Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ ಮಾಡಿದ ಪಾಪಕ್ಕೆ ತಕ್ಕ ಶಿಕ್ಷೆ ಅನುಭವಿಸುತ್ತಿದೆ – ಎಚ್‌ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಂಗ್ರೆಸ್ ಮಾಡಿದ ಪಾಪಕ್ಕೆ ತಕ್ಕ ಶಿಕ್ಷೆ ಅನುಭವಿಸುತ್ತಿದೆ – ಎಚ್‌ಡಿಕೆ

Bengaluru City

ಕಾಂಗ್ರೆಸ್ ಮಾಡಿದ ಪಾಪಕ್ಕೆ ತಕ್ಕ ಶಿಕ್ಷೆ ಅನುಭವಿಸುತ್ತಿದೆ – ಎಚ್‌ಡಿಕೆ

Public TV
Last updated: October 3, 2021 9:41 pm
Public TV
Share
5 Min Read
HDK
SHARE

ಬೆಂಗಳೂರು : ಕರ್ನಾಟಕದಲ್ಲಿ ಮಾತ್ರ ಅಲ್ಲದೆ ದೇಶಾದ್ಯಂತ ಕಾಂಗ್ರೆಸ್ ನಶಿಸಿ ಹೋಗುತ್ತಿದ್ದು, ಮಾಡಿದ ಪಾಪಕ್ಕೆ ತಕ್ಕ ಶಿಕ್ಷೆ ಅನುಭವಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಬಿಡದಿಯ ತೋಟದಲ್ಲಿ ನಡೆಯುತ್ತಿರುವ ಐದನೇ ದಿನದ ಜನತಾ ಪರ್ವ 1.0 ಹಾಗೂ ಮಿಷನ್ 123 ಕಾರ್ಯಗಾರದಲ್ಲಿ ಎಲ್ಲಾ ಜಿಲ್ಲೆಗಳ ಮುಸ್ಲಿಂ ಸಮುದಾಯದ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು,ಮುಸ್ಲಿಂ ಸಮುದಾಯವನ್ನು ಕಾಂಗ್ರೆಸ್ ವೋಟಿನ ಯಂತ್ರದಂತೆ ಬಳಸಿಕೊಂಡಿತು. ರಾಜಕೀಯ ಸ್ವಾರ್ಥಕ್ಕಾಗಿ ಅಲ್ಪಸಂಖ್ಯಾತರ ಹಿತವನ್ನು ಬಲಿ ಕೊಟ್ಟಿತು ಎಂದು ಅವರು ಕಿಡಿ ಕಾರಿದರು.

jds meeting kumaraswamy

ಕಳೆದ 75 ವರ್ಷಗಳಿಂದ ಕಾಂಗ್ರೆಸ್ ಮುಸ್ಲಿಮರನ್ನು ರಾಜಕೀಯವಾಗಿ ಬಳಸಿಕೊಂಡು ಶೋಷಣೆ ಮಾಡುತ್ತಿದೆ.ದೇಶದಲ್ಲಿರುವ 19% ಜನರನ್ನು ದೇಶದ್ರೋಹಿಗಳು ಎಂದು ಬಿಂಬಿಸುವ ಕೆಲಸ ಈಗ ನಡೆಯುತ್ತಿದೆ. ನಾವೆಲ್ಲರೂ ಒಂದು ಎಂದು ಸಂವಿಧಾನ ಹೇಳಿದರೂ ಬಿಜೆಪಿ ತನ್ನ ಹಿಡನ್ ಅಜೆಂಡಾ ಜಾರಿ ಮಾಡುತ್ತಿದೆ. ನಿಮ್ಮನ್ನು ಸದಾ ಅನುಮಾನದಿಂದ ನೋಡುತ್ತಿದೆ. ಇದನ್ನು ನೋಡುತ್ತಾ ಕಾಂಗ್ರೆಸ್ ಜಾಣ ಮೌನದಲ್ಲಿ ಮುಳುಗಿದೆ.ರಾಜೀವ್ ಗಾಂಧಿ ಅಯೋಧ್ಯೆಯಲ್ಲಿ ದೇಗುಲದ ಬಾಗಿಲು ತೆರೆದು ಪೂಜೆಗೆ ಅವಕಾಶ ನೀಡಿದರು. ಪಿವಿ ನರಸಿಂಹ ರಾವ್ ಇದ್ದಾಗ ಬಾಬರಿ ಮಸೀದಿ ಒಡೆಯಲು ಅವಕಾಶ ಕೊಟ್ಟರು. ಮಸೀದಿಯನ್ನು ಕೆಡವುತ್ತಾರೆ ಎಂದು ಗೊತ್ತಿದ್ದರೂ ಅವರ ಸರಕಾರ ರಕ್ಷಣೆ ಕೊಡದೇ ನಿದ್ದೆ ಮಾಡುತ್ತಿತ್ತು ಅಂತ ಕಿಡಿಕಾರಿದರು. ಇದನ್ನೂ ಓದಿ: ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ 

