Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ನಿರ್ಮಾಪಕ ಕೆ.ಮಂಜು ಪುತ್ರನ ‘ರಾಣ’ ಸಿನಿಮಾದ ಹಾಡು ರಿಲೀಸ್ ಮಾಡಿದ ಜೋಗಿ ಪ್ರೇಮ್

Public TV
Last updated: September 21, 2022 11:50 am
Public TV
Share
3 Min Read
FotoJet 87
SHARE

ನಿರ್ಮಾಪಕ ಕೆ.ಮಂಜು (, K. Manju) ಪುತ್ರ ಶ್ರೇಯಸ್ ನಾಯಕನಾಗಿ ನಟಿಸಿರುವ , ನಂದಕಿಶೋರ್ ನಿರ್ದೇಶನದ “ರಾಣ” (Rana) ಚಿತ್ರದ “ಗಲ್ಲಿ ಬಾಯ್” ಹಾಡನ್ನು ಜೋಗಿ ಪ್ರೇಮ್ (Jogi Prem) ಬಿಡುಗಡೆ ಮಾಡಿದರು. ಚಂದನ್ ಶೆಟ್ಟಿ ಬರೆದು ಸಂಗೀತ ನೀಡಿರುವ ಈ ಹಾಡನ್ನು ಅನಿರುದ್ಧ್ ಶಾಸ್ತ್ರಿ ಹಾಗೂ ಅದಿತಿ ಸಾಗರ್ ಹಾಡಿದ್ದಾರೆ. ಆನಂದ್ ಆಡಿಯೋ ಮೂಲಕ ಈ ಹಾಡು ಬಿಡುಗಡೆಯಾಗಿದೆ. ಈ ಹಾಡು ತುಂಬಾ ಚೆನ್ನಾಗಿ ಮೂಡಿಬಂದಿದೆ. ಶ್ರೇಯಸ್ ಹಾಗೂ ರೀಷ್ಮಾ ನಾಣಯ್ಯ ಇಬ್ಬರೂ ಚೆನ್ನಾಗಿ ನೃತ್ಯ ಮಾಡಿದ್ದಾರೆ. ಚಂದನ್ ಶೆಟ್ಟಿ ಸಂಗೀತ ಸುಂದರವಾಗಿದೆ. ಅನಿರುದ್ಧ್ ಶಾಸ್ತ್ರಿ ಹಾಗೂ ಅದಿತಿ ಸಾಗರ್ ಗಾಯನ ಸುಮಧುರವಾಗಿದೆ. ನಂದ ಕಿಶೋರ್ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಜೋಗಿ ಪ್ರೇಮ್ ಹಾರೈಸಿದರು.

FotoJet 3 29

ಮೊದಲು ನಾನು, ನನ್ನ ಸ್ಪೂರ್ತಿಯಾದ ವಿಷ್ಣುವರ್ಧನ್ ಹಾಗೂ ಅಪ್ಪು ಅವರನ್ನು ನೆನಪಿಸಿಕೊಳ್ಳುತ್ತೇನೆ. ಚಂದನ್ ಶೆಟ್ಟಿ  ಎಲ್ಲರ ಮನಸಿಗೆ ಹತ್ತಿರವಾಗುವಂತಹ ಸಾಹಿತ್ಯ ಬರೆದಿದ್ದಾರೆ. ಅಷ್ಟೇ ಚೆನ್ನಾಗಿ ಸಂಗೀತ ನೀಡಿದ್ದಾರೆ. ಅನಿರುಧ್ದ್ ಶಾಸ್ತ್ರಿ ಹಾಗೂ ಅದಿತಿ ಸಾಗರ್ ಅವರ ಅದ್ಭುತ ಗಾಯನ ಹಾಡಿನ ಅಂದವನ್ನು ಮತ್ತಷ್ಟು ಹೆಚ್ಚಿಸಿದೆ. ರೀಷ್ಮಾ ನಾಣಯ್ಯ ಒಳ್ಳೆಯ ನೃತ್ಯಗಾರ್ತಿ.  ನೃತ್ಯ ನಿರ್ದೇಶಕ ಇಮ್ರಾನ್ ಮಾಸ್ಟರ್ ಹಾಗೂ ಛಾಯಾಗ್ರಾಹಕ ಶೇಖರ್ ಚಂದ್ರ ಅವರ ಕಾರ್ಯವೈಖರಿ ಚೆನ್ನಾಗಿದೆ. ನಾನು ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡು ಅಭಿನಯಿಸಿದ್ದೇನೆ. ನವೆಂಬರ್ 11 ರಂದು ಚಿತ್ರ ತೆರೆಗೆ ಬರಲಿದೆ.‌ ಹಾಡು ಬಿಡುಗಡೆ ಮಾಡಿಕೊಟ್ಟ ಪ್ರೇಮ್ ಅವರಿಗೆ ಹಾಗೂ ಅವಕಾಶ ನೀಡಿರುವ ನಿರ್ಮಾಪಕ ಪುರುಷೋತ್ತಮ್ ಹಾಗೂ ನಿರ್ದೇಶಕ ನಂದಕಿಶೋರ್ ಅವರಿಗೆ ಧನ್ಯವಾದ ಎಂದರು ನಾಯಕ ಶ್ರೇಯಸ್ (Shreyash). ಇದನ್ನೂ ಓದಿ:ಯೂಟ್ಯೂಬ್‌ನಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದ ಉಪ್ಪಿ- ಕಿಚ್ಚ ನಟನೆಯ ‘ಕಬ್ಜ’ ಟೀಸರ್

