ರಷ್ಯಾ: ಭಯೋತ್ಪಾದನೆ ಬೆಂಬಲಿಸುತ್ತಿರುವ ಪಾಕಿಸ್ತಾನದ (Pakistan) ನಿಜ ಬಣ್ಣ ಬಯಲು ಮಾಡಲು ರಷ್ಯಾಕ್ಕೆ ತೆರಳಿರುವ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ (Capt. Brijesh Chowta) ಅವರನ್ನು ಒಳಗೊಂಡ ಸಂಸದೆ ಕನಿಮೋಳ್ ನೇತೃತ್ವದ ಸರ್ವಪಕ್ಷಗಳ ನಿಯೋಗವು (All Party Delegations) ಇಂದು ಹಲವು ಕಡೆ ಉನ್ನತ ಮಟ್ಟದ ಸಭೆ, ವೇದಿಕೆಗಳಲ್ಲಿ ಭಾರತದ ನಿಲುವನ್ನು ಸ್ಪಷ್ಟಪಡಿಸಿದೆ.
ರಷ್ಯಾಕ್ಕೆ (Russia) ಆಗಮಿಸಿದ ಐವರು ಸಂಸದರನ್ನು ಒಳಗೊಂಡ ಈ ನಿಯೋಗವನ್ನು ಅಲ್ಲಿನ ಭಾರತೀಯ ರಾಯಭಾರಿ ಅಧಿಕಾರಿಗಳು ಬರಮಾಡಿಕೊಂಡಿದ್ದರು. ನಂತರ ರಷ್ಯಾದಲ್ಲಿನ ಭಾರತದ ರಾಯಭಾರಿ ವಿನಯ್ ಕುಮಾರ್ ಅವರು ಸರ್ವಪಕ್ಷ ಸಂಸದೀಯ ನಿಯೋಗದ ಜೊತೆಗೆ ಭಾರತ-ರಷ್ಯಾ ಸಂಬಂಧಗಳ ವಿವಿಧ ಅಂಶಗಳ ಕುರಿತು ಸಮಗ್ರ ಮಾಹಿತಿ ಹಂಚಿಕೊಂಡರು.ಇದನ್ನೂ ಓದಿ:ತಾಳಿ ಕಟ್ಟುವಾಗಲೇ ಮದುವೆ ಬೇಡವೆಂದ ವಧು ತಾನು ಪ್ರೀತಿಸಿದ ಯುವಕನ ಜೊತೆ ವಿವಾಹ
ಇದಾದ ಬಳಿಕ ಸರ್ವಪಕ್ಷಗಳ ನಿಯೋಗವು ಮೊದಲು ರಷ್ಯಾದ ಫೆಡರೇಶನ್ ಕೌನ್ಸಿಲ್ನ ಅಂತಾರಾಷ್ಟ್ರೀಯ ವ್ಯವಹಾರಗಳ ಸಮಿತಿ ಉಪಾಧ್ಯಕ್ಷ ಆಂಡ್ರೆ ಡೆನಿಸೋವ್ ಮತ್ತು ಇತರ ಸೆನೆಟರ್ಗಳೊಂದಿಗೆ ಸಭೆ ನಡೆಸಿದರು. ಈ ಮೂಲಕ ಭಯೋತ್ಪಾದನೆ ಹಾಗೂ ಪಾಕಿಸ್ತಾನ ಬೆಂಬಲಿತ ಭಯೋತ್ಪಾದನೆ ವಿರುದ್ಧದ ಭಾರತದ ದಿಟ್ಟ ಹೋರಾಟದ ಬಗ್ಗೆ ಮನವರಿಕೆ ಮಾಡಿಕೊಟ್ಟಿದೆ. ಜೊತೆಗೆ ಪಹಲ್ಗಾಮ್ನಲ್ಲಿ ಉಗ್ರರು ನಡೆಸಿದ್ದ ಆ ಭೀಕರ ದಾಳಿ ಹಾಗೂ ಅದಕ್ಕೆ ಭಾರತವು ಪಾಕಿಸ್ತಾನಕ್ಕೆ ತಿರುಗೇಟು ಕೊಟ್ಟ `ಆಪರೇಷನ್ ಸಿಂಧೂರ’ದ ಯಶಸ್ವಿನ ಬಗ್ಗೆಯೂ ತಿಳಿಸಿದೆ. ಅಲ್ಲದೆ ಭಯೋತ್ಪಾದನೆ ವಿರುದ್ಧದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನೀಡಿರುವ ಸ್ಪಷ್ಟ ಸಂದೇಶ ಏನು ಎಂಬುದನ್ನು ಕೂಡ ವಿವರಿಸಿದ್ದಾರೆ.
ಬಳಿಕ ಶುಕ್ರವಾರ ಮಧ್ಯಾಹ್ನ ಭಾರತದ ನಿಯೋಗವು ಸ್ಟೇಟ್ ಡುಮಾಕ್ಕೆ ಭೇಟಿ ನೀಡಿದ್ದು, ಅಲ್ಲಿ ಅಂತಾರಾಷ್ಟ್ರೀಯ ವ್ಯವಹಾರಗಳಿಗೆ ಸಂಬಂಧಿಸಿದ ಸಮಿತಿಯ ಅಧ್ಯಕ್ಷ ಲಿಯೋನಿಡ್ ಸ್ಲಟ್ಸ್ಕಿ ಹಾಗೂ ಸದಸ್ಯರನ್ನು ಭೇಟಿ ಮಾಡಿ ಮಹತ್ವದ ಸಭೆ ನಡೆಸಿದ್ದಾರೆ. ಈ ಭೇಟಿಯ ನಂತರ ಸರ್ವಪಕ್ಷಗಳ ನಿಯೋಗವು ರಷ್ಯಾದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಉಪವಿದೇಶಾಂಗ ಸಚಿವ ಆಂಡ್ರಿ ರುಡೆನ್ಕೊ ಅವರನ್ನು ಭೇಟಿ ಮಾಡಿ, ಪಾಕಿಸ್ತಾನವು ಹಲವು ದಶಕಗಳಿಂದ ಯಾವ ರೀತಿ ಭಯೋತ್ಪಾದನೆಯನ್ನು ಸೃಷ್ಟಿಸಿ ಉಗ್ರರನ್ನು ಪೋಷಿಸುತ್ತಿದೆ ಎಂಬುದನ್ನು ಸವಿವರವಾಗಿ ಮನವರಿಕೆ ಮಾಡಿಕೊಟ್ಟಿದೆ. ಇದಾದ ಬಳಿಕ ಸಂಸದರ ನಿಯೋಗವು ರಷ್ಯನ್ ಇನ್ಸ್ಟಿಟ್ಯೂಟ್ ಆಫ್ ಸ್ಟ್ರಾಟೆಜಿಕ್ ಸ್ಟಡೀಸ್ನ ಮಿಖೈಲ್ ಫ್ರೆಡ್ಕೋವ್ ಅವರನ್ನು ಭೇಟಿ ಮಾಡಿ, ಭಯೋತ್ಪಾದನೆ ವಿರುದ್ಧ ಭಾರತದ ನಿಲುವುಗಳ ಬಗ್ಗೆ ವಿಚಾರ ವಿನಿಮಯ ಮಾಡಿದೆ.

ಶನಿವಾರದಂದು ಸರ್ವಪಕ್ಷಗಳ ನಿಯೋಗವು ಮಾಸ್ಕೋದಲ್ಲಿ ನಡೆಯುವ ಸಭೆಯಲ್ಲಿ ಭಾಗವಹಿಸಲಿದ್ದು, ಬಳಿಕ ಸ್ಲೊವೇನಿಯಾ ದೇಶದತ್ತ ಪ್ರಯಾಣಿಸಲಿದೆ.ಇದನ್ನೂ ಓದಿ:ಅಭಿಷೇಕ್ ಶರ್ಮಾ ಹೊಡೆದ ಸಿಕ್ಸ್ಗೆ ಕಾರಿನ ಗ್ಲಾಸ್ ಪುಡಿ.. ಪುಡಿ.. – 5 ಲಕ್ಷ ನಷ್ಟ