jds meeting hd devegowda

ಗೋಧ್ರಾ ಘಟನೆ ನಡೆದಾಗ ಹಿಂಸಾಚಾರಕ್ಕೆ ಬಿಜೆಪಿ ಕುಮ್ಮಕ್ಕು ಕೊಟ್ಟರೆ ಕಾಂಗ್ರೆಸ್ ಸುಮ್ಮನೆ ಇತ್ತು. ಅಂತಹ ವೇಳೆ ದೇವೇಗೌಡರು ಗುಜರಾತ್ ಗಲಭೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಅಲ್ಪಸಂಖ್ಯಾತರ ಮನೆಗಳಿಗೆ ತೆರಳಿ ಸಾಂತ್ವನ ಹೇಳಿದ್ದರು.‌ ಮನಮೋಹನ್ ಸಿಂಗ್ ಅವರ ಸರಕಾರ ಇದ್ದಾಗ ಬಿಜೆಪಿ ಮಾಡುತ್ತಿದ್ದ ಎಲ್ಲಾ ಶಾಂತಿ ಕದಡುವ ಕೆಲಸಗಳನ್ನು ನೋಡಿಕೊಂಡು ಸುಮ್ಮನಿತ್ತು. ಹೀಗೆ ಬಿಜೆಪಿಗೆ ಪರೋಕ್ಷವಾಗಿ ಎಲ್ಲಾ ದಾರಿಗಳನ್ನು ಕಾಂಗ್ರೆಸ್ ಸುಲಭ ಮಾಡಿಕೊಟ್ಟಿತು. ಇವತ್ತು ಮೋದಿ ಅವರು ಅಧಿಕಾರಕ್ಕೆ ಬರಲು ಕೂಡ ಕಾಂಗ್ರೆಸ್ ಪಕ್ಷದ ತಪ್ಪು ಹೆಜ್ಜೆಗಳೇ ಕಾರಣ.‌ ಕಾಂಗ್ರೆಸ್ ದಿನೇದಿನೆ ನಶಿಸಿಹೋಗುತ್ತಿದೆ. ಅದು ಆ ಪಕ್ಷದ ಸ್ವಯಂಕೃತ ಅಪರಾಧ. ರಾಷ್ಟ್ರೀಯ ಪಕ್ಷವಾಗಿದ್ದ ಕಾಂಗ್ರೆಸ್ ಇಂದು ಪ್ರಾದೇಶಿಕ ಪಕ್ಷಗಳಿಗಿಂತ ಕೆಳಗೆ ಬಂದಿದೆ. ಜನತಾ ಪರಿವಾರ ದುರ್ಬಲ ಆಗಲು ಬಿಜೆಪಿ ಕೊಡುಗೆಯೂ ಇದೇ. ಈಗ ದೇಶ ಕವಲು ದಾರಿಯಲ್ಲಿದ್ದು, ಬಿಜೆಪಿ ಬರಲು ಕಾರಣ ಯಾರು ಎಂಬುದನ್ನು ಮುಸ್ಲಿಂ ಸಮುದಾಯ ಅರ್ಥ ಮಾಡಿಕೊಳ್ಳಬೇಕಿದೆ ಅಂತ ಮನವಿ ಮಾಡಿದರು.

