Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: JN.1 ಸೋಂಕಿನಿಂದ ಪ್ರಾಣಾಪಾಯವಿಲ್ಲ – ಆತಂಕಕ್ಕೆ ಒಳಗಾಗದೇ ಮುನ್ನೆಚ್ಚರಿಕೆ ವಹಿಸಿ: ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | JN.1 ಸೋಂಕಿನಿಂದ ಪ್ರಾಣಾಪಾಯವಿಲ್ಲ – ಆತಂಕಕ್ಕೆ ಒಳಗಾಗದೇ ಮುನ್ನೆಚ್ಚರಿಕೆ ವಹಿಸಿ: ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್

Bengaluru City

JN.1 ಸೋಂಕಿನಿಂದ ಪ್ರಾಣಾಪಾಯವಿಲ್ಲ – ಆತಂಕಕ್ಕೆ ಒಳಗಾಗದೇ ಮುನ್ನೆಚ್ಚರಿಕೆ ವಹಿಸಿ: ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್

Public TV
Last updated: January 2, 2024 11:05 pm
Public TV
Share
4 Min Read
01 1
SHARE

– ಪ್ರತಿ ಜಿಲ್ಲಾಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ 50 ಹಾಸಿಗೆ ಮೀಸಲಿಡುವಂತೆ ಸೂಚನೆ
– ವೈದ್ಯಕೀಯ ಇಲಾಖಾ ಅಧಿಕಾರಿಗಳ ಜೊತೆ ಮಹತ್ವದ ಸಭೆ
– 60 ವರ್ಷ ಮೇಲ್ಪಟ್ಟವರು ದೀರ್ಘವ್ಯಾಧಿಯಿಂದ ಬಳಲುತ್ತಿರುವವರು ಲಸಿಕೆ ಪಡೆಯುವಂತೆ ಸಲಹೆ
– ಕೋವಿಡ್‌ ನಿಂದ ಸಾವಾಗಿಲ್ಲ – ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಕಾಣಿಸಿಕೊಂಡಿರುವ ಕೋವಿಡ್‌ ರೂಪಾಂತರಿ JN.1 (JN.1) ಸೋಂಕು ಕಾಣಿಸಿಕೊಂಡಿದ್ದರೂ ಜನ ಆತಂಕಕ್ಕೆ ಒಳಗಾಗದೇ, ಮುನ್ನೆಚ್ಚರಿಕಾ ಕ್ರಮಗಳನ್ನ ತೆಗೆದುಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ (Sharanprakash Patil) ಸಲಹೆ ನೀಡಿದರು.

ಮಂಗಳವಾರ ಬೆಂಗಳೂರಿನ (Bengaluru) ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಒಳಪಡುವ ವಿವಿಧ ಅಸ್ಪತ್ರೆಗಳ ಮುಖ್ಯಸ್ಥರು, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷರು, ಸದಸ್ಯರ ಜೊತೆ ಸಭೆ ನಡೆಸಿದ ಅವರು, ಪ್ರಸ್ತುತ ರಾಜ್ಯದಲ್ಲಿ ಕೋವಿಡ್ -19 ನಿಯಂತ್ರಣ ಹಾಗೂ ಪೂರ್ವ ಸಿದ್ಧತೆಗಳ ಕುರಿತು ಮಾಹಿತಿ ಪಡೆದರು. ಇದನ್ನೂ ಓದಿ: ರಾಮಮಂದಿರಕ್ಕೆ ದೇಣಿಗೆ ಕೊಟ್ಟಿದ್ದೇನೆ, ಆಹ್ವಾನ ಬರದಿದ್ದರೂ ಅಯೋಧ್ಯೆಗೆ ತೆರಳುತ್ತೇನೆ – ಕಾಂಗ್ರೆಸ್‌ ಸಚಿವ

