Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಶದ ಆರ್ಥಿಕ ಅಭಿವೃದ್ಧಿಗೆ ಜೆಕೆ ಟೈರ್‌ ಕೊಡುಗೆ ನೀಡಿದೆ: ಗೆಹ್ಲೋಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ದೇಶದ ಆರ್ಥಿಕ ಅಭಿವೃದ್ಧಿಗೆ ಜೆಕೆ ಟೈರ್‌ ಕೊಡುಗೆ ನೀಡಿದೆ: ಗೆಹ್ಲೋಟ್

Districts

ದೇಶದ ಆರ್ಥಿಕ ಅಭಿವೃದ್ಧಿಗೆ ಜೆಕೆ ಟೈರ್‌ ಕೊಡುಗೆ ನೀಡಿದೆ: ಗೆಹ್ಲೋಟ್

Public TV
Last updated: December 2, 2022 8:15 pm
Public TV
Share
3 Min Read
JK Tyre made its own contribution to countrys economic development thawar chand gehlot 1
SHARE

ಮೈಸೂರು: ಪ್ರತಿಯೊಂದು ಕ್ಷೇತ್ರದಲ್ಲೂ ಸ್ಪರ್ಧೆಯ ವಾತಾವರಣ ನಿರ್ಮಾಣವಾಗಿದೆ. ತಂತ್ರಜ್ಞಾನವು ದಿನದಿಂದ ದಿನಕ್ಕೆ ಅಭಿವೃದ್ಧಿ ಹೊಂದುತ್ತಿದ್ದು, ತಂತ್ರಜ್ಞಾನ ಮತ್ತು ಸಂಶೋಧನೆಯನ್ನು ಬಳಸಿಕೊಂಡು ಉತ್ಪನ್ನದ ಉತ್ತಮ ಗುಣಮಟ್ಟವನ್ನು ಕಾಪಾಡಿಕೊಳ್ಳಲು ಪ್ರಯತ್ನಿಸಬೇಕು ಎಂದು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್(Thawar Chand Gehlot) ಕರೆ ನೀಡಿದರು.

ಮೈಸೂರಿನ(Mysuru) ಮೇಟಗಳ್ಳಿಯಲ್ಲಿರುವ ವಿಕ್ರಾಂತ್ ಟೈರ್ ಪ್ಲಾಂಟ್ ನಲ್ಲಿ ಆಯೋಜಿಸಲಾಗಿದ್ದ ಜೆಕೆ ಟೈರ್(JK Tyre) ವಿಕ್ರಾಂತ್ ರಜತ ಮಹೋತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಇದನ್ನೂ ಓದಿ: BJP ಸರ್ಕಾರದಿಂದ ಎಲೆಕ್ಷನ್ ಗಿಫ್ಟ್ – ಹೊಸ ವರ್ಷದಿಂದ ವಿದ್ಯುತ್ ದರ ಇಳಿಕೆ?

ಸ್ಪರ್ಧಾತ್ಮಕ ಜಗತ್ತಿನಲ್ಲಿ ಕರ್ನಾಟಕ(Karnataka) ರಾಜ್ಯ ತನ್ನದೇ ಆದ ಛಾಪು ಮೂಡಿಸಿದೆ. ಕರ್ನಾಟಕ ರಾಜ್ಯವನ್ನು ವ್ಯಾಪಾರ ಮತ್ತು ಕೈಗಾರಿಕೆಗಳಿಗೆ ಆದ್ಯತೆಯ ತಾಣವನ್ನಾಗಿ ಮಾಡಲು ಸರ್ಕಾರವು ವಿವಿಧ ಪ್ರಯತ್ನಗಳನ್ನು ಮಾಡುತ್ತಿದೆ ಎಂದರು.

