಲ್ಲಿ ಘನವೇತ್ತ ಪ್ರಧಾನಿಗಳು ಮಾಡಿದ್ದಾದರೂ ಏನು? ‘ಒಂದೇ ಕಲ್ಲಿನಲ್ಲಿ ನಾಲ್ಕು ಜಾತಿಗಳ ಮತಬುಟ್ಟಿಗೆ ಕೈ ಹಾಕಿದ ಪ್ರಧಾನಿ’ / ‘ಪ್ರತಿಮಾ ಪಥ, ಮೋದಿ ರಥ’ ಎನ್ನುವ ಸುದ್ದಿಗಳನ್ನು ನೋಡಲಿಲ್ಲವೆ? ಇದನ್ನೂ ಓದಿ: 224 ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಎಲ್ಲೇ ನಿಂತರೂ ಗೆಲುವು ಖಚಿತ – ನಜೀರ್ ಅಹಮದ್

ಕೊನೆಯದಾಗಿ; ಸಂಸ್ಕಾರವೇ ಗೊತ್ತಿಲ್ಲದ ಪಕ್ಷಕ್ಕೆ ಶಿಷ್ಟಾಚಾರ ಮಾತೇಕೆ? ಅದು ತನಗಿಲ್ಲ ಎಂದು @BJP4Karnataka ಸಾಬೀತುಪಡಿಸಿದೆ. ಕನ್ನಡದ ಆಚಾರ-ವಿಚಾರಕ್ಕೆ ಕೊಡಲಿ ಪೆಟ್ಟು ಹಾಕುತ್ತಿರುವ ಆ ಪಕ್ಷ, ಕನ್ನಡನಾಡಿಗೆ ಬಹುದೊಡ್ಡ ಬೆದರಿಕೆ. 12/12#ಗೊಬೆಲ್_ಬಿಜೆಪಿ #gobel_bjp

— Janata Dal Secular (@JanataDal_S) November 13, 2022

ಕಮಲಕ್ಕೆ ಕಾಮಾಲೆ ಕಣ್ಣು ಎನ್ನುವುದು ನಾಟಕವೋ, ಬೂಟಕವೋ? ಜಾತಿವಾರು ಮತಗಳ ಧ್ರುವೀಕರಣಕ್ಕೆ ಹೊರಟವರು ಯಾರು? ಕೆಂಪೇಗೌಡರನ್ನು ರಾಜಕೀಯಕ್ಕೆ ಎಳೆದು ತಂದವರು ಯಾರು? ಸಂತ ಕನಕದಾಸರ ʼಕುಲ ಕುಲವೆಂದು ಹೊಡೆದಾಡದಿರಿ..ʼ ಪದವನ್ನು ಹೇಳುತ್ತಲೇ ʼಕುಲಕಿಚ್ಚಿನ ರಾಜಕೀಯʼ ಮಾಡಿದವರು ಯಾರು? ಅಂಗೈ ಹುಣ್ಣಿಗೆ ಕನ್ನಡಿ ಯಾಕೆ?

ಕೊನೆಯದಾಗಿ; ಸಂಸ್ಕಾರವೇ ಗೊತ್ತಿಲ್ಲದ ಪಕ್ಷಕ್ಕೆ ಶಿಷ್ಟಾಚಾರ ಮಾತೇಕೆ? ಅದು ತನಗಿಲ್ಲ ಎಂದು ಬಿಜೆಪಿ ಸಾಬೀತುಪಡಿಸಿದೆ. ಕನ್ನಡದ ಆಚಾರ-ವಿಚಾರಕ್ಕೆ ಕೊಡಲಿ ಪೆಟ್ಟು ಹಾಕುತ್ತಿರುವ ಆ ಪಕ್ಷ, ಕನ್ನಡನಾಡಿಗೆ ಬಹುದೊಡ್ಡ ಬೆದರಿಕೆ ಎಂದು ಬಿಜೆಪಿ ವಿರುದ್ಧ ಜೆಡಿಎಸ್‌ ಹರಿಹಾಯ್ದಿದೆ.

Live Tv
[brid partner=56869869 player=32851 video=960834 autoplay=true]

TAGGED:bjph d devegowdajdsKempegowda Jayantiಕೆಂಪೇಗೌಡ ಜಯಂತಿಜೆಡಿಎಸ್ಬಿಜೆಪಿಹೆಚ್.ಡಿ.ದೇವೇಗೌಡ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Engagement
Crime

ಇಂದು ನಿಶ್ಚಿತಾರ್ಥ, ನಿನ್ನೆ ರಾತ್ರಿ ಇಬ್ರಾಹಿಂ ಜೊತೆ ಪರಾರಿ – ಲವ್‌ ಜಿಹಾದ್‌ ಆರೋಪ

Public TV
By Public TV
1 hour ago
Delhi Airport SWISS Flight Fire
Latest

ಟೇಕಾಫ್ ವೇಳೆ ಎಂಜಿನ್ ವೈಫಲ್ಯದಿಂದ ಸ್ವಿಸ್ ವಿಮಾನದಲ್ಲಿ ಬೆಂಕಿ – 6 ಮಂದಿಗೆ ಗಾಯ

Public TV
By Public TV
2 hours ago
White House Correspondents Dinner
Latest

Explained| ಏನಿದು ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಡಿನ್ನರ್? ಅಧ್ಯಕ್ಷರು ಯಾಕೆ ಬರುತ್ತಾರೆ? ಹಿಲ್ಟನ್ ಹೋಟೆಲ್‌ನಲ್ಲೇ ಆಯೋಜನೆ ಯಾಕೆ?

Public TV
By Public TV
2 hours ago
White House Dinner shooting How did the attacker Cole Tomas Allen break into the Trump dinner party despite ample security
Latest

ದಾಳಿಗೂ ಮುನ್ನವೇ ಪ್ಲ್ಯಾನ್‌ – ಸಾಕಷ್ಟು ಭದ್ರತೆ ಇದ್ದರೂ ದಾಳಿಕೋರ ಟ್ರಂಪ್‌ ಡಿನ್ನರ್‌ ಪಾರ್ಟಿಗೆ ನುಗ್ಗಿದ್ದು ಹೇಗೆ?

Public TV
By Public TV
3 hours ago
Public Tv Vidhyapeeta 6
Bengaluru City

ಪಬ್ಲಿಕ್ ಟಿವಿ ವಿದ್ಯಾಪೀಠಕ್ಕೆ ಇಂದು ಕೊನೆ ದಿನ – ಬನ್ನಿ, ಭಾಗವಹಿಸಿ, ಮಾಹಿತಿ ಪಡೆಯಿರಿ

Public TV
By Public TV
3 hours ago
Narendra Modi 1 2
Latest

White House Dinner Shooting | ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಸ್ಥಾನವಿಲ್ಲ: ಮೋದಿ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?