Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2023 ರಲ್ಲಿ ಜೆಡಿಎಸ್ ಏಕಾಂಗಿಯಾಗಿ ಅಧಿಕಾರಕ್ಕೆ ಬರುತ್ತೆ, ಇದು ದೈವದ ಆಟ: ಶರವಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 2023 ರಲ್ಲಿ ಜೆಡಿಎಸ್ ಏಕಾಂಗಿಯಾಗಿ ಅಧಿಕಾರಕ್ಕೆ ಬರುತ್ತೆ, ಇದು ದೈವದ ಆಟ: ಶರವಣ

Bengaluru City

2023 ರಲ್ಲಿ ಜೆಡಿಎಸ್ ಏಕಾಂಗಿಯಾಗಿ ಅಧಿಕಾರಕ್ಕೆ ಬರುತ್ತೆ, ಇದು ದೈವದ ಆಟ: ಶರವಣ

Public TV
Last updated: October 18, 2021 2:05 pm
Public TV
Share
3 Min Read
SHARAVANA
SHARE

– ಭೈರತಿ ಸುರೇಶ್‍ರೊಂದಿಗೆ ಜಮೀರ್ ಡೀಲ್ ಮಾಡಿಕೊಂಡಿದ್ರು
– ಜಮೀರ್ ಸಿಎಂ ಅಭ್ಯರ್ಥಿ ಅಂತ ಘೋಷಣೆ ಮಾಡಿ

ಬೆಂಗಳೂರು: 2023 ರಲ್ಲಿ ಜೆಡಿಎಸ್ ಪಕ್ಷ ಏಕಾಂಗಿಯಾಗಿ ಅಧಿಕಾರಕ್ಕೆ ಬರುತ್ತೆ. ಇದು ದೈವದ ಆಟ ಯಾರು ಇದನ್ನು ತಡೆಯೋಕೆ ಆಗುವುದಿಲ್ಲ. ಕಾಂಗ್ರೆಸ್ ಮುಳುಗುತ್ತಿರುವ ಹಡಗು. ನಮ್ಮ ಟಾರ್ಗೆಟ್ 123. ನಾವು ಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬರುವುದು ಶತಸಿದ್ಧ ಎಂದು ಜೆಡಿಎಸ್ ವಕ್ತಾರ ಟಿ.ಎ ಶರವಣ ಭವಿಷ್ಯ ನುಡಿದಿದ್ದಾರೆ.

jds

ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಸಿದ್ದರಾಮಯ್ಯಗೆ 5 ಪ್ರಶ್ನೆ ಕೇಳಿದ್ರು. ಆದ್ರೆ ಯಾವುದಕ್ಕೂ ಉತ್ತರ ಕೊಟ್ಟಿಲ್ಲ. ಕಾಂಗ್ರೆಸ್‍ಗೆ ಅಲ್ಪಸಂಖ್ಯಾತರ ಬಗ್ಗೆ ಮಾತಾಡೋ ನೈತಿಕತೆ ಇಲ್ಲ. ಸಿದ್ದರಾಮಯ್ಯ ಉತ್ತರ ಕೊಡೋ ಬದಲಾಗಿ ಕುಮಾರಸ್ವಾಮಿ ಮೇಲೆ ವೈಯಕ್ತಿಕವಾಗಿ ಅಟ್ಯಾಕ್ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ನಿಮ್ಮ ಹೊಟ್ಟೆಕಿಚ್ಚಿನಿಂದ ಹಾಳಾಗ್ತಿರೋದು ನೀವೇ ಸಿದ್ದರಾಮಯ್ಯ ಅಲ್ಲ – ಹೆಚ್‍ಡಿಕೆ ವಿರುದ್ಧ ಜಮೀರ್ ಗುಡುಗು