03

ರೂಪಾಂತರಿ ಜೆಎನ್.1 ಸೋಂಕು ಕಾಣಿಸಿಕೊಂಡಿದ್ದರೂ ಇದು ಮನುಷ್ಯರ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರುವುದಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಹಾಗೂ ತಜ್ಞರು ಹೇಳಿದ್ದಾರೆ. ಆದರೂ ಇದರ ಬಗ್ಗೆ ಮೈ ಮರೆಯದೇ, ಕೆಲ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳುವ ಕುರಿತು ಜನಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಸ್ತುತ ಕೇಂದ್ರದಿಂದ ರಾಜ್ಯಕ್ಕೆ 30 ಸಾವಿರ ಕೋವಿಡ್ ವ್ಯಾಕ್ಸಿನ್ (Covid Vaccine) ಬಂದಿದೆ. ಇದರ ಕೊರತೆಯಾಗದಂತೆ ಎಲ್ಲ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನ ಕೇಸ್‌ – ಬುಧವಾರ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ

02

60 ವರ್ಷ ಮೇಲ್ಪಟ್ಟವರು ವ್ಯಾಕ್ಸಿನ್‌ ಪಡೆಯಿರಿ:
ರಾಜ್ಯದಲ್ಲಿ ಪ್ರತಿಯೊಬ್ಬ ಅರ್ಹರಿಗೆ ಕೋವಿಡ್ ಲಸಿಕೆ ನೀಡುವ ಅಗತ್ಯವಿಲ್ಲ 60 ವರ್ಷ ಹಾಗೂ ದೀರ್ಘವ್ಯಾಧಿಯಿಂದ ಬಳಲುತ್ತಿರುವವರು ಬುಧವಾರದಿಂದಲೇ ಜಿಲ್ಲಾಸ್ಪತ್ರೆಗಳಲ್ಲಿ ಕೋವಿಡ್ ವಾಕ್ಸಿನ್ ತೆಗೆದುಕೊಳ್ಳಬಹುದು. ಕೋವಿಡ್‌ ಮೊದಲ ಮತ್ತು 2ನೇ ಅಲೆಯ ಸಂದರ್ಭದಲ್ಲಿ ಯಾವ ಲಸಿಕೆಯನ್ನು (ಕೋವ್ಯಾಕ್ಸಿನ್‌ ಅಥವಾ ಕೋವಿಶೀಲ್ಡ್) ನೀಡಲಾಗಿತ್ತೋ ಅದೇ ಲಸಿಕೆ ನೀಡಲಿದ್ದೇವೆ. ಹೊಸ ಲಸಿಕೆ ನೀಡುವಂತೆ ಕೇಂದ್ರ ಸರ್ಕಾರದಿಂದ ನಮಗೆ ಯಾವುದೇ ನಿರ್ದೇಶನ ಬಂದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಸ್ಪಷ್ಟನೆ ನೀಡಿದರು.

‌
JN.1 ಬಹುಬೇಗ ಹರಡುತ್ತದೆ:
ಪ್ರಸ್ತುತ ರಾಜ್ಯದಲ್ಲಿ ಕಾಣಿಸಿಕೊಂಡಿರುವ ಜೆಎನ್.1 ರೂಪಾಂತರ ಸೋಂಕು ಬಹುಬೇಗನೆ ಹರಡುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಇದು ಇನ್ನಷ್ಟು ಹರಡಬಹುದೆಂದು ತಜ್ಞರು ಹೇಳಿದ್ದಾರೆ. ಒಂದು ವೇಳೆ ಹಬ್ಬಿದರೂ ಮನುಷ್ಯನ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳು ಕಡಿಮೆ. ಆದ್ದರಿಂದ ಸಾರ್ವಜನಿಕರು ಅನಗತ್ಯವಾಗಿ ಆತಂಕ ಪಡಬಾರದು. ಜನದಟ್ಟಣೆ ಮತ್ತಿತರ ಕಡೆ ಮುಂಜಾಗ್ರತಾ ಕ್ರಮವಾಗಿ ಮಾಸ್ಕ್‌ ಧರಿಸುವುದು ಉತ್ತಮ. ಆದ್ರೆ ಕಡ್ಡಾಯವಾಗಿ ಮಾಸ್ಕ್‌ ಧರಿಸಲೇಬೇಕೆಂಬ ಆದೇಶ ಹೊರಡಿಸುವುದಿಲ್ಲ. ಹಾಗಂತ ಜನರು ಮೈ ಮರೆಬಾರದೆಂದು ಸಲಹೆ ನೀಡಿದರು.

