ಮಧ್ಯರಾತ್ರಿ ಬೆಂಗ್ಳೂರಿಗೆ ಧಾವಿಸಿದ ಹೆಚ್‍ಡಿಕೆ- ಬಿಜೆಪಿ ನಾಯಕರು ಇರೋ ಹೋಟೆಲ್‍ನಲ್ಲೇ ವಾಸ್ತವ್ಯ!

Public TV
1 Min Read
HDK 2

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಿಡ್‍ನೈಟ್ ಪೊಲಿಟಿಕಲ್ ಡ್ರಾಮಾ ನಡೆದಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ವಾಸ್ತವ್ಯ ಹೂಡಿರುವ ಹೋಟೆಲ್ ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿಕೆ ಭೇಟಿ ನೀಡಿದ್ದಾರೆ.

ನಗರದ ತಾಜ್ ವೆಸ್ಟಂಡ್ ಹೋಟೆಲ್ ಗೆ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಶ್ಯಾಂಗ್ರಿಲಾ ಹೋಟೆಲ್ ನಲ್ಲಿ ಬಿಜೆಪಿ ನಾಯಕರ ಜೊತೆ ರಾತ್ರಿ 10.20ರ ಸುಮಾರಿಗೆ ಸಭೆ ನಡೆಸಿದ ಬಳಿಕ ತಾಜ್ ವೆಸ್ಟಂಡ್ ಹೋಟೆಲ್ ಗೆ ಬಿಎಸ್ ವೈ ಬಂದಿದ್ದಾರೆ. ಇದಾದ ಬಳಿಕ ಮಧ್ಯರಾತ್ರಿ 2 ಗಂಟೆಗೆ ಸರಿಯಾಗಿ ಹೆಚ್. ಡಿ ಕುಮಾರಸ್ವಾಮಿ ಹೋಟೆಲ್ ಗೆ ಆಗಮಿಸಿದ್ದಾರೆ.

vlcsnap 2018 05 19 06h55m00s148

ಅಲ್ಲದೇ ಯಡಿಯೂರಪ್ಪ ವಾಸ್ತವ್ಯ ಹೂಡಿರುವ ಹೋಟೆಲ್ ನಲ್ಲೇ ಕುಮಾರಸ್ವಾಮಿ ಕೂಡ ವಾಸ್ತವ್ಯ ಹೂಡಿದ್ದಾರೆ. ಉಭಯ ಪಕ್ಷಗಳ ನಾಯಕರು ಒಂದೇ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿರುವುದು ಇದೀಗ ತೀವ್ರ ಕುತೂಹಲ ಮೂಡಿಸಿದೆ.

ತಾಜ್ ವೆಸ್ಟಂಡ್ ಹೋಟೆಲ್ ನಲ್ಲಿ ಬಿಜೆಪಿ ನಾಯಕರಾದ ಪ್ರಕಾಶ್ ಜಾವ್ಡೇಕರ್, ಜೆ.ಪಿ ನಡ್ಡಾ, ಸಭಾ ಪತಿ ಬೋಪಯ್ಯ ಇದ್ದಾರೆ. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ತಾಜ್ ವೆಸ್ಟಂಡ್ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಆದರೆ ಕುಮಾರಸ್ವಾಮಿ ಕಳೆದ ಮೂರು ದಿನಗಳಿಂದ ತಾಜ್ ವೆಸ್ಟಂಡ್ ಹೋಟೆಲ್ ನಲ್ಲೆ ವಾಸ್ತವ್ಯ ಹೂಡಿದ್ದಾರೆ ಅನ್ನೋ ಮಾತುಗಳು ಕೂಡ ಕೇಳಿ ಬರುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *