100 ವರ್ಷವಾದ್ರೂ ಜೆಡಿಎಸ್‍ಗೆ ಪೂರ್ಣ ಬಹುಮತ ಬರಲ್ಲ, ಬರೆದಿಟ್ಟುಕೊಳ್ಳಿ – ಶ್ರೀರಾಮುಲು

Public TV
1 Min Read
KPL RAMULU COLLAGE

ಕೊಪ್ಪಳ: ಸೂರ್ಯ-ಚಂದ್ರರು ಇರೋವರೆಗೂ ಜೆಡಿಎಸ್ ಪೂರ್ಣ ಬಹಮತದೊಂದಿಗೆ ಅಧಿಕಾರಕ್ಕೆ ಬರೋದಿಲ್ಲ ಎಂದು ಶಾಸಕ ಶ್ರೀರಾಮುಲು ವ್ಯಂಗ್ಯವಾಡಿದರು.

ಪದವೀಧರರ ಕ್ಷೇತ್ರದ ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕೊಪ್ಪಳಕ್ಕೆ ಆಗಮಿಸಿದ್ದ ಬಿ.ಶ್ರೀರಾಮುಲು ಸುದ್ದಿಗಾರರೊಂದಿಗೆ ಮಾತನಾಡಿದರು. ಇನ್ನು 100 ವರ್ಷವಾದರೂ ಜೆಡಿಎಸ್ ಗೆ ಪೂರ್ಣ ಬಹುಮತ ಬರಲ್ಲ. ನೀವು ಇದನ್ನ ಬರೆದಿಟ್ಟುಗೊಳ್ಳಿ ಎಂದ ಶ್ರೀರಾಮಲು ಪರ್ತಕರ್ತರಿಗೆ ಹೇಳಿದ್ದಾರೆ.

ಸಿದ್ದರಾಮಯ್ಯನ ಬಗ್ಗೆ ನಮಗೆ ಸಾಫ್ಟ್ ಕಾರ್ನರ್ ಇಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಅವರಿಗೆ ಆದ ಅನ್ಯಾಯ ನಮ್ಮ ನಾಯಕರು ಎತ್ತಿ ಹಿಡಿಯುತ್ತಿದ್ದಾರೆ. ಸೋಮವಾರ ನಡೆದ ಬಂದ್ 30 ಜಿಲ್ಲೆಗಳಲ್ಲಿ ಯಶಸ್ವಿಯಾಗಿದೆ. ಕುಮಾರಸ್ವಾಮಿ ಸಿಎಂ ಆದ ನಂತರ ಕಾಂಗ್ರೆಸ್ ಬಾಲ ಬಡಿಯುತ್ತಿದ್ದಾರೆ. ಮುಖ್ಯಮಂತ್ರಿ ಆಗೋ ಮುನ್ನ ಒಂದು ಇವಾಗ ಮತ್ತೊಂದು ಮಾತು ಹೇಳುತ್ತಿದ್ದಾರೆ ಅಂತಾ ಕಿಡಿಕಾರಿದ್ರು.

KPL RAMULU

ಎಚ್.ಡಿ ಕುಮಾರಸ್ವಾಮಿ ಕಾಂಗ್ರೆಸ್ ಮುಲಾಜಿಲ್ಲಿದೀನಿ ಎಂದರೆ ನಾವು ಕೇಳುವುದಿಲ್ಲ. ನಾವು ವಿರೋಧ ಪಕ್ಷದಲ್ಲಿದ್ದೀವಿ ಕೈಕಟ್ಟಿ ಕೂರೋಕ್ಕಾಗಲ್ಲ. ಕುಮಾರಸ್ವಾಮಿ ಸಾಲ ಮನ್ನಾ ಮಾಡದಿದ್ದರೆ ಖುರ್ಚಿ ಖಾಲಿ ಮಾಡಬೇಕು. ಸರ್ಕಾರ ಬಹಳ ದಿನ ಉಳಿಯೋದಿಲ್ಲ, ಮತ್ತೆ ಯಡಿಯೂರಪ್ಪ ಮುಖ್ಯಮಂತ್ರಿ ಆಗುತ್ತಾರೆ ಎಂದು ಶ್ರೀರಾಮುಲು ಆತ್ಮ ವಿಶ್ವಾಸ ವ್ಯಕ್ತಪಡಿಸಿದ್ರು.

ಸೋಮವಾರ ನಡೆದ ಬಂದ್ ನಲ್ಲಿ ಕೊಪ್ಪಳದಲ್ಲಿ ಪೊಲೀಸ್ ಅಧಿಕಾರಿಗಳನ್ನು ಬಿಟ್ಟ ದೌರ್ಜನ್ಯ ಮಾಡಿಸುತ್ತಿದ್ದಾರೆ. ಪೊಲೀಸರು ಸರ್ಕಾರದ ಮಾತು ಕೇಳಿದರೆ ನೌಕರಿ ಕಳೆದುಕೊಳ್ಳಬೇಕಾಗುತ್ತೆ. ಮುಖ್ಯಮಂತ್ರಿ ಕುಮಾರಸ್ವಾಮಿ ಕೊಟ್ಟ ಮಾತು ತಪ್ಪಿದ್ದಾರೆ. ಅದಕ್ಕಾಗಿ ನಾವು ಬೀದಿಗಿಳಿದು ಹೋರಾಟ ಮಾಡುತ್ತೀವಿ ಎಂದು ಶಾಸಕ ಬಿ. ಶ್ರೀರಾಮಲು ಹೇಳಿದ್ದಾರೆ. ಇದನ್ನೂ ಓದಿ: ಕೊಪ್ಪಳ ಪೊಲೀಸ್ ಠಾಣೆಯಲ್ಲಿ ಹೈಡ್ರಾಮ – ಡಿವೈಎಸ್‍ಪಿ ಮೇಲೆ ಕೈ ಮಾಡಿದ ಸಂಸದ ಸಂಗಣ್ಣ ಕರಡಿ

Share This Article
Leave a Comment

Leave a Reply

Your email address will not be published. Required fields are marked *