ಯುಗಾದಿಯಂದೇ ಕಳ್ಳತನ – ಬಾಗಿಲು ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

Public TV
1 Min Read
Stealing 1

ರಾಮನಗರ: ಮನೆ ಬಾಗಿಲು ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ (Jewellery) ಕಳ್ಳತನ ಮಾಡಿರುವ ಘಟನೆ ಮಾಗಡಿ (Magadi) ತಾಲೂಕಿನ ಸೋಲೂರು (Soluru) ಗ್ರಾಮದಲ್ಲಿ ಬುಧವಾರ ನಡೆದಿದೆ.

Stealing

ಗ್ರಾಮದ ನಿವಾಸಿ ಹನುಮಂತರಾಯಪ್ಪ ಎಂಬುವವರು ಯುಗಾದಿ ಹಬ್ಬಕ್ಕೆ ತಮ್ಮ ಸಂಬಂಧಿಕರ ಮನೆಗೆ ತೆರಳಿದ್ದರು. ಯಾರು ಇಲ್ಲದೇ ಇರುವುದನ್ನು ಗಮನಿಸಿ, ರಾತ್ರಿ ವೇಳೆ ಬಾಗಿಲು ಒಡೆದು ಬೀರುವಿನಲ್ಲಿದ್ದ 4 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್ನು ಕಳ್ಳರು ಕದ್ದಿದ್ದಾರೆ. ಇದನ್ನೂ ಓದಿ: ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ – ರಾಹುಲ್‌ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ

ಈ ಸಂಬಂಧ ಕುದೂರು (Kudur) ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಅದಾನಿ ಬಳಿಕ ಹೊಸ ವರದಿ ಬಿಡುಗಡೆಯ ಸೂಚನೆ ಕೊಟ್ಟ ಹಿಂಡೆನ್‍ಬರ್ಗ್

Share This Article
Leave a Comment

Leave a Reply

Your email address will not be published. Required fields are marked *