FotoJet 1 61

ಚಿತ್ರ ಚೆನ್ನಾಗಿ ಬಂದಿದೆ. ಈ ಹಾಡಂತೂ ಸಖತ್‌ ಆಗಿದೆ. ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ (Chandan Shetty)  ಅವರು ಬರೆದಿರುವ ಈ ಹಾಡು ಎಲ್ಲರ ಗಮನ ಸೆಳೆಯುತ್ತಿದೆ ಎಂದರು ನಾಯಕಿ ರೀಷ್ಮಾ ನಾಣಯ್ಯ. ಗುಜ್ಜಲ್ ಪುರುಷೋತ್ತಮ್ ಅವರು ಒಂದು ಸಿನಿಮಾ ಮಾಡುತ್ತಿದ್ದೇನೆ. ನೀವು ಜೊತೆಗಿರಬೇಕು ಎಂದರು.  ನನ್ನ ಮಗನೇ ಹೀರೋ ಅಂತ ತಿಳಿದ ಮೇಲೆ, ನಾನು ಅವನಿಗೆ ಚಿತ್ರ ಚೆನ್ನಾಗಿ ಬರಲು ನಿರ್ದೇಶಕರು ಕಾರಣ ಅವರು ಹೇಳಿದ ಹಾಗೆ ಕೇಳಬೇಕು ಅಂತ ಹೇಳಿದೆ. “ರಾಣ” ಒಂದೊಳ್ಳೆಯ ಕೌಟುಂಬಿಕ ಚಿತ್ರ.  ಹಳ್ಳಿಯಿಂದ ನಗರಕ್ಕೆ ಬಂದು ನೆಲೆಸಿರುವವರ ಕುರಿತಾದ ಕಥೆಯಿದೆ. ನಂದಕಿಶೋರ್ (Nandakishor) ನಿರ್ದೇಶನ, ಚಂದನ್ ಶೆಟ್ಟಿ ಸಂಗೀತ ನಿರ್ದೇಶನ ಸೇರಿದಂತೆ ಎಲ್ಲರ ಕೆಲಸ ಚೆನ್ನಾಗಿದೆ. ನವೆಂಬರ್ 11ಕ್ಕೆ ಚಿತ್ರ ತೆರೆಗೆ ಬರುತ್ತಿದೆ ಎಂದು ತಿಳಿಸಿದ ಕೆ.ಮಂಜು, ಹಾಡು ಬಿಡುಗಡೆ ಮಾಡಲು ದೂರದ ಮುಂಬೈನಿಂದ ಬಂದ ಪ್ರೇಮ್ ಅವರಿಗೆ ಧನ್ಯವಾದ ಹೇಳಿದರು.

FotoJet 2 55

ಹಾಡು (Song) ಬಿಡುಗಡೆ ಮಾಡಿದ ಪ್ರೇಮ್ ಸರ್ ಗೆ ಧನ್ಯವಾದ. ಚಿತ್ರ ತೆರೆಗೆ ಬರಲು ಸಿದ್ದವಾಗಿದೆ.‌ ನವೆಂಬರ್ 11ರಂದು ಬಿಡುಗಡೆಯಾಗಲಿದೆ. ತಂಡದವರೆಲ್ಲಾ ಸೇರಿ ಉತ್ತಮ ಚಿತ್ರ ಮಾಡಿದ್ದೇವೆ. ಪ್ರೋತ್ಸಾಹ ನೀಡಿ ಎಂದರು ನಿರ್ದೇಶಕ ನಂದಕಿಶೋರ್. ಕೆ.ಮಂಜು ಅವರ ಸಹಕಾರದಿಂದ ಈ ಚಿತ್ರ ನಿರ್ಮಾಣ ಮಾಡಿದ್ದೇನೆ. ಇಡೀ ತಂಡಕ್ಕೆ ನನ್ನ ಧನ್ಯವಾದ ಎಂದರು ನಿರ್ಮಾಪಕ ಗುಜ್ಜಲ್ ಪುರುಷೋತ್ತಮ್. ನಂದಕಿಶೋರ್ ನಿರ್ದೇಶನದಲ್ಲಿ ಚಿತ್ರ  ಚೆನ್ನಾಗಿ ಬಂದಿದೆ. ಹಾಡುಗಳು ಸುಂದರವಾಗಿದೆ. ಇದೇ ಮೊದಲ ಬಾರಿಗೆ ನಾನು ಹಿನ್ನೆಲೆ ಸಂಗೀತ ಕೂಡ ನೀಡಿದ್ದೇನೆ ಎಂದು ಸಂಗೀತದ ಬಗ್ಗೆ ಚಂದನ್ ಶೆಟ್ಟಿ ಮಾಹಿತಿ ನೀಡಿದರು. ಚಿತ್ರದಲ್ಲಿ ಅಭಿನಯಿಸಿರುವ ಕೋಟೆ ಪ್ರಭಾಕರ್, ಅಶೋಕ್, ರಘು ಹಾಗೂ ಗಾಯಕ ಅನಿರುದ್ಧ್ ಶಾಸ್ತ್ರಿ ಚಿತ್ರದ ಕುರಿತು ಮಾತನಾಡಿದರು. ರೈತ ಕೇಶವ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Live Tv
[brid partner=56869869 player=32851 video=960834 autoplay=true]