JK Tyre made its own contribution to countrys economic development thawar chand gehlot 3

ಜೆಕೆ ಆರ್ಗನೈಸೇಶನ್‌ನ ಪ್ರಮುಖ ಕಂಪನಿಯಾಗಿದ್ದು, ಟೈರ್ ಅಂಡ್ ಇಂಡಸ್ಟ್ರೀಸ್ ಲಿಮಿಟೆಡ್ ಭಾರತದಲ್ಲಿನ ಪ್ರಮುಖ ಟೈರ್ ತಯಾರಕರಲ್ಲಿ ಒಂದಾಗಿದೆ ಮತ್ತು ವಿಶ್ವದ ಅಗ್ರ 25 ತಯಾರಕರಲ್ಲಿ ಒಂದಾಗಿದೆ. ದೇಶದ ಆರ್ಥಿಕ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆ ನೀಡಿದ್ದು, ಕಳೆದ ನಾಲ್ಕು ದಶಕಗಳಿಂದ, ಜೆಕೆ ಟೈರ್, ಅತ್ಯಾಧುನಿಕ ತಂತ್ರಜ್ಞಾನ ಮತ್ತು ಉತ್ಪನ್ನಗಳ ಪರಿಚಯದ ಮೂಲಕ ಟೈರ್ ಉದ್ಯಮದಲ್ಲಿ ನಾವೀನ್ಯತೆ ಮತ್ತು ಉತ್ಕೃಷ್ಟತೆಯನ್ನು ತರುವಲ್ಲಿ ಮುಂಚೂಣಿಯಲ್ಲಿದೆ ಎಂದು ಶ್ಲಾಘಿಸಿದರು.

2019 ರಲ್ಲಿ, ಕಂಪನಿಯು ದೇಶದ ಅತಿದೊಡ್ಡ ಆಫ್-ರೋಡ್ ಟೈರ್ – VEM 045 ನೊಂದಿಗೆ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ಅನ್ನು ಪ್ರವೇಶಿಸಿತು. ಜೆಕೆ ಟೈರ್ 1997 ರಲ್ಲಿ ಕರ್ನಾಟಕದ ಕೈಗಾರಿಕಾ ರಂಗವನ್ನು ಪ್ರವೇಶಿಸಿತು ಮತ್ತು ಕರ್ನಾಟಕ ಸರ್ಕಾರದ ಅಂಡರ್‌ಟೇಕಿಂಗ್ ವಿಕ್ರಾಂತ್ ಟೈರ್ಸ್ ಲಿಮಿಟೆಡ್‌ನ ನಿರ್ವಹಣಾ ನಿಯಂತ್ರಣಕ್ಕಾಗಿ ಅಂದಿನ ಕರ್ನಾಟಕ ಸರ್ಕಾರದೊಂದಿಗೆ ಕಾರ್ಯತಂತ್ರದ ಮೈತ್ರಿ ಪಾಲುದಾರಿಕೆಯನ್ನು ಪ್ರವೇಶಿಸಿತು. ಅಲ್ಲದೇ, ಜೆಕೆ ಟೈರ್‌ನ ನಿರ್ವಹಣೆಯ ದೃಢವಾದ ಪ್ರಯತ್ನಗಳು ಜೆಕೆ ಟೈರ್ ಮೈಸೂರು ಪ್ಲಾಂಟ್ ಅನ್ನು ವಿಶ್ವ ದರ್ಜೆಯ ಟೈರ್ ಸ್ಥಾವರವನ್ನಾಗಿ ಮಾಡಿದೆ ಎಂದರು.