jds meeting 5

2004ದಲ್ಲಿ ಸರಕಾರ ಮಾಡಲು ಬಿಜೆಪಿ ಮೊದಲು ನಮ್ಮ ಮನೆ ಬಾಗಿಲಿಗೆ ಬಂತು. ಎಲ್ಲಾ ಆಮಿಷಗಳನ್ನು ಒಡ್ಡಿದರು. ವಾಮನಾಚರ್ಯರು, ಇಬ್ಬರು ಪತ್ರಿಕಾ ಸ್ನೇಹಿತರು ಇದಕ್ಕೆ ಸಾಕ್ಷಿ. ಜೇಟ್ಲಿ ಈಗ ಇಲ್ಲ. ಒಡಿಶಾದ ನವೀನ್ ಪಟ್ನಾಯಕ್ ಅವರಿಗೆ ಕೊಟ್ಟ ಹಾಗೆ ನಿಮಗೂ ಸಹಕಾರ ಕೊಡುತ್ತೇವೆ ಎಂದರು. ನಾನು ಮನಸು ಮಾಡಿದ್ದರೆ ಅವರ ಬೆಂಬಲದಿಂದ ಸಿಎಂ ಆಗಿ ಕ್ರಮೇಣ ಅವರನ್ನು ದೂರ ಇಟ್ಟು ಅಧಿಕಾರ ನಡೆಸಬಹುದಿತ್ತು.  ಕಳೆದ 25 ವರ್ಷಗಳಿಂದ ನವೀನ್ ಪಟ್ನಾಯಕ್ ಅವರು ಅಧಿಕಾರ ನಡೆಸುತ್ತಿರುವ ಹಾಗೆ ನಾನು ಕೂಡ ಇಲ್ಲಿ ಮಾಡಬಹುದಿತ್ತು. ಆದರೆ ನಾನು ಹಾಗೆ ಮಾಡಲಿಲ್ಲ. ಬಿಜೆಪಿ ಜತೆ ಸರಕಾರ ಮಾಡಲು ದೇವೇಗೌಡರು ಒಪ್ಪಲಿಲ್ಲ. ಆಮೇಲೆ ಇದೇ ಸಿದ್ದರಾಮಯ್ಯ, ಪಿಜಿಆರ್ ಸಿಂಧ್ಯಾ, ಎಂಪಿ ಪ್ರಕಾಶ್ ಅವರು ಐದು ದಿನ ಸೋನಿಯಾ ಗಾಂಧಿ ಅವರ ಜೊತೆ ಮಾತುಕತೆ ನಡೆಸಿದರು. ಸಿಎಂ. ಪಟ್ಟ ಬಿಟ್ಟು ಕೊಡಲು ಕಾಂಗ್ರೆಸ್ ತಯಾರು ಇರಲಿಲ್ಲ. ಸಿದ್ದರಾಮಯ್ಯ ಮುನಿಸಿಕೊಂಡು ಕರ್ನಾಟಕ ಭವನದಲ್ಲಿ ಮಲಗಿದ್ದರು. ಅವರನ್ನು ನಾನೇ ಸಮಾಧಾನಪಡಿಸಿದೆ. ಆಗ ಎಂಪಿ ಪ್ರಕಾಶ್, ಸಿಂಧ್ಯಾ ಅವರು ಡಿಸಿಎಂ ಆಗಲು ರೆಡಿ ಇದ್ದರು. ಆದರೆ ದೇವೇಗೌಡರಿಗೆ ಸಿದ್ದರಾಮಯ್ಯ ಅವರೇ ಆಗಬೇಕು ಎಂಬುದು ಇತ್ತು.ಈ ಹಗ್ಗಜಗ್ಗಾಟ ನಡುವೆ ಧರ್ಮ ಸಿಂಗ್ ಸಿಎಂ ಅದರು. ಆರು ತಿಂಗಳ ಕಾಲ  ಸಂಪುಟವೇ ಆಗಲಿಲ್ಲ. ತಲಾ ಆರು ಜನ ಮಂತ್ರಿಗಳಾದರು. ಆಗ ಕಾಂಗ್ರೆಸ್ ನಮ್ಮನ್ನು ಮೂರನೇ ದರ್ಜೆ ಪ್ರಜೆಗಳಂತೆ ನೋಡಿತು.ಈಗ ಮುಸ್ಲಿಮರನ್ನು ಕಾಂಗ್ರೆಸ್ ಹಾಗೆ ನೋಡುತ್ತಿದೆ. ಕಳೆದ ೭೦ ವರ್ಷಗಳಿಂದ ಇದೇ ಆಗಿದೆ ಅಂತ ತಿಳಿಸಿದರು.

jds meeting 4

ಸಿದ್ದರಾಮಯ್ಯ ನಮ್ಮ ಪಕ್ಷದಿಂದ ದೂರ ಆಗತೊಡಗುತ್ತಿದ್ದಂತೆ ಯಡಿಯೂರಪ್ಪ ಬಂದರು. ಜಸ್ಟ್ ಮಂತ್ರಿ ಮಾಡಿ. ಬಿಜೆಪಿ ಬಿಟ್ಟು ಬರುತ್ತೇನೆ ಎಂದರು. ಒಬ್ಬ ಗನ್ ಮ್ಯಾನ್ ಜತೆ ಚೀಟಿ ಕಳಿಸಿದರು. ಆದರೆ ನಾನು ಅವರಿಗೆ ಬುದ್ಧಿ ಹೇಳಿದೆ. ಬಿಜೆಪಿ ಬಿಟ್ಟರೆ ಕೆಡ್ತಿರಿ ಎಂದೆ. ಅದೇ ನಾನು ಮಾಡಿದ ತಪ್ಪು. ಅವತ್ತು ಅವರಿಗೆ ಬಿಜೆಪಿ ಬಿಡಲು ಹೇಳಿದ್ದರೆ ಆ ಪಕ್ಷ ಈ ಮಟ್ಟಕ್ಕೆ ಬೆಳೆಯುತ್ತಿರಲಿಲ್ಲ. ಆಮೇಲೆ ಸಿಎಂ ಉದಾಸಿ ಸೇರಿ ಜನತಾ ಪರಿವಾರದ ನಾಯಕರು ಬಂದು  ಜೆಡಿಎಸ್ – ಬಿಜೆಪಿ ಸರಕಾರ ರಚನೆ ಮಾಡಲು ಬೇಡಿಕೊಂಡರು. ಕೊನೆಗೆ ಬಿಜೆಪಿ ಸರಕಾರ ರಚನೆ ಮಾಡಿ ನಮ್ಮ ತಂದೆ ಆರೋಗ್ಯ ಹಾಳಾಗಲು ನಾನೇ ಕಾರಣ ಆದೆ ಅಂತ ಇತಿಹಾಸ ನೆನಪು ಮಾಡಿಕೊಂಡರು.

