ಬಳ್ಳಾರಿ: ಜೀಪ್ ಮತ್ತು ಆಟೋ ನಡುವೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿ, 6 ಮಂದಿ ಗಾಯಗೊಂಡ ಘಟನೆ ಸಂಡೂರು ತಾಲೂಕಿನ ವಡ್ಡು ಗ್ರಾಮದ ಬೈಪಾಸ್ ರಸ್ತೆಯಲ್ಲಿ ಸಂಭವಿಸಿದೆ.
ಖಾಸಗಿ ಕಂಪನಿ ನೌಕರ ಸುರ್ಜಿತ್ ಸಿಂಗ್ (51), ವಡ್ಡು ಗ್ರಾಮದ ಅಗಸರ ಅಳ್ಳಪ್ಪ (68) ಮೃತರು. ಡಿಕ್ಕಿಯಾದ ರಭಸಕ್ಕೆ ಜಿಪ್ ನಿಯಂತ್ರಣ ತಪ್ಪಿ ಬಾವಿಗೆ ಬಿದ್ದಿದೆ. ಇದನ್ನೂ ಓದಿ: ಕೋವಿಡ್-19 ಪ್ರಕರಣ ಏರಿಕೆ – ಮದುವೆ ನೋಂದಣಿ ಸೇವೆ ಸ್ಥಗಿತ!
ಪೊಲೀಸರು ಅಪಘಾತ ಸಂಭವಿಸಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ್ದಾರೆ. ಈ ವೇಳೆ ಚಾಲಕನನ್ನು ಬಾವಿಯಿಂದ ಹರಸಾಹಸ ಪಟ್ಟು ಹೊರೆ ತೆಗೆದರೂ ಬದುಕುಳಿಯಲಿಲ್ಲ. ಇದನ್ನೂ ಓದಿ: ಮಾನ್ಯ ಡಿಕೆಶಿ ಅವರೇ, ನಿಮ್ಮ ಆರೋಗ್ಯ ಹೇಗಿದೆ?: ಬಿಜೆಪಿ
ಕ್ರೇನ್ ಮೂಲಕ ಬಾವಿಯಲ್ಲಿ ಮುಳುಗಿದ್ದ ಜೀಪನ್ನು ಹೊರ ತೆಗೆಯಲಾಗಿದೆ. ಆಟೋದಲ್ಲಿದ್ದ 6 ಮಂದಿಗೆ ಗಾಯವಾದ ಹಿನ್ನೆಲೆ ಬಳ್ಳಾರಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ತೋರಣಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.