ಇದೇ ವೇಳೆ ಆಕ್ಸಿಜನ್ ಬೆಡ್, ಐಸಿಯು, ವೆಂಟಿಲೇಟರ್, ಔಷಧಗಳು, ಸೇರಿದಂತೆ ಲಭ್ಯವಿರುವ ಉಪಕರಣಗಳ ಬಗ್ಗೆ ಮಾಹಿತಿ ಪಡೆಯಲಾಗಿದೆ. ಕೆಲವು ಆಸ್ಪತ್ರೆಗಳಲ್ಲಿ ಸಿಬ್ಬಂದಿ ನೇಮಕ, ಉಪಕರಣಗಳ ಖರೀದಿಸುವ ಬಗ್ಗೆ ನನ್ನ ಗಮನಕ್ಕೆ ತಂದಿದ್ದಾರೆ. ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಸಧ್ಯಕ್ಕೆ ಕೋವಿಡ್ ಸಂಬಂಧ ಔಷಧಗಳನ್ನು ಖರೀದಿಸಲು ಹಣಕಾಸಿನ ಕೊರತೆ ಇಲ್ಲ ಎಂದು ಸಚಿವರು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ರೋಗಿ, ಕುಟುಂಬಸ್ಥರು ಒಪ್ಪದಿದ್ದರೆ ICUಗೆ ದಾಖಲಿಸುವಂತಿಲ್ಲ- ಕೇಂದ್ರದಿಂದ ಆಸ್ಪತ್ರೆಗಳಿಗೆ ಹೊಸ ರೂಲ್ಸ್‌

ಕೋವಿಡ್‍ನಿಂದ ಸಾವಾಗಿಲ್ಲ:
ರಾಜ್ಯದಲ್ಲಿ ಇತ್ತೀಚೆಗೆ 10 ಮಂದಿ ಸಾವನ್ನಪ್ಪಿದ್ದರು. ಇದು ಕೋವಿಡ್ ಕಾರಣದಿಂದಾಗಿ ಮೃತಪಟ್ಟಿಲ್ಲ. ಅವರು ವಿವಿಧ ಆರೋಗ್ಯಸಮಸ್ಯೆಗಳಿಂದ ಬಳಲುತ್ತಿದ್ದರು. ಹೀಗಾಗಿ ಸಾವನ್ನಪ್ಪಿದ್ದಾರೆ. ಮೃತಪಟ್ಟ 10 ಮಂದಿಯಲ್ಲಿ 9 ಮಂದಿ ಬೇರೆ ಬೇರೆ ಅಂದರೆ ಹೃದಯ ಸಂಬಂಧಿ, ಕಿಡ್ನಿ ಹೀಗೆ ಹಲವಾರು ಕಾಯಿಲೆಗಳಿಂದ ಬಳಲುತ್ತಿದ್ದರು. ಇವರ ಸಾವಿಗೂ ಕೋವಿಡ್‍ಗೂ ಸಂಬಂಧವೇ ಇಲ್ಲ. ಅವರಿಗೆ ಸೋಂಕಿನ ಜೊತೆಗೆ ಇತರ ಬೇರೆ-ಬೇರೆ ಆರೋಗ್ಯದ ಸಮಸ್ಯೆಗಳಿದ್ದವು. ಮೃತಪಟ್ಟವರಲ್ಲಿ ಮಂಗಳೂರಿನ ವ್ಯಕ್ತಿಯೊಬ್ಬರು ಕೋವಿಡ್ ಲಸಿಕೆ ತೆಗೆದುಕೊಂಡಿರಲಿಲ್ಲ. ಮದ್ಯಪಾನದ ವ್ಯಸನಕ್ಕೆ ತುತ್ತಾಗಿದ್ದರು ಎಂದು ಸಚಿವ ಶರಣಪ್ರಕಾಶ್ ಪಾಟೀಲ್ ಸ್ಪಷ್ಟಪಡಿಸಿದರು.

ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್, ವೈದ್ಯಕೀಯ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕಿ ಡಾ.ಸುಜಾತ ರಾಥೋಡ್‌, ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್‌ ಮಂಜುನಾಥ್, ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ.ರವಿ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಇದನ್ನೂ ಓದಿ: ಸಿದ್ದರಾಮಯ್ಯ ಹೆಸರಲ್ಲಿ ರಾಮ ಇದೆ, ಶ್ರೀರಾಮನ ಗುಣ ಇದೆಯಾ? – ಸಿ.ಟಿ ರವಿ ವ್ಯಂಗ್ಯ

ಮುಖ್ಯಾಂಶಗಳು

  • ಪ್ರತಿ ಜಿಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ 50 ಹಾಸಿಗೆಗಳನ್ನ ಮೀಸಲಿಡಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
  • ವೈದ್ಯಕೀಯ ಕಾಲೇಜಿನಲ್ಲಿ 18,141 ಹಾಸಿಗೆಗಳು, ಸರ್ಕಾರಿ ಆಸ್ಪತ್ರೆಗಳಲ್ಲಿ 10 ಸಾವಿರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಬರುವ ಆಸ್ಪತ್ರಗಳಲ್ಲಿ 11,500 ಹಾಸಿಗೆಗಳು ಲಭ್ಯವಿವೆ.
  • ಕೇರಳದಲ್ಲಿ ಕಾಣಿಸಿಕೊಂಡ ರೂಪಾಂತರಿ ಜೆಎನ್-1 ಸೋಂಕು ಕ್ರಮೇಣವಾಗಿ ಕಡಿಮೆಯಾಗುತ್ತಿದೆ. ರಾಜ್ಯದಲ್ಲೂ ಒಂದು ವೇಳೆ ಹಬ್ಬಿದರೆ ಏನೆಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕೋ ಅದೆಲ್ಲವನ್ನೂ ತೆಗೆದುಕೊಂಡಿದ್ದೇವೆ.
  • ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದನ್ನು ಸಮರ್ಪಕವಾಗಿ ನಿರ್ವಹಿಸಲು ಸೂಚನೆ ನೀಡಿದ್ದಾರೆ. ಅದರಂತೆ ಇಲಾಖೆಯಲ್ಲಿರುವ ಕೋವಿಡ್ ವಾರಿಯರ್ಸ್‌ ಫ್ಲೂ-ಲಸಿಕೆಯನ್ನು ಪಡೆಯಬೇಕು.
  • ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಪರೀಕ್ಷಾ ಸಾಮರ್ಥ್ಯವನ್ನೂ ಹೆಚ್ಚಿಸಲಾಗುತ್ತಿದೆ. ಜೊತೆಗೆ ಆರೋಗ್ಯ ಸೌಲಭ್ಯಗಳ ಕಾರ್ಯ ಸಿದ್ಧತೆ ನಡೆಸಲಾಗಿದೆ.
  • ಸಭೆಯಲ್ಲಿ 99 ಮೆಡಿಕಲ್ ಕಾಲೇಜುಗಳು, 10 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ದೇಶಕರ ಜೊತೆ ಚರ್ಚೆ ನಡೆಸಲಾಗಿದೆ.
  • ಎಲ್ಲಾ ಸರ್ಕಾರಿ ಕಾಲೇಜುಗಳಲ್ಲೂ ಪ್ರತ್ಯೇಕ ಆಕ್ಸಿಜನ್ ಬೆಡ್ ಮತ್ತು ಐಸಿಯು ವ್ಯವಸ್ಥೆ ಮಾಡಲಾಗಿದೆ. ಅಗತ್ಯ ಮಾನವ ಸಂಪನ್ಮೂಲಕ್ಕಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ.
  • 30 ಸಾವಿರ ಲಸಿಕೆಗಳು ಲಭ್ಯವಿದ್ದು, ಈವರೆಗೂ ಲಸಿಕೆ ಪಡೆಯದೇ ಇದ್ದವರು, ಮುಂಜಾಗ್ರತಾ ಲಸಿಕೆಯನ್ನಾಗಿ ತೆಗೆದುಕೊಳ್ಳುವವರು ಈ ಸೌಲಭ್ಯ ಪಡೆದುಕೊಳ್ಳಬಹುದು.