ಒಂದು ವೇಳೆ ಸಿದ್ದರಾಮಯ್ಯ ಅವರು ಜೆಡಿಎಸ್ ಬಿಡದೆ ಹೋಗಿದ್ದಿದ್ದರೆ ಬಿಜಿಪಿ ಅಧಿಕಾರಕ್ಕೆ ಬರಲು ಆಗ್ತಾ ಇರಲಿಲ್ಲ. ಇದು ವಸ್ತು ಸ್ಥಿತಿ .ಬಿಜೆಪಿ ಜತೆ ಇದ್ದಾಗಲೂ ನಾವು ಮುಸ್ಲಿಂ ಸಮುದಾಯದ ಹಿತ ಕಡೆಗಣಿಸಿಲ್ಲ. ಬಿಜೆಪಿ ಮೈತ್ರಿ ಸರಕಾರ ಇದ್ದಾಗಲೇ ಸದಾನಂದ ಗೌಡರು ನ್ಯಾಯಾಲಯದ ಆದೇಶ ಉಲ್ಲಂಘಿಸಿ ದತ್ತಪೀಠ ಪ್ರವೇಶ ಮಾಡಲು ಹೋದರು. ಆವತ್ತು ಉಪ ಮುಖ್ಯಮಂತ್ರಿ ಆಗಿದ್ದವರು ನನ್ನ ಪಕ್ಕ ಕೂತಿದ್ದರು. ವಿಷಯ ಗೊತ್ತಾದ ಕೂಡಲೇ  ಅರೆಸ್ಟ್ ಮಾಡಿ ಎಂದು ಪೊಲೀಸರಿಗೆ ಹೇಳಿದೆ. ಸದಾನಂದ ಗೌಡರು ಜೈಲಲ್ಲಿ ಕೂರಬೇಕಾಯಿತು. ಸಿದ್ದರಾಮಯ್ಯ ಅವರು ಅವರ ಶಕ್ತಿಯಿಂದ ಸಿಎಂ ಆಗಲಿಲ್ಲ. ಆಗ ಯಡಿಯೂರಪ್ಪ ನಡೆಸಿದ ಅಕ್ರಮಗಳನ್ನು ನಾವು ದಾಖಲೆ ಸಮೇತ ಜನರ ಮುಂದೆ ಇಟ್ಟೆವು. ಅವರು ಜೈಲಿಗೆ ಹೋದರು. ಬಳಿಕ ಕೆಜೆಪಿ ಕಟ್ಟಿದರು. ಶ್ರೀರಾಮುಲು ಹೊಸ ಪಕ್ಷ ಕಟ್ಟಿದರು. ಆ ಗ್ಯಾಪಿನಲ್ಲಿ ಸಿದ್ದರಾಮಯ್ಯ ಸಿಎಂ ಆದರು.ಸಿಂಧಗಿ ಮತ್ತು ಹಾನಗಲ್ ಅಭ್ಯರ್ಥಿಗಳ ಬಗ್ಗೆ ಅವರು ಮಾತನಾಡುತ್ತಿದ್ದಾರೆ. ಅವರಿಗೆ ಗೊತ್ತಿರಲಿ, ನಾಲ್ಕು ತಿಂಗಳ ಹಿಂದೆಯೇ ನಾನು ನಾಜೀಯಾ ಶಕೀಲಾ ಅಂಗಡಿ ಅವರಿಗೆ ಚುನಾವಣೆ ಕೆಲಸ ಶುರು ಮಾಡಿಕೊಳ್ಳುವಂತೆ ಹೇಳಿದ್ದೆ. ಅಲ್ಲಿನ ಪರಿಸ್ಥಿತಿ ನನಗೆ ಗೊತ್ತಿದೆ. ಶಕೀಲಾ ಅವರು ಎಂ ಎ ಪದವೀಧರೆ. ನಮ್ಮ ಪಕ್ಷಕ್ಕಾಗಿ ತ್ಯಾಗ ಮಾಡಿದ ಕುಟುಂಬಕ್ಕೆ ಸೇರಿದವರು. ಹಾಗೆಯೇ ಹಾನಗಲ್ ನಲ್ಲಿ ಎಂಟೆಕ್ ಓದಿರುವ ನೀಯಾಜ್ ಶೇಕ್ ಎಂಬ ಯುವಕನಿಗೆ ಟಿಕೆಟ್ ಕೊಟ್ಟಿದ್ದೇವೆ ಅಂತ ತಿಳಿಸಿದರು.

