Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: JN.1 ಸೋಂಕಿನಿಂದ ಪ್ರಾಣಾಪಾಯವಿಲ್ಲ – ಆತಂಕಕ್ಕೆ ಒಳಗಾಗದೇ ಮುನ್ನೆಚ್ಚರಿಕೆ ವಹಿಸಿ: ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | JN.1 ಸೋಂಕಿನಿಂದ ಪ್ರಾಣಾಪಾಯವಿಲ್ಲ – ಆತಂಕಕ್ಕೆ ಒಳಗಾಗದೇ ಮುನ್ನೆಚ್ಚರಿಕೆ ವಹಿಸಿ: ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್

Bengaluru City

JN.1 ಸೋಂಕಿನಿಂದ ಪ್ರಾಣಾಪಾಯವಿಲ್ಲ – ಆತಂಕಕ್ಕೆ ಒಳಗಾಗದೇ ಮುನ್ನೆಚ್ಚರಿಕೆ ವಹಿಸಿ: ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್

Public TV
Last updated: January 2, 2024 11:05 pm
Public TV
Share
4 Min Read
01 1
SHARE

– ಪ್ರತಿ ಜಿಲ್ಲಾಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ 50 ಹಾಸಿಗೆ ಮೀಸಲಿಡುವಂತೆ ಸೂಚನೆ
– ವೈದ್ಯಕೀಯ ಇಲಾಖಾ ಅಧಿಕಾರಿಗಳ ಜೊತೆ ಮಹತ್ವದ ಸಭೆ
– 60 ವರ್ಷ ಮೇಲ್ಪಟ್ಟವರು ದೀರ್ಘವ್ಯಾಧಿಯಿಂದ ಬಳಲುತ್ತಿರುವವರು ಲಸಿಕೆ ಪಡೆಯುವಂತೆ ಸಲಹೆ
– ಕೋವಿಡ್‌ ನಿಂದ ಸಾವಾಗಿಲ್ಲ – ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಕಾಣಿಸಿಕೊಂಡಿರುವ ಕೋವಿಡ್‌ ರೂಪಾಂತರಿ JN.1 (JN.1) ಸೋಂಕು ಕಾಣಿಸಿಕೊಂಡಿದ್ದರೂ ಜನ ಆತಂಕಕ್ಕೆ ಒಳಗಾಗದೇ, ಮುನ್ನೆಚ್ಚರಿಕಾ ಕ್ರಮಗಳನ್ನ ತೆಗೆದುಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ (Sharanprakash Patil) ಸಲಹೆ ನೀಡಿದರು.

ಮಂಗಳವಾರ ಬೆಂಗಳೂರಿನ (Bengaluru) ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಒಳಪಡುವ ವಿವಿಧ ಅಸ್ಪತ್ರೆಗಳ ಮುಖ್ಯಸ್ಥರು, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷರು, ಸದಸ್ಯರ ಜೊತೆ ಸಭೆ ನಡೆಸಿದ ಅವರು, ಪ್ರಸ್ತುತ ರಾಜ್ಯದಲ್ಲಿ ಕೋವಿಡ್ -19 ನಿಯಂತ್ರಣ ಹಾಗೂ ಪೂರ್ವ ಸಿದ್ಧತೆಗಳ ಕುರಿತು ಮಾಹಿತಿ ಪಡೆದರು. ಇದನ್ನೂ ಓದಿ: ರಾಮಮಂದಿರಕ್ಕೆ ದೇಣಿಗೆ ಕೊಟ್ಟಿದ್ದೇನೆ, ಆಹ್ವಾನ ಬರದಿದ್ದರೂ ಅಯೋಧ್ಯೆಗೆ ತೆರಳುತ್ತೇನೆ – ಕಾಂಗ್ರೆಸ್‌ ಸಚಿವ

03

ರೂಪಾಂತರಿ ಜೆಎನ್.1 ಸೋಂಕು ಕಾಣಿಸಿಕೊಂಡಿದ್ದರೂ ಇದು ಮನುಷ್ಯರ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರುವುದಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಹಾಗೂ ತಜ್ಞರು ಹೇಳಿದ್ದಾರೆ. ಆದರೂ ಇದರ ಬಗ್ಗೆ ಮೈ ಮರೆಯದೇ, ಕೆಲ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳುವ ಕುರಿತು ಜನಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಸ್ತುತ ಕೇಂದ್ರದಿಂದ ರಾಜ್ಯಕ್ಕೆ 30 ಸಾವಿರ ಕೋವಿಡ್ ವ್ಯಾಕ್ಸಿನ್ (Covid Vaccine) ಬಂದಿದೆ. ಇದರ ಕೊರತೆಯಾಗದಂತೆ ಎಲ್ಲ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನ ಕೇಸ್‌ – ಬುಧವಾರ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ

02

60 ವರ್ಷ ಮೇಲ್ಪಟ್ಟವರು ವ್ಯಾಕ್ಸಿನ್‌ ಪಡೆಯಿರಿ:
ರಾಜ್ಯದಲ್ಲಿ ಪ್ರತಿಯೊಬ್ಬ ಅರ್ಹರಿಗೆ ಕೋವಿಡ್ ಲಸಿಕೆ ನೀಡುವ ಅಗತ್ಯವಿಲ್ಲ 60 ವರ್ಷ ಹಾಗೂ ದೀರ್ಘವ್ಯಾಧಿಯಿಂದ ಬಳಲುತ್ತಿರುವವರು ಬುಧವಾರದಿಂದಲೇ ಜಿಲ್ಲಾಸ್ಪತ್ರೆಗಳಲ್ಲಿ ಕೋವಿಡ್ ವಾಕ್ಸಿನ್ ತೆಗೆದುಕೊಳ್ಳಬಹುದು. ಕೋವಿಡ್‌ ಮೊದಲ ಮತ್ತು 2ನೇ ಅಲೆಯ ಸಂದರ್ಭದಲ್ಲಿ ಯಾವ ಲಸಿಕೆಯನ್ನು (ಕೋವ್ಯಾಕ್ಸಿನ್‌ ಅಥವಾ ಕೋವಿಶೀಲ್ಡ್) ನೀಡಲಾಗಿತ್ತೋ ಅದೇ ಲಸಿಕೆ ನೀಡಲಿದ್ದೇವೆ. ಹೊಸ ಲಸಿಕೆ ನೀಡುವಂತೆ ಕೇಂದ್ರ ಸರ್ಕಾರದಿಂದ ನಮಗೆ ಯಾವುದೇ ನಿರ್ದೇಶನ ಬಂದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಸ್ಪಷ್ಟನೆ ನೀಡಿದರು.

‌
JN.1 ಬಹುಬೇಗ ಹರಡುತ್ತದೆ:
ಪ್ರಸ್ತುತ ರಾಜ್ಯದಲ್ಲಿ ಕಾಣಿಸಿಕೊಂಡಿರುವ ಜೆಎನ್.1 ರೂಪಾಂತರ ಸೋಂಕು ಬಹುಬೇಗನೆ ಹರಡುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಇದು ಇನ್ನಷ್ಟು ಹರಡಬಹುದೆಂದು ತಜ್ಞರು ಹೇಳಿದ್ದಾರೆ. ಒಂದು ವೇಳೆ ಹಬ್ಬಿದರೂ ಮನುಷ್ಯನ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳು ಕಡಿಮೆ. ಆದ್ದರಿಂದ ಸಾರ್ವಜನಿಕರು ಅನಗತ್ಯವಾಗಿ ಆತಂಕ ಪಡಬಾರದು. ಜನದಟ್ಟಣೆ ಮತ್ತಿತರ ಕಡೆ ಮುಂಜಾಗ್ರತಾ ಕ್ರಮವಾಗಿ ಮಾಸ್ಕ್‌ ಧರಿಸುವುದು ಉತ್ತಮ. ಆದ್ರೆ ಕಡ್ಡಾಯವಾಗಿ ಮಾಸ್ಕ್‌ ಧರಿಸಲೇಬೇಕೆಂಬ ಆದೇಶ ಹೊರಡಿಸುವುದಿಲ್ಲ. ಹಾಗಂತ ಜನರು ಮೈ ಮರೆಬಾರದೆಂದು ಸಲಹೆ ನೀಡಿದರು.