TAGGED:bengaluruCoronaCovid 19Covid vaccineHealth OfficershospitalsJN.1Sharanprakash Patilಆರೋಗ್ಯಾಧಿಕಾರಿಗಳುಆಸ್ಪತ್ರೆಗಳುಕೊರೊನಾಬೆಂಗಳೂರುಶರಣ್ ಪ್ರಕಾಶ್ ಪಾಟೀಲ್
Share This Article
Facebook Whatsapp Whatsapp Telegram

Cinema news

Nora Fatehi
ʻಸರ್ಸೆ ಸರ್ಸೆ ಸೆರಗ ಸರ್ಸೆʼ ಹಾಡಿನ ವಿವಾದ – ಮಹಿಳಾ ಆಯೋಗದಿಂದ ಫಿಲ್ಮ್ ಚೇಂಬರ್‌ಗೆ ಪತ್ರ
Bollywood Cinema Latest Sandalwood Top Stories
Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories

You Might Also Like

Kalvari class submarine karwar
Latest

ಕಾರವಾರದಲ್ಲಿ ಕಲ್ವರಿ ವರ್ಗದ ಸಬ್‌ಮೆರಿನ್ ಘಟಕ ಉದ್ಘಾಟನೆ – ವಿಶೇಷತೆ ಏನು?

Public TV
By Public TV
16 minutes ago
sri lanka fuel crisis
Latest

ವಾರದಲ್ಲಿ 4 ದಿನ ಮಾತ್ರ ಕೆಲಸ, ಪ್ರತಿ ಬುಧವಾರವೂ ರಜೆ: ಪೆಟ್ರೋಲ್‌, ಡೀಸೆಲ್ ಉಳಿಸಲು ಶ್ರೀಲಂಕಾ ಹೊಸ ರೂಲ್ಸ್‌

Public TV
By Public TV
50 minutes ago
Traffic Rules Violation Chikkamagaluru Court
Chikkamagaluru

ಟ್ರಾಫಿಕ್ ರೂಲ್ಸ್ ಬ್ರೇಕ್ – ಬೋರ್ಡ್ ಹಿಡಿದು ಇಡೀ ದಿನ ರಸ್ತೆ ಮಧ್ಯೆ ನಿಲ್ಲುವ ಶಿಕ್ಷೆ!

Public TV
By Public TV
2 hours ago
LPG Cylinders Jagalur
Davanagere

ಜಗಳೂರು | ಹೋಟೆಲ್‍ಗಳ ಮೇಲೆ ತಹಶೀಲ್ದಾರ್ ದಾಳಿ – 20 ಗೃಹ ಬಳಕೆ ಸಿಲಿಂಡರ್ ವಶಕ್ಕೆ

Public TV
By Public TV
2 hours ago
kabul hospital pak strikes
Latest

ಅನಾಗರಿಕ, ಹೇಡಿತನದ ಕೃತ್ಯ: ಕಾಬೂಲ್‌ ಆಸ್ಪತ್ರೆ ಮೇಲಿನ ಪಾಕ್‌ ದಾಳಿ ಖಂಡಿಸಿದ ಭಾರತ

Public TV
By Public TV
2 hours ago
Four workers fall ill due to chemical reaction in Hubballi
Dharwad

ಹುಬ್ಬಳ್ಳಿ | ಫ್ಲೈವುಡ್‌ ಕೆಲಸದ ವೇಳೆ ಕೆಮಿಕಲ್ ರಿಯಾಕ್ಷನ್ – ನಾಲ್ವರು ಕಾರ್ಮಿಕರು ಅಸ್ವಸ್ಥ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?