TAGGED:AditiChandan Shettyjogi premk manjuNandakishoreranashreyassongಅದಿತಿಕೆ ಮಂಜುಚಂದನ್ ಶೆಟ್ಟಿಜೋಗಿ ಪ್ರೇಮ್ನಂದಕಿಶೋರ್ರಾಣಶ್ರೇಯಸ್ಸಾಂಗ್
Share This Article
Facebook Whatsapp Whatsapp Telegram

Cinema Updates

samantha
ಒಂದೇ ಕಾರ್ಯಕ್ರಮದಲ್ಲಿ ಕಾಣಿಸಕೊಂಡ ಮಾಜಿ ಅತ್ತೆ, ಸೊಸೆ – ಸಮಂತಾ ಮಾತಿಗೆ ಅಮಲಾ ಚಪ್ಪಾಳೆ
11 hours ago
KENISHA 1
ಕೆನಿಶಾಗೆ ಕೊಲೆ ಬೆದರಿಕೆ – ಆರತಿ ಸಮಸ್ಯೆಗೆ ನಾನು ಕಾರಣ ಆಗಿದ್ರೆ ಕೋರ್ಟ್‌ ಮುಂದೆ ನಿಲ್ಲಿಸಿ ಎಂದ ಗಾಯಕಿ
11 hours ago
janhvi kapoor 1
ಕಾನ್ ಫೆಸ್ಟಿವಲ್| ರೆಡ್ ಕಾರ್ಪೆಟ್‌ನಲ್ಲಿ ಜಾನ್ವಿ ವಾಕ್ – ‘ನನ್ನ ದೇವತೆ’ ಎಂದ ಬಾಯ್‌ಫ್ರೆಂಡ್
12 hours ago
Tamanna Bhatia
Video | ತಮನ್ನಾಗೆ 6.20 ಕೋಟಿ – ನಟಿ ತಾರಾ ಬೇಸರ
12 hours ago

You Might Also Like

Namma Metro Purple Line
Bengaluru City

ವೈಟ್‌ಫೀಲ್ಡ್‌ ನಿಲ್ದಾಣದಲ್ಲಿ ತಾಂತ್ರಿಕ ಸಮಸ್ಯೆ – ಮೆಟ್ರೋ ಸಂಚಾರ ಸ್ಥಗಿತ

Public TV
By Public TV
37 seconds ago
daily horoscope dina bhavishya
Astrology

ದಿನ ಭವಿಷ್ಯ 23-05-2025

Public TV
By Public TV
26 minutes ago
Lucknow Super Gaints
Cricket

ಆಟಕ್ಕುಂಟು ಲೆಕ್ಕಕ್ಕಿಲದ ಪಂದ್ಯದಲ್ಲಿ ರೋಷಾವೇಶ – ಗುಜರಾತ್‌ ವಿರುದ್ಧ ಲಕ್ನೋಗೆ 33 ರನ್‌ಗಳ ಭರ್ಜರಿ ಗೆಲುವು

Public TV
By Public TV
7 hours ago
Shaurya Chakras
Latest

ಮೇಜರ್ ಆಶಿಶ್ ದಹಿಯಾ ಸೇರಿ 33 ಶೌರ್ಯ ಚಕ್ರ ಪ್ರಶಸ್ತಿ, 6 ಕೀರ್ತಿ ಚಕ್ರ ಪ್ರಶಸ್ತಿ ಪ್ರದಾನ

Public TV
By Public TV
8 hours ago
IndiGo Flight 1
Latest

ಡೇಂಜರ್‌ನಲ್ಲಿದ್ದರೂ ದೆಹಲಿ-ಶ್ರೀನಗರ ಇಂಡಿಗೋ ವಿಮಾನಕ್ಕೆ ತನ್ನ ವಾಯುಸೀಮೆ ಬಳಸಲು ನಿರಾಕರಿಸಿದ ಪಾಕ್‌

Public TV
By Public TV
8 hours ago
Dinesh Gundurao 1
Bengaluru City

ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಮಾರಾಟ ಸರಿಯಲ್ಲ – ಜನೌಷಧಿ ಕೇಂದ್ರಗಳ ಸ್ಥಗಿತದ ಹಿಂದೆ ರಾಜಕೀಯ ಉದ್ದೇಶವಿಲ್ಲ – ಗುಂಡೂರಾವ್

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?