HDK 1

ಡೀಲ್ ಮಾಡಿದ್ದು ಯಾರು?
ಭೈರತಿ ಸುರೇಶ್ ಅವರನ್ನು ಎಂಎಲ್‍ಸಿ ಮಾಡೋಣ ಎಂದು ಜಮೀರ್ ಅಹ್ಮದ್ ಹೇಳಿದ್ರು. ಆದ್ರೆ ಅವತ್ತು ಅವ್ರ ಕುಲಬಾಂಧವರನ್ನು ಗೆಲ್ಲಿಸಬೇಕು ಅಂತ ಜಮೀರ್‍ಗೆ ಅನ್ನಿಸಿಲ್ಲವಾ? ಭೈರತಿ ಸುರೇಶ್‍ರೊಂದಿಗೆ ಜಮೀರ್ ಡೀಲ್ ಮಾಡಿಕೊಂಡಿದ್ರು. ಇವತ್ತು ಸಮುದಾಯ ಬಗ್ಗೆ ಪ್ರೀತಿ ಉಕ್ಕಿ ಬರುತ್ತಿದೆ. ಇದಕ್ಕೆ ಜಮೀರ್ ಉತ್ತರ ಕೊಡಬೇಕು. ವಿಧಾನಸೌಧದ ಒಳಗೆ ಜಮೀರ್ ಅವರನ್ನು ಬಿಟ್ಟಿರಲಿಲ್ಲ. ಕುಮಾರಸ್ವಾಮಿ ಅವತ್ತು ನಿಮ್ಮ ಹೆಗಲ ಮೇಲೆ ಕೈ ಹಾಕಿ ಎಂಎಲ್‍ಎ ಮಾಡ್ತೀನಿ ಅಂತ ಕರೆದುಕೊಂಡು ಬಂದಿದ್ದರು. ನಿಮ್ಮ ಮೂಲ ಬೇರು ಯಾವುದು? ಅದನ್ನು ಮರೆತು ಹೋದ್ರಾ? ಅಂದು ಕುಮಾರಸ್ವಾಮಿ ಅವರನ್ನು ಇಂದ್ರ, ಚಂದ್ರ ಸರ್ವಸ್ವ ಅಂತ ಹೇಳಿದ್ರು. ಇವತ್ತು ಅವ್ರ ವಿರುದ್ಧ ಮಾತಾಡ್ತೀರಾ? ಜಮೀರ್‍ಗೆ ತಾಕತ್ ಇದ್ದರೆ ಕಾಂಗ್ರೆಸ್‍ನಲ್ಲಿ ಅಲ್ಪಸಂಖ್ಯಾತರಿಗೆ ಸಿಎಂ ಸ್ಥಾನ ಎಂದು ಘೋಷಣೆ ಮಾಡಿಸಲಿ. ಅಥವಾ ಡಿಸಿಎಂ ಸ್ಥಾನ ಘೋಷಣೆ ಮಾಡಲಿ ಅದು ಇಲ್ಲವೆಂದಿದ್ದರೆ ಪರಿಷತ್ ವಿಪಕ್ಷ ಸ್ಥಾನ ಇಬ್ರಾಹಿಗೆ ಕೊಡಲಿ ನೋಡೋಣ ಎಂದು ಸವಾಲು ಹಾಕಿದರು. ಇದನ್ನೂ ಓದಿ: ಕುಮಾರಸ್ವಾಮಿ ಒಬ್ಬ ಡೀಲರ್: ಜಮೀರ್ ವಾಗ್ದಾಳಿ