jds meeting 1

ಬಿಜೆಪಿ ಮೊದಲಿನಿಂದಲೂ ಬಿಜೆಪಿ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದೆ. ಅದಕ್ಕೆ ತಡೆ ಹಾಕಬೇಕಿದೆ.ಬಿಜೆಪಿಗೆ ಶಕ್ತಿ ಬಂದಿದೆ. ಹಣ ಲೂಟಿ ಮಾಡಿದ್ದಾರೆ. ಅದರ ಅಂಗ ಸಂಸ್ಥೆಗಳಿಗೆ ಹಣದ ಕೊರತೆ ಇಲ್ಲ. ಹಳ್ಳಿ ಹಳ್ಳಿಗೂ ನುಗ್ಗಿದ್ದಾರೆ. ಕಾಂಗ್ರೆಸ್ ನಿಂದ ಬಿಜೆಪಿಯನ್ನು ಸೋಲಿಸಲು ಸಾಧ್ಯವಿಲ್ಲ. ನೀವು ಸಂಘಟಿರಾಗಬೇಕು. ನಮ್ಮಿಂದ ಸೋಲಿಸಲು ಸಾಧ್ಯವಿದೆ‌ ಅಂತ ಬಿಜೆಪಿ ವಿರುದ್ಧವೂ ಕಿಡಿಕಾರಿದರು.

TAGGED:bjpcongressjdskarnatakaKumaraswamypoliticsಕರ್ನಾಟಕಕಾಂಗ್ರೆಸ್ಕುಮಾರಸ್ವಾಮಿಜೆಡಿಎಸ್ಬಿಜೆಪಿಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

Varanasi movie
ರಾಜಮೌಳಿ ನಿರ್ದೇಶನದ ‘ವಾರಣಾಸಿ’ ರಿಲೀಸ್‌ ಡೇಟ್‌ ಔಟ್‌
Cinema Latest South cinema Top Stories
Bengaluru 17th Film Festival
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಿಎಂ ಚಾಲನೆ
Bengaluru City Cinema Districts Karnataka Latest Sandalwood Top Stories
PRAJWAL DEVARAJ 2
ಸಹೋದರನ ಚಿತ್ರಕ್ಕೆ ನಿರ್ಮಾಪಕನಾದ ಪ್ರಜ್ವಲ್ ದೇವರಾಜ್ – ಚಿತ್ರದ ಫಸ್ಟ್ ಲುಕ್ ಲಾಂಚ್
Cinema Latest Sandalwood Top Stories
actor mayur patel car accident
ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR
Cinema Crime Latest Main Post Sandalwood

You Might Also Like

Rajeev Gowda 1
Chikkaballapur

ಶಿಡ್ಲಘಟ್ಟ ಕೇಸ್‌ – ಧಮ್ಕಿ ಪುಢಾರಿ ರಾಜೀವ್‌ ಗೌಡಗೆ ಜಾಮೀನು

Public TV
By Public TV
2 minutes ago
Plane Crash
Latest

ಇತಿಹಾಸ ಕಂಡ ಘೋರ ವಿಮಾನ ದುರಂತಗಳು – ಎಂದೂ ಮಾಸದ ಗಾಯ!

Public TV
By Public TV
38 minutes ago
Hotel
Bengaluru City

ಹರಿಯಾಣ | ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಬೆಂಗಳೂರಿನ ಟೆಕ್ಕಿ ಶವವಾಗಿ ಪತ್ತೆ

Public TV
By Public TV
44 minutes ago
MLA Vishwanath
Bengaluru City

ಬೆಂಗಳೂರಲ್ಲಿ ಭೂಕಬಳಿಕೆ; ಬಿಜೆಪಿ ಮಾಜಿ ಎಂಎಲ್‌ಸಿಗೆ 1 ವರ್ಷ ಜೈಲು ಶಿಕ್ಷೆ

Public TV
By Public TV
55 minutes ago
gold silver 1
Latest

ಚಿನ್ನ – ಬೆಳ್ಳಿ ಬೆಲೆ ದಿಢೀರ್‌ ಕುಸಿತ; ಒಂದೇ ದಿನದಲ್ಲಿ ಬೆಳ್ಳಿ 15%, ಚಿನ್ನ 10% ಬೆಲೆ ಕುಸಿತ

Public TV
By Public TV
59 minutes ago
ivan dsouza
Bengaluru City

ವಿಬಿಜಿ ರಾಮ್ ಜಿ ಕಾಯ್ದೆ ಬಡವರ ಪಾಲಿಗೆ ಮರಣ ಶಾಸನ – ಐವಾನ್ ಡಿಸೋಜ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?