ಜೆಕೆ ವಿಕ್ರಾಂತ್ ಟೈರ್ ಪ್ಲಾಂಟ್ ತನ್ನ ಹಲವಾರು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದು ಸಂತಸದ ವಿಷಯ. ಮೈಸೂರು ಕೇಂದ್ರ ಕಾರಾಗೃಹದಲ್ಲಿ ವಯಸ್ಕರ ಸಾಕ್ಷರತೆ, ಐಟಿಐ ಗಳನ್ನು ಅಳವಡಿಸಿಕೊಳ್ಳುವ ಮೂಲಕ ಕೌಶಲ್ಯ ಅಭಿವೃದ್ಧಿ, ಜೀವನೋಪಾಯ ಬೆಂಬಲ, ಪ್ರಾಥಮಿಕ ಶಾಲೆಗಳ ಅಭಿವೃದ್ಧಿಯ ಮೂಲಭೂತ ಶಿಕ್ಷಣ ಸೇರಿದಂತೆ ಮೂಲಸೌಕರ್ಯ, ಸ್ವಚ್ಛ ಭಾರತ ಅಭಿಯಾನದಡಿ ರಸ್ತೆಗಳ ದತ್ತು, ಕೆರೆಗಳ ಪುನರುಜ್ಜೀವನ, ಹುಣಸೂರು ತಾಲೂಕಿನಲ್ಲಿ ಶೌಚಾಲಯಗಳ ನಿರ್ಮಾಣ ಮತ್ತು ಬಯಲು ಶೌಚ ಮುಕ್ತ ಗ್ರಾಮಗಳನ್ನಾಗಿ ಮಾಡುತ್ತಿರುವ ಕಾರ್ಯ ಪ್ರಶಂಸನೀಯ ಎಂದು ಹೇಳಿದರು.

JK Tyre made its own contribution to countrys economic development thawar chand gehlot 2

ಮೈಸೂರು ತಾಂತ್ರಿಕ ಶ್ರೇಷ್ಠತೆಯ ಸ್ಥಳವಾಗಿದೆ. 2016 ರಲ್ಲಿ ಡಾ. ರಘುಪತಿ ಸಿಂಘಾನಿಯಾ ಎಕ್ಸಲೆನ್ಸ್ ಸೆಂಟರ್ ಆಫ್ ಗ್ಲೋಬಲ್ ರಿಸರ್ಚ್ ಅಂಡ್ ಡೆವಲಪ್‌ಮೆಂಟ್ ಅಂಡ್ ಟೆಕ್ ಸೆಂಟರ್ ಅನ್ನು ಮೈಸೂರಿನಲ್ಲಿ ಸ್ಥಾಪಿಸಲಾಯಿತು, ಇಂದು ಅದು ಮೈಸೂರಿನ ಕೈಗಾರಿಕಾ ವಲಯದಲ್ಲಿ ಒಂದು ಉದಾಹರಣೆಯಾಗಿದೆ ಎಂದು ತಿಳಿದು ಸಂತೋಷವಾಗಿದೆ. ಈ ಕೇಂದ್ರದ ಮೂಲಕ, ರಬ್ಬರ್ ಮತ್ತು ಟೈರ್ ಉದ್ಯಮಕ್ಕೆ ಅತ್ಯಾಧುನಿಕ ತಂತ್ರಜ್ಞಾನವನ್ನು ಒದಗಿಸುವುದರೊಂದಿಗೆ ಕೌಶಲ್ಯ ಅಭಿವೃದ್ಧಿ ಮತ್ತು ಸುಸ್ಥಿರತೆಯ ಕ್ಷೇತ್ರದಲ್ಲಿ ಬಹಳಷ್ಟು ಕೆಲಸಗಳನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು.

ಜೆಕೆ ಟೈರ್ & ಇಂಡಸ್ಟ್ರೀಸ್ ಲಿಮಿಟೆಡ್, ಡಾ. ರಘುಪತಿ ಸಿಂಘಾನಿಯಾ ಅವರ ಸಮರ್ಥ ನಾಯಕತ್ವ ಮತ್ತು ಮಾರ್ಗದರ್ಶನದಲ್ಲಿ, ಮೇಡ್ ಇನ್ ಇಂಡಿಯಾ, ಮೇಕ್ ಇನ್ ಇಂಡಿಯಾ ಮತ್ತು ಸ್ವಾವಲಂಬಿ ಭಾರತ ಅಭಿಯಾನದ ದಿಕ್ಕಿನಲ್ಲಿ ಸಕ್ರಿಯ ಪ್ರಯತ್ನಗಳನ್ನು ಮಾಡುತ್ತಿದೆ. ಈ ಪ್ರಯತ್ನ ಮತ್ತಷ್ಟು ಮುಂದುವರೆಯಲಿ ಎಂದು ಆಶಿಸುತ್ತೇನೆ ಎಂದು ಹೇಳಿದರು.

