Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸ್ವಾವಲಂಬಿ ಭಾರತ ಕಟ್ಟಲು ಕೈಜೋಡಿಸಿ: ರಾಜ್ಯಪಾಲರ ಮನವಿ

Public TV
Last updated: August 13, 2022 8:09 pm
Public TV
Share
2 Min Read
Governor 4 1
SHARE

ಬೆಂಗಳೂರು: ಸ್ವಾತಂತ್ರ‍್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಮೇಕ್ ಇನ್ ಇಂಡಿಯಾ, ಸ್ಟ್ಯಾಂಡ್ ಅಪ್ ಇಂಡಿಯಾ, ಸ್ಕಿಲ್ ಇಂಡಿಯಾ ಮತ್ತು ಡಿಜಿಟಲ್ ಇಂಡಿಯಾವನ್ನು ಉತ್ತೇಜಿಸುವ ಮೂಲಕ ಸ್ವಾವಲಂಬಿ ಭಾರತವನ್ನು ಕಟ್ಟಲು ಭಾರತೀಯರು ಮುಂದಾಗಬೇಕು ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಕರೆ ನೀಡಿದ್ದಾರೆ.

Governor 3

ಭಾರತದ ಸ್ವಾತಂತ್ರ‍್ಯದ 75 ವರ್ಷಗಳ ಸ್ಮರಣಾರ್ಥ `ಆಜಾದಿ ಕಾ ಅಮೃತ್ ಮಹೋತ್ಸವ’ದ ವಿಶೇಷ ಅಂಚೆ ಕವರ್ ಅನ್ನು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್‌ಕೆಸಿಸಿಐ) ಬೆಂಗಳೂರಿನಲ್ಲಿ ಬಿಡುಗಡೆಗೊಳಿಸಿ ಅವರು ಮಾತನಾಡಿದ್ದಾರೆ. ಇದನ್ನೂ ಓದಿ: ಗಣೇಶೋತ್ಸವಕ್ಕೆ ಡಬಲ್ ಸೌಂಡ್ ಹಚ್ಚಿ ಮೆರವಣಿಗೆ ಮಾಡಿ, ಏನ್ ಮಾಡ್ತಾರೆ ನೋಡೋಣ: ಪ್ರಮೋದ್ ಮುತಾಲಿಕ್

ಅಮೃತ ಮಹೋತ್ಸವ ಹಬ್ಬವನ್ನು ಭಾರತದ ಜನತೆಗೆ ಸಮರ್ಪಿಸಲಾಗಿದೆ. ಸ್ವಾತಂತ್ರ‍್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಎಫ್‌ಕೆಸಿಸಿಐ ಮತ್ತು ಅಂಚೆ ಇಲಾಖೆಯಿಂದ ವಿಶೇಷ ಅಂಚೆ ಕವರ್ ಬಿಡುಗಡೆ ಮಾಡಿರುವುದು ಸಂತಸದ ವಿಷಯ ಎಂದು ಹೇಳಿದ್ದಾರೆ.

Governor 2

ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರು ಸ್ಥಾಪಿಸಿದ ಎಫ್‌ಕೆಸಿಸಿಐ ಸಂಸ್ಥೆಗೆ 106 ವರ್ಷ. ಎಫ್‌ಕೆಸಿಸಿಐ ಕರ್ನಾಟಕ ರಾಜ್ಯದಲ್ಲಿ ಉದ್ಯಮ, ವ್ಯಾಪಾರ ಮತ್ತು ಸೇವಾ ವಲಯದಲ್ಲಿ ಸಕ್ರಿಯ ಮತ್ತು ಸಕಾರಾತ್ಮಕ ಪಾತ್ರವನ್ನು ವಹಿಸುತ್ತಿದೆ. ಭಾರತಕ್ಕೆ ಸ್ವಾತಂತ್ರ‍್ಯ ಬಂದು 75 ವರ್ಷಗಳಾದ ಸಂದರ್ಭದಲ್ಲಿ ಎಫ್‌ಕೆಸಿಸಿಐ ಸ್ವಾತಂತ್ರ‍್ಯದ ಅಮೃತ ಮಹೋತ್ಸವದ ಅಡಿಯಲ್ಲಿ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ದೇಶದ ಏಕತೆ ಮತ್ತು ಸಮಗ್ರತೆಗಾಗಿ ಶ್ರಮಿಸುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಕನ್ನಡದ ಹಿರಿಯ ಹಾಸ್ಯ ನಟ ಉಮೇಶ್ ಸಿನಿ ಪಯಣಕ್ಕೆ 62ನೇ ಸಂಭ್ರಮ: ವಾಣಿಜ್ಯ ಮಂಡಳಿಯಿಂದ ಅಭಿನಂದನಾ ಕಾರ್ಯಕ್ರಮ