ಇದೇ ವೇಳೆ ಆಕ್ಸಿಜನ್ ಬೆಡ್, ಐಸಿಯು, ವೆಂಟಿಲೇಟರ್, ಔಷಧಗಳು, ಸೇರಿದಂತೆ ಲಭ್ಯವಿರುವ ಉಪಕರಣಗಳ ಬಗ್ಗೆ ಮಾಹಿತಿ ಪಡೆಯಲಾಗಿದೆ. ಕೆಲವು ಆಸ್ಪತ್ರೆಗಳಲ್ಲಿ ಸಿಬ್ಬಂದಿ ನೇಮಕ, ಉಪಕರಣಗಳ ಖರೀದಿಸುವ ಬಗ್ಗೆ ನನ್ನ ಗಮನಕ್ಕೆ ತಂದಿದ್ದಾರೆ. ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಸಧ್ಯಕ್ಕೆ ಕೋವಿಡ್ ಸಂಬಂಧ ಔಷಧಗಳನ್ನು ಖರೀದಿಸಲು ಹಣಕಾಸಿನ ಕೊರತೆ ಇಲ್ಲ ಎಂದು ಸಚಿವರು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ರೋಗಿ, ಕುಟುಂಬಸ್ಥರು ಒಪ್ಪದಿದ್ದರೆ ICUಗೆ ದಾಖಲಿಸುವಂತಿಲ್ಲ- ಕೇಂದ್ರದಿಂದ ಆಸ್ಪತ್ರೆಗಳಿಗೆ ಹೊಸ ರೂಲ್ಸ್‌

ಕೋವಿಡ್‍ನಿಂದ ಸಾವಾಗಿಲ್ಲ:
ರಾಜ್ಯದಲ್ಲಿ ಇತ್ತೀಚೆಗೆ 10 ಮಂದಿ ಸಾವನ್ನಪ್ಪಿದ್ದರು. ಇದು ಕೋವಿಡ್ ಕಾರಣದಿಂದಾಗಿ ಮೃತಪಟ್ಟಿಲ್ಲ. ಅವರು ವಿವಿಧ ಆರೋಗ್ಯಸಮಸ್ಯೆಗಳಿಂದ ಬಳಲುತ್ತಿದ್ದರು. ಹೀಗಾಗಿ ಸಾವನ್ನಪ್ಪಿದ್ದಾರೆ. ಮೃತಪಟ್ಟ 10 ಮಂದಿಯಲ್ಲಿ 9 ಮಂದಿ ಬೇರೆ ಬೇರೆ ಅಂದರೆ ಹೃದಯ ಸಂಬಂಧಿ, ಕಿಡ್ನಿ ಹೀಗೆ ಹಲವಾರು ಕಾಯಿಲೆಗಳಿಂದ ಬಳಲುತ್ತಿದ್ದರು. ಇವರ ಸಾವಿಗೂ ಕೋವಿಡ್‍ಗೂ ಸಂಬಂಧವೇ ಇಲ್ಲ. ಅವರಿಗೆ ಸೋಂಕಿನ ಜೊತೆಗೆ ಇತರ ಬೇರೆ-ಬೇರೆ ಆರೋಗ್ಯದ ಸಮಸ್ಯೆಗಳಿದ್ದವು. ಮೃತಪಟ್ಟವರಲ್ಲಿ ಮಂಗಳೂರಿನ ವ್ಯಕ್ತಿಯೊಬ್ಬರು ಕೋವಿಡ್ ಲಸಿಕೆ ತೆಗೆದುಕೊಂಡಿರಲಿಲ್ಲ. ಮದ್ಯಪಾನದ ವ್ಯಸನಕ್ಕೆ ತುತ್ತಾಗಿದ್ದರು ಎಂದು ಸಚಿವ ಶರಣಪ್ರಕಾಶ್ ಪಾಟೀಲ್ ಸ್ಪಷ್ಟಪಡಿಸಿದರು.

ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್, ವೈದ್ಯಕೀಯ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕಿ ಡಾ.ಸುಜಾತ ರಾಥೋಡ್‌, ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್‌ ಮಂಜುನಾಥ್, ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ.ರವಿ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಇದನ್ನೂ ಓದಿ: ಸಿದ್ದರಾಮಯ್ಯ ಹೆಸರಲ್ಲಿ ರಾಮ ಇದೆ, ಶ್ರೀರಾಮನ ಗುಣ ಇದೆಯಾ? – ಸಿ.ಟಿ ರವಿ ವ್ಯಂಗ್ಯ