ZAMEER 2 1

ಯಾವುದರಲ್ಲಿ ಎಷ್ಟು ಡೀಲ್ ಮಾಡಿದ್ದೀರಿ ಎಂಬುದು ನಮಗೆ ಗೊತ್ತು. ದೇವೇಗೌಡರು ದೇವರು ಎಂದು ಹೇಳಿದ್ರಿ, ಇವತ್ತು ಅವರ ವಿರುದ್ಧವೇ ಮಾತನಾಡಿದ್ದೀರಿ. ಇನ್ನು ಮುಂದೆ ಜಮೀರ್‍ಗೆ ಕುಮಾರಸ್ವಾಮಿ ಉತ್ತರ ಕೊಡಬೇಡಿ. ನಾವು ಅವ್ರಿಗೆ ಉತ್ತರ ಕೊಡ್ತೀವಿ. ಎರಡು ಬಾರಿ ಸೋತು ಮನೆಯಲ್ಲಿ ಜಮೀರ್ ಇದ್ದರು. ಶಾಸಕನಾಗಿ ಮಾಡೋಕೆ ಯಾರು ಕಾರಣ? ಸಿದ್ದರಾಮಯ್ಯ ಇವತ್ತು ನಾಯಕ ಅಂತೀರಾ? ಇಲ್ಲಿ ಇದ್ದಾಗ ಕುಮಾರಣ್ಣ, ಈಗ ಸಿದ್ದರಾಮಣ್ಣ, ಮುಂದೆ ಯಾರನ್ನು ಅಣ್ಣಾ ಅಂತಾರೋ ಗೊತ್ತಿಲ್ಲ. ಸಿದ್ದರಾಮಯ್ಯ ಅಲ್ಪಸಂಖ್ಯಾತ ನಾಯಕರನ್ನು ಮುಗಿಸಿ ಆಯ್ತು. ನಿಮ್ಮನ್ನು ಸಿದ್ದರಾಮಯ್ಯ ಮುಗಿಸುತ್ತಾರೆ. ದೇವೇಗೌಡ ಫ್ಯಾಕ್ಟರಿಯಲ್ಲಿ ಎಷ್ಟೋ ಜನ ಬಂದು ಹೋಗಿದ್ದಾರೆ. ತೊಡೆ ತಟ್ಟಿದವರು ಪರಪ್ಪನ ಅಗ್ರಹಾರಕ್ಕೆ ಹೋಗಿ ಬಂದಿದ್ದಾರೆ. ಬಾಯಿಗೆ ಬಂದಂತೆ ಮಾತನಾಡಬೇಡಿ. ಯೋಚನೆ ಮಾಡಿ ಹೇಳಿಕೆ ಕೊಡಿ ಎಂದು ಜಮೀರ್ ವಿರುದ್ಧ ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಕುಮಾರಸ್ವಾಮಿ ಮಾತು ವೇದವಾಕ್ಯ ಅಲ್ಲ: ಸಿದ್ದರಾಮಯ್ಯ

ZAMEER SIDDARAMAIAH

ಇಕ್ಬಾಲ್ ಅನ್ಸಾರ್ ಅವ್ರನ್ನು ಮಂತ್ರಿ ಮಾಡಿದ್ದು ಯಾರು? ಕಾಂಗ್ರೆಸ್ ನಿಂದ ಸೋತು ಹೋಗಿದ್ರು. ಕುಮಾರಸ್ವಾಮಿ ಟಿಕೆಟ್ ಕೊಟ್ಟು ಗೆಲ್ಲಿಸಿದ್ರು. ಕುಮಾರಸ್ವಾಮಿ ಹೆಸರಿನಲ್ಲಿ ಅನ್ಸಾರಿ ಪ್ರಮಾಣ ವಚನ ಸ್ವೀಕಾರ ಮಾಡಿದ್ರು. ಇವತ್ತು ಅದನ್ನು ಮರೆತು ಮಾತನಾಡುತ್ತಿದ್ದೀರಿ. ಸಿದ್ದರಾಮಯ್ಯರಿಗೆ ಅಲ್ಪಸಂಖ್ಯಾತರ ಮೇಲೆ ಪ್ರೀತಿ ಇದ್ದರೆ ಜಮೀರ್‍ ನ್ನು ಸಿಎಂ ಅಭ್ಯರ್ಥಿ ಅಂತ ಘೋಷಣೆ ಮಾಡಿ. ಸಿದ್ದರಾಮಯ್ಯ 5 ವರ್ಷ ಅಲ್ಪಸಂಖ್ಯಾತರಿಗೆ ಏನ್ ಕೆಲಸ ಮಾಡಿದ್ರು? ಅಕ್ಕಿ ಕೊಟ್ಟೆ, ಆ ಭಾಗ್ಯ, ಈ ಭಾಗ್ಯ ಅಂತೀರಾ ಅಷ್ಟೇ. ಸಿದ್ದರಾಮಯ್ಯ ಅಲ್ಪಸಂಖ್ಯಾತ ನಾಯಕರನ್ನು ಮುಗಿಸಿದ್ದಾರೆ. ಜಮೀರ್ ಅವರನ್ನು ಮುಗಿಸುತ್ತಾರೆ. ಹೀಗಾಗಿ ಜಮೀರ್ ಎಚ್ಚರವಾಗಿ ಇರಿ. ನಮ್ಮದು ಸಣ್ಣ ಪಕ್ಷ ನಾವು ಸಿಎಂ ಮಾಡೋದು ಬಿಡಿ. ನಿಮ್ಮದು ರಾಷ್ಟ್ರೀಯ ಪಕ್ಷ ನೀವು ಅಲ್ಪಸಂಖ್ಯಾತರಿಗೆ ಸಿಎಂ ಸ್ಥಾನ ಕೊಡಿ ಎಂದು ಸವಾಲೆಸೆದರು.

TAGGED:congressjdsKumaraswamyPublic TVsiddaramaiahT.A SharavanaZameer Ahmed Khanಅಲ್ಪಸಂಖ್ಯಾತರುಕಾಂಗ್ರೆಸ್ಕುಮಾರಸ್ವಾಮಿಜಮೀರ್ ಅಹ್ಮದ್ಜೆಡಿಎಸ್ಟಿ.ಎ.ಶರವಣಪಬ್ಲಿಕ್ ಟಿವಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood
sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories

You Might Also Like

CSK 2
Cricket

IPL 2026 | ಗೆದ್ದರೂ ಸಿಗದ ಪಟ್ಟ – ಗಂಟೆಗಳಲ್ಲೇ ಆರ್‌ಸಿಬಿ ದಾಖಲೆ ಪುಡಿಗಟ್ಟಿದ ಚೆನ್ನೈ

Public TV
By Public TV
5 minutes ago
4 Year Old Tied Up Thrashed By Ex Armyman For Plucking Guava From His Garden
Crime

ತೋಟದಲ್ಲಿ ಹಣ್ಣು ಕಿತ್ತ 4 ವರ್ಷದ ಮಗುವಿನ ಕೈಕಾಲು ಕಟ್ಟಿ ಥಳಿಸಿದ ಮಾಜಿ ಸೈನಿಕ – ವಿಡಿಯೋ ವೈರಲ್‌

Public TV
By Public TV
22 minutes ago
BOMB THREAT
Crime

ದೆಹಲಿ ವಿವಿಯ ಎರಡು ಕಾಲೇಜುಗಳಿಗೆ ಬಾಂಬ್ ಬೆದರಿಕೆ

Public TV
By Public TV
26 minutes ago
Majid Khademi
Latest

ಅಮೆರಿಕ – ಇಸ್ರೇಲಿ ದಾಳಿಯಲ್ಲಿ ಇರಾನ್‌ ಗುಪ್ತಚರ ಮುಖ್ಯಸ್ಥ ಮಜೀದ್ ಖಾದೇಮಿ ಹತ್ಯೆ

Public TV
By Public TV
41 minutes ago
Hubbali Love Jihda
Crime

6 ತಿಂಗಳ ಹಿಂದೆ ಮಾಡ್ಕೊಂಡಿದ್ದ ವೀಡಿಯೋ ಈಗ ವೈರಲ್ ಮಾಡುತ್ತಿದ್ದಾರೆ: ಹುಬ್ಬಳ್ಳಿ ಲವ್ ಜಿಹಾದ್ ಸಂತ್ರಸ್ತೆ

Public TV
By Public TV
1 hour ago
Pema Khandu
Court

ಅರುಣಾಚಲ ಸಿಎಂ ಪೆಮಾ ಖಂಡು ಕುಟುಂಬದ ವಿರುದ್ಧ ಸಿಬಿಐ ತನಿಖೆಗೆ ಸುಪ್ರೀಂ ಆದೇಶ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?