ಅಮ್ಮಾನ್: ಸಂಸತ್ನಲ್ಲಿ ಜನರ ಸಮಸ್ಯೆಗಳನ್ನು ಪ್ರತಿಧ್ವನಿಸಬೇಕಾದ, ಜನತೆಗೆ ಮಾದರಿಯಾಗಬೇಕಾದ ಪ್ರತಿನಿಧಿಗಳೇ ಸಂಸತ್ತಿನಲ್ಲಿ ಒಬ್ಬರಿಗೊಬ್ಬರು ಹೊಡೆದಾಡಿಕೊಂಡು ಉದ್ವಿಗ್ನ ವಾತಾವರಣ ಸೃಷ್ಟಿಸಿದ ಘಟನೆ ಜೋರ್ಡಾನ್ ನಲ್ಲಿ ನಡೆದಿದೆ.
ಜೋರ್ಡಾನ್ನಲ್ಲಿ ಸಂಸತ್ನ ಅಧಿವೇಶನದಲ್ಲಿ ನಿನ್ನೆ ಸಂವಿಧಾನದ ಪ್ರಸ್ತಾವಿತ ತಿದ್ದುಪಡಿಗಳ ಬಗ್ಗೆ ಚರ್ಚೆ ಇತ್ತು. ಅನಗತ್ಯ ಟೀಕೆಗಳ ಬಗ್ಗೆ ಕ್ಷಮೆಯಾಚಿಸುವಂತೆ ಕೇಳಲಾಯಿತು. ಇದಕ್ಕೆ ಸದಸ್ಯರು ನಿರಾಕರಿಸಿದ್ದು, ಪ್ರತಿನಿಧಿಗಳ ನಡುವೆ ಮಾತಿಗೆ ಮಾತು ಬೆಳೆದು ಗದ್ದಲ ಏರ್ಪಟ್ಟಿದೆ. ಈ ವೇಳೆ ಪ್ರತಿನಿಧಿಗಳು ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿದ್ದಾರೆ. ಇದನ್ನೂ ಓದಿ: ಕರ್ನಾಟಕ ಬಂದ್ಗೆ ಎರಡೇ ದಿನ ಬಾಕಿ – ಹಲವು ವಲಯಗಳಿಂದ ಇನ್ನು ಸಿಕ್ಕಿಲ್ಲ ಪರಿಪೂರ್ಣ ಬೆಂಬಲ
- Advertisement 2
- Advertisement 3
ಹೊಡೆದಾಟದಲ್ಲಿ ಒಬ್ಬ ಜನಪ್ರತಿನಿಧಿ ನೆಲಕ್ಕೆ ಕುಸಿದು ಬಿದ್ದರು ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.
- Advertisement 4
ಸಂಸತ್ನಲ್ಲಿ ಜನಪ್ರತಿನಿಧಿಗಳ ಈ ರೀತಿಯ ನಡವಳಿಕೆಯು ಸ್ವೀಕಾರಾರ್ಹವಲ್ಲ. ಇದು ನಮ್ಮ ದೇಶದ ಪ್ರತಿಷ್ಠೆಗೆ ಧಕ್ಕೆ ತರುತ್ತದೆ ಎಂದು ಸಂಸತ್ತಿನ ಸದಸ್ಯ ಖಲೀಲ್ ಅತಿಯೆಹ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಭಾರತದ ಮಹಿಳಾ ಯುವ ಉದ್ಯಮಿ ಪಂಖೂರಿ ಶ್ರೀವಾಸ್ತವ ಹೃದಯ ಸ್ತಂಭನದಿಂದ ನಿಧನ