ಸ್ವಾತಂತ್ರ‍್ಯ ಚಳವಳಿಯ ಇತಿಹಾಸದಂತೆ, 75 ವರ್ಷಗಳ ಪ್ರಯಾಣವು ಭಾರತೀಯರ ಕಠಿಣ ಪರಿಶ್ರಮ, ನಾವೀನ್ಯತೆ, ಉದ್ಯಮಶೀಲತೆಯ ಪ್ರತಿಬಿಂಬವಾಗಿದೆ. ಇಂದು ಭಾರತದ ಸ್ಟಾರ್ಟ್ಅಪ್ ಪರಿಸರ ವ್ಯವಸ್ಥೆಯು ವಿಶ್ವದ ಆಕರ್ಷಣೆಯ ಕೇಂದ್ರವಾಗಿದೆ. ಭಾರತದ ಸಾಮರ್ಥ್ಯ ಮತ್ತು ಭಾರತದ ಪ್ರತಿಭೆ ಪ್ರಪಂಚದ ಪ್ರತಿಯೊಂದು ಹಂತದಲ್ಲೂ ಪ್ರತಿಧ್ವನಿಸುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಆದಾಯ, ವಸತಿ ಮತ್ತು ನೀರು, ಆರೋಗ್ಯ ಸೌಲಭ್ಯಗಳು ಇತ್ಯಾದಿಗಳಿಗೆ ವಿವಿಧ ವಿನೂತನ ಮತ್ತು ಅಂತರ್ಗತ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿವೆ ಮತ್ತು ದೇಶದ ಸರ್ವತೋಮುಖ ಅಭಿವೃದ್ಧಿ ಮತ್ತು ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸುವ ಉದ್ದೇಶದಿಂದ ಮೂಲ ಸೇವೆಗಳನ್ನು ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Governor 1

ಕರ್ನಾಟಕ ರಾಜ್ಯವು ದೇಶದ ಜಿಡಿಪಿಗೆ ಶೇ.8.8 ರಷ್ಟು ಕೊಡುಗೆ ನೀಡುವ ಮೂಲಕ ಭಾರತದ ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡುತ್ತಿದೆ. ಕೈಗಾರಿಕೆ, ಸೇವಾ ಮತ್ತು ಕೃಷಿ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆಗಳನ್ನು ಮಾಡುತ್ತಿದೆ. ಆದಾಯ ತೆರಿಗೆ ಹಾಗೂ ಜಿಎಸ್‌ಟಿ ಸಂಗ್ರಹದಲ್ಲಿ ಕರ್ನಾಟಕವು ದೇಶದ 2ನೇ ಅತಿದೊಡ್ಡ ರಾಜ್ಯವಾಗಿದೆ. 2024ರ ವೇಳೆಗೆ ದೇಶವು 5 ಟ್ರಿಲಿಯನ್ ಆರ್ಥಿಕತೆಯ ಗುರಿ ಸಾಧಿಸುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ನಮಗೆ ಸ್ವಾತಂತ್ರ‍್ಯ ನೀಡಿದ ಎಲ್ಲ ಮಹಾಪುರುಷರಿಗೆ ನನ್ನ ನಮನ. ಈ ವಿಶೇಷ ಸಂದರ್ಭದಲ್ಲಿ ನಾವು ಒಂದು ಸಂಕಲ್ಪವನ್ನು ತೆಗೆದುಕೊಳ್ಳಬೇಕು. ಸ್ವಾತಂತ್ರ‍್ಯವನ್ನು ಅಖಂಡವಾಗಿ ಉಳಿಸಿಕೊಳ್ಳಲು ಮತ್ತು ದೇಶಭಕ್ತಿಯ ವಾತಾವರಣ ಸೃಷ್ಟಿಸಲು ಒಗ್ಗೂಡಿ ಮುನ್ನಡೆಯಬೇಕಾಗಿದೆ ಎಂದು ಹೇಳಿದ್ದಾರೆ.

