ಬೆಂಗಳೂರು: ಮೇಲ್ವರ್ಗದ ಹಿಂದುಳಿದವರಿಗೆ ಶೇ.10 ಮೀಸಲಾತಿ ತರಲು ಮುಂದಾಗಿರುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಬೆಂಬಲ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಮೇಲ್ವರ್ಗದವರಿಗೆ ಶೇ.10 ರಷ್ಟು ಮೀಸಲಾತಿ ತರುವ ನಿರ್ಧಾರವನ್ನು ಜೆಡಿಎಸ್ ಬೆಂಬಲಿಸುತ್ತದೆ. ಸಮಾಜದ ಎಲ್ಲ ವರ್ಗದಲ್ಲಿರುವ ಬಡವರ ಏಳಿಗೆಗೆ ಜೆಡಿಎಸ್ ಯಾವಾಗಲೂ ಬದ್ಧವಾಗಿರುತ್ತದೆ ಎಂದು ಹೇಳಿದ್ದಾರೆ.
Janata Dal (Secular) supports the 10% reservation in jobs and educational institutions for economically weaker sections of the upper castes.
We have always stood for, and will continue to stand for betterment of the underprivileged and weaker sections of the society.
— H D Devegowda (@H_D_Devegowda) January 8, 2019
ಸೋಮವಾರ ಕ್ಯಾಬಿನೆಟ್ ಒಪ್ಪಿಗೆ ನೀಡಿದ್ದ ಮಸೂದೆಯನ್ನು ಕೇಂದ್ರ ಸರ್ಕಾರ ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದೆ. ಕೇಂದ್ರ ಸಚಿವ ತಾವರ್ ಚಂದ್ ಗೆಹ್ಲೋಟ್ ಅವರು ಚಳಿಗಾಲದ ಅಧಿವೇಶನದ ಕೊನೆಯ ದಿನವಾದ ಇಂದು ಸಮಾಜವಾದಿ ಪಕ್ಷದ ಪ್ರತಿಭಟನೆಯ ನಡುವೆಯೇ ಸಂವಿಧಾನಕ್ಕೆ 124ನೇ ತಿದ್ದುಪಡಿ ತರುವ ಮಸೂದೆಯನ್ನು ಮಂಡಿಸಿದರು. ಜಾತಿ ಆಧರಿತ ಕೋಟಾ ನಿಗದಿಪಡಿಸುವ ಸಂವಿಧಾನದ 15 ಮತ್ತು 16ನೇ ವಿಧಿಗಳಿಗೆ ತಿದ್ದುಪಡಿ ಅಗತ್ಯವಿದ್ದು, ಅದಕ್ಕಾಗಿ ಮಸೂದೆಯನ್ನು ಮಂಡಿಸಲಾಗಿದೆ.
BSP Chief Mayawati on Tuesday welcomed the reservation announced by the Centre for economically weaker sections of upper caste. However, she called the move a 'political stunt.'
Read @ANI Story| https://t.co/fyIQLLF0yk pic.twitter.com/h7WKBTy9PN
— ANI Digital (@ani_digital) January 8, 2019
ಸಂವಿಧಾನಕ್ಕೆ ತಿದ್ದುಪಡಿ ಯಾಕೆ?
1992ರಲ್ಲಿ ನೀಡಿದ ಐತಿಹಾಸಿಕ ಮಂಡಲ್ ಮೀಸಲಾತಿ ತೀರ್ಪಿನಲ್ಲಿ ಯಾವ ಕಾರಣಕ್ಕೂ ಸಾಮಾಜಿಕ ಶೈಕ್ಷಣಿಕ ಮೀಸಲಾತಿ ಪ್ರಮಾಣ ಶೇ.50% ಮೀರಬಾರದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ತಿಳಿಸಿದೆ. ದೇಶದಲ್ಲಿ ಪ್ರಸ್ತುತ ಶೇ.49.5 ಇದ್ದು ಹೊಸ ಮೀಸಲಾತಿ ಜಾರಿಯಾದರೆ ಪ್ರಮಾಣ ಶೇ.59.5ಕ್ಕೆ ಏರಿಕೆಯಾಗುತ್ತದೆ. ಸಂವಿಧಾನದಲ್ಲಿ ಆರ್ಥಿಕ ಸ್ಥಿತಿಗತಿ ಆಧರಿತ ಮೀಸಲಾತಿಗೆ ಅವಕಾಶವಿಲ್ಲ. ಹೀಗಾಗಿ ಈಗ 15 ಮತ್ತು 16ನೇ ವಿಧಿಗೆ ತಿದ್ದುಪಡಿ ತಂದು ಮೀಸಲಾತಿ ತರಲು ಸರ್ಕಾರ ಮುಂದಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv