ಮೇಲ್ವರ್ಗದ ಹಿಂದುಳಿದವರಿಗೆ ಮೀಸಲಾತಿ: ಕೇಂದ್ರದ ನಿರ್ಧಾರಕ್ಕೆ ಎಚ್‍ಡಿಡಿ ಬೆಂಬಲ

Public TV
1 Min Read
modi hd devegowda

ಬೆಂಗಳೂರು: ಮೇಲ್ವರ್ಗದ ಹಿಂದುಳಿದವರಿಗೆ ಶೇ.10 ಮೀಸಲಾತಿ ತರಲು ಮುಂದಾಗಿರುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಬೆಂಬಲ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಮೇಲ್ವರ್ಗದವರಿಗೆ ಶೇ.10 ರಷ್ಟು ಮೀಸಲಾತಿ ತರುವ ನಿರ್ಧಾರವನ್ನು ಜೆಡಿಎಸ್ ಬೆಂಬಲಿಸುತ್ತದೆ. ಸಮಾಜದ ಎಲ್ಲ ವರ್ಗದಲ್ಲಿರುವ ಬಡವರ ಏಳಿಗೆಗೆ ಜೆಡಿಎಸ್ ಯಾವಾಗಲೂ ಬದ್ಧವಾಗಿರುತ್ತದೆ ಎಂದು ಹೇಳಿದ್ದಾರೆ.

ಸೋಮವಾರ ಕ್ಯಾಬಿನೆಟ್ ಒಪ್ಪಿಗೆ ನೀಡಿದ್ದ ಮಸೂದೆಯನ್ನು ಕೇಂದ್ರ ಸರ್ಕಾರ ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದೆ. ಕೇಂದ್ರ ಸಚಿವ ತಾವರ್ ಚಂದ್ ಗೆಹ್ಲೋಟ್ ಅವರು ಚಳಿಗಾಲದ ಅಧಿವೇಶನದ ಕೊನೆಯ ದಿನವಾದ ಇಂದು ಸಮಾಜವಾದಿ ಪಕ್ಷದ ಪ್ರತಿಭಟನೆಯ ನಡುವೆಯೇ ಸಂವಿಧಾನಕ್ಕೆ 124ನೇ ತಿದ್ದುಪಡಿ ತರುವ ಮಸೂದೆಯನ್ನು ಮಂಡಿಸಿದರು. ಜಾತಿ ಆಧರಿತ ಕೋಟಾ ನಿಗದಿಪಡಿಸುವ ಸಂವಿಧಾನದ 15 ಮತ್ತು 16ನೇ ವಿಧಿಗಳಿಗೆ ತಿದ್ದುಪಡಿ ಅಗತ್ಯವಿದ್ದು, ಅದಕ್ಕಾಗಿ ಮಸೂದೆಯನ್ನು ಮಂಡಿಸಲಾಗಿದೆ.

ಸಂವಿಧಾನಕ್ಕೆ ತಿದ್ದುಪಡಿ ಯಾಕೆ?
1992ರಲ್ಲಿ ನೀಡಿದ ಐತಿಹಾಸಿಕ ಮಂಡಲ್ ಮೀಸಲಾತಿ ತೀರ್ಪಿನಲ್ಲಿ ಯಾವ ಕಾರಣಕ್ಕೂ ಸಾಮಾಜಿಕ ಶೈಕ್ಷಣಿಕ ಮೀಸಲಾತಿ ಪ್ರಮಾಣ ಶೇ.50% ಮೀರಬಾರದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ತಿಳಿಸಿದೆ. ದೇಶದಲ್ಲಿ ಪ್ರಸ್ತುತ ಶೇ.49.5 ಇದ್ದು ಹೊಸ ಮೀಸಲಾತಿ ಜಾರಿಯಾದರೆ ಪ್ರಮಾಣ ಶೇ.59.5ಕ್ಕೆ ಏರಿಕೆಯಾಗುತ್ತದೆ. ಸಂವಿಧಾನದಲ್ಲಿ ಆರ್ಥಿಕ ಸ್ಥಿತಿಗತಿ ಆಧರಿತ ಮೀಸಲಾತಿಗೆ ಅವಕಾಶವಿಲ್ಲ. ಹೀಗಾಗಿ ಈಗ 15 ಮತ್ತು 16ನೇ ವಿಧಿಗೆ ತಿದ್ದುಪಡಿ ತಂದು ಮೀಸಲಾತಿ ತರಲು ಸರ್ಕಾರ ಮುಂದಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

 

 

Share This Article
Leave a Comment

Leave a Reply

Your email address will not be published. Required fields are marked *