ರಾಜ್ಯಪಾಲರು ಕಾರ್ಯಕ್ರಮ ಪ್ರಾರಂಭಕ್ಕೂ ಮುನ್ನ ಜೆಕೆ ಟೈರ್ ವಿಕ್ರಾಂತ್ ಪ್ಲಾಂಟ್ ಗೆ ಭೇಟಿ ನೀಡಿ, ವಿವಿಧ ಘಟಕಗಳನ್ನು ಉದ್ಘಾಟಿಸಿ, ತಯಾರಿಕೆ ಘಟಕಗಳನ್ನು ವೀಕ್ಷಿಸಿದರು.

ಕಾರ್ಯಕ್ರಮದಲ್ಲಿ ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಎಲ್. ನಾಗೇಂದ್ರ, ಜೆಕೆ ಟೈರ್ ಅಂಡ್ ಇಂಡಸ್ಟ್ರೀಸ್ ಲಿಮಿಟೆಡ್ ಸಿಎಂಡಿ ಡಾ.ರಘುಪತಿ ಸಿಂಘಾನಿಯಾ, ಎಂಡಿ ಅಂಶುಮಾನ್ ಸಿಂಘಾನಿಯಾ ಮುಂತಾದ ಗಣ್ಯರು ಉಪಸ್ಥಿತರಿದ್ದರು.

Live Tv
[brid partner=56869869 player=32851 video=960834 autoplay=true]

TAGGED:automobileJK tyrekarnatakathawar chand gehlotಅಟೋಮೊಬೈಲ್ಕರ್ನಾಟಕಜೆಕೆ ಟೈರ್ಥಾವರ್ ಚಂದ್ ಗೆಹ್ಲೋಟ್ಮೈಸೂರು
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

Vidhana Soudha
Bengaluru City

ಮಾಧ್ಯಮಗಳನ್ನ ಹತ್ತಿಕ್ಕಲು ಹೊರಟ ಸರ್ಕಾರ – ಶಕ್ತಿಸೌಧದಲ್ಲಿ ಭದ್ರತಾ ಲೋಪ ಬಯಲಿಗೆಳೆದಿದ್ದೇ ತಪ್ಪಾ..?

Public TV
By Public TV
6 minutes ago
Byrati Basavaraj a
Bengaluru City

ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಬೈರತಿ ಫುಲ್ ಸೈಲೆಂಟ್ – ಕೊಲೆ ಆರೋಪಿಗಳ ಹೇಳಿಕೆಗಳೇ ಶಾಸಕರಿಗೆ ಕಂಟಕವಾಗುತ್ತಾ?

Public TV
By Public TV
7 minutes ago
Cheetah Gamini
Latest

ಮತ್ತೆ 3 ಮರಿಗಳಿಗೆ ಜನ್ಮ ನೀಡಿದ ʻಗಾಮಿನಿʼ – ಕುನೋದಲ್ಲಿ ಚೀತಾಗಳ ಸಂಖ್ಯೆ 38ಕ್ಕೆ ಏರಿಕೆ

Public TV
By Public TV
34 minutes ago
PM Modi Tarique Rahman
Latest

ಭಾರತಕ್ಕೆ ಭೇಟಿ ನೀಡುವಂತೆ ಬಾಂಗ್ಲಾದೇಶ ಪ್ರಧಾನಿಗೆ ಮೋದಿ ಆಹ್ವಾನ

Public TV
By Public TV
34 minutes ago
KSRTC
Bengaluru City

ಸಾರಿಗೆ ನೌಕರರಿಂದ ಮುಷ್ಕರ – ನಾಳೆ ಸಂಜೆಯಿಂದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸಂಚಾರ ಸ್ಥಗಿತ?

Public TV
By Public TV
1 hour ago
Kunigal Ranganath
Bengaluru City

ರೈತರ ಮನೆ ಸೊಸೆ ಆಗುವವರಿಗೆ ಭತ್ಯೆ ಕೊಡಬೇಕು – ಸರ್ಕಾರಕ್ಕೆ ಶಾಸಕ ಕುಣಿಗಲ್ ರಂಗನಾಥ್ ಮನವಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?