ಎಫ್‌ಕೆಸಿಸಿಐ ಅಧ್ಯಕ್ಷ ಡಾ.ಸಿ.ಎ.ಐ.ಎಸ್ ಪ್ರಸಾದ್ ಹಾಗೂ ಅಂಚೆ ಇಲಾಖೆಯ ಮುಖ್ಯ ಪೋಸ್ಟ್ಮಾಸ್ಟರ್ ಜನರಲ್ ರಾಜೇಂದ್ರ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

Live Tv
[brid partner=56869869 player=32851 video=960834 autoplay=true]

TAGGED:bengaluruFKCCIIndependence Dayindiakarnataka governorthawar chand gehlotಎಫ್‍ಕೆಸಿಸಿಐಥಾವರ್ ಚಂದ್ ಗೆಹ್ಲೋಟ್ಬೆಂಗಳೂರುಭಾರತರಾಜ್ಯಪಾಲರು
Share This Article
Facebook Whatsapp Whatsapp Telegram

You Might Also Like

LORRY
Districts

ಮಡಿಕೇರಿ | ಮಳೆ ಹಿನ್ನೆಲೆ ಭಾರೀ ವಾಹನಗಳಿಗೆ ನಿಷೇಧ – ಆದೇಶ ಉಲ್ಲಂಘಿಸಿದ 12 ಲಾರಿಗಳು ವಶಕ್ಕೆ

Public TV
By Public TV
4 hours ago
04 BYTE
Bengaluru City

ಸರೋಜಮ್ಮ ತುಂಬಾ ನೆಮ್ಮಯಿಂದ ಹೋಗಿದ್ದಾರೆ – ತಮಿಳುನಟ ಕಾರ್ತಿ ಕಂಬನಿ

Public TV
By Public TV
4 hours ago
03 VISHAL
Bengaluru City

ಸರೋಜಮ್ಮ ದಂತಕಥೆ, ಅವರ ಸ್ಥಾನ ತುಂಬಲೂ ಯಾರಿಂದಲೂ ಸಾಧ್ಯವಿಲ್ಲ: ನಟ ವಿಶಾಲ್‌ ಭಾವುಕ

Public TV
By Public TV
4 hours ago
ANAND DEATH
Districts

ಸಂತೆ ಮುಗಿಸಿಕೊಂಡು ಮನೆಗೆ ಹೊರಟಿದ್ದ ವ್ಯಕ್ತಿ ಕುಸಿದುಬಿದ್ದು ಸಾವು

Public TV
By Public TV
4 hours ago
AUTO
Bengaluru City

ಬೆಂಗಳೂರು ಜನಕ್ಕೆ ಆಟೋ ದರ ಏರಿಕೆ ಶಾಕ್ – ಕನಿಷ್ಠ ದರ 36 ರೂ.ಗೆ ಏರಿಕೆ

Public TV
By Public TV
4 hours ago
Vibhu Bakhru
Bengaluru City

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ನ್ಯಾ.ವಿಭು ಭಕ್ರು ನೇಮಕ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?