ಮುಖ್ಯಾಂಶಗಳು

  • ಪ್ರತಿ ಜಿಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ 50 ಹಾಸಿಗೆಗಳನ್ನ ಮೀಸಲಿಡಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
  • ವೈದ್ಯಕೀಯ ಕಾಲೇಜಿನಲ್ಲಿ 18,141 ಹಾಸಿಗೆಗಳು, ಸರ್ಕಾರಿ ಆಸ್ಪತ್ರೆಗಳಲ್ಲಿ 10 ಸಾವಿರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಬರುವ ಆಸ್ಪತ್ರಗಳಲ್ಲಿ 11,500 ಹಾಸಿಗೆಗಳು ಲಭ್ಯವಿವೆ.
  • ಕೇರಳದಲ್ಲಿ ಕಾಣಿಸಿಕೊಂಡ ರೂಪಾಂತರಿ ಜೆಎನ್-1 ಸೋಂಕು ಕ್ರಮೇಣವಾಗಿ ಕಡಿಮೆಯಾಗುತ್ತಿದೆ. ರಾಜ್ಯದಲ್ಲೂ ಒಂದು ವೇಳೆ ಹಬ್ಬಿದರೆ ಏನೆಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕೋ ಅದೆಲ್ಲವನ್ನೂ ತೆಗೆದುಕೊಂಡಿದ್ದೇವೆ.
  • ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದನ್ನು ಸಮರ್ಪಕವಾಗಿ ನಿರ್ವಹಿಸಲು ಸೂಚನೆ ನೀಡಿದ್ದಾರೆ. ಅದರಂತೆ ಇಲಾಖೆಯಲ್ಲಿರುವ ಕೋವಿಡ್ ವಾರಿಯರ್ಸ್‌ ಫ್ಲೂ-ಲಸಿಕೆಯನ್ನು ಪಡೆಯಬೇಕು.
  • ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಪರೀಕ್ಷಾ ಸಾಮರ್ಥ್ಯವನ್ನೂ ಹೆಚ್ಚಿಸಲಾಗುತ್ತಿದೆ. ಜೊತೆಗೆ ಆರೋಗ್ಯ ಸೌಲಭ್ಯಗಳ ಕಾರ್ಯ ಸಿದ್ಧತೆ ನಡೆಸಲಾಗಿದೆ.
  • ಸಭೆಯಲ್ಲಿ 99 ಮೆಡಿಕಲ್ ಕಾಲೇಜುಗಳು, 10 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ದೇಶಕರ ಜೊತೆ ಚರ್ಚೆ ನಡೆಸಲಾಗಿದೆ.
  • ಎಲ್ಲಾ ಸರ್ಕಾರಿ ಕಾಲೇಜುಗಳಲ್ಲೂ ಪ್ರತ್ಯೇಕ ಆಕ್ಸಿಜನ್ ಬೆಡ್ ಮತ್ತು ಐಸಿಯು ವ್ಯವಸ್ಥೆ ಮಾಡಲಾಗಿದೆ. ಅಗತ್ಯ ಮಾನವ ಸಂಪನ್ಮೂಲಕ್ಕಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ.
  • 30 ಸಾವಿರ ಲಸಿಕೆಗಳು ಲಭ್ಯವಿದ್ದು, ಈವರೆಗೂ ಲಸಿಕೆ ಪಡೆಯದೇ ಇದ್ದವರು, ಮುಂಜಾಗ್ರತಾ ಲಸಿಕೆಯನ್ನಾಗಿ ತೆಗೆದುಕೊಳ್ಳುವವರು ಈ ಸೌಲಭ್ಯ ಪಡೆದುಕೊಳ್ಳಬಹುದು.

TAGGED:bengaluruCoronaCovid 19Covid vaccineHealth OfficershospitalsJN.1Sharanprakash Patilಆರೋಗ್ಯಾಧಿಕಾರಿಗಳುಆಸ್ಪತ್ರೆಗಳುಕೊರೊನಾಬೆಂಗಳೂರುಶರಣ್ ಪ್ರಕಾಶ್ ಪಾಟೀಲ್
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
1 hour ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
2 hours ago
Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
2 hours ago
drone camera captures footage of people gambling in bhadravati forest 19 detained
Crime

ಪೊಲೀಸರ ಕಣ್ತಪ್ಪಿಸಿ ಕಾಡಲ್ಲಿ ಜೂಜು – ಡ್ರೋನ್‌ ಕಣ್ಣಲ್ಲಿ ಸಿಕ್ಕಿಬಿದ್ದ ಗ್ಯಾಂಗ್‌, 19 ಮಂದಿ ವಶಕ್ಕೆ

Public TV
By Public TV
3 hours ago
S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
3 hours ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?